JANANUDI.COM NETWORK ಕುಂದಾಪುರ,ಜೂ.22: ರಂದು ಸಂತ ಜೋಸೆಫರ ಪ್ರೌಢಶಾಲೆಯ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ (21ರಂದು) ಆಚರಿಸಲಾಯಿತು. ಕುಂದಾಪುರ ಪುರಸಭೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಜಯ ಪೂಜಾರಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ “ಯೋಗದಿಂದ ಆರೋಗ್ಯ, ಶಾಂತಿ ನೆಮ್ಮದಿ ಪ್ರಾಪ್ತಿಯಾಗುತ್ತದೆ” ಎಂದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಐವಿ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಎಲ್ಲರನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಕ ಮೈಕಲ್ ಇವರ ಮಾರ್ಗದರ್ಶನದಲ್ಲಿ ಸೂರ್ಯ ನಮಸ್ಕಾರ ಆಸನದೊಂದಿಗೆ ವಿದ್ಯಾರ್ಥಿಗಳಿಗೆ ಯೋಗಾಸನ ನಡೆಸಿಕೊಟ್ಟರು. […]

Read More

JANANUDI.COM NETWORK ಕುಂದಾಪುರ, ಜೂ.21: “ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯವಂತರಾಗಿ ಬಾಳಲು ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ದೇಹ ಮತ್ತು ಮನಸ್ಸನ್ನು ಏಕಾಗ್ರತೆಯಲ್ಲಿ ಇಟ್ಟುಕೊಳ್ಳಲು ಯೋಗಾಭ್ಯಾಸವನ್ನು ಮಾಡಿಕೊಂಡರೆ ಅವರ ಸರ್ವತೋಮುಖ ಬೆಳವಣಿಗೆಯಾಗುತ್ತದೆ” ಎಂದು ಕುಂದಾಪುರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ದತ್ತಾತ್ರೇಯ ನಾಯ್ಕ್ ಕುಂದಾಪುರ ಇವರು ಸೈಂಟ್ ಮೇರೀಸ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ. ಇಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಡೋರಾ ಸುವಾರಿಸ್ […]

Read More

JANANUDI.COM NETWORK ಜೂ.21:ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶಾಲಾ ಮುಖ್ಯೋಪಾಧಾಯಿನಿ ಸಿಸ್ಟರ್‌ ತೆರೇಜ್‌ ಶಾಂತಿಯವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ದೈಹಿಕ ಶಿಕ್ಷಣ ಪರಿವಿಕ್ಟಣಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ದೈಹಿಕ ಶಿಕ್ಷಣ ಪರಿವಿಕ್ಟಣಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಯುತ ದತ್ತಾತ್ರೇಯ ನಾಯಕ್‌ ದೈಹಿಕ ಶಿಕ್ಷಣ ಪರಿವಿಕ್ಟಣಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರ ಇವರು ಅತಿಥಿಗಳಾಗಿ. ಆಗಮಿಸಿ ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯೋಗಭ್ಯಾಸವನ್ನು ರೂಡಿಸಿಕೊಳ್ಳಬೇಕೆಂದು ಹೇಳಿದರು.  ಶಾಲೆಯ ಅಂತರಾಷ್ಟ್ರೀಯ ಯೋಗ ಪಟು 6ನೇ ತರಗತಿಯ […]

Read More

JANANUDI.COM NETWORK ಕುಂದಾಪುರ: ದಿನಾಂಕ 21ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭಾರತ ಸರ್ಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ, ಕುಂದಾಪುರದ ಪತಂಜಲಿ ಯೋಗ ಸಮಿತಿ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ “ವಿಶ್ವ ಯೋಗ ದಿನಾಚರಣೆ” ಪ್ರಯುಕ್ತ ವಿಶೇಷ ಯೋಗ ಕಾರ್ಯಾಗಾರ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂದಾಪುರ ತಾಲೂಕು ಉಪವಿಭಾಗಾಧಿಕಾರಿ ಕೆ.ರಾಜು ಮಾತನಾಡಿ ಈ ಎಂಟನೆ ವಿಶ್ವ ಯೋಗ ದಿನಾಚರಣೆಯ ಶುಭಾಶಯಗಳನ್ನು ಕೋರಿ ಭಾರತ ವಿಶ್ವಕ್ಕೆ ನೀಡಿದ ಶ್ರೇಷ್ಠ ಕೊಡುಗೆ ಈ […]

Read More

JANANUDI.COM NETWORK ಕುಂದಾಪುರ:ಯೋಗದಿಂದ ಆರೋಗ್ಯವಂತರಾಗಿ ಬದುಕಬಹುದು.ಮಾನಸಿಕವಾಗಿ,ದೈಹಿಕವಾಗಿ ದೇಹ ಸದೃಢವಾಗುತ್ತದೆ.ಪ್ರತಿ ನಿತ್ಯ ಯೋಗ ಮಾಡುವುದರಿಂದ ಸದಾ ಕಾಲ ಉತ್ಸಾಹದಿಂದ ಇರಬಹುದು ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೇಯ ನಾಯ್ಕ್ ಹೇಳಿದರು.ಅವರು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ 21 ಕರ್ನಾಟಕ ಬೆಟಾಲಿಯನ್ಎನ್ ಸಿಸಿ ಆಶ್ರಯದಲ್ಲಿ ನಡೆದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಮಾರಂಭ ದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿ ಅಸುಂತಾ ಲೋಬೋ ವಹಿಸಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.ಎನ್ ಸಿಸಿ ಅಧಿಕಾರಿ ಭಾಸ್ಕರ […]

Read More

JANANUDI.COM NETWORK ಶಿರ್ವಾ: “ಯೋಗವನ್ನು ಪ್ರತಿನಿತ್ಯ ಮಾಡುವುದರಿಂದ ದೇಹ ಮತ್ತು ಮನಸ್ಸು ಎರಡನ್ನು ಕೂಡ ಉತ್ತಮ ಸ್ಥಿತಿಯಲ್ಲಿ ಇಟ್ಟುಕೊಳ್ಳಬಹುದು. ವಿದ್ಯಾರ್ಥಿಗಳು ಪ್ರತಿ ದಿವಸ ಯೋಗಾಭ್ಯಾಸವನ್ನು ಮಾಡಿ ಉತ್ತಮ ಆರೋಗ್ಯದೊಂದಿಗೆ ಏಕಾಗ್ರತೆಯನ್ನು ಉತ್ತಮಪಡಿಸಿಕೊಳ್ಳಲು ಸಾಧ್ಯವಿದೆ .ಆದ್ದರಿಂದ ನಾವೆಲ್ಲರೂ ಪ್ರತಿನಿತ್ಯ ಯೋಗಾಭ್ಯಾಸ ಮಾಡೋಣ ಮತ್ತು ಆರೋಗ್ಯವಂತರಾಗಿ ಬಾಳೋಣ”ಎಂದು ಎಂದು ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂಸ್ಥೆಯ ಹಳೆವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷರು ಮತ್ತು ಮಾಜಿ ತಾಲೂಕ್ ಪಂಚಾಯತ್ ಅಧ್ಯಕ್ಷರಾದ […]

Read More

JANANUDI.COM NETWORK ವಿದ್ಯಾರ್ಥಿ ಜೀವನ ಅಮೂಲ್ಯ. ಪೌಢ ಶಾಲೆಯ ನಂತರವಂತೂ ವಿದ್ಯಾರ್ಥಿಗಳು ಪ್ರತಿ ಕ್ಷಣವನ್ನು ಭವಿಷ್ಯಕ್ಕಾಗಿ ಉಪಯೋಗಿಸಿಕೊಳ್ಳಬೇಕು. ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕು. ತನ್ನತನವನ್ನು ರೂಪಿಸಿಕೊಳ್ಳಬೇಕು. ಜ್ಞಾನ, ಕೌಶಲ್ಯ, ಆರೋಗ್ಯ, ಶಿಸ್ತು ನಾಲ್ಕು ವಿಷಯಗಳು ವಿದ್ಯಾರ್ಥಿಗಳ ಜೀವನದಲ್ಲಿ ಬಹಳ ಮುಖ್ಯ. ಒಂದು ಗುರಿಯನ್ನು, ಉದ್ದೇಶವನ್ನು ಇಟ್ಟುಕೊಳ್ಳಬೇಕು. 15 ವರ್ಷದಿಂದ 25 ವರ್ಷಗಳ ತನಕ 10 ವರ್ಷಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಮೊಬೈಲನ್ನು ತಮ್ಮ ವ್ಯಕ್ತಿತ್ವ ವಿಕಸನಕ್ಕಾಗಿ ಬೆಳೆಸಿಕೊಳ್ಳಬೇಕು ಎಂದು ಜಾನಪದ ಸಂಶೋಧಕ, ನಿವೃತ್ತ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಹೇಳಿದರು.ಕುಂದಾಪುರದ […]

Read More

JANANUDI.COM NETWORK ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ “ವಿಶ್ವ ಯೋಗ ದಿನಾಚರಣೆ ಯನ್ನು” ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಆಯುಷ್ ಮಂತ್ರಾಲಯ ನೀಡಿದ ಯೋಗ ವಿಡಿಯೋ ಪ್ರಾಯೋಗಿಕ ಪ್ರದರ್ಶನವನ್ನು ಅನುಸರಿಸಿ ಆಚರಿಸಲಾಯಿತು .ಯೋಗ ಒಂದು ಸರ್ವರೋಗ ನಿವಾರಣಾ ತಂತ್ರವಾಗಿದೆ .ಯೋಗವನ್ನು ಕೇವಲ ವಿಶ್ವ ಯೋಗ ದಿನಾಚರಣೆಕ್ಕೆ ಸೀಮಿತಗೊಳ್ಳದೆ ಪ್ರತಿನಿತ್ಯ ಜೀವನಶೈಲಿಯಲ್ಲಿ ಜನಗಳು ಯೋಗ […]

Read More

JANANUDI.COM NETWORK ಕುಂದಾಪುರ: ಎ.ಜಿ ಕೊಡ್ಗಿಯವರು ಜಿಲ್ಲೆಯ ಓರ್ವ ಮುತ್ಸದ್ಧಿ ರಾಜಕಾರಣಿಯಾಗಿದ್ದರು. ಶಾಸಕರಾಗಿ, ಸಹಕಾರಿ ಧುರೀಣರಾಗಿ, ಸಾಮಾಜಿಕ ಕ್ಷೇತ್ರದಲ್ಲಿಯೂ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ರಾಜಕೀಯವಾದ ಮುತ್ಸದ್ಧಿತನವನ್ನು ಅವರು ಹೊಂದಿದ್ದರು ಎಂದು ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ನುಡಿದರು. ಅವರು ಕುಂದಾಪುರ ಹೋಟೆಲ್ ಶರೋನ್ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ವತಿಯಿಂದ ಮಾಜಿ ಶಾಸಕ, ಸಹಕಾರಿ ಧುರೀಣ ಎ.ಜಿ.ಕೊಡ್ಗಿಯವರಿಗೆ ಶ್ರದ್ದಾಂಜಲಿ ಸಭೆಯನ್ನು ದೀಪ ಬೆಳಗಿಸಿ, ಎ.ಜಿ.ಕೊಡ್ಗಿ ಅವರ ಭಾವಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸಿ ಮಾತನಾಡುತ್ತ. ತನಗೆ ಲಭಿಸಿದ ಹುದ್ದೆಯ […]

Read More