ಕುಂದಾಪುರ: ವಜ್ರ ಮಹೋತ್ಸವವದ ಸಂಭ್ರಮದಲ್ಲಿರುವ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಸಾಮೂಹಿಕ ಯೋಗಾಭ್ಯಾಸ ಮಾಡುವುದರ ಮೂಲಕ 12ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.ಸಾಮಾನ್ಯ ಯೋಗಕ್ಕೆ ಅನುಗುಣವಾಗಿ ನಾನಾ ವ್ಯಾಯಾಮ,ಆಸನ,ಪ್ರಾಣಾಯಾಮ ಮತ್ತು ಧ್ಯಾನ ಅಭ್ಯಾಸ ಮಾಡಲಾಯಿತು. ಶಿಕ್ಷಕಿಯರಾದ ಸಿಸ್ಟರ್ ಚೇತನಾ,ಪ್ರೀತಿ ಪಾಯಸ್,ಸ್ಮಿತಾ ಡಿ ಸೋಜಾ,ಸುಶೀಲಾ ಖಾರ್ವಿ,ಡೀನಾ ಪಾಯಸ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಶೈನಾ ಸ್ವಾಗತಿಸಿ,ಜೀವಿತಾ ವಂದಿಸಿದರು.ದೈಹಿಕ ಶಿಕ್ಷಕ ಚಂದ್ರಶೇಖರ ಬೀಜಾಡಿ ನಿರೂಪಿಸಿದರು.

Read More

ಬೈಂದೂರು : ಶಿರೂರಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ 2026-27 ನೇ ಸಾಲಿನ ಶಾಲಾ ಸಂಸತ್ ಚುನಾವಣೆ ಮೊಬೈಲ್ ಇ ವಿ ಎಂ ಮೂಲಕ ಡಿಜಿಟಲ್ ಮಾದರಿಯಲ್ಲಿ ನಡೆಯಿತು. ಮಕ್ಕಳಲ್ಲಿ ಮತದಾನದ ಜಾಗೃತಿ ಮತ್ತು ಮಹತ್ವ ತಿಳಿಯುವ ಉದ್ದೇಶ, ಪ್ರಜಾಪ್ರಭುತ್ವದ ಮೌಲ್ಯಗಳು,ನಾಯಕತ್ವದ ಗುಣಗಳು ಹಾಗೂ ಜವಾಬ್ದಾರಿಯ ಅರಿವು ಮೂಡಿಸುವ ಉದ್ದೇಶದಿಂದ ಶಾಲಾ ನಾಯಕ ಉಪನಾಯಕ ಹಾಗೂ ವಿವಿಧ ಕ್ಲಬ್ ಗಳ ಪದಾಧಿಕಾರಿಗಳ ಆಯ್ಕೆ ಪಾರದರ್ಶಕವಾಗಿ ನಡೆಯಿತು. ವಿದ್ಯಾರ್ಥಿಗಳುಸಕ್ರೀಯವಾಗಿ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಮತ ಎಣಿಕೆಯ ಬಳಿಕ […]

Read More

ಕುಂದಾಪುರ; ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರವು ಯಶಸ್ವಿ 9 ಸಂವತ್ಸರಗಳನ್ನು ಮುಗಿಸಿ, ಹತ್ತನೇ ವರ್ಷಕ್ಕೆ ಪಾದಾರ್ಪಣೆಯ ಸಂಭ್ರಮಕ್ಕಾಗಿ ಉಚಿತ ಪ್ರೋಟಿನ್ ಪೌಡರ್, ಡಯಪರ್ ವಿತರಣೆ ಹಾಗೂ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮಗಳನ್ನು ಅಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯ ಸಲುವಾಗಿ ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ. ಕೆ ಪ್ರೇಮಾನಂದ ದೀಪ ಬೆಳಗಿಸಿ, ಜನ ಸ್ನೇಹಿ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಅದನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವ ರೆಡ್ ಕ್ರಾಸನ್ನು ಶ್ಲಾಘಿಸಿದರು. ಕಡಿಮೆ […]

Read More

ಮಂಗಳೂರು, ಜೂನ್ 20: ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ, ಶನಿವಾರ ಸಂಜೆ ಬೆಂದೋರ್‌ನ ಸೇಂಟ್ ಸೆಬಾಸ್ಟಿಯನ್ ಚರ್ಚ್ ಕಮ್ಯುನಿಟಿ ಹಾಲ್‌ನಲ್ಲಿ ತನ್ನ ಸರ್ವ ಸದಸ್ಯರ ಸಭೆಯನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಹೊಸ ಆದಾಯ ತೆರಿಗೆ ಕಾಯ್ದೆ 2025 ರ ಕುರಿತು ಮಾಹಿತಿಯುಕ್ತ ಅಧಿವೇಶನವನ್ನು ನಡೆಸಲಾಯಿತು ಮತ್ತು ಸದಸ್ಯರು, ವೃತ್ತಿಪರರು ಮತ್ತು ಅತಿಥಿಗಳು ಭಾಗವಹಿಸಿದ್ದರು. ವೇದಿಕೆಯಲ್ಲಿದ್ದ ಗಣ್ಯರಲ್ಲಿ ರಚನಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ರಾಯ್ ಕ್ಯಾಸ್ಟೆಲಿನೊ; ಹಿರಿಯ ಚಾರ್ಟರ್ಡ್ ಅಕೌಂಟೆಂಟ್ ಶ್ರೀ ರುಡಾಲ್ಫ್ ರೊಡ್ರಿಗಸ್, ಮಂಗಳೂರು […]

Read More

ಮಂಗಳೂರು: ಸಂತ ಅಲೋಶಿಯಸ್ ಗೊನ್ಝಾಗ ಅವರ  ಹಬ್ಬದ ಸಂಭ್ರಮದಲ್ಲಿ ತನ್ನ ನೂತನ ರೆಕ್ಟರ್ ವಂ. ಫಾ. ಬ್ರಾಯೆನ್ ಪಿರೇರಾ ಎಸ್‌.ಜೆ ಅವರನ್ನು ಶಾಲಾ ಪ್ರಾಂಶುಪಾಲರು,ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ಅವರು ಜೀವನದಲ್ಲಿ ಯಶಸ್ಸಿಗೆ ಕನಸು, ಸಮರ್ಪಣೆ ಮತ್ತು ಶಿಸ್ತು ಎಂಬ ಮೂರು ‘ಡಿ’ ಗಳನ್ನು ಮಾರ್ಗದರ್ಶಿ ತತ್ವಗಳಾಗಿ ಅನುಸರಿಸಿ ಎಂದು ಸಲಹೆ ನೀಡಿದರು. ಮಂಗಳೂರಿನ ಅತ್ಯುತ್ತಮ ಸಿ.ಬಿ.ಎಸ್‌.ಇ ಶಾಲೆಗಳಲ್ಲಿ ಒಂದಾಗಿರುವ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯನ್ನು ಶ್ಲಾಘಿಸಿ, ಸಂಸ್ಥೆಯ ಯಶಸ್ಸಿಗೆ ಶಿಕ್ಷಕರ […]

Read More

ಪಡುಕೋಣೆ : ದಿನಾಂಕ 19.6.2026 ರಂದು ಸಂತ ಅಂತೋನಿ ಚರ್ಚ್ ಪಡುಕೋಣೆಯಲ್ಲಿ ಸೀನಿಯರ್ ಸಿಟಿಜನ್ ಸ಼ಂಘದ ಸದ್ಯಸರಿಂದ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಹದ ಸದಸ್ಯರು ಚರ್ಚಿನ ಧರ್ಮಗುರು ವಂ। ಪ್ರಾನ್ಸಿಸ್ ಕರ್ನೆಲಿಯೊರವರು ರಚಿಸಿದ 5 ಪ್ರಾರ್ಥನೆ ಗೀತೆಗಳಲ್ಲಿ ಯಾವುದಾದರು ಒಂದನ್ನು ಹಾಡುವ ಸ್ಫರ್ಧೆ ಆಯೋಜಿಸಲಾಗಿತ್ತು. ಈ ಸ್ಫರ್ಧೆಯಲ್ಲಿ ಹೆಚ್ಚಿನವರು ಭಾಗವಹಿಸಿದರು. ಧರ್ಮಗುರುಗಳು ಬೈಬಲ್ ಕ್ವಿಜ್ ನ್ನು ನಡೆಸಿದರು, ಉತ್ತಮ ರೀತಿಯಲ್ಲಿ ಉತ್ತರಿಸಿದವರಿಗೆ ಹಾಗೂ ಪ್ರಾರ್ಥನೆ ಗೀತೆ ಹಾಡಿದವರಿಗೂ ಬಹುಮಾನವನ್ನು ನೀಡಲಾಯಿತು. ಹಿಂದಿನ ಸಭೆಯಲ್ಲಿ […]

Read More

ಕುಂದಾಪುರ, ಜೂನ್ 21, 2026: “ಯೋಗ ಎಂದರೆ ಕೇವಲ ಆಸನಗಳಲ್ಲ, ಅದೊಂದು ಜೀವನಶೈಲಿ ಆಗಬೇಕು. ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾಧಿ ಇದನ್ನು ಅಷ್ಟಾಂಗ ಎಂದು ಕರೆಯುತ್ತೇವೆ. ಇದೆಲ್ಲವನ್ನೂ ಸರಿಯಾದ ರೀತಿಯಲ್ಲಿ ಪಾಲನೆ ಮಾಡುವುದರ ಮುಖೇನ ನಮ್ಮ ಆರೋಗ್ಯವನ್ನು ಉತ್ತಮ ರೀತಿ ಇಟ್ಟುಕೊಳ್ಳಲು ಬಹಳ ನೆರವಾಗುತ್ತದೆ. ಯೋಗ ಎಂದರೆ ಜೀವನಕ್ರಮ. ಜೀವನಕ್ರಮ ಚೆನ್ನಾಗಿದ್ದಾರೆ ಎಲ್ಲವೂ ಚೆನ್ನಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರು ದಿನನಿತ್ಯ ಯೋಗಾಭ್ಯಾಸ ಮಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು” ಎಂದು ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ಮುಖ್ಯಸ್ಥರು […]

Read More

ಗಂಡಿಬಾಗಿಲಿನ ಸಿಯೋನ್ ಆಶ್ರಮ ಟ್ರಸ್ಟ್ (ರಿ.)ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಿನಾಂಕ 21-06-2026 ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಶ್ರೀಮತಿ ಓಮನಾ ಹಾಗೂ ಅತಿಥಿ ಗಣ್ಯರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ. ಯು.ಸಿ. ಪೌಲೋಸ್ ಹಾಗೂ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು.ಪಿ. ಅವರ ನೇತೃತ್ವದಲ್ಲಿ ಆಶ್ರಮದ ನಿವಾಸಿಗಳು, ಸಿಬ್ಬಂದಿ ವರ್ಗದವರು ಹಾಗೂ ಉಪಸ್ಥಿತರಿದ್ದ ಗಣ್ಯರಿಗೆ ವಿವಿಧ ಯೋಗಾಸನಗಳನ್ನು ಮಾಡಿಸುವ ಮೂಲಕ ಯೋಗ ದಿನಾಚರಣೆಯನ್ನು […]

Read More

ಶಿರೂರು : ಜ್ಞಾನದಾ ಶಿಕ್ಷಣ ಸಂಸ್ಥೆಯಲ್ಲಿ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲರಾದ ಡಾI ರವಿದಾಸ್ ಶೆಟ್ಟಿಯೋಗವು ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆಗಳಲ್ಲಿ ಒಂದು. ಇದು ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು ಸಾಧಿಸುವ ಪ್ರಾಚೀನ ಶಿಸ್ತಾಗಿದ್ದು, ವಿಶ್ವದಾದ್ಯಂತ ಅದರ ಮಹತ್ವವನ್ನು ಇತ್ತೀಚಿನ ದಿನಗಳಲ್ಲಿ ಎಲ್ಲರೂ ಅರಿಯತೊಡಗಿದ್ದಾರೆ.ಈ ವರ್ಷದ ಮುಖ್ಯ ಕಾರ್ಯಕ್ರಮವು ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜರುಗಲಿದೆ. ಈ ವರ್ಷದ […]

Read More
1 7 8 9 10 11 561