ಕುಂದಾಪುರ, ನ.15: ದಿನಾಂಕ 8-11-23 ರಂದು ಜನತಾ ಕಾಲೇಜು ಹೆಮ್ಮಾಡಿ ಇವರು ಆಯೋಜಿಸಿದ ತಾಲ್ಲೂಲು ಮಟ್ಟದ ಜನತಾ ಅವಿಷ್ಕಾರ್ 2ಕೆ23 ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಕುಂದಾಪುರದ ಸಂತ ಮೇರಿಸ್ ಪ್ರೌಢ ಶಾಲೆಯ 5 ವಿದ್ಯಾರ್ಥಿನ್ನೋಳಗೊಂಡ ತಂಡಕ್ಕೆ ದ್ವೀತಿಯ ಸ್ಥಾನವ ಪಡೆಯಿತು. ಇವರಿಗೆ ಶಾಲಾ ವಿಜ್ಞಾನ ಶಿಕ್ಷಕಿಯಾದ, ಸ್ಮಿತಾ ಡಿಸೋಜಾ ಮಾರ್ಗದರ್ಶನ ನೀಡಿದ್ದರು. ಶಾಲಾ ಜಂಟಿ ಕಾರ್ಯದರ್ಶಿ ಅ|ವಂ|ಧರ್ಮಗುರು ಸ್ಟ್ಯಾನಿ ತಾವ್ರೊ, ಶಾಲಾ ಮುಖ್ಯೋಪಾಧ್ಯಾಯಿನಿ ಅಸುಂಪ್ತಾ ಲೋಬೊ ಹಾಗೂ ಇತರ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪುರ ಪೇಟೆ ವೆಂಕಟರಮಣ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ಪ್ರತಿ ವರ್ಷ ನಡೆಯುವ “ವಿಶ್ವರೂಪ ದರ್ಶನ” ಕಾರ್ಯಕ್ರಮ ನವೆಂಬರ್ 19 ರಂದು ಪ್ರಾತ:ಕಾಲ ನಡೆಯಲಿದೆ.ದೇವಾಲಯವನ್ನು ಸಂಪೂರ್ಣವಾಗಿ ರಂಗೋಲಿ ನಂದಾ ದೀಪಗಳಿಂದ ಸಿಂಗರಿಸಿ ಪೂಜೆ ನಡೆಸಲಾಗುತ್ತದೆ. ನಂದಾ ದೀಪಾಲಂಕಾರದ ವೈಭವ ಕಣ್ತುಂಬಿಕೊಳ್ಳಲು ನೂರಾರು ಮಂದಿ ಭಕ್ತಾಧಿಗಳು ಮುಂಜಾನೆ 5 ಗಂಟೆಗೆ ಆಗಮಿಸುತ್ತಾರೆ. ಭಕ್ತಾಭಿಮಾನಿಗಳು ಕುಟುಂಬ ಸಮೇತ ಆಗಮಿಸಿ, “ವಿಶ್ವರೂಪ ದರ್ಶನ”ದಲ್ಲಿ ಪಾಲ್ಗೊಳ್ಳಬೇಕೆಂದು ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ಆಹ್ವಾನಿಸಿದ್ದಾರೆ.
“ಯುವ ಜನರು ಸಾಹಸ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ಶಿಕ್ಷಣದೊಂದಿಗೆ ಪ್ರಕೃತಿಯ ನಡುವೆ ಸಾಹಸ ಮಾಡುವ ಶ್ರಮದಿಂದ ಆತ್ಮವಿಶ್ವಾಸವೂ ಬೆಳೆಯುತ್ತದೆ, ಆರೋಗ್ಯವೂ ವೃದ್ಧಿಯಾಗುತ್ತದೆ. ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಗೈಡ್, ಎನ್.ಸಿ.ಸಿ., ಎನ್.ಎಸ್.ಎಸ್. ವಿಭಾಗಗಳಲ್ಲಿ ಸೇರಿಕೊಂಡ ವಿದ್ಯಾರ್ಥಿಗಳಲ್ಲಿ ಮಾನಸಿಕವಾಗಿ ಸವಾಲುಗಳನ್ನು ಎದುರಿಸುವ ಧೈರ್ಯ ಹೆಚ್ಚಿರುತ್ತದೆ. ತರಬೇತಿ ಪಡೆದರೆ ಇತರರೂ ಕ್ರಿಯಾಶೀಲರಾಗಬಹುದು. ಭಾರತ ದೇಶದ ಪ್ರಕೃತಿ ಜಲ ಕ್ರೀಡೆ, ಪರ್ವತಾರೋಹಣ ಸಾಹಸ ಕ್ರೀಡೆಗೆ ಅತ್ಯುತ್ತಮವಾಗಿದೆ. ನಮ್ಮ ಕುಂದಾಪುರ ತಾಲೂಕಿನಲ್ಲೂ ಅಪೂರ್ವ ಸಂಪನ್ಮೂಲವಿದೆ. ಈಗಾಗಲೇ ಹಲವು ಯುವಕರು ನಡೆಸುವ ಪ್ರಯತ್ನಗಳಿಗೆ ಪ್ರೋತ್ಸಾಹ ದೊರಕಬೇಕು” ಎಂದು […]
ಮಂಗಳೂರು: ಸ್ಥಳೀಯ ಎ.ಜೆ. ಲೇಡಿಸ್ ಕಾಲೇಜು್ ಹಾಸ್ಟೆಲಿನ ಆರನೇ ಮಹಡಿಯಿಂದ ಜಿಗಿದು. ವೈದ್ಯಕೀಯ. ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ನಗರದ ಎ.ಜೆ. ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡುತ್ತಿರುವ ಪ್ರಕೃತಿ ಶೆಟ್ಟಿ ಇಂದು ಮುಂಜಾನೆ ಎ.ಜೆ. ಲೇಡಿಸ್ ಹಾಸ್ಟೆಲ್ನ.ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಅತ್ಮಹತ್ಯೆ […]
ಗುರುಪುರ : ದೀಪಗಳ ಹಬ್ಬ ದೀಪಾವಳಿಯಲ್ಲಿ ಎರಡು ಅರ್ಥ ಕಾಣುತ್ತೇವೆ. ತನ್ನನ್ನು ಉರಿಸಿಕೊಂಡು ಬೇರೆಯವರಿಗೆ ಬೆಳಕು ಕೊಡುವುದು ಒಂದು ಅರ್ಥವಾದರೆ, ಒಂದು ದೀಪದಿಂದ ನೂರಾರು-ಸಾವಿರಾರು ದೀಪಗಳು ಬೆಳಗುತ್ತದೆ ಎಂಬುದು ಇನ್ನೊಂದು ಅರ್ಥ. ಬೆಳಕು ಜ್ಞಾನದ ಸಂಕೇತವೂ ಹೌದು. ಎಲ್ಲರೂ ಕೂಡಿಕೊಂಡು ಈ ಬೆಳಕಿನ ಹಬ್ಬ ಆಚರಿಸಬೇಕು. ಆಗಲೇ ದೀಪಾವಳಿ ಅರ್ಥಪೂರ್ಣವಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹೇಳಿದರು.ಮಂಗಳೂರಿನ ಸಂತ ಮದರ್ ತೆರೇಸಾ ವಿಚಾರ ವೇದಿಕೆಯು ವಾಮಂಜೂರು ಮಂಗಳಜ್ಯೋತಿ ಜಂಕ್ಷನ್ನಲ್ಲಿ ನ. 12ರಂದು ಆಯೋಜಿಸಿದ ದೀಪಾವಳಿ […]
ಕುಂದಾಪುರ, ನ.13: ಕುಂದಾಪುರ ಸಮೀಪದ ಗಂಗೊಳ್ಳಿ ಬಂದರಿನಲ್ಲಿ ಲಂಗರು ಹಾಕಿದ್ದ ಮೀನುಗಾರಿಕಾ ದೋಣಿಗಳಿಗೆ ಬೆಂಕಿ ತಗಲಿದ ಘಟನೆ ನ.13 ರಂದು ಸೋಮವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಎಂಟು ಮೀನುಗಾರಿಕಾ ದೋಣಿಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿಗೆ ನಿಖರ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ಆದರೆ ಪಟಾಕಿ ಸಿಡಿತದಿಂದ ಬೆಂಕಿ ಉಂಟಾಗಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಒಂದು ದೋಣಿಯಿಂದ ಪ್ರಾರಂಭವಾದ ಬೆಂಕಿಯು ಸ್ವಲ್ಪ ಸಮಯದ ನಂತರ ಹತ್ತಿರದಲ್ಲಿ ಲಂಗರು ಹಾಕಲಾಗಿದ್ದ ಇತರ ಮೀನುಗಾರಿಕಾ […]
ಕುಂದಾಪುರ, ನ.13: ತಲ್ಲೂರು ಸಂತ ಫ್ರಾನ್ಸಿಸ್ ಆಸೀಸಿ ಚರ್ಚ್ ವಠಾರದಲ್ಲಿ, ಚರ್ಚ್ ವತಿಯಿಂದ ಕ್ರೈಸ್ತರು ದೀಪಾವಳಿ ಆಚರಣೆಯನ್ನು ನ.12 ರಂದು ಭಾನುವಾರ ಸಂಜೆಯ ವೇಳೆ ಸಂಭ್ರಮದ ದೀಪಾವಳಿ ಆಚರಣೆಯನ್ನು ಆಚರಿಸಿದರಈ ದೀಪಾವಳಿಯ ಕಾರ್ಯಕ್ರಮಕ್ಕೆ, ತಲ್ಲೂರು ಗ್ರಾ.ಪಂಚಾಯಿತಿಯ ಅಧ್ಯಕ್ಷರಾದ ಗಿರೀಶ್ ನಾಯ್ಕ್, ಉಪಾಧ್ಯಕ್ಷೆಯಾದ ಚಂದ್ರಮತಿ ಹೆಗಡೆ, ಹೆಮ್ಮಾಡಿ ಗ್ರಾಮ ಪಂಚಾತಿಯಿಯ ಅಧ್ಯಕ್ಷೆಯಾದ ನೇತ್ರಾವತಿ, ಕಟ್ಬೆಲ್ತೂರು ಗ್ರಾ. ಪಂಚಾಯಿತಿಯ ಉಪಾಧ್ಯಕ್ಷರಾದ ರಾಮ ಶೆಟ್ಟಿ ಇವರುಗಳಿಗೆ, ತಲ್ಲೂರು, ಹೆಮ್ಮಾಡಿ ಮತ್ತು ಕಟ್ ಬೆಲ್ತೂರ್ ಈ 3 ಪಂಚಾಯ್ತಿಯ ಹಿಂದುಗಳ ಪರವಾಗಿ ಅಹ್ವಾನಿಸಿದ್ದು, […]
ಕುಂದಾಪುರ, ದಿ 10-11-2023 ರಂದು ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಶಾಲಾ ಕ್ರೀಡಾಂಗಣದಲ್ಲಿ ಜರುಗಿತು.ವಾದ್ಯ ವೃಂದದೊಂದಿಗೆ ಪಥಸಂಚಲನ ನಡೆಯಿತು. ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಅಧ್ಯಕ್ಷರಾದ ರೋ, ಜಗನ್ನಾಥ್ ಮೊಗೇರ ಇವರು ಕ್ರೀಡೋತ್ಸವ ಉದ್ಘಾಟಿಸಿ ಹಾಗೂ ಜ್ಯೋತಿಯನ್ನು ಬೆಳಗಿಸಿ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡಾಳುಗಳು ಶಾಲಾ ಮಟ್ಟದಿಂದ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ ಎಂದು ತಿಳಿದರು. ಮುಖ್ಯ ಅತಿಥಿಗಳಾದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಭಗಿನಿ ಪ್ರೇಮಿಕ ಇವರು ಮಾತನಾಡಿ […]
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಟಿ.ಸಿ.ಎ ಉಡುಪಿ ಇವರ ಆಶ್ರಯದಲ್ಲಿ ಶಾಲಾ-ಕಾಲೇಜು ಮಟ್ಟದ ವಿದ್ಯಾರ್ಥಿಗಳ ಕ್ರಿಕೆಟ್ ಪಂದ್ಯಾಟ ನಡೆಯಿತು. ಟಿ.ಸಿ.ಎ ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟದ ಫಲಿತಾಂಶಜಿ.ಪಿ.ಟಿ ಮಣಿಪಾಲ ಪ್ರಥಮಎಮ್.ಎಸ್.ಆರ್.ಎಸ್ ಶಿರ್ವ-ದ್ವಿತೀಯ ನವೆಂಬರ್ 6 ರಿಂದ 10 ರ ವರೆಗೆ ಸತತ 5 ದಿನಗಳ ಕಾಲ ನಡೆದ ಈ ಪಂದ್ಯಾಟದಲ್ಲಿ 64 ಹೈಸ್ಕೂಲ್ ಮತ್ತು ಕಾಲೇಜು ತಂಡಗಳು ಭಾಗವಹಿಸಿದ್ದರು.ಅಂತಿಮವಾಗಿ ಫೈನಲ್ ನಲ್ಲಿ ಜಿ.ಪಿ.ಟಿ ಮಣಿಪಾಲ-ಎಮ್.ಎಸ್.ಆರ್.ಎಸ್ ಶಿರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಥಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಲಕ್ಷ್ಮೀ ಸೋಮ ಬಂಗೇರ […]

