ಕುಂದಾಪುರ : ಡಿಸೆಂಬರ್ 29ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದೂರಿ, ಹಾಲಾಡಿಯಲ್ಲಿ ಭಂಡಾರಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಶಿಬಿರ 2022-23 ಇದರ ಸಮಾರೋಪ ಸಮಾರಂಭ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಡಾ. ಶುಭಕರಾಚಾರಿ ವಹಿಸಿದ್ದು ಇವರು ಶಿಬಿರವನ್ನುದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳು ಆಗಿರುವ ಅರುಣ ಎ. ಎಸ್,ರಾಮಚಂದ್ರ ಆಚಾರ್ ಮತ್ತು ಅಣ್ಣಪ್ಪ ಇವರಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದೂರಿ ಇವರ ವತಿಯಿಂದ […]
ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪೂರ್ವಿಕಾ ಇವರು ರಾಜ್ಯಮಟ್ಟದ ಕಲೋತ್ಸವ 2022 ಸ್ಪರ್ಧೆಯ ಭರತನಾಟ್ಯ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನಗಳಿಸಿರುತ್ತಾಳೆ. ಪೂರ್ವಿಕಾಳ ಈ ಉತ್ತಮ ಕಲಾಸಾಧನೆಯನ್ನು ಮೆಚ್ಚಿ, ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿ ಯವರು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ್ ಶೆಟ್ಟಿಯವರು ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಅಭಿನಂದಿಸಿದ್ದಾರೆ.
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಹಾಗೂ ಇಲೆಕ್ಟ್ರಾನಿಕ್ಸ್ ಕಮ್ಯುನಿಕೇಶನ್ಸ್ ಇಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ “ಆಧುನಿಕ ಯುಗದ ಉಪಯುಕ್ತ ತಂತ್ರಾಂಶದ ತಿಳುವಳಿಕೆ” ಎಂಬ ವಿಷಯದ ಕುರಿತು ವಿಚಾರ ಗೋಷ್ಠಿಯನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಡೆಲ್ ಟೆಕ್ನಾಲಜೀಸ್ನ ಟೆಕ್ನಿಕಲ್ ಸ್ಟಾಫ಼್ ಆಗಿರುವ ಶ್ರೀ ಸುಬ್ರಹ್ಮಣ್ಯ ಪಡುಬಿದ್ರಿ ಅವರು ಆಗಮಿಸಿದ್ದರು. ವಿಧ್ಯಾರ್ಥಿಗಳಿಗೆ ವಿಷಯದ ಜೊತೆಗೆ ಅವರ ಕ್ರಿಯಾಶೀಲತೆ ಹಾಗೂ ದೂರದೃಷ್ಟಿ ವೃದ್ಧಿಸಲು ಸಹಾಯಕವಾಗುವಂತೆ ವಿವಿಧ ಚಟುವಟಿಕೆಗಳನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಸೂರಜ್ ಪಿ ಎಂ ಎಸ್ (ಎಂಬೆಡೆಡ್ ಸಿಸ್ಟಮ್ಸ್)ಮ್ಯಾನೇಜರ್, ಕಾಂಟಿನೆಂಟಲ್ […]
ಕುಂದಪ್ರಭ ಸಂಸ್ಥೆಯ ವತಿಯಿಂದ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರಿಗೆ ಕೋ.ಮ. ಕಾರಂತ ಪ್ರಶಸ್ತಿ ಪ್ರದಾನ ಮಾಡುವ ಸಮಾರಂಭ ಜನವರಿ 1 ರಂದು ಮಧ್ಯಾಹ್ನ 4 ಗಂಟೆಗೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಲಘು ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ.ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾರಂಭ ಉದ್ಘಾಟಿಸಲಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ವಹಿಸಲಿದ್ದಾರೆ.ಕರ್ನಾಟಕ ಹಿಂದುಳಿದ […]
ಮಂಗಳೂರು: 23ನೇ ಡಿಸೆಂಬರ್ 2022 ರಂದು ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದಿಂದ ಕ್ರಿಸ್ಮಸ್ ಸಂಭ್ರಮ ನಡೆಯಿತು. ಇಡೀ ಕಾಲೇಜಿನ ಕ್ರಿಸ್ಮಸ್ ಸಂಭ್ರಮದ ವಾತವರಣದಿಂದ ಕೂಡಿತ್ತು. ವಿದ್ಯಾರ್ಥಿಗಳು ತರಗತಿಗಳನ್ನು ಅಲಂಕರಿಸಿದ್ದರು. ವರ್ಗವಾರು ಗೋದಲಿ ಸ್ಪರ್ಧೆಗಳು ನಡೆದವು. ಫೋಟೋ ಬೂತ್,ಮೆಹೆಂದಿ ಮಳಿಗೆಗಳು, ಆಟಗಳು, ಮುಖವರ್ಣಿಕೆ, ಬೇಯಿಸಿದ ಆಹಾರಗಳು ಮತ್ತು ಕರಕುಶಲ ವಸ್ತುಗಳ ಮಾರಾಟ ಕಾರ್ಯಕ್ರಮಗಳು ಆಕರ್ಷಣೆಗಳಿಂದ ಕೂಡಿದ್ದವು. ಪ್ರತಿಭಾವಂತ ವಿದ್ಯಾರ್ಥಿಗಳು ಚತುರತೆಯನ್ನು ಪ್ರದರ್ಶಿಸುವ ವಿವಿಧ ಕರಕುಶಲ ವಸ್ತುಗಳ ಪ್ರದರ್ಶನ,ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿತ್ತು. ಪ್ರಾರ್ಥನಾ ಗೀತೆಯೊಂದಿಗೆ […]
ಕೋಟ: ಕೋಟಾದ ಸುನೀಲ್ ಫೆರ್ನಾಂಡಿಸ್ ಮತ್ತು ಕುಟುಂಬದವರು ತಮ್ಮ ಮನೆಯ ಆವರಣದಲ್ಲಿ ಹಲವಾರು ವರ್ಷಗಳಿಂದ ಆಕರ್ಶಕವಾದ ಗೋದಲಿಯನ್ನು ನಿರ್ಮಿಸುತಿದ್ದು, ಈ ಭಾರಿ (2022) ಬ್ರಹತ್ ಗಾತ್ರದ ಆಳೆತ್ತರದ ಕಟೌಟಗಳಿಂದ ಗೋದಲಿಯನ್ನು ನಿರ್ಮಿಸಿದ್ದು, ಈ ಗೋದಲಿ ಜನರನ್ನು ಆಕರ್ಶಣೆಗೆ ಒಳಗಾಗಿದೆ.
ಕುಂದಾಪುರ : ಡಿಸೆಂಬರ್ 25 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದೂರಿ, ಹಾಲಾಡಿಯಲ್ಲಿ ಭಂಡಾರಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಶಿಬಿರದಲ್ಲಿ ಲಯನ್ಸ್ ಕ್ಲಬ್ ಕುಂದಾಪುರ ಇವರ ಸಹಾಯೋಗದೊಂದಿಗೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಲಾಡಿ ಇವರ ನುರಿತ ವೈದ್ಯಾಧಿಕಾರಿಗಳಿಂದ ಊರ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.ಪ್ರೊ. ನವೀನ್ ಶೆಟ್ಟಿ, ಅಧ್ಯಕ್ಷರು ಲಯನ್ಸ್ ಕ್ಲಬ್ ಕುಂದಾಪುರ ಮತ್ತು ಪ್ರಾಂಶುಪಾಲರು ಆರ್. ಎನ್. ಶೆಟ್ಟಿ ಕಾಲೇಜು ಪದವಿ […]
ಕುಂದಾಪುರ : ಡಿಸೆಂಬರ್ 23ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದೂರಿ, ಹಾಲಾಡಿಯಲ್ಲಿ ಭಂಡಾರಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಶ್ರೀ ಜನಾರ್ಧನ, ಉಪಾಧ್ಯಕ್ಷರು ಗ್ರಾಮ ಪಂಚಾಯತ್ ಹಾಲಾಡಿ ಇವರು ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ ನಾರಾಯಣ ಶೆಟ್ಟಿ ವಹಿಸಿದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ,ವಸಂತ್ ಕುಮಾರ್ ಶೆಟ್ಟಿ ನಿವೃತ್ತ ಶಿಕ್ಷಣಧಿಕಾರಿ […]

