
ಮಂಗಳೂರು:ಕೊಂಕಣಿ ಕಥೊಲಿಕ್ ಉದ್ಯಮಿಗಳ, ವೃತ್ತಿಪರರ ಮತ್ತು ಕೃಷಿಕರ ಸಂಸ್ಥೆ ‘ರಚನಾ’ ನವೆಂಬರ್ 3ರಂದು ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಲಿದೆ. ಭಾನುವಾರ ಸಂಜೆ 6 ಗಂಟೆಗೆ ಕುಲಶೇಖರದ ಕೊರ್ಡೆಲ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪುಣೆಯ ಮಿಲಿಟರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಮಾಂಡೆಂಟ್ ಆಗಿರುವ ರಿಯರ್ ಆ್ಯಡ್ಮಿರಲ್ ನೆಲ್ಸನ್ ಡಿಸೋಜ ಭಾಗವಹಿಸಲಿದ್ದಾರೆ. ಎನ್ಆರ್ಐ ಉದ್ಯಮಿ ಮೈಕಲ್ ಡಿಸೋಜ, ರೋಹನ್ ಕಾರ್ಪೋರೇಶನ್ನ ಚೇರ್’ಮ್ಯಾನ್ ರೋಹನ್ ಮೊಂತೇರೊ ಮುಖ್ಯ ಅತಿಥಿಯಾಗಿರುವರು. ಬೆಂಗಳೂರಿನ ಆರ್ಚ್ ಬಿಶಪ್ ಪೀಟರ್ ಮಚಾದೊ ಉದ್ಘಾಟಿಸಲಿದ್ದು, ಮಂಗಳೂರಿನ […]

ಕುಂದಾಪುರ (ಅ.28): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ಎಂಎಂ ಹಾಗೂ ವಿಕೆಆರ್ ಶಾಲೆಗಳ ಟೀಚರ್ ಟ್ರೈನಿಂಗ್ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ನಿರೂಪಣೆಯ ಕೌಶಲ್ಯದ ಕುರಿತು ಕಾರ್ಯಾಗಾರ ನೆರವೇರಿತು.ಸಂಪನ್ಮೂಲ ವ್ಯಕ್ತಿಗಳಾಗಿ ಶಿಕ್ಷಕಿಯರಾದ ಸ್ವಪ್ನ ಹಾಗೂ ಶ್ವೇತಾ ಇವರು ನಿರೂಪಣಾ ಕೌಶಲ್ಯದ ಕುರಿತು ಹಲವು ಮಾಹಿತಿಗಳನ್ನು ಪ್ರಾತ್ಯಕ್ಷಿತೆಯ ಮೂಲಕ ನೀಡಿದರು.ಪ್ರಾಂಶುಪಾಲೆ ಡಾ. ಚಿಂತನ ರಾಜೇಶ್ ಹಾಗೂ ಸಂಯೋಜಕಿ ರಜನಿ ಉಪಸ್ಥಿತರಿದ್ದರು. ಶಿಕ್ಷಕ ವಿದ್ಯಾರ್ಥಿನಿಯರಾದ ಸುಶ್ಮಿತಾ, ಮಾಲತಿ, ಹಾಗೂ ಜ್ಯೋತಿ ಕಾರ್ಯಕ್ರಮವನ್ನು ನಿರೂಪಿಸಿದರು.

ಅಕ್ಟೋಬರ್ 27 ರ ಭಾನುವಾರದಂದು ಬಜ್ಜೋಡಿಯ ಕನ್ಯಾಮಾತೆ ಚರ್ಚ್ನಲ್ಲಿ ಹಿರಿಯ ನಾಗರಿಕರ ದಿನಾಚರಣೆಯನ್ನು ಬಹಳ ಸಂತೋಷ ಮತ್ತು ಉಲ್ಲಾಸದಿಂದ ಆಚರಿಸಲಾಯಿತು, ಸುಮಾರು 100 ಪ್ಯಾರಿಷ್ ಹಿರಿಯರು ಆಚರಣೆಯಲ್ಲಿ ಭಾಗವಹಿಸಿದರು ಮತ್ತು ಅವರಲ್ಲಿ ಸುಮಾರು 35 ಮಂದಿ ತಮ್ಮ ಮನೆಗಳಲ್ಲಿ ಅಚರಿಸಿದರು. ಬೆಳಗ್ಗೆ 10.30ಕ್ಕೆ ಚರ್ಚ್ನಲ್ಲಿ ಧರ್ಮಗುರು ಫಾ. ಡೊಮಿನಿಕ್ ವಾಸ್ ಮತ್ತು ಫಾ. ಸಿರಿಲ್ ಮೆನೆಜಸ್ ಬಲಿದಾನವನ್ನು ಅರ್ಪಿಸಿದರು.. ಧರ್ಮೋಪದೇಶದ ಸಮಯದಲ್ಲಿ ಫಾ. ಡೊಮಿನಿಕ್ ವಾಸ್ ಅವರು ಹಿರಿಯರು ಹೇಗೆ ಸೊಗಸಾಗಿ, ಸಂತೋಷದಿಂದ ಮತ್ತು ಆರೋಗ್ಯಕರವಾಗಿ ಬೆಳೆಯಬೇಕು […]

ಶಂಕರನಾರಾಯಣ : ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಮಂಚೂಣಿಯಲ್ಲಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಪ್ರಾಥಮಿಕ (3&4ನೇ) ತರಗತಿ ಮಕ್ಕಳಿಗೆ ಒಂದು ದಿನದ ಅಬಾಕಸ್ ಸ್ಪರ್ಧೆ ಆಯೋಜಿಸಲಾಗಿತ್ತುಅತಿಕಡಿಮೆ ಸಮಯದಲ್ಲಿ ವಿವಿಧ ರೀತಿಯ ಮನೋಗಣಿತ ಲೆಕ್ಕಗಳನ್ನು ಮಾಡುವ ಮೂಲಕ ಸುಮಾರು 150 ಮಕ್ಕಳು ತಮ್ಮ ಪಾಲಕರ ಉಪಸ್ಥಿತಿಯಲ್ಲಿ ಎಲ್ಲರಿಂದ ಪ್ರಶಂಸೆಗೆ ಒಳಗಾದರೂಅತ್ಯಂತ ಕ್ರಿಯಾಶೀಲತೆಯಿಂದ ಆರಂಭಗೊಂಡ ಈ ಸ್ಪರ್ಧೆಯು ಎಲ್ಲರಿಂದ ಮೆಚ್ಚುಗೆಗಳಿಸಿತುಶಿಕ್ಷಣದಲ್ಲಿ ಸದಾ ನವೀನತೆಯನ್ನು ಪರಿಚಯಿಸುತ್ತಿರುವ ಆಡಳಿತಮಂಡಳಿಯ ಕ್ರಿಯಾಶೀಲತೆಯನ್ನು ಪೋಷಕರು ಕೊಂಡಾಡಿದರುತಮ್ಮ ಮಕ್ಕಳ ಮನೋಗಣಿತದ ಬುದ್ಧಿಮತ್ತೆಯನ್ನು ಕಣ್ಣಾರೆ ಕಂಡ ಎಲ್ಲಾ ಪಾಲಕರು […]

ಶಂಕರನಾರಾಯಣ : ಕುಂದಾಪುರ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನದೊಂದಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್, ರತ್ನಕುಮಾರ್ ಮತ್ತು ಪ್ರಿಯಾಂಕಾ ತರಬೇತಿ ನೀಡಿರುತ್ತಾರೆ. ಫಲಿತಾಂಶದ ಯಾದಿ ಧನ್ವಿತ್, 80 ಮೀಟರ್ ಹರ್ಡಲ್ಸ್ ದ್ವಿತೀಯ , ಉದ್ದಜಿಗಿತ, ದ್ವಿತೀಯ (ಜಿಲ್ಲಾಮಟ್ಟಕ್ಕೆ ಆಯ್ಕೆ)ನಿನಾದ್ 600 ಮೀಟರ್ ಓಟ, ತೃತೀಯ , 400 ಮೀಟರ್ ಓಟ ತೃತೀಯಸಂಪ್ರೀತ್ 100 ಮೀಟರ್ ಓಟ ತೃತೀಯಬೃಂದಾ 3000 ಮೀಟರ್ […]

ಶಂಕರನಾರಾಯಣ : ಉಡುಪಿ ಜಿಲ್ಲಾ ಮಟ್ಟದ ಗ್ರಾಮೀಣ ಐ ಟಿ ಕ್ವಿಜ್ – 2024 ರ ಸ್ಪರ್ಧೆಯಲ್ಲಿ ಮದರ್ ತೆರೇಸಾಸ್ ಪಿ ಯು ಕಾಲೇಜು ಶಂಕರನಾರಾಯಣ ಇಲ್ಲಿನ ವಿದ್ಯಾರ್ಥಿಗಳಾದ ಮಾಸ್ಟರ್ ಅಮೋಧ್ ಹಾಗೂ ಮಾಸ್ಟರ್ ಸುಜನ್ ಶೆಟ್ಟಿ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ವಿಜೇತರಾದ ವಿದ್ಯಾರ್ಥಿಗಳಿಗೆ ಆಡಳಿತಮಂಡಳಿ,ಪ್ರಾಂಶುಪಾಲರು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಶುಭಕೋರಿರುತ್ತಾರೆ

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ವಿದ್ಯಾರ್ಥಿಯ ಅತ್ಯುತ್ತಮ ಸಾಧನೆಶಂಕರನಾರಾಯಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕುಂದಾಪುರ ಮತ್ತು ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆ ಯಡಾಡಿ ಮತ್ಯಾಡಿ ಇವರ ಸಹಭಾಗಿತ್ವದಲ್ಲಿ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ -2024 ರ ಸ್ಪರ್ಧೆಯ ವೈಯಕ್ತಿಕ ವಿಭಾಗ ದಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ವಿದ್ಯಾರ್ಥಿ ನಂದಶ್ರೀ ತೃತೀಯ ಸ್ಥಾನ ಪಡೆದಿರುತ್ತಾರೆ ಇವರಿಗೆ ಆಡಳಿತಮಂಡಳಿ, ಮುಖ್ಯಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು […]

ಕುಂದಾಪುರ, ಅ. 26; ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿ ‘ರೋಜೇರಿಯನ್’ ಕಲೆ, ಕರಕುಶಲ ವಸ್ತುಗಳು ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನವು 26/10/2024 ರಂದು ಶಾಲಾ ಜಂಟಿ ಕಾರ್ಯದರ್ಶಿ ಹಾಗು ಹೋಲಿ ರೋಜರಿ ಚರ್ಇನ ಧರ್ಮಗುರುಗಳಾದ ಅ। ವಂ। ಪೌಲ್ ರೇಗೋರವರ ಉದ್ಘಾಟಿಸಿ “ಮಕ್ಕಳು ಚೆನ್ನಾಗಿ ವಸ್ತು ಪ್ರದರ್ಶನವನ್ನು ಮಾಡಿದ್ದಾರೆ, ಹೊಸ ಹೊಸ ಆಲೋಚನೆಗಳಿಂದ ಕೂಡಿದೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಶಾಲಾ ಹಳೆ ವಿದ್ಯಾರ್ಥಿ ಹಿರಿಯ ಅಸೋಶಿಯೆಟ್ ಪಿ.ಡಬ್ಲ್ಯು.ಸಿ. ಶ್ರೀನಿಧಿ […]

ಅಕ್ಟೋಬರ್ 25 ರಂದು, ಸೇಂಟ್ ಆಗ್ನೆಸ್ ಪಿಯು ಕಾಲೇಜು ಅಜ್ಜಿಯರ ದಿನವನ್ನು ಅನುಗ್ರಹದಿಂದ ಮತ್ತು ಹೃತ್ಪೂರ್ವಕ ಮೆಚ್ಚುಗೆಯೊಂದಿಗೆ ಆಚರಿಸಿತು, ಅಜ್ಜಿಯರು ಕುಟುಂಬಗಳಿಗೆ ತರುವ ಬುದ್ಧಿವಂತಿಕೆ ಮತ್ತು ಪ್ರೀತಿಯನ್ನು ಗೌರವಿಸಿದರು. ಕಾರ್ಯಕ್ರಮವು 25 ಮಂದಿ ಅಜ್ಜಿಯರಿಗೆ ಗುಲಾಬಿಯನ್ನು ನೀಡುವ ಮೂಲಕ ಆತ್ಮೀಯ ಸ್ವಾಗತದೊಂದಿಗೆ ಪ್ರಾರಂಭವಾಯಿತು. ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾಯಿತು, ನಂತರ ಆಕರ್ಷಕ ಮೌಲ್ಯಾಧಾರಿತ ನೃತ್ಯ ನಾಟಕವು ಅಜ್ಜಿ ಮತ್ತು ಅವರ ಮಕ್ಕಳ ನಡುವಿನ ಆಳವಾದ ಬಾಂಧವ್ಯವನ್ನು ಎತ್ತಿ ತೋರಿಸುತ್ತದೆ. 1960 ಮತ್ತು 70 ರ ದಶಕದ ರೆಟ್ರೊ […]