ಕುಂದಾಪುರ; ಭಯ, ಭಕ್ತಿ ಮತ್ತು ಶ್ರದ್ಧೆಯ ಪ್ರತೀಕವಾಗಿ ನಮ್ಮ ಕರಾವಳಿಯಲ್ಲಿ ಆರಾಧಿಸಲ್ಪಡುವ ಪ್ರಕೃತಿ ನಾಗ ದೇವರ ಕಲ್ಪನೆಯಡಿಯಲ್ಲಿ ರಚನೆಗೊಂಡ “ನಾಗಬನ” ಎಂಬ ಶೀರ್ಷಿಕೆಯಡಿ Save Nature ಎಂಬ ಸಂದೇಶವನ್ನು ಸಾರುವ ವಿಶೇಷ ಕಲಾಕೃತಿ ಕೋಟೇಶ್ವರದ ಹಳೆ ಅಳಿವೆ ಕಡಲ ಕಿನಾರೆಯಲ್ಲಿ ಆಕರ್ಷಿಸಲ್ಪಟ್ಟಿತು. ಕಲಾವಿದ್ಯಾರ್ಥಿಗಳಾದ ಅದ್ವಿತ್ ಶಂಕರ್ , ಸಾತ್ವಿಕ್ ಕೆ.ಆರ್, ಪ್ರಣತಿ ಪ್ರಶಾಂತ್ ಭಟ್, ಸಮನ್ವಿ, ಅದ್ವಿತ್ ಕುಮಾರ್ ಆರ್. ಸುನೇರಿ ಹೆಗ್ಡೆ, ವಿದ್ಯಾ ರಾಣಿ ಕೇಂದ್ರದ ಮಾರ್ಗದರ್ಶಕ ಹರೀಶ್ ಸಾಗಾ ತರಬೇತಿಯಲ್ಲಿ 12 ಅಡಿ ಅಗಲದ […]
ಭಾರತದ 80ನೇ ಸ್ವಾತಂತ್ರ್ಯೋತ್ಸವವನ್ನು ಎಂ.ಸಿ.ಸಿ. ಬ್ಯಾಂಕ್ ವತಿಯಿಂದ ಶನಿವಾರ, 15 ಆಗಸ್ಟ್ 2026ರಂದು ಹೆಮ್ಮೆ, ದೇಶಭಕ್ತಿ ಮತ್ತು ರಾಷ್ಟ್ರೀಯ ಭಾವನೆಯೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಬ್ಯಾಂಕಿನ ಆಡಳಿತ ಮಂಡಳಿ, ನಿರ್ದೇಶಕರು, ಸಿಬ್ಬಂದಿ, ಗಣ್ಯ ಅತಿಥಿಗಳು ಹಾಗೂ ಹಿತೈಷಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮವು ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ಅದರ ಐತಿಹಾಸಿಕ ಪಯಣವನ್ನು ಸ್ಮರಿಸುವ ಅರ್ಥಪೂರ್ಣ ಸಂದರ್ಭವಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್ಐ ಅಧ್ಯಕ್ಷರಾದ […]
ಮಂಗಳೂರು, ಆ.15: ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಗರದ ವಿವಿಧ ಯೋಜನೆಗಳ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕ್ಯಾಪಿಟಾನಿಯೊದ ರೋಹನ್ ಸ್ಕ್ವೇರ್ನಲ್ಲಿ ನಡೆದ ಮುಖ್ಯ ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೊ, ನಿರ್ದೇಶಕ ಡಿಯೋನ್ ಮೊಂತೆರೊ, ಜನರಲ್ ಮ್ಯಾನೇಜರ್ ಸುಮನಾ ಹಾಗೂ ವಿಶೇಷ ಅತಿಥಿ ಎಂ.ಕೆ. ಅಲಿ ಅವರ ಉಪಸ್ಥಿತಿಯಲ್ಲಿ ಕೃಷಿಕ ಜ್ಯಾಕ್ ಅನಿಲ್ ಧ್ವಜಾರೋಹಣ ನೆರವೇರಿಸಿದರು. ಕೃಷಿ ಕ್ಷೇತ್ರಕ್ಕೆ ಜ್ಯಾಕ್ ಅನಿಲ್ ಅವರು ನೀಡುತ್ತಿರುವ ಗಮನಾರ್ಹ ಕೊಡುಗೆಯನ್ನು ಗುರುತಿಸಿ, […]
ಕೋಟ: 30ನೇ ವರ್ಷದ ಸಂಭ್ರಮದಲ್ಲಿ ಇರುವ ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ಮಿತ್ರ ಸಂಗಮ ಬೀಜಾಡಿ-ಗೋಪಾಡಿ, ರೋಟರಿ ಸಮುದಾಯ ದಳ ಬೀಜಾಡಿ-ಗೋಪಾಡಿ ಹಾಗೂ ಸಂಗಮ ಸ್ವಸಹಾಯ ಸಂಘ ಬೀಜಾಡಿ ಇವರ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಬೀಜಾಡಿ ಮಿತ್ರಸೌಧ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿತ್ರ ಸಂಗಮದ ಅಧ್ಯಕ್ಷ ವೇದಮೂರ್ತಿ ಶಂಕರನಾರಾಯಣ ಬಾಯರಿ ವಹಿಸಿದ್ದರು. ಧ್ವಜಾರೋಹಣವನ್ನು ಉದ್ಯಮಿ ಸತೀಶ್ ನರಸಿಂಹ ಶೇರೆಗಾರ್ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಗಮ ಸ್ವಸಹಾಯ ಸಂಘದ ಅಧ್ಯಕ್ಷ ರಾಜೇಶ್ ಆಚಾರ್ಯ ಗೋವಾಡಿ,ಬೀಜಾಡಿ ಮೂಡು ಸರಕಾರಿ ಹಿರಿಯ […]
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು 15 ಆಗಸ್ಟ್ 2026ರಂದು ದೇಶಭಕ್ತಿಯ ಉತ್ಸಾಹ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (CISF) ಅಧಿಕಾರಿ ಇನ್ಸ್ಪೆಕ್ಟರ್ ಮಿತೇಶ್ ಪ್ರಸಾದ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಇನ್ಸ್ಪೆಕ್ಟರ್ ಮಿತೇಶ್ ಪ್ರಸಾದ್ ಅವರು ವಿದ್ಯಾರ್ಥಿಗಳೇ ದೇಶದ ಭವಿಷ್ಯದ ನಿರ್ಮಾತೃಗಳು ಎಂದು ತಿಳಿಸಿದರು. ಉತ್ತಮ ವ್ಯಕ್ತಿತ್ವ, ಪ್ರಾಮಾಣಿಕತೆ, ಸಮರ್ಪಣಾ ಮನೋಭಾವ ಮತ್ತು ಶಿಸ್ತನ್ನು ಬೆಳೆಸಿಕೊಳ್ಳುವಂತೆ ಅವರು ವಿದ್ಯಾರ್ಥಿಗಳಿಗೆ […]
ಮಂಗಳೂರು: ಮಂಗಳೂರು ಐಎಎಸ್ – ಎ ಸ್ಕೂಲ್ ಫಾರ್ ಸಿವಿಲ್ ಸರ್ವೀಸಸ್ ಸಹಯೋಗದೊಂದಿಗೆ ಮಂಗಳೂರಿನ ಸಂದೇಶ ಫೌಂಡೇಶನ್ ಫಾರ್ ಕಲ್ಚರ್ ಅಂಡ್ ಎಜುಕೇಶನ್ ನಲ್ಲಿ ಭಾರತದ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ಈ ಆಚರಣೆಯು ವಿದ್ಯಾರ್ಥಿಗಳು, ಸಿಬ್ಬಂದಿ, ಅತಿಥಿಗಳು ಮತ್ತು ಹಿತೈಷಿಗಳನ್ನು ಒಟ್ಟುಗೂಡಿಸಿ ಐತಿಹಾಸಿಕ ಸಂದರ್ಭವನ್ನು ಸ್ಮರಿಸಲು ಮತ್ತು ರಾಷ್ಟ್ರದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಗಳನ್ನು ಗೌರವಿಸಲು ಒಟ್ಟುಗೂಡಿಸಿತು. ಕಾರ್ಯಕ್ರಮವು ದೇಶಭಕ್ತಿ, ಏಕತೆ ಮತ್ತು ರಾಷ್ಟ್ರೀಯ ಜವಾಬ್ದಾರಿಯ ಮನೋಭಾವವನ್ನು ಪ್ರತಿಬಿಂಬಿಸಿತು. ಸಂದೇಶ ಫೌಂಡೇಶನ್ […]
ಮಂಗಳೂರಿನ ಮಿಲಾಗ್ರೆಸ್ ಚರ್ಚ್ನಲ್ಲಿ (Our Lady of Miracles Church) ‘ಪರಮ ಪವಿತ್ರ ಕನ್ಯಾ ಮರಿಯಮ್ಮನವರ ಸ್ವರ್ಗರೋಹಣ ಹಬ್ಬ’ ಮತ್ತು ‘ಸ್ವಾತಂತ್ರ್ಯ ದಿನಾಚರಣೆ’ಯ ಸಂಭ್ರಮಾಚರಣೆ ಮಂಗಳೂರಿನ ಮಿಲಾಗ್ರೆಸ್ ಚರ್ಚ್ನಲ್ಲಿ ಪರಮ ಪವಿತ್ರ ಕನ್ಯಾ ಮರಿಯಮ್ಮನವರ ಸ್ವರ್ಗರೋಹಣ ಹಬ್ಬ ಮತ್ತು ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಭಕ್ತಿ ಹಾಗೂ ದೇಶಭಕ್ತಿಯ ಭಾವನೆಯೊಂದಿಗೆ ಆಚರಿಸಲಾಯಿತು. ವಂದನೀಯ ಧರ್ಮ ಗುರು ಉದಯ್ ಫೆ ರ್ನಾಂಡಿಸ್ ಅವರ ನೇತೃತ್ವದಲ್ಲಿ ಪವಿತ್ರವಾದ ದಿವ್ಯ ಬಲಿಪೂಜೆ ನೆರವೇರಿತು. ಬಲಿಪೂಜೆಯ ನಂತರ, ಧ್ವಜಾರೋಹಣ ಸಮಾರಂಭದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ […]
ಗಂಗೊಳ್ಳಿ ದಿನಾಂಕ 15.08.2026ರಂದು ಸ್ಟೆಲ್ಲಾಮಾರಿಸ್ ಸಮೂಹ ಶಿಕ್ಷಣ ಸಂಸ್ಥೆಗಳಾದ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆ, ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ, ಕನ್ನಡ ಮಾಧ್ಯಮ ಪ್ರೌಢಶಾಲೆಗಳು ಒಗ್ಗೂಡಿ ಬಹು ಅರ್ಥಪೂರ್ಣವಾಗಿ ಸಂಭ್ರಮ ಮತ್ತು ಸಡಗರದಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾದ ಶ್ರೀಯುತ ಸಂತೋಷ್ ಕುಮಾರ್ ಶೆಟ್ಟಿ ಕಂದಾವರ,ಮಾಜಿ ಸೈನಿಕರು ಧ್ವಜಾರೋಹಣಗೈದು “ಪ್ರತಿಯೊಬ್ಬ ವಿದ್ಯಾರ್ಥಿಗಳು ಭಾರತಾಂಬೆಯ ಅತ್ಯಮೂಲ್ಯ ಆಸ್ತಿ” ಎಂದರು. ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ -ಶಿಕ್ಷಕೇತರವೃಂದದವರಿಂದ’ ಜಲ ಸಂರಕ್ಷಣೆ ‘ಪ್ರತಿಜ್ಞೆ ಕೈಗೊಳ್ಳಲಾಯಿತು. ವಿದ್ಯಾರ್ಥಿಗಳು ದೇಶಭಕ್ತಿಯನ್ನು ಪ್ರತಿಬಿಂಬಿಸುವ […]
ಮಂಗಳೂರು; ಸೈಂಟ್ ಆನ್ಸ್ ಪ್ರೌಢಶಾಲೆಯ ಸಭಾಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ಭಾವನೆಯನ್ನು ಬಿಂಬಿಸುವಂತೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಶುಭ ಸಂದರ್ಭದಲ್ಲಿ ಸಂತ ಅನ್ನರ ಕಾನ್ವೆಂಟ್ನ ಭಗಿನಿಯರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಗಿನಿ ರೀತಿಕಾ ಎ. ಸಿ .ಅವರು ಉಪಸ್ಥಿತರಿದ್ದರು.ಕಾರ್ಯಕ್ರಮವು ಭಗವಂತನ ಸ್ಮರಣೆಯೊಂದಿಗೆ ಪ್ರಾರ್ಥನಾ ವಿಧಿಯಿಂದ ಆರಂಭಗೊಂಡಿತು. ಬಳಿಕ ವಿದ್ಯಾರ್ಥಿಗಳಿಂದ ಮನಮೋಹಕ ಸ್ವಾಗತ ನೃತ್ಯ ಪ್ರಸ್ತುತಪಡಿಸಲಾಯಿತು. ದೇಶದ ಸ್ವಾತಂತ್ರ್ಯ ಹೋರಾಟ, ತ್ಯಾಗ ಹಾಗೂ ದೇಶಪ್ರೇಮವನ್ನು ಪ್ರತಿಬಿಂಬಿಸುವ […]

