ಕುಂದಾಪುರ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಎಸ್ (52) ಅವರು ಬುಧವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಶಾ ಸುಮಾರು 28 ವರ್ಷಗಳ ಕಾಲ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬುಧವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಸಂಘದಲ್ಲಿ ಅಡಿಟ್ ಕೂಡ ನಡೆಯುತ್ತಿತ್ತು. ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ […]
PHOTOS: KESHAVA BHAT ಕುಂದಾಪುರ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿ ಮಾಡಿ ಸಹಕಾರ ಕೋರಿದರು. ಈ ವೇಳೆ ಹೆಬ್ರಿ ಕ್ಷೇತ್ರದ ಕಾಂಗ್ರೆಸ್ ನಾಯಕರಾದ ಎಚ್. ಪ್ರವೀಣ್ ಬಲ್ಲಾಳ್ ಮತ್ತು ಇತರರು ಉಪಸ್ಥಿತರಿದ್ದರು.
ಕುಂದಾಪುರ.ಮಾ. 20: ಕುಂದಾಪುರದ ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಅಗಲಿದ ಕಾಂಗ್ರೆಸ್ ನಾಯಕ, ಜಿಲ್ಲಾ ಕೆಡಿಪಿ ಸದಸ್ಯ ಶ್ರೀ ಗಂಗಾಧರ ಶೆಟ್ಟಿ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಮಾರ್ಚ್ 19 ರಂದು ಏರ್ಪಡಿಸಲಾಯಿತು. ಸಭೆಯನ್ನು ವಿಧಾನ ಪರಿಷತ್ ಮಾಜಿ ಸಭಾಪತಿ ಶ್ರೀ ಪ್ರತಾಪ್ ಚಂದ್ರ ಶೆಟ್ಟಿ ಅವರು ಉದ್ಘಾಟಿಸಿದರು. ಜನಸಾಮಾನ್ಯರ ಕಷ್ಟಗಳಿಗೆ ಸದಾ ಸ್ಪಂದಿಸುತ್ತಿರುವ ಪಕ್ಷಾತೀತ, ಬಡ ಜನರ ಮನಸ್ಸು ಗೆದ್ದ ಶ್ರೀ ಗಂಗಾಧರ ಶೆಟ್ಟಿ ಅವರ ಅಗಲಿಕೆ ಕುಂದಾಪುರದ ನಾಗರಿಕರಿಗೆ ತುಂಬಲಾರದ ನಷ್ಟವಾಗಿದೆ ಎಂದು ಬ್ಲಾಕ್ […]
ಮಂಗಳೂರು: ಕೆನರಾ ಕೊಂಕಣಿ ಕ್ಯಾಥೋಲಿಕ್ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಫುಡಾರ್ ಪ್ರತಿಷ್ಠಾನ್ ಟ್ರಸ್ಟ್ (ರಿ) ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ ಅಗ್ರಗಣ್ಯರು ಮತ್ತು ಸಾಧಕರಿಗೆ ‘ಫುಡಾರ್ ಪ್ರತಿಷ್ಠಾನ್’ ಪುರಸ್ಕಾರ-2024′ ಗಳನ್ನು 2024 ರ ಮಾರ್ಚ್ 17 ರ ಭಾನುವಾರದಂದು ಮಂಗಳೂರಿನ ಮಿಲಾಗ್ರಿಸ್ ಜುಬಿಲಿ ಹಾಲ್ನಲ್ಲಿ ಆಯೋಜಿಸಿಲಾಗಿತ್ತು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ ಕ್ರೀಡೆಯಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ 341 ಕ್ಯಾಥೋಲಿಕ್ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಮಂಗಳೂರು ಧರ್ಮಪ್ರಾಂತ್ಯದ […]
ಕುಂದಾಪುರ, ಮಾ.19 : ಸಂತ ಜೋಸೆಫರಿಗೆ ಸಮರ್ಪಿಸಲ್ಪಟ್ಟ ಕುಂದಾಪುರ ಕಾರ್ಮೆಲ್ ಸಂಸ್ಥೆಯ ಕಾರ್ಮೆಲ್ ಧರ್ಮಭಗಿನಿಯರು ಮತ್ತು ವಿದ್ಯಾ ಸಂಸ್ಥೆಗಳನ್ನು ನಡೆಸಿಕೊಂಡು ಹೋಗುತ್ತಾರೆ ದಿನಾಂಕ 19 ರಂದು ಸಂತ ಜೋಸೆಫರ ಹಬ್ಬದ ಪ್ರಯುಕ್ತ ಪವಿತ್ರ ಬಲಿದಾನವನ್ನು ಅರ್ಪಿಸಿ ಹಬ್ಬವನ್ನು ಆಚರಿಸಿದರು.ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಪ್ರಧಾನ ಗುರುಗಳಾಗಿ ಪವಿತ್ರ ಬಲಿದಾನವನ್ನು ಅರ್ಪಿಸಿ ಧರ್ಮಭಗಿನಿಯರಿಗೆ ಶುಭ ಕೋರಿ ‘ಪವಿತ್ರ ಸಭೆಯಲ್ಲಿ ಸಂತ ಜೋಸೆಫರಿಗೆ ಅತ್ಯುತ್ತಮ ಸ್ಥಾನ ಇದೆ. ಆತ ತನ್ನ ಪತ್ನಿ ಮೇರಿ ಮಾತೆ ಮತ್ತು ಪುತ್ರನನ್ನು […]
ತಲ್ಲೂರು,ಮಾ.18: ಉಡುಪಿ ಧರ್ಮಪ್ರಾಂತ್ಯದ ಕುಟುಂಬ ಆಯೋಗ ನೀಡಿರುವ ಮಾರ್ಗಸೂಚಿಗಳು ಮತ್ತು ಕಾರ್ಯಸೂಚಿಗೆ ಅನುಸಾರವಾಗಿ, ಕುಂದಾಪುರ ವಲಯದ ವಿವಾಹಿತ ದಂಪತಿಗಳ ಅನುಕೂಲಕ್ಕಾಗಿ ವೀಶೆಷವಾಗಿ ಮದುವೆಯಾಗಿ ಕನಿಷ್ಠ 10 ವರ್ಷದಿಂದ ಗರಿಷ್ಠ 20 ವರ್ಷ ಪೂರೈಸಿದ ವಿವಾಹಿತರಿಗಾಗಿ ‘ವೈವಾಹಿಕ ಫಲಪ್ರದಾಯಕ ಜೀವನ’ ಎಂಬ ಶಿಬಿರ ತಲ್ಲೂರು ಘಟಕದ ಕುಟುಂಬ ಆಯೋಗವು ಮಾರ್ಚ್ 17, 2024 ರಂದು ಭಾನುವಾರ ಸೇಂಟ್ ಫ್ರಾನ್ಸಿಸ್ ಆಫ್ ಅಸ್ಸಿಸಿ ಚರ್ಚ್ ಹಾಲ್ನಲ್ಲಿ ಆಯೋಜಿಸಿತ್ತು.ಬೆಳಗ್ಗೆ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮೊದಲ ಭಾಗವಾಗಿ ಕಲ್ಯಾಣಪುರದ ಸೇಂಟ್ ಮಿಲಾಗ್ರೆಸ್ ಕಾಲೇಜಿನ […]
ಕಾರ್ಕಳ, ಮಾ. 17: 32 ವರ್ಷಗಳ ಇತಿಹಾಸ , 155 ಕೋಟಿಗೂ ಮಿಕ್ಕಿ ಠೇವಣಿ, 130 ಕೋಟಿ ಸಾಲ, 186 ಕೋಟಿಗೂ ಮಿಕ್ಕಿ ದುಡಿಯುವ ಬಂಡವಾಳ ಹೊಂದಿ ಸ್ಥಾಪನೆಯದ ವರ್ಷದಿಂದ ನಿರಂತರ ಡಿವಿಡೆಂಡ್ ನೀಡುತ್ತಿರುವ ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಕುಂದಾಪುರ ಇದರ 12ನೇ ಶಾಖೆಯು ಕಾರ್ಕಳದಲ್ಲಿ ದಿನಾಂಕ 17.3.2024 ರಂದು ಕಾರ್ಕಳದ ಮಿನಿವಿಧಾನಸೌಧ ರಸ್ತೆ ತಾಲೂಕು ಆಫೀಸ್ ಹತ್ತಿರ, ವಿಶಾಲ ಕಟ್ಟಡದ ನೆಲಮಹಡಿಯಲ್ಲಿ ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ಕಾರ್ಕಳ ಅತ್ತೂರು, ಸಂತ ಲಾರೆನ್ಸ್ ಬಸಿಲಿಕಾ […]
ಡಾ. ಅಶೋಕ್ ಹೆಚ್. ಎಂ.ಬಿ.ಬಿ.ಎಸ್, ಡಿ.ಪಿ.ಎಚ್ ಇವರು ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಸರ್ಜನ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.ಇವರೊಬ್ಬ ಅನುಭವಿ ವೈದ್ಯರಾಗಿ ಸೇವೆ ಸಲ್ಲಿಸಿದವರು.ಅಲ್ಲದೆ 2012ರ ಅತ್ಯುತ್ತಮ DAPCO ಅಧಿಕಾರಿಯಾಗಿ, 2013ರಲ್ಲಿ ಉಡುಪಿ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ, 2021ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿ, ಜನ ಮೆಚ್ಚುಗೆ ಪಡೆದವರು.ಉಡುಪಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಜವಾಬ್ದಾರಿ ಸ್ವೀಕರಿಸಿದ ಅಲ್ಪಾವಧಿಯಲ್ಲಿಯೇ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಸಂಚಲನ ಮೂಡಿಸಿ, ಆರೋಗ್ಯ ಇಲಾಖೆಯ […]
ಉಡುಪಿ: ಹಿರಿಯ ನಾಗರಿಕರು ನಮ್ಮ ಕುಟುಂಬದ ಹಾಗೂ ಸಮಾಜದ ಆಸ್ತಿಯಾಗಿದ್ದು ಅವರಿಗಿರುವ ಕಾನೂನು ಹಾಗೂ ಸವಲತ್ತುಗಳ ಬಗ್ಗೆ ಸೂಕ್ತ ಮಾಹಿತಿಯನ್ನು ಗಳಿಸಿ ಅವುಗಳ ಸದುಪಯೋಗವನ್ನು ಮಾಡಿಕೊಳ್ಳಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾ ಸಭಾಭವನದಲ್ಲಿ ಧರ್ಮಪ್ರಾಂತ್ಯದ ಕುಟುಂಬ ಆಯೋಗ ವತಿಯಿಂದ ನಡೆದ ಹಿರಿಯ ನಾಗರಿಕರ ಬೃಹತ್ ಸಮಾವೇಶದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.ಉಡುಪಿ ಜಿಲ್ಲೆಯ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ […]

