ಕಥೊಲಿಕ್ ಸಭಾ ಉಡುಪಿ ಪ್ರದೇಶ್ ( ರಿ) ಗಂಗೊಳ್ಳಿ ಘಟಕದ ಆಶ್ರಯದಲ್ಲಿ, ಗಂಗೊಳ್ಳಿಯ ಕೊಸೆಸಾಂವ್ ಮಾತೆಯ ಚರ್ಚಿನಲ್ಲಿ ಕರ್ನಾಟಕ ಸರಕಾರ ನಡೆಸುವಂತಹ ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವು ಆದಿತ್ಯವಾರ ಸೆಪ್ಟೆಂಬರ್ 21 ರಂದು ನಡೆಯಿತು. ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಇವರ ಗಂಗೊಳ್ಳಿ ಘಟಕದ ಅಧ್ಯಕ್ಷರಾದ ಎಡ್ವರ್ಡ್ ಫೆರ್ನಾಂಡಿಸ್ ರವರ ಮುಂದಾಳತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ , ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯದಲ್ಲಿಯ ಅಧಿಕಾರಿ ಹಾಗೂ ಸಾಮಾಜಿಕ, ಆರ್ಥಿಕ ಹಾಗೂ […]
ಶಿವಮೊಗ್ಗ ; 20-9-2025 ರಂದು ಪರಮಪೂಜ್ಯ ಫ್ರಾನ್ಸಿಸ್ ಸೆರಾವೊ, ಧರ್ಮಾಧ್ಯಕ್ಷರು, ಶಿವಮೊಗ್ಗ ಧರ್ಮಕ್ಷೇತ್ರ ಇವರು ಮೈಸೂರಿನ ಧರ್ಮಕ್ಷೇತ್ರಕ್ಕೆ ವರ್ಗಾವಣೆಗೊಂಡ ಸಂದರ್ಭದಲ್ಲಿ, ಶಿವಮೊಗ್ಗ ಸೈಂಟ್ ಅಂತೋಣಿಸ್ ಚಾರಿಟಬಲ್ ಟ್ರಸ್ಟ್ ಸದಸ್ಯರುಗಳು ಪರಮಪೂಜ್ಯರು ಶಿವಮೊಗ್ಗ ಧರ್ಮಕ್ಷೇತ್ರದಲ್ಲಿ (ಮೇ 7, 2014)11 ವರ್ಷ 5 ತಿಂಗಳ ಸಾರ್ಥಕ ಸೇವೆಯನ್ನು ಪೂರೈಸಿ, ಮೈಸೂರು ಧರ್ಮಕ್ಷೇತ್ರಕ್ಕೆ ಮುಂದಿನ ಸೇವೆಗಾಗಿ ತೆರಳುತ್ತಿರುವುದರಿಂದ ಅವರ ಸೇವೆಯನ್ನು ಸ್ಮರಿಸಿ ಅವರ ಮುಂದಿನ ಸೇವೆಗೆ ಶುಭಕೋರಿದರು. ಈ ಸಂದರ್ಭದಲ್ಲಿ ಟ್ರಸ್ಟಿಗಳಾದಶ್ರೀ ರಾಬರ್ಟ್ ಡಿ ಸೋಜ, ಶ್ರೀ ವಿಕ್ಟರ್ ಡಿ ಸೋಜ, […]
Udupi Dist level Jump Rope Tournament’ was given a thrilling start during the inaugural ceremony ಸೆಪ್ಟೆಂಬರ್ 20, 2025 ರ ಶನಿವಾರ, ಕ್ರೀಡಾಪಟುಗಳು ಮತ್ತು ತಂಡದ ವ್ಯವಸ್ಥಾಪಕರು ಉದ್ಘಾಟನಾ ಸಮಾರಂಭವನ್ನು ವೀಕ್ಷಿಸಲು ಹಾಜರಿದ್ದರಿಂದ ರಾಷ್ಟ್ರೀಯ ಸಭಾಂಗಣವು ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ತುಂಬಿತ್ತು, ವಿದ್ಯಾರ್ಥಿಗಳು ಭಾವಪೂರ್ಣ ಪ್ರಾರ್ಥನಾ ಗೀತೆಯೊಂದಿಗೆ ಇದನ್ನು ಪ್ರಾರಂಭಿಸಿದರು, ನಂತರ NPU ಪ್ರಾಂಶುಪಾಲರಾದ ಶ್ರೀಮತಿ ಉಷಾ ಕಿರಣ್ ಶೆಟ್ಟಿ ಅವರು ಔಪಚಾರಿಕ ಆದರೆ ಸೌಹಾರ್ದಯುತ ಸ್ವಾಗತ ಭಾಷಣ ಮತ್ತು ಹೂವಿನ […]
One-Day National Seminar on “Barkur – Unforgettable Historic Capital of Tulunad” ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು, ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ರಾಷ್ಟ್ರೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಬಾರ್ಕೂರು ಮತ್ತು ಅದರ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಸಹಯೋಗದೊಂದಿಗೆ, “ಬಾರ್ಕೂರು – ತುಳುನಾಡಿನ ಮರೆಯಲಾಗದ ಐತಿಹಾಸಿಕ ರಾಜಧಾನಿ” ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಸೆಪ್ಟೆಂಬರ್ 20, 2025 ರ ಶನಿವಾರ ಕಾಲೇಜು […]
ಕುಂದಾಪುರ; “ಪರಿಶುದ್ಧ ಆಹಾರ ಸೇವನೆ ಬದುಕಿನ ಎಲ್ಲ ಹಂತಗಳಲ್ಲೂ ವ್ಯಕ್ತಿಗಳ ಮೊದಲ ಆದ್ಯತೆಯಾಗಿರುತ್ತದೆ. ಇಂಥ ಆಹಾರ ಪದಾರ್ಥಗಳನ್ನು ಶ್ರಮವಹಿಸಿ ಜನರಿಗೆ ತಲುಪಿಸುವ ಗುರುತರ ಜವಾಬ್ದಾರಿಯಿಂದ ಕೃಷಿಕಾಯಕದ ಬಗ್ಗೆ ಮತ್ತು ರೈತರು ಅನುಸರಿಸುವ ಸುರಕ್ಷಿತ ಆಧುನಿಕ ವಿಧಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿಶೇಷ ಆಸಕ್ತಿ ಇರಬೇಕು” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾದ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್(ರಿ), ಬೆಚ್ಚಳ್ಳಿ ಯ ಸಹಭಾಗಿತ್ವದಲ್ಲಿ ಆಯೋಜಿಸಿದ ಕೃಷಿ […]
ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಗವರ್ನ್ಮೆಂಟ್ ಟೆಕ್ ಕೆ ಪಿ ಎಮ್ ಜಿ ಇಂಡಿಯಾದ ಸಹಾಯಕ ನಿರ್ದೇಶಕರಾದ ಡಾ. ರತನ್ ಮುರಳೀದರ್ ಇವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅವರು “ಒಬ್ಬ ವಿದ್ಯಾರ್ಥಿಯಾಗಿ, ನಿಮ್ಮ ಸುತ್ತಲಿನ ಸಮಸ್ಯೆಗಳನ್ನು ಗುರುತಿಸಿ, ಅವುಗಳನ್ನು ಪರಿಹರಿಸಲು ನಿಮ್ಮ ಕೌಶಲ್ಯಗಳನ್ನು ಬಳಸಿಕೊಳ್ಳಬೇಕು, ಆ ನಿಟ್ಟಿನಲ್ಲ್ ವಿದ್ಯಾರ್ಥಿಗಳು ಪ್ರಯತ್ನ ಪಡುತ್ತಲೇ ಇರಬೇಕು ಎಂದು ಪ್ರೋತ್ಸಾಹಿಸಿದರು.” ವಿವಿಧ ವಿಭಾಗದ ಡೀನ್ ಅವರು ಮಾತಾಡಿ ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳು […]
ಕುಂದಾಪುರದ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಂಗಳೂರಿನ ಯುನಿವರ್ಸಲ್ ಸ್ಕೂಲ್ ಆಫ್ ಎಡ್ಮಿನಿಸ್ಟ್ರೇಶನ್ ಸಂಸ್ಥೆಯ ಉಪನ್ಯಾಸಕರಾದ ಶ್ರೀ ಪ್ರಭುಲಿಂಗ ರವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಆಡಳಿತಾತ್ಮಕ ಕಛೇರಿಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯುವ ಬಗ್ಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿ.ಬಿ ಯವರು ಧನ್ಯವಾದ ಸಲ್ಲಿಸಿದರು.
ಉಡುಪಿ : ಸಹಕಾರ ಸಂಘಗಳು ಹೆಚ್ಚಿನ ಪತ್ರ ವ್ಯವಹಾರವಿಲ್ಲದೇ, ಸರಳ ರೀತಿಯಲ್ಲಿ ಜನರ ಅವಶ್ಯಕತೆಗಳಿಗೆ ಅನುಗುಣವಾಗಿ ಸಾಲ ಸೌಲಭ್ಯವನ್ನು ನೀಡುತ್ತವೆ. ಇದರಿಂದಾಗಿ ಜನರು ಸಹಕಾರ ಸಂಘಗಳಲ್ಲಿ ವ್ಯವಹಾರ ನಡೆಸಲು ಹೆಚ್ಚಿನ ಒಲವನ್ನು ತೋರುತ್ತಿದ್ದಾರೆ. ಜನರಲ್ಲಿ ಆರ್ಥಿಕ ಉಳಿತಾಯ ಮನೋಭಾವ ಬೆಳೆಸುವಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ಮಹತ್ತರದ್ದಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜ ತಿಳಿಸಿದರು. ನಗರದ ಶೋಕಮಾತಾ ದೇವಾಲಯದ ಆವರಣದಲ್ಲಿರುವ ಆವೇ ಮರಿಯಾ ಸಭಾಂಗಣದಲ್ಲಿ ನಡೆದ ಉಡುಪಿ ಕೆಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 28ನೇ ವಾರ್ಷಿಕ […]
ಮಂಗಳೂರು : ದೇರಳಕಟ್ಟೆ ನವಾಜ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದಕ್ಷಿಣ ಕನ್ನಡ ಮತ್ತು ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಆಶ್ರಯದಲ್ಲಿ ನಡೆದ “ರಾಜ್ಯಮಟ್ಟದ ಚುಟುಕು ಕವಿಗೋಷ್ಠಿ’ ಹಾಗೂ “‘ಭಾವೈಕ್ಯತೆ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ’ ಸಮಾರಂಭದಲ್ಲಿ ಸೆಪ್ಟೆಂಬರ್ 14 ರಂದು ಮಾಯ್ ದೆ ದೇವುಸ್ ಶಾಲಾ ಶಿಕ್ಷಕಿ ಫ್ಲಾವಿಯಾ ಅಲ್ಬುಕರ್ಕ್ ಪುತ್ತೂರು ಇವರಿಗೆ ” ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿ – 2025″ ನೀಡಿ ಗೌರವಿಸಲಾಯಿತು. ಇವರು ಕವಯತ್ರಿ ಹಾಗೂ ಅನುವಾದಕಿಯಾಅಗಿದ್ದಾರೆ. ಇವರ […]

