ಕುಂದಾಪುರ, ನ.3: ಕಂಡ್ಲೂರಿನ ಝಿಯಾ ಪಬ್ಲಿಕ್ ಇಂಗ್ಲೀಷ್ ಮೀಡಿಯಂ ಸ್ಕೂಲ್ನ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ನ.2 ಗುರುವಾರ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿ ಇಲ್ಲಿನ ಕಾರ್ಯವೈಖರಿಗಳನ್ನು ವೀಕ್ಷಿಸಿದರು. ಈ ಸಂದರ್ಭ ವಿದ್ಯಾರ್ಥಿಗಳ ಜೊತೆ ಮಾತನಾಡಿದ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತ ಶಸ್ತ್ರಚಿಕಿತ್ಸಕರಾದ ಡಾ. ರೊಬರ್ಟ್ ರೆಬೆಲ್ಲೋ, ಸರಕಾರಿ ಸೇವೆ ಮಾಡುವುದು ಉತ್ತಮ ಅವಕಾಶ. ಅದರಲ್ಲೂ ಸರಕಾರಿ ವೈದ್ಯ ವೃತ್ತಿ ದೇವರು ಮೆಚ್ಚುವ ಕೆಲಸ. ಯಾವುದೇ ಹಣ, ಹೆಸರಿನ ಹಿಂದೆ ಹೋಗಬಾರದು. ಶಿಕ್ಷಕರು ಮಕ್ಕಳಿಗೆ […]
ಮಂಗಳೂರು: ಕರ್ನಾಟಕ ರಾಜ್ಯೋತ್ಸವವು ರಾಜ್ಯ ಸ್ಥಾಪನೆಯನ್ನು ನೆನಪಿಸುವುದು ಮಹತ್ವದ ದಿನವಾಗಿದೆ. ಈ ಮಹತ್ವದ ಸಂದರ್ಭವನ್ನು ನವೆಂಬರ್ 1, 2023 ರಂದು ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ಬಹಳ ಉತ್ಸಾಹದಿಂದ ಆಚರಿಸಲಾಯಿತು. ಪ್ರಾರ್ಥನೆ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿ, ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸುವ ರೋಮಾಂಚಕ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳು ನಡೆದವು. ಕಾಲೇಜು ಸಭಾಂಗಣವು ಜಾನಪದ ನೃತ್ಯಗಳ ಕೆಲಿಡೋಸ್ಕೋಪ್, ಜಾನಪದ ಹಾಡುಗಳ ಮಿಶ್ರಣ ಮತ್ತು ಜಾನಪದ ಆಧಾರಿತ ನೃತ್ಯ ನಾಟಕದೊಂದಿಗೆ ಜೀವಂತವಾಯಿತು, ಇವೆಲ್ಲವೂ ಕನ್ನಡ ಸಂಸ್ಕೃತಿ, ಸಂಪ್ರದಾಯ ಮತ್ತು […]
ಕುಂದಾಪುರ: ನವೆಂಬರ್ 2ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಗ್ರಂಥಾಲಯದಲ್ಲಿ ” ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಸಾಹಿತ್ಯ ಮತ್ತು ಸಾಹಿತಿಗಳ ಪುಸ್ತಕಗಳ ಪ್ರದರ್ಶನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಅವರು ಮಾತನಾಡಿ ಕನ್ನಡ ನಮ್ಮ ಭಾಷೆ. ಎಲ್ಲಾ ತಾಯಂದಿರನ್ನು ಪ್ರೀತಿಸಿ ಆದರೆ ನಮ್ಮ ನಾಡು ನುಡಿಯನ್ನು ಹೆಚ್ಚು ಪ್ರೀತಿಸಿ ಎಂದು ಹೇಳಿದರು.ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ಉಪಸ್ಥಿತರಿದ್ದರು.ಗ್ರಂಥಾಲಪಾಲಕರಾದ ಮನೋಹರ್ ಉಪಾಧ್ಯಾಯ […]
ಕುಂದಾಪುರ: ನವೆಂಬರ್ 1ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ 48ನೇ ರಾಜ್ಯೋತ್ಸವ ತಾಳಮದ್ದಳೆ ಹಾಗೂ ಡಾ.ಹೆಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು.ಡಾ.ಪ್ರದೀಪ.ವಿ.ಸಾಮಗ ಇವರಿಗೆ 2023-24ನೇ ಸಾಲಿನ ಡಾ.ಹೆಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.ಪುರಸ್ಕಾರವನ್ನು ಸ್ವೀಕರಿಸಿದ ಡಾ. ಪ್ರದೀಪ. ವಿ.ಸಾಮಗ ಮಾತನಾಡಿ ಭಂಡಾರ್ಕಾರ್ಸ್ ಕಾಲೇಜು ನನಗೆ ಜೀವನವನ್ನು ಕಲಿಸಿದೆ. ಭಂಡಾರ್ಕಾರ್ಸ್ ಕಾಲೇಜು ನನ್ನನ್ನು ಯಕ್ಷಗಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಟ್ಟಿದೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ಹೆಚ್.ಶಾಂತಾರಾಮ್ ವಹಿಸಿದ್ದರು. ಸಾಲಿಗ್ರಾಮ ಮೇಳದ […]
ದೇರಳಕಟ್ಟೆ: ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ನವಂಬರ್ 4 ಮತ್ತು 5ರಂದು “ಪ್ರೇರಣಾ-23”, ದಕ್ಷಿಣ ಭಾರತದ ಹೋಮಿಯೋಪಥಿ ಫೆಸ್ಟ್ ಮತ್ತು 26ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನವನ್ನು ಆಯೋಜಿಸಿದೆ. ಇದರ ಉದ್ಘಾಟನಾ ಸಮಾರಂಭವು ನವಂಬರ್ 4ರಂದು ಬೆಳಿಗ್ಗೆ 9.00 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ನೆರವೇರಲಿರುವುದು. ಪಶ್ಚಿಮ ಬಂಗಾಳದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ಸದ್ದಮ್ ನವಾಸ್ IಂS ಇವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆ, ಕಂಕನಾಡಿ, ಮಂಗಳೂರು […]
ಕುಂದಾಪುರ : ನ.೩; ಕುಂದಾಪುರ ಪುರಸಭೆ ವ್ಯಾಪ್ತಿಯ ಖಾರ್ವಿಕೇರಿಯಲ್ಲಿರುವ ಶ್ರೀ.ಡಿ. ದೇವರಾಜ ಅರಸು ಮೆಟ್ರಿಕ್ ಸ೦ತರದ ಬಾಲಕಿಯರ ನಿಲಯದಲ್ಲಿ ರಾಜ್ಯೋತ್ಸವ ೬೮ ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿಆಚರಿಸಲಾಯಿತು. ‘ಕಾರ್ಯಕ್ತಮವನ್ನು ಕುಂದಾಮರ ಪುರಸಭೆಯ ಈಸ್ಟ್ ಬ್ಲಾಕ್ ವಾರ್ಡನ. ಸದಸ್ಯೆಯಾದ ಶ್ರೀಮತಿ ಪ್ರಭಾವತಿ ಶೆಟ್ಟಿ ಇವರು ದೀಪ ಬೆಳಗಿಸುವ ಮೂಲಕ ಉದ್ಭಾಟಿಸಿ ಕನ್ನಡಾಂಬೆಗ ಪುಷ್ಪ ನಮನ ಸಲ್ಲಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಫೋಷ ವಾಕ್ಯದೊಂದಿಗೆ ವಿದ್ಯಾರ್ಥಿಗಳ ಕನ್ನಡ ನಾಡು ನುಡಿ ಸಾರುವ […]
Manglore : To encourage creativity in children, Naman Ballok Jesus Organized a Drawing and Colouring and Competition at Infant Jesus Shrine on October 21st, Saturday at 4pm. More than 70 children enthusiastically participated in the competition. The competition was held in three categories. The Winners of the competition are as follows : Nursery to 2nd […]
ಕುಂದಾಪುರ :ಕನ್ನಡಾಭಿಮಾನಿ ಡಾ. ರಾಜ್ ಕುಮಾರ್ ಸಂಘಟನೆ ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಹೊಸ ಬಸ್ ನಿಲ್ದಾಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.ದೀಪ ಬೆಳಗಿಸುವುದರ ಮೂಲಕ ಹಿರಿಯ ನ್ಯಾಯವಾದಿ ಶಿರಿಯಾರ ಮುದ್ದಣ್ಣ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರುನಾಡ ಧ್ವಜ ಧ್ವಜಾರೋಹಣ ವನ್ನು ಮಾನ್ಯ ಠಾಣಾಧಿಕಾರಿ ವಿನಯ್ ಕೊಲ೯ಪಾಡಿ ಅವರು ನೆರವೇರಿಸಿ ಶುಭಾಶಯ ಕೋರಿದರು. ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರತ್ನಾಕರ ಪೂಜಾರಿ ವಹಿಸಿದ್ದರು. ಅತಿಥಿಗಳಾಗಿ ಗಾಳಿ ಮಾಧವ ಖಾರ್ವಿ, ಪ್ರಭಾಕರ ಖಾರ್ವಿ ಸೂರಜ್ ಭಟ್ ಆಗಮಿಸಿದ್ದರು. ಪ್ರಣಮ್ಯ ಡಿ ಪೂಜಾರಿ,ಹಾಗೂ […]
ಮಂಗಳೂರು: 2023ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಂಘ ಸಂಸ್ಥೆ ವಿಭಾಗದಿಂದ ಕಥೋಲಿಕ ಕ್ರೈಸ್ತ ಸಂಘಟನೆಯಾದ ‘ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ)ಆಯ್ಕೆಯಾಗಿದೆ.44 ವರ್ಷಗಳ ಇತಿಹಾಸ ಹೊಂದಿರುವ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಧರ್ಮಕ್ಷೇತ್ರದಾದ್ಯಂತ ಒಟ್ಟು 111 ಘಟಕಗಳನ್ನು ಹೊಂದಿದೆ. 1979ರಲ್ಲಿ ಕೇಂದ್ರದ ಮಾಜಿ ಸಚಿವ ದಿ. ಆಸ್ಕರ್ ಫೆರ್ನಾಂಡಿಸ್ ರವರ ಮುಂದಾಳತ್ವದಲ್ಲಿ ಈ ಸಂಘಟನೆಯು ಆರಂಭಗೊಂಡಿತು. ಅವರೇ ಮೊದಲ ಸ್ಥಾಪಕ ಅಧ್ಯಕ್ಷರಾಗಿ ನೇತೃತ್ವ ವಹಿಸಿಕೊಂಡರು. ಸಾಮಾಜಿಕ ಹಾಗೂ ಧಾರ್ಮಿಕ ಕಳಕಳಿ […]

