ಶ್ರೀನಿವಾಸಪುರ: ಶ್ರೀನಿವಾಸಪುರ ಕೋಲಾರ ರಸ್ತೆ ಪಾಳ್ಯ ಗ್ರಾಮದ ಸಮೀಪ ಸ್ಟೇಟ್ ಅರಣ್ಯ ಪ್ರದೇಶದಲ್ಲಿ ಬುಧವಾರ ಆಕಸ್ಮಿಕ ಬೆಂಕಿಯಾಗಿ ಸುಮಾರು ೨೦ ಎಕರೆ ಜಮೀನಿನಲ್ಲಿ ವಿವಿಧ ಜಾತಿಯ ೫೦೦೦ ಮರಗಳು ಸುಟ್ಟು ಕರಕಳಾಗುತ್ತಾ ಸಮಯದಲ್ಲಿ ಅಗ್ನಿಶಾಮಕದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ಅನಾಹುತ ಆಗದಂತೆ ತಡೆದರುಈ ಸಂದರ್ಭದಲ್ಲಿ ಅಗ್ನಿಶಾಮಕದ ಎಫ್ ಎಸ್ ಓ . ಎಲ್ ಎಮ್. ಅಮ್ಜದ್ , ಫೈರ್ ಮ್ಯಾನ್ ಗಳಾದ ಜೆಸಿ ಜೆಬೀ ಉಲ್ಲಾಖಾನ್, ಹೆಚ್.ಶಶಿಧರ್, ಅಭಿಷೇಕ್, ದೇವರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು “
ಶ್ರೀನಿವಾಸಪುರ : ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಮಾಡುತ್ತಿದ್ದು ಈದೇಶವು ಜ್ಯಾತೀತ ರಾಷ್ಟ್ರ ನೂರಾರು ಜಾತಿಗಳು ದೇಶದಲ್ಲಿ ಬದುಕುತ್ತಿದ್ದಾರೆ. ಬದುಕು ಬೇರೆ ಬಾವನೆಗಳು ಬೇರೆ. ಬಾವನೆ ಎಂದರೆ ನನ್ನ ಧರ್ಮ, ನನ್ನ ಅಣ್ಣ ತಮ್ಮಂದಿರುಗಳು ಇಂತಹದು. ಬದುಕು ಎಂದರೆ ಪ್ರತಿಯೊಬ್ಬ ಪ್ರಜೆಯು ಬದಕಬೇಕು. ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ದಳಸನೂರು ಗೋಪಾಲಕೃಷ್ಣ ಹೇಳಿದರು.ತಾಲೂಕಿನ ದಳಸನೂರು ಗ್ರಾಮದ ದಳಸನೂರು ಗೋಪಾಲಕೃಷ್ಣ ನಿವಾಸದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.ಕೆಳೆದ ೧೪ ನೇ ಮಾವಿನ ಕಾಯಿ ಮಂಡಿಯಲ್ಲಿ ಶ್ರೀನಿವಾಸಪು ವಿಧಾನಸಭಾ ಕ್ಷೇತ್ರದ […]
ಶ್ರೀನಿವಾಸಪುರ : ಈ ಹಿಂದೆ ವಿಧಾನಸಭೆ ಚುನಾವಣೆ ಸಮಯದಲ್ಲಿ ಯಾವ ಸಭೆಯಲ್ಲಿ ನೋಡಿದರು ಜನಸಾಗರವೇ ತುಂಬಿ ತುಳುಕುತ್ತಿತ್ತು . ಅಂದು ಜನಸಾಗರವನ್ನು ನೋಡಿ ನಾನು ಗೆದ್ದೆ ಗಲ್ಲುತ್ತೇನೆ ಎಂದು ಆಶಭಾವನೆಯನ್ನು ಹೊತ್ತಿದ್ದೆ ಆದರೆ ಫಲಿತಾಂಶವು ಬಂದ ನಂತರ ನನ್ನ ಆಶಭಾವನೆ ಭಗ್ನಗೊಂಡಿತು ಎಂದು ಮಾಜಿ ಶಾಸಕ ಕೆ.ಆರ್.ರಮೇಶ್ಕುಮಾರ್ ಬೇಸರ ವ್ಯಕ್ತಪಡಿಸಿದರು. ತಾಲೂಕಿನ ರಾಯಲ್ಪಾಡು ಹೋಬಳಿಯ ಗೌನಿಪಲ್ಲಿ ಗ್ರಾಮದ ಬಸ್ನಿಲ್ದಾಣದ ಬಳಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿಪರ ಮತಯಾಚನೆ ಸಭೆಯಲ್ಲಿ ಮಾತನಾಡಿದರು. ೯೧ ವರ್ಷ ವಯಸ್ಸಿನ ಮಾಜಿ ಪ್ರಧಾನಿಗಳಾದ ದೇವೆಗೌಡರು […]
ಶ್ರೀನಿವಾಸಪುರ : ಸಭೆಯಲ್ಲಿ ಇಷ್ಟು ಜನ ಸೇರಿದ್ದೀರಿ, ನಾನು ಯಾರನ್ನು ನಂಬುವುದು ಯಾರನ್ನ ಬಿಡುವುದು ಎಂದು ಹೇಳುತ್ತಾ, ಇಷ್ಟು ಜನ ಬಂದು ಅನೇಕ ವಿಧಗಳಲ್ಲಿ ಪ್ರಯೋಜನೆಗಳನ್ನು ಪಡೆದು, ನನ್ನ ಸೋಲಿಸಿದ್ದೀರಿ ಎನ್ನುತ್ತಾ,ಎಂದು ಮಾಜಿ ಶಾಸಕ ಕೆ.ಆರ್.ರಮೇಶ್ಕುಮಾರ್ ಬೇಸರ ವ್ಯಕ್ತಪಡಿಸಿದರು. ತಾಲೂಕಿನ ರಾಯಲ್ಪಾಡು ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಪರ ಮತಯಾಚನ ಸಭೆಯಲ್ಲಿ ಮಾತನಾಡಿದರು. ಕಳೆದ ೧೧ ತಿಂಗಳಿನಿAದ ನಾನು ತೋಟದಲ್ಲಿ ಕುರಿಗಳ ಜೊತೆ ಹಾಗೂ ತೋಟವನ್ನು ಸುತ್ತಾಡುತ್ತಾ ಕಾಲಕಳೆದಿದ್ದೇನೆ. ಅನೇಕ ಬಾರಿ ಯೋಚನೆ […]
ಶ್ರೀನಿವಾಸಪುರ : ಕುಡಿಯುವ ನೀರಿನ ಹಭಾವದಿಂದ ಕಂಗಾಲಾಗುತ್ತಿದ್ದ ಗ್ರಾಮಸ್ಥರ ದಾಹ ತೀರಿಸಲು ಮುಂದಾಗಿ ಬೋರ್ ವೆಲ್ ಕೊರಿಸುವ ವೇಳೆ ಪಕ್ಕದ ಜಮೀನಿನ ವಾಸಿಗಳು ಹಲ್ಲೆ ನಡೆಸಿರುವ ಘಟನೆ ಸಂಬಂಧ ರಾಯಲ್ಪಾಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲ್ಲೂಕಿನ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯ ಮೂಲಗೊಲ್ಲಪಲ್ಲಿ ಗ್ರಾಮದಲ್ಲಿ ಸುಮಾರು 10-15 ದಿನಗಳಿಂದ ನೀರಿನ ಹಭಾವ ಹೆಚ್ಚಾಗಿತ್ತು. ಈ ಸಂಬಂಧ ಗ್ರಾಮಸ್ತರು ಹಲವು ಭಾರಿ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು. ಇನ್ನು ಈ ಸಂಬಂಧ ಗ್ರಾಮದ ಮುಖ್ಯ ರಸ್ತೆ ಹಾಗೂ ಕಾಲುವೆ ಮದ್ಯೆ […]
ಕೋಲಾರ:- ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ನಿಯೋಜಿತ ಸಮಿತಿ ಯೂಟೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಂ, ಟ್ವಿಟ್ಟರ್ ಹಾಗೂ ವ್ಯಾಟ್ಸ್ ಆ್ಯಪ್ಗಳ ಮೇಲೆ ತೀವ್ರ ನಿಗಾ ಇಡಬೇಕು. ಜಾಹೀರಾತು ವೆಚ್ಚ ಕುರಿತು ಸಮಿತಿ ಕೂಲಂಕುಷವಾಗಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷಾ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಜಿಲ್ಲಾ ಮಾಧ್ಯಮ ಪರಿಶೀಲನಾ ಕೋಶ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮನವರಿಕೆ ಮಾಡಿಕೊಂಡ ನಂತರವೇ ಸರ್ಟಿಫಿಕೇಟ್ ನೀಡಬೇಕು. ದೃಶ್ಯ ಮಾಧ್ಯಮ, […]
ಕೋಲಾರ:- ಜಿಲ್ಲಾದ್ಯಂತ ಒಟ್ಟು 19 ಕೇಂದ್ರಗಳಲ್ಲಿ ಮೊದಲ ದಿನದ 2024ರ ಸಾಮಾನ್ಯ ಪ್ರವೇಶ ಪರೀಕ್ಷೆ ಸುಗಮವಾಗಿ ನಡೆದಿದ್ದು, ಗುರುವಾರ ಬೆಳಗ್ಗೆ ಜೀವಶಾಸ್ತ್ರ ವಿಷಯಕ್ಕೆ 1413 ಮಂದಿ ಹಾಗೂ ಮಧ್ಯಾಹ್ನ ಗಣಿತಶಾಸ್ತ್ರ ವಿಷಯಕ್ಕೆ 438 ಮಂದಿ ಗೈರಾಗಿದ್ದು, ಯಾವುದೇ ಗೊಂದಲಕ್ಕೆ ಅವಕಾಶವಾಗಿಲ್ಲ ಮತ್ತು ಜಿಲ್ಲಾಧಿಕಾರಿಗಳು ಕೇಂದ್ರಗಳಿಗೆ ವೀಕ್ಷಣೆ ಮಾಡಿ ಪರಿಶೀಲಿಸಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರಪ್ಪ ತಿಳಿಸಿದ್ದಾರೆ.ಜೀವಶಾಸ್ತ್ರ ವಿಷಯದ ಪರೀಕ್ಷೆಗೆ ಒಟ್ಟು 8325 ಮಂದಿ ಹೆಸರು ನೋಂದಾಯಿಸಿದ್ದು, ಅವರಲ್ಲಿ 6912 ಮಂದಿ ಹಾಜರಾಗುವ ಮೂಲಕ […]
ಶ್ರೀನಿವಾಸಪುರ: ಕೇಂದ್ರ ಲೋಕ ಸೇವಾ ಆಯೋಗ ನಡೆಸಿದ ನಾಗರೀಕ ಸೇವೆಗಳ ಪರೀಕ್ಷೆಗಳ ಫಲಿತಾಂಶದಲ್ಲಿ ಕೋಲಾರದ ಡಯಟ್ ನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಜಿ.ಎಂ. ಗಂಗಪ್ಪ ಮತ್ತು ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಆರ್. ಜಯಲಕ್ಷ್ಮೀ ದಂಪತಿಗಳ ಪುತ್ರಡಾ: ಜಿ. ಗೌತಮ್ ತನ್ನ ಐ.ಎ.ಎಸ್. ಪರೀಕ್ಷೆಯಲ್ಲಿ 939ನೇ ಶ್ರೇಣಿಯನ್ನು ಪಡೆದಿದ್ದು, ಇವರನ್ನು ರೋಟರಿ ಶ್ರೀನಿವಾಸಪುರ ಸೆಂಟ್ರಲ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಶ್ರೀನಿವಾಪುರ ಸೆಂಟ್ರಲ್ನ ಅಧ್ಯಕ್ಷರಾದ ಎಸ್.ಎನ್. ಮಂಜುನಾಥರೆಡ್ಡಿ, ಕಾರ್ಯದರ್ಶಿ ಎಸ್. ಶಿವಮೂರ್ತಿ, ಮಾಧ್ಯಮ ಕಾರ್ಯದರ್ಶಿ ಎನ್. ಕೃಷ್ಣಮೂರ್ತಿ ನಿರ್ದೇಶಕರಾದ […]
ಕೋಲಾರ:- ಚುನಾವಣಾ ಪ್ರಕ್ರಿಯೆ ಯಾವುದೇ ಗೊಂದಲಗಳಿಲ್ಲದೇ ಸುಸೂತ್ರವಾಗಿ ನಡೆಯಲು ಮತದಾನ ಕಾರ್ಯಕ್ಕೆ ನೇಮಕಗೊಂಡಿರುವ ಮತಗಟ್ಟೆ ಸಿಬ್ಬಂದಿ ಕ್ರಮವಹಿಸಿ ಮತ್ತು ಮತಗಟ್ಟೆಯಲ್ಲಿ ಅಣಕುಮತದಾನ ಸಕಾಲಕ್ಕೆ ಮುಗಿಸಿ ನೈಜ ಮತದಾನಕ್ಕೆ ಸಿದ್ದತೆ ನಡೆಸಿಕೊಳ್ಳಿ ಎಂದು ತಹಸೀಲ್ದಾರ್ ಹರ್ಷವರ್ಧನ್ ಸೂಚಿಸಿದರು.ಬುಧವಾರ ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳಾಗಿ ನೇಮಕಗೊಂಡಿರುವ ಸಿಬ್ಬಂದಿಗೆ ನಡೆದ 2ನೇ ಹಂತದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಅವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷಾ, ವಿಭಾಗಾಧಿಕಾರಿ ವೆಂಕಟಲಕ್ಷ್ಮಿ ಅವರ ಮಾರ್ಗದರ್ಶನದಲ್ಲಿ ತರಬೇತಿ […]

