ಸಾವಿರಾರು ವರ್ಷಗಳ ಇತಿಹಾಸ ಇರುವ ಬೋಳ ಶ್ರೀ ಬ್ರಹ್ಮಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವದ ಅಂಗವಾಗಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ವತಿಯಿಂದ ಶುಕ್ರವಾರ ಬೋಳ ಗರಡಿಯ ಆವರಣದಲ್ಲಿ ಕುಣಿತ ಭಜನಾ ಕಾರ್ಯಕ್ರಮ ಜರಗಿತು.ಬೋಳ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಅರ್ಚಕರಾದ ಬೋಳ ಹರೀಶ್ ಪೂಜಾರಿಯವರು ಭಜನಾ ಮಂಡಳಿಯ ಸದಸ್ಯರಿಗೆ ಶ್ರೀ ಬ್ರಹ್ಮಬೈದರ್ಕಳ ಪ್ರಸಾದ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ನಂದಳಿಕೆ […]

Read More

JANANUDI.COM NETWORK ಉಡುಪಿ: ವಿದ್ಯಾರ್ಥಿಗಳಲ್ಲಿ ಚಿಕ್ಕ ಪ್ರಾಯದಲ್ಲಿಯೇ ಭಾಷಣದ ಕಲೆಗೆ ಪ್ರೋತ್ಸಾಹ ನೀಡುವುದರಿಂದ ಸ್ವಾವಲಂಬಿ ಮತ್ತು ಯಶಸ್ವಿ ನಾಯಕತ್ವ ಹೊಂದಿದ ವ್ಯಕ್ತಿಯಾಗಲು ಸಾಧ್ಯವಿದೆ ಎಂದು ಸಾಹಿತಿ ಪಿಯುಸ್‌ ಡಿಸೋಜಾ ಹೇಳಿದರು.ಅವರು ಸೋಮವಾರ ಕಥೊಲಿಕ್‌ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಆಯೋಜಿಸಿದ್ದ ಧರ್ಮಪ್ರಾಂತ್ಯ ಮಟ್ಟದ ಭಾಷಣ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದರು.ಎಳೆ ಪ್ರಾಯದಲ್ಲಿಯೇ ಆತ್ಮವಿಶ್ವಾಸದಿಂದ ಮಾತನಾಡಬಲ್ಲವರು ಮುಂದೆ ಉತ್ತಮ ನಾಯಕರಾಗಿ ರೂಪುಗೊಳ್ಳಲು ಅವಕಾಶವಿದೆ. ವಿದ್ಯಾರ್ಥಿಗಳು ಚಿಕ್ಕ ಪ್ರಾಯದಲ್ಲಿಯೇ ಭಾಷಣ ಹಾಗೂ ಇನ್ನಿತರ ವಿಚಾರಗಳಲ್ಲಿ ತಮ್ಮನ್ನು […]

Read More

JANANUDI.COM NETWORK ಮಂಗಳೂರು: ಮಂಗಳುರು ಧರ್ಮಪ್ರಾಂತ್ಯದ ಕಾಟಿಪಳ್ಳ ನ್ಫೆಂಟ್ ಮೇರಿ ಚರ್ಚಿನ ಧರ್ಮಗುರು ವಂ. ವಲೇರಿಯನ್ ಲೂವಿಸ್ ಹ್ರದಯಘಾತದಿಂದ ಮ್ರತ ಪಟ್ಟ ಅಘಾತಕಾರಿ ಘಟೆನೆ ನಡೆದಿದೆ.ಅವರು ಕಾಟಿಪಳ್ಳ ಚರ್ಚಿನಲ್ಲಿ ಭಾನುವಾರ ದಿವ್ಯ ಬಲಿಪೂಜೆ ಅರ್ಪಿಸಿ ಪರಮ ಪ್ರಸಾದದ ಆರಾಧನೆ ಮಾಡುತ್ತಿರುವಾಗ ಕುಸಿದು ಬಿದ್ದಿದ್ದರು. ಫಾ.ವಲೇರಿಯನ್ ಲೂವಿಸ್ ಅವರನ್ನು ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಹಿ ಹಿಂದೆ ಕೂಡ ಅವರಿಗೆ ಹ್ರದಯಘಾತವಾಗಿತ್ತು ಎಂದು ತಿಳಿದು ಬಂದಿದೆ.ಫಾ.ಲೂವಿಸ್ ಅವರು ಪುತ್ತುರಿನವರಾಗಿದ್ದು, ಅವರ […]

Read More

JANANUDI.COM NETWORK ಕುಂದಾಪುರ,ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ವಿಶೇಷ ಮಕ್ಕಳಿಂದ ವಿವಿಧ ಆಟಗಳು ಮತ್ತು ಮೋಜಿನ ಚಟುವಟಿಕೆಗಳನ್ನು ನಡೆಸಲಾಯಿತು. ಸಂತೋಷ ಮತ್ತು ಉತ್ಸಾಹದಿಂದ ಹೊ ಎಲ್ಲಾ ಮಕ್ಕಳು ಸಕ್ರಿಯವಾಗಿ ಆಟಗಳಲ್ಲಿ ಭಾಗವಹಿಸಿದರು.ಮಧ್ಯಾಹ್ನ ನಾವು ಬಹುಮಾನಗಳನ್ನು ವಿತರಿಸಲು ಔಪಚಾರಿಕ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ವೇದಿಕೆಯಲ್ಲಿ ಹಿರಿಯ ವೈದ್ಯಾಧಿಕಾರಿ ಡಾ.ಕಾಶಿನಾಥ ಪೈ, ಸ್ವಾತಿ ಕ್ಲಿನಿಕ್ ಗಂಗೊಳ್ಳಿ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಕರಣ್ ಕುಮಾರ್ ಪೂಜಾರಿ, ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಜುಡಿತ್ ಮೆಂಡೋನ್ಕಾ, […]

Read More

JANANUDI.COM NETWORK “ರಾಷ್ಟ್ರೀಯ ಸೇವಾ ಯೋಜನೆಯು ಪ್ರತಿಯೊಬ್ಬ ವಿದ್ಯಾರ್ಥಿಗೂ ವ್ಯಕ್ತಿತ್ವ ವಿಕಸನದ ಸುವರ್ಣಾವಕಾಶವನ್ನು ನೀಡುತ್ತದೆ ದೈನಂದಿನ ಚಟುವಟಿಕೆಗಳು ಮತ್ತು ವಾರ್ಷಿಕ ವಿಶೇಷ ಶಿಬಿರ ಶಿಬಿರದ ಅನುಭವಗಳು ಸದಾಕಾಲ ನೆನಪಿನಲ್ಲಿ ಉಳಿಯುತ್ತವೆ ಮತ್ತು ಮುಂದೆ ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡಲು ಪ್ರೇರಣೆಯಾಗುತ್ತದೆ “ಎಂದು ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಶ್ರೀ ನವೀನ ಕೊರೆಯ ಹೇಳಿದರು ಅವರು ಕಾಲೇಜಿನ ಎನ್ಎಸ್ಎಸ್ ಘಟಕದ ಸ್ವಯಂಸೇವಕರ ತರಬೇತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ […]

Read More

JANANUDI.COM NETWORK ಉಡುಪಿ: ಕಳೆದ ಏಳು ತಿಂಗಳ ಹಿಂದೆ ಪೆರಂಪಳ್ಳಿಯಿಂದ ನಾಪತ್ತೆಯಾಗಿರುವ ಬಾಲಕಿಯನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿ ಕೆಥೋಲಿಕ್ ಸಭಾ ಉಡುಪಿ ಪ್ರದೇಶ್ ಶುಕ್ರವಾರ ನ.19ರಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಪಿ) ಅವರಿಗೆ ಮನವಿ ಪತ್ರ ಸಲ್ಲಿಸಿತು. ಎಸ್ಪಿ ಅವರ ಅನುಪಸ್ಥಿತಿಯಲ್ಲಿ ಕ್ಯಾಥೋಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಮೆರ್ರಿ ಡಿಸೋಜಾ ಅವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಕುಮಾರಚಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಂಪಳ್ಳಿ ನಿವಾಸಿ ಅವೀನಾ (16) ಅವರು ಏಪ್ರಿಲ್ […]

Read More

JANANUDI.COM NETWORK ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಇಂದಿರಾಗಾಂಧಿ ಜನ್ಮದಿನಾಚರಣೆ, ಸದಸ್ಯತ್ವ ನೋಂದಾವಣೆ ಕಾರ್ಯಕ್ರಮ ನಡೆಯಿತು. ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನಪರಿಷತ್ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರು ಮಾತನಾಡಿ ‘ದೇಶಕ್ಕೆ ಇಂದಿರಾಗಾಂಧಿ ಯವರ ಕೊಡುಗೆ ಅಪಾರವಾದುದು. ಪಕ್ಷದ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಪಕ್ಷದ ಮೇಲೆ ಹಾಗೂ ನಾಯಕತ್ವದ ಮೇಲೆ ಗೌರವ ಹೆಮ್ಮೆ ಇರಬೇಕು. ಭೂಮಸೂದೆ, ಬ್ಯಾಂಕ್ ರಾಷ್ಟ್ರೀಕರಣ, ಇಪ್ಪತ್ತು ಅಂಶಗಳ ಕಾರ್ಯಕ್ರಮ ಮುಂತಾದ ಜನಪರ ಕಾರ್ಯಕ್ರಮಗಳ ಮೂಲಕ […]

Read More

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು ಬೆಳ್ಮಣ್: ಜೇಸಿಐ ಸಂಸ್ಥೆ ನೀಡುವ ಸಾಧನಾ ಶ್ರೀ ಪ್ರಶಸ್ತಿಯನ್ನು ಈ ವರ್ಷ ಜೆಸಿಐ ಬೆಳ್ಮಣ್ ನ ಕಾರ್ಯದರ್ಶಿ ಜೆ ಸಿ ಸತೀಶ್ ಪೂಜಾರಿ ಅಬ್ಬನಡ್ಕ ಪಡೆದುಕೊಂಡಿದ್ದಾರೆ.ಕುಂದಾಪುರ ಕೋಟೇಶ್ವರದ ಕೃಷ್ಣ ಸಹನಾ ಕನ್ವೆನ್ಷನ್ ಸಭಾಂಗಣದಲ್ಲಿ ನಡೆದ ಜೇಸಿ ವಲಯ ಹದಿನೈದರ ವಲಯ ವ್ಯವಹಾರ ಸಮ್ಮೇಳನದಲ್ಲಿ ವಲಯಾಧ್ಯಕ್ಷೆ JC PPP ಸೌಜನ್ಯಾ ಹೆಗ್ಡೆ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ವ್ಯವಹಾರ ವಿಭಾಗದ ಚೇರ್ಮನ್ Jc ಸಮದ್ ಖಾನ್, ಜೆಸಿಐ ಬೆಳ್ಮಣ್ ಅಧ್ಯಕ್ಷರಾದ JFM ಕೃಷ್ಣ […]

Read More

JANANUDI.COM NETWORK ಕುಂದಪ್ರಭ ಸಂಸ್ಥೆಯ ವತಿಯಿಂದ ನೀಡಲಾಗುತ್ತಿರುವ ಕೋ.ಮ.ಕಾರಂತ ಪ್ರಶಸ್ತಿಯನ್ನು ಹಿರಿಯ ಸಾಮಾಜಿಕ ಧುರೀಣ, ಮಾಜಿ ಶಾಸಕ, ಕರ್ನಾಟಕ ಮೂರನೇ ರಾಜ್ಯ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ, ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್ (ರಿ) ನ ಅಧ್ಯಕ್ಷ ಎ.ಗೋಪಾಲಕೃಷ್ಣ ಕೊಡ್ಗಿ ಇವರಿಗೆ ಪ್ರದಾನ ಮಾಡಲು ನಿರ್ಧರಿಸಲಾಗಿದೆ.ಹಿರಿಯ ಪತ್ರಕರ್ತ, ತರಬೇತುದಾರ, ಬ್ಯಾಂಕರ್, ವಾಗ್ಮಿ, ಕೋಣಿ ಮಹಾಬಲೇಶ್ವರ ಕಾರಂತರ ಹೆಸರಲ್ಲಿ ಪ್ರತಿವರ್ಷ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಅಂಕಣಗಾರ ಕೋಣಿ ಶಿವಾನಂದ ಕಾರಂತರ ನೇತೃತ್ವದಲ್ಲಿ ಆಯ್ಕೆ ಸಮಿತಿ ಈ ವರ್ಷ ಎ.ಜಿ.ಕೊಡ್ಗಿಯವರನ್ನು […]

Read More