ಮಂಗಳೂರು; ದೀನದಲಿತರ ನೋವಿಗೆ ಧನಿಯಾಗಿ, ಸಮಾಜಕ್ಕೆ ತನ್ನನ್ನು ತಾನೇ ಅರ್ಪಿಸಿಕೊಂಡ ದೈವತ್ವಕ್ಕೇರಿದ ಸಂತ ಅಲೋಶಿಯಸ್ ಗೊಂಝಾಗ ಇವರ ಹುಟ್ಟುಹಬ್ಬವನ್ನು ಶಾಲಾ ಪಾಲಕರ ದಿನಾಚರಣೆಯಾಗಿ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವಾದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಗೊಂಝಾಗ ಜೀವನ,ಆದರ್ಶಗಳು ಎಂದಿಗೂ ನಮಗೆ ಅನುಕರಣೆಯ ಎಂಬುದಾಗಿ ಮುಖ್ಯ ಶಿಕ್ಷಕರಾದ ಶ್ರೀಯುತ ಅಲೋಶಿಯಸ್ ಡಿಸೋಜರವರು ವಿದ್ಯಾರ್ಥಿಗಳಿಗೆ ತಿಳಿಸಿದರು . 10ನೇ  ತರಗತಿಯ ವಿದ್ಯಾರ್ಥಿಗಳು ಅಸೆಂಬ್ಲಿಯನ್ನು ನೆರವೇರಿಸಿದರು. ತರಗತಿ  ಶಿಕ್ಷಕರು  ಕಾರ್ಯಕ್ರಮ ಸಂಯೋಜಿಸಿದರು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

Read More

ಶ್ರೀನಿವಾಸಪುರ, ಜೂ.16: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶೇರು ಸಂಗ್ರಹಣಾ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಪತ್ರಕರ್ತರಿಂದ ನಿರೀಕ್ಷೆಗೂ ಮೀರಿ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಪತ್ರಕರ್ತರ ಆರ್ಥಿಕ ಭದ್ರತೆ, ಸಾಮಾಜಿಕ ಕಲ್ಯಾಣ ಮತ್ತು ವೃತ್ತಿ ಸಬಲೀಕರಣವನ್ನು ಗಮನದಲ್ಲಿಟ್ಟುಕೊಂಡು ಆಯೋಜಿಸಲಾದ ಈ ಅಭಿಯಾನದಲ್ಲಿ ಅನೇಕ ಪತ್ರಕರ್ತರು ಶೇರುದಾರರಾಗಿ ನೋಂದಣಿ ಮಾಡಿಕೊಂಡು ಸಂಘದ ಸದಸ್ಯತ್ವ ಪಡೆದರು. ಸಂಘದ ವಿವಿಧ ಕಲ್ಯಾಣ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು […]

Read More

ಮಂಗಳೂರು; ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ 2026-27 ನೇ ಶೈಕ್ಷಣಿಕ  ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ದಿನಾಂಕ 16-06-2026 ರಂದು ಕಾಲೇಜಿನ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶವನ್ನು ಹೊಂದಿತ್ತು.    ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಯಿತು. ನಂತರ ಮುಖ್ಯ ಅತಿಥಿಗಳು, ಸಂಚಾಲಕರು, ಪ್ರಾಂಶುಪಾಲರು ಮತ್ತು ಇತರ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ವಿದ್ಯಾರ್ಥಿ ಪರಿಷತ್ತನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು.       ಮುಖ್ಯ ಅತಿಥಿಗಳಾಗಿ […]

Read More

ಕುಂದಾಪುರ, ಜು.19; ಇಂದು , ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖಂಡ , ಲೋಕಸಭೆ ವಿರೋಧ ಪಕ್ಷದ ನಾಯಕ , ದೇಶದ ಯುವಜನತೆಯ ಕಣ್ಮಣಿ ರಾಹುಲ್ ಗಾಂಧಿ ಯವರ ಹುಟ್ಟು ಹಬ್ಬದ ಪ್ರಯುಕ್ತ ಹಣ್ಣು ಹಂಪಲುಗಳನ್ನು ಒಳರೋಗಿಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿನೋದ್ ಕ್ರಾಸ್ಟೊ , ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ್ ಶೆಟ್ಟಿ , ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಅಭಿಜಿತ್ ಪೂಜಾರಿ […]

Read More

ಕುಂದಾಪುರ; ಜು. 19; ಲೋಕಸಭೆ ವಿಪಕ್ಷ ನಾಯಕರು ಕಾಂಗ್ರೆಸ್ ಮುಖಂಡರಾಗಿರುವ ಮಾನ್ಯ ಶ್ರೀ ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಪ್ರಯುಕ್ತ ರಾಹುಲ್ ಗಾಂಧಿಯವರ ಅಭಿಮಾನಿಗಳಾದ ಆನಗಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸವಿತಾ, ಮಾಜಿ ಉಪಾಧ್ಯಕ್ಷರಾದ ಗೀತಾ ಎಸ್ ಹಾಗೂ ಜೋಸೆಫ್ ರೆಬೆಲ್ಲೋ ಅವರ ನೇತೃತ್ವದಲ್ಲಿ ಆನಗಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಮಧ್ಯಾಹ್ನದ ಊಟ ಮತ್ತು ಸಿಹಿ ತಿಂಡಿ ವ್ಯವಸ್ಥೆ ಮಾಡಲಾಯಿತು.

Read More

ಉಡುಪಿ : ಲಯನ್ಸ್ ಜಿಲ್ಲೆ 317C ಇದರ ಪ್ರತಿಷ್ಠಿತ ಕ್ಲಬ್ ಗಳಲ್ಲಿ ಒಂದಾಗಿರುವ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆಯಾದರೆ, ಕಾರ್ಯದರ್ಶಿಯಾಗಿ ಜೋನ್ ಪ್ರಶಾಂತ್ ಗೋಮ್ಸ್, ಕೋಶಾಧಿಕಾರಿಯಾಗಿ ವಿಲ್ಫ್ರೆಡ್ ಡಿಸೋಜಾ ಆಯ್ಕೆಯಾಗಿದ್ದಾರೆ. ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ಎಂಟನೇ ವರ್ಷದ ಕಾರ್ಯಕಾರಿ ಸಮಿತಿಯನ್ನು ರಚಿಸಿದ್ದು, ಪದಗ್ರಹಣ ಕಾರ್ಯಕ್ರಮವು ಜೂನ್ 26ರಂದು ನಡೆಯಲಿದೆ. ನೂತನ ಅಧ್ಯಕ್ಷ ರೋಯ್ಸ್ ಫೆರ್ನಾಂಡಿಸ್ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ […]

Read More

ಬಾರಕೂರು; ನೇಷನಲ್ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹನೆಹಳ್ಳಿ,ಬಾರಕೂರು , ಸಂಕಮ್ಮ ತಾಯಿ ರೆಸಾರ್ಟ್ಸ್ ಬಾರ್ಕೂರು, ಹಳೆ ವಿದ್ಯಾರ್ಥಿ ಸಂಘ ಹನೆಹಳ್ಳಿ ಬಾರಕೂರು ಇವರ ಸಂಯುಕ್ತ ಆಶ್ರಯದಲ್ಲಿ “ಉಚಿತ ಸಮವಸ್ತ್ರ ಹಾಗೂ ನೋಟ್ಸ್ ಪುಸ್ತಕ ವಿತರಣಾ ಕಾರ್ಯಕ್ರಮ”ವು ಜರುಗಿತು. ದಿ ಬಾರಕೂರು ಎಜುಕೇಶನಲ್ ಸೊಸೈಟಿ(ರಿ) ಬಾರಕೂರು ಇದರ ಅಧ್ಯಕ್ಷರಾಗಿರುವ ಶ್ರೀ ಬಿ ಶಾಂತರಾಮ್ ಶೆಟ್ಟಿ ಅವರು ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಾರಕೂರು ಎಜುಕೇಷನ್ ಸೊಸೈಟಿಯ ಉಪಾಧ್ಯಕ್ಷರಾಗಿರುವಂತಹ ಶ್ರೀಯುತ ಗೋಪಾಲ್ ನಾಯ್ಕ ಹಾಗೂ ಕಾರ್ಯದರ್ಶಿಯವರಾದ […]

Read More

ಕುಂದಾಪುರ; ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡಲಕಟ್ಟೆ ಕಾಲೇಜ್ ಆಫ್ ಫಿಸಿಯೋಥೆರಪಿ, ಮೂಡಲಕಟ್ಟೆ, ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ–2026 ಹಾಗೂ 10 ದಿನಗಳ ಯೋಗ ಶಿಬಿರಕ್ಕೆ ಬುಧವಾರ ಅತ್ಯಂತ ಉತ್ಸಾಹಭರಿತವಾಗಿ ಚಾಲನೆ ನೀಡಲಾಯಿತು.ಕಾರ್ಯಕ್ರಮವನ್ನು ಗಣ್ಯರು ಸಾಂಪ್ರದಾಯಿಕವಾಗಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮುನಿಯಲ್ ಕಾಲೇಜ್ ಆಫ್ ಯೋಗ ಅಂಡ್ ನ್ಯಾಚುರೋಪತಿಯ ಉಪ ಪ್ರಾಂಶುಪಾಲರಾದ ಡಾ. ಸಾತಪ್ಪ ಹೂವಿನಹಳ್ಳಿ ಅವರು ಮಾತನಾಡಿ, ಯೋಗವು […]

Read More

ಹಿರಿಯ ಪತ್ರಿಕೋದ್ಯಮಿ, ಸಾಹಿತಿ, ಸಂಘಟಕ, “ಕುಂದಪ್ರಭ” ವಾರ ಪತ್ರಿಕೆಯ ಸಂಪಾದಕ ಕುಂಭಾಸಿ ನಿವಾಸಿ ಉ. ಸುರೇಂದ್ರ ಶೆಣೈ (ಯು. ಎಸ್. ಶೆಣೈ, ಗಂಗೊಳ್ಳಿ)ಯವರನ್ನು ಕುಂದಾಪುರ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನ “ನುಡಿ ಬೆಳಕು 2026” ರ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗರ ಉಪಸ್ಥಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರದ ಅಧ್ಯಕ್ಷ ಡಾ| ಉಮೇಶ ಪುತ್ರನ್ ಈ ಆಯ್ಕೆಯನ್ನು ಘೋಷಿಸಿದ್ದಾರೆ.ಸಾಹಿತ್ಯ ಪ್ರೇರಕರಾಗಿದ್ದು, ಹಲವಾರು ಸಾಹಿತ್ಯ ಕಾರ್ಯಕ್ರಮಗಳನ್ನು ಸಂಘಟಿಸಿ, ನೂರಾರು ಯುವ […]

Read More