ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲ ರೂ. 2000/- ಗಳನ್ನು ನೀಡುವ ಗ್ರಹಲಕ್ಷ್ಮಿ ಯೋಜನೆಯನ್ನು ಕರ್ನಾಟಕದ ಸರ್ಕಾರ ಜಾರಿಗೆ ತಂದಿದೆ. ಈಗಾಗಲೇ ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳಿಗೆ ದಿನಾಂಕ: 30-08-2023 ರಂದು ಮೈಸೂರಿನಲ್ಲಿ ಗ್ರಹಲಕ್ಷ್ಮೀ ಯೋಜನೆಯನ್ನು ಮಾನ್ಯ ಮುಖ್ಯ ಮಂತ್ರಿಗಳು ಲೋಕಾರ್ಪಣೆ ಗೊಳಿಸಲಿದ್ದು, ಸದರಿ ಕಾರ್ಯಕ್ರಮಕ್ಕೆ ಎಲ್ಲಾ ಫಲಾನುಭೂಮಿಗಳು, ಸಾರ್ವಜನಿಕರು ,ಭಾಗಿಯಾಗಲು ಬ್ಲಾಕ್ ಕಾಂಗ್ರೆಸ್ ಕುಂದಾಪುರ ವ್ಯಾಪ್ತಿಯ ವಾರ್ಡ್ ಹಂತದಲ್ಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಟಿ.ವಿ/ […]
ಕುಂದಾಪುರ, ಆ.28: ಕಥೊಲಿಕ್ ಸಭಾ ಪಡುಕೋಣೆ ಘಟಕದ ವತಿಯಿಂದ ಆಯೋಜಿಸಲಾದ ಬೃಹತ್ ರಕ್ತದಾನ ಶಿಬಿರವು 27 ರಂದು ಆದಿತ್ಯವಾರ ಪಡುಕೋಣೆ ಚರ್ಚ್ ಹಾಲಿನಲ್ಲಿ ನೆರವೇರಿತು ಶಿಬಿರವನ್ನು ಪಡುಕೋಣೆ ಚರ್ಚಿನ ಚರ್ಚಿನ ಧರ್ಮಗುರುಗಳಾದ ವಂ| ಫ್ರಾನ್ಸಿಸ್ ಕರ್ನೆಲಿಯೋ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಚಿಕ್ಕಮರಿ ಮತ್ತು ಮುಖ್ಯ ಅತಿಥಿಯಾಗಿ ರೆಡ್ ಕ್ರಾಸ್ ಸಂಸ್ಥೆಯ ಸಂಯೋಜಕರಾದ ಜೈಕರ್ ಶೆಟ್ಟಿ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೋಲಿಕ್ ಸಭಾ ಅಧ್ಯಕ್ಷರಾದ ವಿನಯ್ ಡಿ […]
ಯುವಕ ಸಮಾಜ, ಕುಂದಾಪುರ ಇದರ ವತಿಯಿಂದ ತಾಲೂಕಿನೊಳಗಿನ ಕಾಲೇಜುಗಳಲ್ಲಿ, ಪದವಿ ಪೂರ್ವ, ಪದವಿ ಹಾಗೂ ತಾಂತ್ರಿಕ ಶಿಕ್ಷಣ ತರಗತಿಗಳಲ್ಲಿ ಕಲಿಯುತ್ತಿರುವ ಜಿ.ಎಸ್.ಬಿ. ಸಮಾಜದ ಬಡ ಹಾಗೂ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಫಾರ್ಮ್ನ್ನು ಈ ಕೆಳಗಿನ ವಿಳಾಸದಲ್ಲಿ ಪಡೆಯಬಹುದು ಅಥವಾ ಸ್ವಂತ ವಿಳಾಸ ಬರೆದ ಹಾಗೂ ಸಾಕಷ್ಟು ಅಂಚೆ ಚೀಟಿ ಹಚ್ಚಿದ ಲಕೋಟೆಯನ್ನು ಲಗತ್ತಿಸಿ ಅರ್ಜಿ ಫಾರ್ಮ್ಗಳಿಗಾಗಿ ಬರೆದುಕೊಳ್ಳಬೇಕಾಗಿ ಪ್ರಕಟಿಸಲಾಗಿದೆ.ಭರ್ತಿ ಮಾಡಿದ ಅರ್ಜಿ ತಲುಪಲು ಕೊನೆಯ ದಿನಾಂಕ 12-09-2023 ಆಗಿರುತ್ತದೆ.ವಿಳಾಸ : ಕೆ. ದಿವಾಕರ […]
ಕುಂದಾಪುರ: ಅಮಾನುಷವಾಗಿ ಹತ್ಯೆಯಾದ ನಮ್ಮೆಲ್ಲರ ಮನೆ ಮಗಳಾದ ಸೌಜನ್ಯ ಅವರಿಗೆ ನ್ಯಾಯ ಒದಗಿಸಬೇಕು ಎನ್ನುವ ಉದ್ದೇಶಕ್ಕಾಗಿ ಆರಂಭಿಸಲಾದ ಜನಶಕ್ತಿಯ ಹೋರಾಟ, ನಾಡಿನಾದ್ಯಂತ ವಿಸ್ತರಣೆಯಾಗಲಿದೆ. ಈ ಅನ್ಯಾಯದ. ವಿರುದ್ಧ: ನಾವು: ಮಾತನಾಡಿದರೆ ನಮ್ಮಮೇಲೆ ಪ್ರಕರಣ ದಾಖಲಾಗುತ್ತದೆ. ಹೀಗಾಗಿ ಜನ ಸಮೂಹವೇ ಈ ಕುರಿತು ಮಾತನಾಡಬೇಕು ಎಂದು ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ. ಹೇಳಿದ್ದಾರೆ. ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿಯಲ್ಲಿ ಶನಿವಾರ ಸೌಜನ್ಯ ಪ್ರಕರಣದ ಮರು ತನಿಖೆಗಾಗಿ ನಡೆದ ಬೃಹತ್ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಅವರು, ಸನಾತನ ಹಿ೦ದೂ […]
ಕುಂದಾಪುರ: ಅಭಿವೃದ್ಧಿ ಪಥದಲ್ಲಿರುವ ಕುಂದಾಪುರದ ಪರಿಸರಕ್ಕೆ ಆಟೋ ರಿಕ್ಷಾ, ಟ್ಯಾಕ್ಸಿ ,ಸೇವೆಯ ಕೊಡುಗೆ ಅಪಾರ ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ತಿಳಿಸಿದರು.ಇಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 42ನೇ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಅಸೋಸಿಯೇಷನ್ ಅಧ್ಯಕ್ಷರಾದ ಲಕ್ಷ್ಮಣ್ ಶೆಟ್ಟಿ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಸಂಘಟಿತರಾಗಿ ಸವಾಲುಗಳನ್ನು ಎದುರಿಸಬೇಕು ಮತ್ತು ಮುಂದಿನ ದಿನಗಳಲ್ಲಿ ಹೊಸ ಸದಸ್ಯರ ನೋಂದಣಿಗೆ ಸಹಕರಿಸ ಬೇಕು ಎಂದು ಹೇಳಿದರು ಮತ್ತು ವಾರ್ಷಿಕ ವರದಿಯನ್ನು […]
ದಿನಾಂಕ 25.08.2023 ರಂದು ಕುಂದಾಪುರ ತಾಲೂಕಿನ ಶಾಸ್ತ್ರಿ ವೃತ್ತದಲ್ಲಿ ನಡೆದ ಸೌಜನ್ಯ ಪ್ರಕರಣದಮರು ತನಿಖೆಗಾಗಿ ನಡೆದ ಜನಾಗ್ರಹ ಸಭೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ವ್ಯಯುಕ್ತಿಕ ತೇಜೋವಧೆ ಮಾಡಿರುವುದು ತೀರಾ ಖಂಡನೀಯವಾಗಿದೆ. ಶ್ರೀ ಮಹೇಶ್ ಶೆಟ್ಟಿ ತಿಮರೋಡಿಯವರು ಬಹಿರಂಗ ಸಭೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಅಸತ್ಯ ಮತ್ತು ದ್ವೇಷದ ಬೀಜ ಬಿತ್ತಿರುವುದು, ತಾವು ಹೇಳಿದ ಕಟ್ಟುಕತೆಯನ್ನೇ ಹಳ್ಳಿ ಹಳ್ಳಿಗಳಲ್ಲಿ ಅಪಪ್ರಚಾರ ಮಾಡುವಂತೆ ಜನರಿಗೆ ಸಾರ್ವಜನಿಕ ಕರೆ ಕೊಟ್ಟಿರುವುದು ಸಮಾಜದ ಶಾಂತಿ ಮತ್ತು ವ್ಯವಸ್ಥೆಯನ್ನು ಹಾಳುಮಾಡುವ […]
The construction of the grand ‘Rohan City’ Bejai, undertaken by Rohan Corporation, is progressing well. On September 5th, on the occasion of Teachers’ Day celebration, a special scheme has been introduced for individuals dedicated to societal service. This scheme offers a special benefit to teachers, police personnel, defence, and journalists, providing a 10% discount on […]
ಉಡುಪಿ, ಆ.26: ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸವಿತಾ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ವಿಲ್ಸನ್ ರೊಡ್ರಿಗಸ್ ಆಯ್ಕೆಯಾದರು. ಶಿರ್ವ ಗ್ರಾಮ ಪಂಚಾಯತ್ ನಲ್ಲಿ 34 ಸದಸ್ಯರಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸವಿತಾ ಪೂಜಾರಿ, ಬಿಜೆಪಿ ಬೆಂಬಲಿತ ಆಶಾ ಆಚಾರ್ಯ ವಿರುದ್ಧ ಸ್ಫರ್ಧಿಸಿ 20-14 ಅಂತರದಿಂದ ಗೆದ್ದರು. ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಮಾಜಿ ಜಿಪಂ ಸದಸ್ಯ ವಿಲ್ಸನ್ ರೋಡ್ರಿಗಸ್ ಎದುರಾಳಿ ರಾಜೇಶ್ ಶೆಟ್ಟಿ ವಿರುದ್ಧ; ಸ್ಫರ್ಧಿಸಿ 19-15 ಅಂತರ ದಿಂದ ಗೆದ್ದರು. ಚುನಾವಣಾಧಿಕಾರಿಯಾಗಿ ಉಡುಪಿ […]
ಕುಂದಾಪುರ: ಅಗಸ್ಟ್ 24: ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಕಾಲೇಜು ಮೂಡ್ಲಕಟ್ಟೆ, ಕುಂದಾಪುರದಲ್ಲಿ ಪ್ರಥಮಪದವಿ ವರ್ಷದ ವಿದ್ಯಾರ್ಥಿಗಳ “ದೀಕ್ಷಾರಂಭ” ಕಾರ್ಯಕ್ರಮದ ಅಂಗವಾಗಿ “ಪೃಥ್ವಿ ವಿಷನ್” ಸಂಸ್ಥಾಪಕರು, ಹಾಗೂ ಸೈಬರ್ಭದ್ರತಾ ಸಲಹೆಗಾರರಾದ ಶ್ರೀಯುತ ಪೃಥ್ವೀಶ್ ಕೆ. ಯವರ ನೇತೃತ್ವದಲ್ಲಿ “ಸೈಬರ್ ಭದ್ರತೆ”ಯ ಕುರಿತು ಕಾರ್ಯಗಾರವುನೆರವೇರಿತು.ವಿದ್ಯಾರ್ಥಿಗಳಿಗೆ ಸೈಬರ್ ಭದ್ರತೆಯಲ್ಲಿನ ಜ್ಞಾನವನ್ನು ಸಶಕ್ತಗೊಳಿಸುವತ್ತ ಗಮನಹರಿಸುವ ಮತ್ತು ಅಪರಾಧ, ಡೇಟಾ ಮತ್ತುಹಣಕಾಸಿನ ವಂಚನೆಗಳ ವಿರುದ್ಧ ವೈಯಕ್ತಿಕವಾಗಿ ಹೇಗೆ ಕಾರ್ಯನಿರ್ವಹಿಸಬೇಕೆಂಬುದರ ಕುರಿತು ಕಾರ್ಯಗಾರದಲ್ಲಿ ವಿವರವಾಗಿತಿಳಿಸಿದರು.

