
ಕುಂದಾಪುರ: ಕುಂದಾಪುರದ ಮೂಡ್ಲಕಟ್ಟೆ ತಾಂತ್ರಿಕ ಮಹಾ ವಿದ್ಯಾಲಯವು, ಸಾಫ್ಟ್ವೇರ್ ದಿಗ್ಗಜ Honeywell ನ, Center of Excellence ಕಾರ್ಯಕ್ರಮದ ಕೇಂದ್ರವಾಗಿ ಆಯ್ಕೆಯಾಗಿದ್ದು ಇದರ ಉದ್ಘಾಟನೆಯನ್ನು 06/12/22 ರಂದು ಐಸಿಟಿ ಅಕಾಡೆಮಿ ಕರ್ನಾಟಕ ರಾಜ್ಯ ಮುಖ್ಯಸ್ಥರಾದ ಶ್ರೀ ವಿಷ್ಣು ಪ್ರಸಾದ್ ಡಿ ನೆರವೇರಿಸಿದರು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ “ಶ್ರೀ ಅಜಿತ್ ಕುಮಾರ್, ಹಿರಿಯ ಶಾಖಾ ವ್ಯವಸ್ಥಾಪಕರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ” ವಿಧ್ಯಾರ್ಥಿಗಳು ವಿಧ್ಯೆಯ ಜೊತೆಗೆ ಇನ್ನಿತರ ಕೌಶಲ್ಯಗಳನ್ನು ಅಳವಡಿಸಿಕೊಂಡಲ್ಲಿ ಯಶಸ್ಸು ತಾನಾಗಿಯೇ ದೊರೆಯುತ್ತದೆ ಎಂದು ಕಿವಿಮಾತು ಹೇಳಿದರು, ಇದೇ ವೇಳೆ ಶ್ರೀ […]

ಬೈಂದೂರು: ಸ್ಥಳೀಯ ನ ಹೋಲಿಕ್ರಾಸ್ ಇಗರ್ಜಿಯಲ್ಲಿ ಧರ್ಮಗುರು ವಂದನೀಯ ವಿನ್ಸೆಂಟ್ ಕುವೆಲ್ಲೊ ರವರ ಅಧ್ಯಕ್ಷತೆಯಲ್ಲಿ ಸಮುದಾಯದ ದಿವಸವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಉಡುಪಿ ಧರ್ಮಪ್ರಾಂತ್ಯದ ಕಿರುಕ್ರಿಸ್ತ ಸಮುದಾಯ ಆಯೋಗದ ನಿರ್ದೇಶಕರಾದ ವಂದನೀಯ ಹೆರಾಲ್ಡ್ ಪೀರೆರಾರವರು “ಸಮುದಾಯಕೋಸ್ಕರ ನಾವುಗಳು, ನಮಗಾಗಿ ಸಮುದಾಯ ಎಂಬ ಚಿಂತನೆಯಲ್ಲಿ ಜೀವಿಸಿದರೆ ಸಮಾಜದಲ್ಲಿ ಏಕತೆ, ಒಗ್ಗಟ್ಟು ಬಲಿಷ್ಠವಾಗಿರುತ್ತದೆ” ಎಂದರು ವೇದಿಕೆಯಲ್ಲಿ ಕುಂದಾಪುರ ವಲಯದ ಪ್ರಧಾನ ಧರ್ಮಗುರು ವಂದನೀಯ ಸ್ಟ್ಯಾನಿ ತಾವ್ರೋ, ಕೋಟ ಇಗರ್ಜಿಯ ಧರ್ಮಗುರು ವಂದನೀಯ ಎ. ಡಿಲೀಮಾ, ಸಿಸ್ಟರ್ ಆ್ಯನ್ಸಿ, ಉಪಾಧ್ಯಕ್ಷ […]

ವಿ. ಮೋಹನ್ ರಾವ್ ಅವರ “ಟೆಸ್ಟಿಂಗ್ ಟೈಮ್ಸ್ ಫಾರ್ ಇಂಡಿಯನ್ ಇಕಾನಮಿ” ಪುಸ್ತಕ ಬಿಡುಗಡೆ ಕುಂದಾಪುರ: “ಪ್ರತಿಯೊಬ್ಬ ಪ್ರಜೆ, ದೇಶದ ಆರ್ಥಿಕ, ಸಾಮಾಜಿಕ , ರಾಜಕೀಯ ವಿಚಾರಗಳ ಬಗ್ಗೆ ಮಾಹಿತಿ ಹೊಂದಿ, ಜಾಗೃತನಾದಾಗ, ಪ್ರಶ್ನೆ ಮಾಡಲು ಕಲಿತಾಗ, ಸತ್ಯ ಹೇಳುವ ಧೈರ್ಯ ಮಾಡಿದಾಗ, ದೇಶ ಸ್ವಚ್ಛ ಭಾರತ, ಸ್ವಸ್ಥ ಭಾರತ ಆಗಲು ಸಾಧ್ಯ. ಪ್ರಜೆಗಳು ತಿಳಿಯುವ ಆಸಕ್ತಿ ತೋರದಿದ್ದಾಗ, ತಿಳಿದೂ ನಿರ್ಲಕ್ಷ ವಹಿಸಿದಾಗ ಸಮಸ್ಯೆ ಉಂಟಾಗುತ್ತದೆ. ಭ್ರಷ್ಟಾಚಾರ ನಡೆದಾಗ ಜನ ಪ್ರಶ್ನೆ ಮಾಡದಿದ್ದರೆ ನಷ್ಟ ಆಗುವುದು ಜನರಿಗೆ. […]

ಕುಂದಾಪುರ : ವಿದ್ಯಾರ್ಥಿಗಳು ಕ್ರೀಡಾ ಸ್ಪೂರ್ತಿಯಿಂದ ಉತ್ಸಾಹದಲ್ಲಿ ಕ್ರೀಡೆಯಲ್ಲಿ ಭಾಗವಹಿಸಬೇಕು. ಜೀವನದಲ್ಲಿ ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ತುಂಬಾ ಸಹಕಾರಿ. ಸ್ಪರ್ಧೆಯಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಕುಂದಾಪುರ ಹೋಲಿ ರೋಜರಿ ಚರ್ಚ್ ಉಪಾಧ್ಯಕ್ಷ, ನಿವೃತ್ತ ಮುಖ್ಯ ಶಿಕ್ಷಕ ಲೂಯಿಸ್ ಜೆ.ಫೆರ್ನಾಂಡೀಸ್ ಹೇಳಿದರು.ಅವರು ಕುಂದಾಪುರ ಗಾಂಧಿ ಮೈದಾನದಲ್ಲಿ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಪಥಸಂಚಲನೆಯ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.ಶಾಲಾ ಸಂಚಾಲಕರೂ,ಕುಂದಾಪುರ ವಲಯದ ಪ್ರಧಾನ ಧರ್ಮಗುರು ವಂ.ಫಾ.ಸ್ಟ್ಯಾನಿ […]

ಶಿರ್ವ: ಪ್ರಸ್ತುತ ತಾಂತ್ರಿಕ ಮತ್ತು ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲಾ ಕಾರ್ಯಗಳು ಎಲ್ಲಾ ಕ್ಷೇತ್ರಗಳಲ್ಲಿ ಸುಲಭವಾಗಿ ನಡೆಯಲು ಮತ್ತು ಅತ್ಯಂತ ವೇಗವಾಗಿ ಪರಿಣಾಮಕಾರಿಯಾಗಿ ಮಾನವನ ಕೆಲಸವನ್ನು ಕಂಪ್ಯೂಟರ್ ಬಳಕೆಯಿಂದ ಸಾಗುತ್ತಿದೆ. ಇಂದಿನ ಯುವಕರಲ್ಲಿ ಕಲಿಕೆಯ ಜೊತೆಗೆ ಕಂಪ್ಯೂಟರ್ ಜ್ಞಾನ ಪಡೆದುಕೊಳ್ಳುವ ಮೂಲಕ ಮುಂದೆ ತಮ್ಮ ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ರೀತಿಯ ಬೆಳವಣಿಗೆ ಕಾಣಿಸಬಹು ದು. ಕಲಿಕೆಗೆ ವಯಸ್ಸು ಮುಖ್ಯ ಅಲ್ಲ ಮನಸು ಮುಖ್ಯ ಎಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗ ಹಾಗೂ ಕಂಪ್ಯೂಟರ್ […]

ಕೋಟ:ಕರ್ನಾಟಕದ ಆಯ್ದ 10 ಜಿಲ್ಲೆಗಳಲ್ಲಿ ಜೆಇ ಲಸಿಕಾಕರಣ ಅಭಿಯಾನ ನಡೆಯುತ್ತಿದ್ದು, ಇದರಲ್ಲಿ 1ರಿಂದ 15 ವರ್ಷಗಳವರೆಗಿನ ಎಲ್ಲಾ ಮಕ್ಕಳಿಗೂ ಜೆಸಿ ಲಸಿಕೆಯನ್ನು ಉಚಿತವಾಗಿ ಸರಕಾರ ನೀಡುತ್ತಿದೆ ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಸಿ.ಎಸ್ ಹೇಳಿದರು.ಅವರು ಸೋಮವಾರ ಉಡುಪಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರಾಷ್ಟ್ರೀಯ ಆರೋಗ್ಯ ಅಭಿಯಾನ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ,ಸೈಂಟ್ ಮೇರಿಸ್ ಪ್ರೌಢಶಾಲೆ ಕುಂದಾಪುರದ ಆಶ್ರಯದಲ್ಲಿ ಜೆಇ ಲಸಿಕಾ ಅಭಿಯಾನಕ್ಕೆ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಚಾಲನೆ ನೀಡಿ ಮಾತನಾಡಿದರು. […]

ಕೋಲಾರ ಡಿಸೆಂಬರ್ 4 : ಕೆ.ಎಸ್.ನಿಸಾರ್ ಅಹಮ್ಮದ್ ಕನ್ನಡದ ಶ್ರೇಷ್ಠ ಕವಿಗಳಲ್ಲಿ ಒಬ್ಬರು. ಅವರು ಕನ್ನಡವನ್ನು ಬಳಸಿದಷ್ಟು ಚೆನ್ನಾಗಿ ಬೇರಾರೂ ಬಳಸಲಿಲ್ಲ ಎಂದು ಹಿರಿಯ ಕವಿ ಸ.ರಘುನಾಥ ಅಭಿಪ್ರಾಯ ಪಟ್ಟರುಕೋಲಾರದ ಅಲ್-ಅಮೀನ್ ಅಂಜುಮನ್ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೋಲಾರ ಜಿಲ್ಲಾ ಘಟಕವು ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಆಯೋಜಿಸಿದ್ದ ಮಕ್ಕಳ ಕಾವ್ಯ ಕಲರವ ಕಾರ್ಯಕ್ರಮದಲ್ಲಿ ಕೆ.ಎಸ್.ನಿಸಾರ್ ಅಹಮ್ಮದ್ ಅವರ ನಿತ್ಯೋತ್ಸವ ಕನ್ನಡ ಕವಿತೆ ಮತ್ತು ಉರ್ದು ಅನುವಾದದ ಕವಿತೆಗಳ ಪುಸ್ತಿಕೆಯನ್ನು […]

ಮಂಗಳೂರು: ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ, ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ಮತ್ತು MCC ಬ್ಯಾಂಕ್ ಲಿಮಿಟೆಡ್ ಸಹಯೋಗದಿಂದ ಡಿಸೆಂಬರ್ 4,2022 ರಂದು ದ.ಕ.ಜಿಲ್ಲಾ PLHIV ಯವರಿಗೆ ಸ್ನೇಹಮಿಲನ – 2022 ಎಂಬ ಒಂದು ದಿನದ ಕಾರ್ಯಕ್ರಮವನ್ನು ನಡೆಯಿತು.ಮಂಗಳೂರಿನ ಹಂಪನಕಟ್ಟೆಯ ಎಂಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲೆಯ ವಿವಿಧ ಭಾಗಗಳಿಂದ ಸುಮಾರು 250 PLHIV ಯವರು ಭಾಗವಹಿಸಿದ್ದು ಸ್ನೇಹಮಿಲನ – 2022 ಅತ್ಯಂತ ಯಶಸ್ವಿಯಾಗಿ ನಡೆಯಿತು. ಜೋಸ್ಅಲ್ಲುಕಾಸ್ ಸಂಸ್ಥೆಯ ಶ್ರೀ ರಾಕೇಶ್ ರವರು ಉದ್ಘಾಟನಾ ಕಾರ್ಯಕ್ರಮ […]

ಕುಂದಾಪುರದಲ್ಲಿ ಹಲವಾರು ಕಾರ್ಯಕ್ರಮಗಳನ್ನು ನಾನು ನೀಡಿದ್ದಲ್ಲದೇ, ನಾಟಕಗಳಲ್ಲೂ ಪಾತ್ರ ಮಾಡಿದ್ದೆ. ಎಚ್. ಎನ್. ನಕ್ಕತ್ತಾಯರ ನಾಟಕದಲ್ಲಿ ಪಾತ್ರ ಮಾಡಿದ್ದು ಸಂಗೀತ ನಿರ್ದೇಶನ ನೀಡಿದ್ದು ಸ್ಮರಣೆಯಲ್ಲಿದೆ. ಕುಂದಾಪುರಕ್ಕೆ ಬಂದಾಗ ವೈಕುಂಠ ಹೆಬ್ಬಾರರ ಆಶ್ರಯ ನನಗೆ ದೊರಕುತ್ತಿತ್ತು. ಅವರೊಬ್ಬ ಕಲಾ ಆರಾಧಕ ಮತ್ತು ಕಲಾ ಪೋಷಕ. ಅವರ ಸಂಸ್ಮರಣೆಯಲ್ಲಿ ನನಗೆ ಐರೋಡಿ ಕುಟುಂಬದ ಗೌರವ ದೊರಕುತ್ತಿರುವುದು ಸಂತೋಷವಾಗಿದೆ ಎಂದು ಹೆಸರಾಂತ ಗಾಯಕ ಗರ್ತಿಕೆರೆ ರಾಘಣ್ಣ ಎಂದೇ ಕರೆಯಲ್ಪಡುವ ಹೊ. ನಾ. ರಾಘವೇಂದ್ರ ರಾವ್ ಹೇಳಿದರು.ಹಂಗಾರಕಟ್ಟೆ ಯಕ್ಷಗಾನ ಕಲಾ ಕೇಂದ್ರ ಐರೋಡಿಯ […]