ಮೂಡುಬಿದಿರೆ : ಸಾಸಿವೆ, ಕೊತ್ತಂಬರಿ, ಹುರುಳಿ, ರಾಗಿ ಸೇರಿದಂತೆ ಹಸಿ ಮತ್ತು ಒಣ ಅಡಿಕೆಯಿಂದ ವಿಶಿಷ್ಟ ತಿರುಗುವ ಕ್ರಿಸ್ಮಸ್ ನಕ್ಷತ್ರವನ್ನು ಶಿರ್ತಾಡಿಯ ಲೈಫ್ ಸೇವಾ ಸಂಸ್ಥೆಯವರು ನಿರ್ಮಿಸಿದ್ದಾರೆ.ಈ ನಕ್ಷತ್ರವನ್ನು ಶಿರ್ತಾಡಿಯ ಮೌಂಟ್ ಕಾರ್ಮೆಲ್ ಚರ್ಚ್ ನ ಆವರಣದಲ್ಲಿ ಕ್ರಿಸ್ಮಸ್ ಪ್ರಯುಕ್ತ ಡಿ.23 ರಿಂದ ಜ.5 ರವರೆಗೆ ಪ್ರದರ್ಶನಕ್ಕೆ ಇರಿಸಲಾಗುತ್ತದೆ.ಈ ನಕ್ಷತ್ರವು 120 ಕೆಜಿ ತೂಕ, 12 ಅಡಿ ಎತ್ತರ, 11 ಅಡಿ ಅಗಲವಿದ್ದು, ನಕ್ಷತ್ರದ ಮಧ್ಯಭಾಗದಲ್ಲಿ ಏಸುಕ್ರಿಸ್ತನ ಹುಟ್ಟನ್ನು ಬಿಂಬಿಸುವ ಬೈಹುಲ್ಲಿನ ಮೇಲ್ಛಾವಣಿ ಹೊಂದಿರುವ ಆಕರ್ಷಕ ಗೋದಳಿಯನ್ನು […]
Christmas brings cheer and love and parishioners of St Joseph Church celebrated it with the same religious gaiety, fervor, and enthusiasm spreading the message of love and joy among the young and old! The program began at 6:30 pm with a prayer song followed by an impressive array of melodious songs, Christmas Tableau in Tulu language, thematic […]
ಬೈಂದೂರಿನ ಹೋಲಿಕ್ರಾಸ್ ಚರ್ಚಿನಲ್ಲಿ ರೆ. ಫಾ. ವಿನ್ಸೆಂಟ್ ಕುವೆಲ್ಲೋ, ರೆ.ಫಾ. ರಾಯಲ್ ನಜ್ರೆತ್, ರೆ.ಫಾ. ಸಿರಿಲ್ ಲೋಬೋ, ರೆ.ಫಾ ಕಿರಣ್ ನಜ್ರೆತ್ ರವರ ನೇತ್ರತ್ವದಲ್ಲಿ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು.
ಕುಂದಾಪುರ, ಡಿ.24: ಸ್ಥಳೀಯ ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮವು ಡಿ.23 ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಜಂಟಿ ಕಾರ್ಯದರ್ಶಿಯಾಗಿರುವ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳಾದ ಅ|ವಂ|ಸ್ಟ್ಯಾನಿ ತಾವ್ರೊ ವಹಿಸಿ “ಆಟ ಪಾಠ ಎರಡು ಸಮಾನವಾಗಿವೆ, ಮನುಷ್ಯನಿಗೆ ಎರಡರವು ಅಗತ್ಯವಿದೆ. ಎರಡರಲ್ಲಿಯೂ ಸಾಧನೆ ಮಾಡಿ ಇವತ್ತು ನೀವು ಬಹುಮಾನಗಳನ್ನು ಪಡೆದುಕೊಂಡಿದ್ದಕ್ಕೆ ನಿಮ್ಮಲ್ಲಿ ಬಹಳ ಸಂತೋಷ ಉಂಟಾಗಿದೆ, ನಾನು ಎಲ್ಲರನ್ನು ಅಬ್ಬಿನಂದಿಸುತ್ತೇನೆ. ಕಲಿಯಲು ಮನಸಿದ್ದರೆ ಹೇಗೂ ಕಲಿಯಬಹುದು. […]
ಕುಂದಾಪುರ, ಡಿ.24: ಸ್ಥಳೀಯ ಸಂತ ಜೋಸೆಫ್ ವಸತಿ ಶಾಲಾ ಮಕ್ಕಳೊಂದಿಗೆ ಕ್ರಿಸ್ಮಸ್ ಸಂತೋಷ ಕೂಟ ದಾನಿಗಳಾದ ಸ್ಟ್ಯಾನ್ಲಿ ಚೆರೀಯನ್ ಮತ್ತು ಕುಂದಾಪುರದ ಐವನ್ ಆಲ್ಮೇಡ ಕುಟುಂಬದ ವತಿಯಿಂದ ಡಿಸೆಂಬರ್ 23 ರಂದು ಜೋಸೆಫ್ ವಸತಿ ಗ್ರಹದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿದ್ದ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ “ಕ್ರಿಸ್ಮಸ್ ಸಮಯದಲ್ಲಿ ಇಡೀ ಜಗತ್ತು ಸಂತೋಷವನ್ನು ಆಚರಿಸುತ್ತದೆ, ಇವತ್ತು ನಾವುಗಳು ನಿಮ್ಮ ಜೊತೆ ಈ ಸಂತೋಷವನ್ನು ಹಂಚಿಕೊಳ್ಳಲಿಕ್ಕೆ ನಿಮ್ಮ ಜೊತೆ ಸೇರಿದ್ದೆವೆ. ಯೇಸು ಸ್ವಾಮಿ […]
ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ವತಿಯಿಂದ ರೋ. ರಮಾನಂದ ಕಾರಂತರ ಸಂಬಂಧಿಕರು ಹಾಗೂ ಸವಿತಾ ಫೌಂಡೇಶನ್, “ಆಯಿ” ಹಂಗಳೂರು ಇವರ ದೇಣಿಗೆಯಿಂದ ಬೆಚ್ಚನೆಯ ಹಾಗೂ ತಣ್ಣನೆಯ ಶುದ್ಧ ಕುಡಿಯುವ ನೀರಿನ ಘಟಕವನ್ನು ಬಿ. ಬಿ. ಹೆಗ್ಡೆ ಕಾಲೇಜಿಗೆ ಹಸ್ತಾಂತರಿಸಲಾಯಿತು.ಕಾರ್ಯಕ್ರಮದಲ್ಲಿ ರೋಟರಿ ದಕ್ಷಿಣದ ಅಧ್ಯಕ್ಷ ರೋ. ಸತ್ಯನಾರಾಯಣ ಪುರಾಣಿಕ, ಮಾಜಿ ಅಧ್ಯಕ್ಷ ರೋ. ಯು.ಎಸ್.ಶೆಣೈ, ರೋ.ರಮಾನಂದ ಕಾರಂತ, ಪ್ರಾಂಶುಪಾಲ ಪ್ರೊ. ಕೆ. ಉಮೇಶ ಶೆಟ್ಟಿ ಹಾಗೂ ಉಪ ಪ್ರಾಂಶುಪಾಲ ಕೋವಾಡಿ ಚೇತನ್ ಶೆಟ್ಟಿ ಉಪಸ್ಥಿತರಿದ್ದರು.
ನನ್ನ ಆತ್ಮೀಯ ಸ್ನೇಹಿತರೇ,ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು. ಕ್ರಿಸ್ಮಸ್ ಎಂದಾಕ್ಷಣ ಮೊದಲ ಅನಿಸಿಕೆ ಸಂತೋಷ ಹಾಗೂ ಉತ್ಸಾಹ. ವಿದ್ಯುತಾಲಂಕಾರಗಳು, ರಂಗುರಂಗಿನ ವಾತಾವರಣ. ಇನ್ನೊಂದು ಮನ ಸೆಳೆಯುವ ದೃಶ್ಯವೆಂದರೆ ದನದ ಕೊಟ್ಟಿಗೆಯಲ್ಲಿನ ಗೋದಲಿಯಲ್ಲಿ ಹುಟ್ಟಿದ ಬಾಲಯೇಸು. ಅಲ್ಲಿ ನೆಲೆಸಿದೆ ಸರಳತೆ ಹಾಗೂ ಶಾಂತತೆ. ಈ ದಿನ ನಮ್ಮ ಸಂತೋಷದಲ್ಲಿ ಭಾಗಿಯಾಗಲು ಬಂದಿದ್ದಕ್ಕಾಗಿ ಧನ್ಯವಾದಗಳು. “ಎನಗಿಂತ ಕಿರಿಯರಿಲ್ಲ” ಎಂಬಂತೆ ದೇವರು ಆತೀ ಸಣ್ಣವರಾಗಿ ಮಾನವರ ನಡುವೆ ಜನಿಸಿದರು. ಕೊಟ್ಟಿಗೆಯಲ್ಲಿ ಯೇಸುವಿನ ಜನನವು ನಮ್ಮ ಗಮನವನ್ನು ಸೆಳೆಯುತ್ತದೆ. ಚಿಕ್ಕದು, ಸುಂದರ ಎಂದು […]
ಕುಂದಾಪುರ: ಡಿ.21, ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಅಧ್ಯಕ್ಷರಾದ ಶ್ರೀ ಸಿದ್ಢಾರ್ಥ ಜೆ ಶೆಟ್ಟಿ ಅವರು ಕ್ರಿಸ್ಮಸ್ ಕೇಕ್ ಕತ್ತರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಇಂಜಿನಿಯರಿಂಗ್, ಎಮ್ ಬಿ ಎ, ಬಿಸಿಎ, ಬಿಕಾಂ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಿದ್ದಲ್ಲದೆ ಬಿಸಿಎ ವಿಧ್ಯಾರ್ಥಿ ದಿಶಾಂಕ್ ಸಾಂತಾಕ್ಲಾಸ್ ವೇಷ ಧರಿಸಿ ಸಭಿಕರನ್ನು ರಂಜಿಸಿದರು. ಐ ಎಂ ಜೆ ಸಂಸ್ಥೆಗಳ ನಿರ್ದೇಶಕರಾದ ಪ್ರೊ. ದೋಮ ಚಂದ್ರಶೇಖರ್, ಎಂ ಐ ಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ […]
ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಸ್ವರ್ಣ ಪಲ್ಲಕಿ ನಿರ್ಮಾಣಕ್ಕೆ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಚಾಲನೆ ನೀಡಿದರು.ಕುಂದಾಪುರದ ದೇವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಭರಣ ಜ್ಯುವೆಲ್ಲರ್ಸ್ನ ಮಹೇಶ್ ಕಾಮತ್ ಅವರಿಗೆ ಪ್ರಸಾದ ನೀಡಿ ಜವಾಬ್ದಾರಿ ಒಪ್ಪಿಸುವ ಮೂಲಕ ಸ್ವಾಮೀಜಿಯವರು ಚಾಲನೆ ನೀಡಿದರು.ದೇವಾಲಯದ ಆಡಳಿತ ಮೊಕ್ತೇಸರರಾದ ಕೆ. ರಾಧಾಕೃಷ್ಣ ಶೆಣೈ ಜತೆ ಮೊಕ್ತೇಸರರಾದ ಜನಾರ್ಧನ ಮಲ್ಯ, ತ್ರಿವಿಕ್ರಮ ಪೈ ಹಾಗೂ ಅಕ್ಷಯ ಶೆಣೈ, ಕೆ. ಪದ್ಮನಾಭ ಶೆಣೈ, ಯು. ಅರ್ಜುನ್ ಶೆಣೈ, ವಿನಾಯಕ ಪೈ, ರಮೇಶ್ […]

