JANANUDI.COM NETWORK “ರಾಷ್ಟ್ರೀಯ ಸೇವಾ ಯೋಜನೆಯು ಪ್ರತಿಯೊಬ್ಬ ವಿದ್ಯಾರ್ಥಿಗೂ ವ್ಯಕ್ತಿತ್ವ ವಿಕಸನದ ಸುವರ್ಣಾವಕಾಶವನ್ನು ನೀಡುತ್ತದೆ ದೈನಂದಿನ ಚಟುವಟಿಕೆಗಳು ಮತ್ತು ವಾರ್ಷಿಕ ವಿಶೇಷ ಶಿಬಿರ ಶಿಬಿರದ ಅನುಭವಗಳು ಸದಾಕಾಲ ನೆನಪಿನಲ್ಲಿ ಉಳಿಯುತ್ತವೆ ಮತ್ತು ಮುಂದೆ ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡಲು ಪ್ರೇರಣೆಯಾಗುತ್ತದೆ “ಎಂದು ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಶ್ರೀ ನವೀನ ಕೊರೆಯ ಹೇಳಿದರು ಅವರು ಕಾಲೇಜಿನ ಎನ್ಎಸ್ಎಸ್ ಘಟಕದ ಸ್ವಯಂಸೇವಕರ ತರಬೇತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ […]
JANANUDI.COM NETWORK ಉಡುಪಿ: ಕಳೆದ ಏಳು ತಿಂಗಳ ಹಿಂದೆ ಪೆರಂಪಳ್ಳಿಯಿಂದ ನಾಪತ್ತೆಯಾಗಿರುವ ಬಾಲಕಿಯನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿ ಕೆಥೋಲಿಕ್ ಸಭಾ ಉಡುಪಿ ಪ್ರದೇಶ್ ಶುಕ್ರವಾರ ನ.19ರಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರಿಗೆ ಮನವಿ ಪತ್ರ ಸಲ್ಲಿಸಿತು. ಎಸ್ಪಿ ಅವರ ಅನುಪಸ್ಥಿತಿಯಲ್ಲಿ ಕ್ಯಾಥೋಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಮೆರ್ರಿ ಡಿಸೋಜಾ ಅವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಕುಮಾರಚಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಂಪಳ್ಳಿ ನಿವಾಸಿ ಅವೀನಾ (16) ಅವರು ಏಪ್ರಿಲ್ […]
JANANUDI.COM NETWORK ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಇಂದಿರಾಗಾಂಧಿ ಜನ್ಮದಿನಾಚರಣೆ, ಸದಸ್ಯತ್ವ ನೋಂದಾವಣೆ ಕಾರ್ಯಕ್ರಮ ನಡೆಯಿತು. ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನಪರಿಷತ್ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರು ಮಾತನಾಡಿ ‘ದೇಶಕ್ಕೆ ಇಂದಿರಾಗಾಂಧಿ ಯವರ ಕೊಡುಗೆ ಅಪಾರವಾದುದು. ಪಕ್ಷದ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಪಕ್ಷದ ಮೇಲೆ ಹಾಗೂ ನಾಯಕತ್ವದ ಮೇಲೆ ಗೌರವ ಹೆಮ್ಮೆ ಇರಬೇಕು. ಭೂಮಸೂದೆ, ಬ್ಯಾಂಕ್ ರಾಷ್ಟ್ರೀಕರಣ, ಇಪ್ಪತ್ತು ಅಂಶಗಳ ಕಾರ್ಯಕ್ರಮ ಮುಂತಾದ ಜನಪರ ಕಾರ್ಯಕ್ರಮಗಳ ಮೂಲಕ […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಬೆಳ್ಮಣ್: ಜೇಸಿಐ ಸಂಸ್ಥೆ ನೀಡುವ ಸಾಧನಾ ಶ್ರೀ ಪ್ರಶಸ್ತಿಯನ್ನು ಈ ವರ್ಷ ಜೆಸಿಐ ಬೆಳ್ಮಣ್ ನ ಕಾರ್ಯದರ್ಶಿ ಜೆ ಸಿ ಸತೀಶ್ ಪೂಜಾರಿ ಅಬ್ಬನಡ್ಕ ಪಡೆದುಕೊಂಡಿದ್ದಾರೆ.ಕುಂದಾಪುರ ಕೋಟೇಶ್ವರದ ಕೃಷ್ಣ ಸಹನಾ ಕನ್ವೆನ್ಷನ್ ಸಭಾಂಗಣದಲ್ಲಿ ನಡೆದ ಜೇಸಿ ವಲಯ ಹದಿನೈದರ ವಲಯ ವ್ಯವಹಾರ ಸಮ್ಮೇಳನದಲ್ಲಿ ವಲಯಾಧ್ಯಕ್ಷೆ JC PPP ಸೌಜನ್ಯಾ ಹೆಗ್ಡೆ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ವ್ಯವಹಾರ ವಿಭಾಗದ ಚೇರ್ಮನ್ Jc ಸಮದ್ ಖಾನ್, ಜೆಸಿಐ ಬೆಳ್ಮಣ್ ಅಧ್ಯಕ್ಷರಾದ JFM ಕೃಷ್ಣ […]
JANANUDI.COM NETWORK ಕುಂದಪ್ರಭ ಸಂಸ್ಥೆಯ ವತಿಯಿಂದ ನೀಡಲಾಗುತ್ತಿರುವ ಕೋ.ಮ.ಕಾರಂತ ಪ್ರಶಸ್ತಿಯನ್ನು ಹಿರಿಯ ಸಾಮಾಜಿಕ ಧುರೀಣ, ಮಾಜಿ ಶಾಸಕ, ಕರ್ನಾಟಕ ಮೂರನೇ ರಾಜ್ಯ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ, ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್ (ರಿ) ನ ಅಧ್ಯಕ್ಷ ಎ.ಗೋಪಾಲಕೃಷ್ಣ ಕೊಡ್ಗಿ ಇವರಿಗೆ ಪ್ರದಾನ ಮಾಡಲು ನಿರ್ಧರಿಸಲಾಗಿದೆ.ಹಿರಿಯ ಪತ್ರಕರ್ತ, ತರಬೇತುದಾರ, ಬ್ಯಾಂಕರ್, ವಾಗ್ಮಿ, ಕೋಣಿ ಮಹಾಬಲೇಶ್ವರ ಕಾರಂತರ ಹೆಸರಲ್ಲಿ ಪ್ರತಿವರ್ಷ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಅಂಕಣಗಾರ ಕೋಣಿ ಶಿವಾನಂದ ಕಾರಂತರ ನೇತೃತ್ವದಲ್ಲಿ ಆಯ್ಕೆ ಸಮಿತಿ ಈ ವರ್ಷ ಎ.ಜಿ.ಕೊಡ್ಗಿಯವರನ್ನು […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ನೆಹರು ಯುವ ಕೇಂದ್ರ ಉಡುಪಿ, ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಹಾಗೂ ಹಳೆ ವಿದ್ಯಾರ್ಥಿ ಸಂಘ ಕೆದಿಂಜೆ ಇದರ ಸಹಯೋಗದಲ್ಲಿ ಕೆದಿಂಜೆ ಸಭಾಂಗಣದಲ್ಲಿ ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆ ಕಾರ್ಯಕ್ರಮ ಜರಗಿತು.ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಕೆದಿಂಜೆ : ಮಕ್ಕಳ ಹಕ್ಕು ಮತ್ತು ರಕ್ಷಣೆಗಳ ಕುರಿತು ಕಾನೂನು ಅರಿವು ಕಾರ್ಯಕ್ರಮಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನೇತೃತ್ವದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಕೆದಿಂಜೆ ಶಾಲಾ ಸಭಾಂಗಣದಲ್ಲಿ ಮಕ್ಕಳ ಹಕ್ಕು ಮತ್ತು ರಕ್ಷಣೆಗಳ ಕುರಿತು ಕಾನೂನು ಅರಿವು ಕಾರ್ಯಕ್ರಮ ಜರಗಿತು.ಉಡುಪಿ ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಂ. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರಭಾಕರ್ ಆಚಾರ್ ಅವರು ಮಕ್ಕಳ ಹಕ್ಕು ಮತ್ತು ರಕ್ಷಣೆಗಳ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಬಾಲ ಕಾರ್ಮಿಕ, […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಮಕ್ಕಳೇ ದೇಶದ ಆಸ್ತಿ ಈ ಮಕ್ಕಳ ಶಿಕ್ಷಣ ಆರೋಗ್ಯ ನೀಡುವ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದ್ದು , ಅದನ್ನು ನೆನಪಿಸಲು ನೆಹರುರವರ ಜನ್ಮದಿನಾಚರಣೆಯ ಮಕ್ಕಳ ದಿನಾಚರಣೆ ಆಗಿದೆಯೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಅಭಿಪ್ರಾಯಪಟ್ಟರು . ಅವರು ತಾಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮದ ಧರ್ಮೇಶ್ ಎಂಬ ಶಿಕ್ಷಕರು ಇದೇ ಗ್ರಾಮದ ಐದು ಅಂಗನವಾಡಿ ಕೇಂದ್ರದ ೩೦೦ ಮಕ್ಕಳಿಗೆ , ಗ್ರಾಮದ ಹಿರಿಯ ಪ್ರಾಥಮಿಕ […]
JANANUDI.COM NETWORK ವಿದ್ಯಾರ್ಥಿಗಳು ಬೆಳಗುವ ನಕ್ಷತ್ರ ವಿದ್ದಂತೆ ಅವರು ತಮ್ಮ ಜೀವನದಲ್ಲಿ ಹೆತ್ತವರು ಶಿಕ್ಷಕರು ನೀಡಿದ ಮಾರ್ಗದರ್ಶನವನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಈ ಮೂಲಕ ತನ್ನ ವ್ಯಕ್ತಿತ್ವವನ್ನು ಬೆಳೆಸುವುದರೊಂದಿಗೆ ಉತ್ತಮ ಪ್ರಜೆಯಾಗಲು ಬೇಕಾದ ಭದ್ರ ಬುನಾದಿಯನ್ನು ಹಾಕಿಕೊಳ್ಳಬೇಕು” ಎಂದು ಸಂತ ಲಾರೆನ್ಸ್ ಪದವಿ ಪೂರ್ವ ಕಾಲೇಜಿನ ಸಂಚಾಲಕರಾದ ವಂದನೀಯ ಜಾರ್ಜ್ ಡಿಸೋಜರವರು ಹೇಳಿದರು ಅವರು ಕಾಲೇಜಿನಲ್ಲಿ ನಡೆ ಪ್ರತಿಭಾ ಪ್ರದರ್ಶನ ಮತ್ತು ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡುತ್ತಾ ಮಾತನಾಡುತ್ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು 8ನೇ ತರಗತಿಯ […]

