ಶ್ರೀನಿವಾಸಪುರ : ಮಾನವ ಸ್ವಾರ್ಥಕ್ಕಾಗಿ ಅರಣ್ಯ ನಾಶ ಮಾಡಿದ ಪರಿಣಾಮ ಕಾಲ – ಕಾಲಕ್ಕೆ ಮಳೆಯಾಗಿದೆ ಸಂಕಷ್ಟ ಎದುರಾಗಿದ್ದು, ಇಂದಿನ ಪರಿಸ್ಥತಿಯಲ್ಲಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ಹೊದಲಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಆರ್.ತಿಮ್ಮಸಂದ್ರ ಗ್ರಾಮದ ಸಮೀಪ ಡಾ|| ಬಿ.ಆರ್ ಅಂಬೇಡ್ಕರ್ ವಸತಿಶಾಲೆಯ ಆವರಣದಲ್ಲಿ ಶನಿವಾರ ವನಮಹೋತ್ಸವ ಹಾಗು ಕೋಟಿ ವೃಕ್ಷಾರೋಹಣ ಸಸಿ ನೆಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಬಾಲ್ಯದಿಂದಲೇ ಪರಿಸರದ […]

Read More

ರಚನೆ:- ಬಿ.ಆರ್. ರವೀಂದ್ರ,  ವಕೀಲರು ಮತ್ತು ಸಾಹಿತಿಗಳು ಕೋಲಾರ. ಡಿವಿಜಿ ಎಂಬ ಹೆಸರು ಕೇಳಿದ ತಕ್ಷಣ ನಮಗೆ ನೆನಪಾಗುವುದು ಅವರ “ಮಂಕುತಿಮ್ಮನ ಕಗ್ಗ” ಆ ಗ್ರಂಥಕ್ಕೆ ಈ ಹೆಸರು ಇಡುವಲ್ಲಿ ಅವರ ಜಾಣ್ಮೆಯನ್ನು ನಾವು ಕಾಣಬಹುದು. ಡಿವಿಜಿ ರವರು ಅದ್ಭುತ ವಿಚಾರವಂತರು, ಜ್ಞಾನಿಗಳು, ಅವರು ಸಾಹಿತ್ಯದಲ್ಲಿ ಕೈಯಾಡಿಸದೆ ಬಿಟ್ಟ ಪ್ರಕಾರವಿಲ್ಲ. ಶೈಕ್ಷಣಿಕವಾಗಿ ಅವರ ವಿದ್ಯಾಭ್ಯಾಸ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೂ ಸಹ ಕನ್ನಡ ಭಾಷೆಯ ಜೊತೆಗೆ ಅವರು ಇಂಗ್ಲಿಷ್ ಮತ್ತು ಸಂಸ್ಕೃತ ಭಾಷೆಯಲ್ಲಿ ಅದ್ಭುತ ಪಾಂಡಿತ್ಯವನ್ನು ಪಡೆದಿದ್ದವರು. ಕನ್ನಡ […]

Read More

ಶ್ರೀನಿವಾಸಪುರ: ಪಟ್ಟಣದಲ್ಲಿ ಮುಸ್ಲಿಮರು ಗುರುವಾರ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಿಸಿದರು. ಪಟ್ಟಣದ ಹೊರವಲಯದಲ್ಲಿನ ಈದ್ಗಾ ಮೈದಾನಕ್ಕೆ ಮೆರವಣಿಗೆಯಲ್ಲಿ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.ಮುಸ್ಲಿಂ ಸಮುದಾಯದ ನಾಗರಿಕರು ಪರಸ್ಪರ ಬಕ್ರೀದ್ ಶುಭಾಶಯ ವಿನಿಮಯ ಮಾಡಿಕೊಂಡರು. ಪ್ರಾರ್ಥನೆ ಸಲ್ಲಿಸಿ ಹಿಂದಿರುಗುವಾಗ ಕೆಲವು ಮುಸ್ಲಿಂ ಸಮುದಾಯದವರು ತಂಪು ಪಾನೀಯ ವಿತರಿಸಿದರು.ಹಬ್ಬದ ಪ್ರಯುಕ್ತ ಬಡವರಿಗೆ ಮಾಂಸ ದಾನ ಮಾಡಲಾಯಿತು. ಮಾರುಕಟ್ಟೆಯಲ್ಲಿ ಕುರಿ ಮತ್ತು ಮೇಕೆ ಮಾಂಸಕ್ಕೆ ಹೆಚ್ಚಿನ ಬೇಡಿಕೆಯಿತ್ತು. ಮಧ್ಯಾಹ್ನದ ಹೊತ್ತಿಗೆ ಮಾಂಸದ ಅಂಗಡಿಗಳಲ್ಲಿ ಮಾಂಸ ಮುಗಿದುಹೋಗಿತ್ತು. ಮುಸ್ಲಿಂ ಸಮುದಾಯದಿಂದ ಮಾಂಸಕ್ಕೆ ಹೆಚ್ಚಿನ […]

Read More

ಕೋಲಾರ: “ಮಣ್ಣಿನ ಆರೋಗ್ಯ ಹಾಗೂ ಸುಸ್ಥಿರ ಹಿಪ್ಪುನೇರಳೆ ಸೊಪ್ಪು ಮತ್ತು ರೇಷ್ಮೆಗೂಡಿನ ಇಳುವರಿಗೆ ಸಾವಯವ ಆಧಾರಿತ ಬೇಸಾಯ ಕ್ರಮಗಳು ” ಸಾಮಥ್ರ್ಯ ವೃದ್ಧಿ ತರಬೇತಿ ಕಾರ್ಯಕ್ರಮ ವನ್ನು ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕೋಲಾರ ರೇಷ್ಮೆ ಇಲಾಖೆ, ಜಿ.ಪಂ., ಕೋಲಾರ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಮಡಿವಾಳ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 28.06.2023 ರಂದು ಕೃಷಿ ವಿಜ್ಞಾನ ಕೇಂದ್ರ, ಕೋಲಾರದಲ್ಲಿ ಆಯೋಜಿಸಲಾಗಿತ್ತು.ಕೋಲಾರ ವಿಭಾಗದ ರೇಷ್ಮೆ ಸಹಾಯಕ ನಿರ್ದೇಶಕರಾದ ಶ್ರೀ. ಮಂಜುನಾಥ್, ಎಂ. ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಇತ್ತೀಚಿಗೆ ಕೀಟನಾಶಕಗಳು, […]

Read More

ಜುಲೈ 1 ರಂದು ನಗರದ ಪತ್ರಕರ್ತರ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಕೆ.ಎಸ್.ಗಣೇಶ್ ಮತ್ತು ವಿ.ಮುನಿರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ.ಸುರೇಶ್‍ಕುಮಾರ್ ಅವರನ್ನೊಳಗೊಂಡ ಸಮಿತಿಯು ಜಿಲ್ಲೆಯ 9 ಮಂದಿ ಪತ್ರಕರ್ತರನ್ನು ವಿವಿಧ ಪ್ರಶಸ್ತಿಗಳಿಗೆ ಆಯ್ಕೆ ಮಾಡಿತು. ಪ್ರಶಸ್ತಿ ವಿಜೇತರ ವಿವರ:ಕೆ.ಆರ್.ಕೃಷ್ಣಸ್ವಾಮಿ ಅವರ ನೆನಪಿನಲ್ಲಿ: ಕೋಲಾರದ ವಿಜಯವಾಣಿ ದಿನಪತ್ರಿಕೆಯ ಜಿಲ್ಲಾ ವರದಿಗಾರ ಕೆ.ಎಂ.ನಾರಾಯಣಸ್ವಾಮಿ, ಜಿ.ನಾರಾಯಣಸ್ವಾಮಿ ಅವರ ನೆನಪಿನಲ್ಲಿ: ಕೋಲಾರದ ಪ್ರಜಾವಾಣಿ […]

Read More

ಕೋಲಾರ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾಗೆ ಆಗ್ರಹಿಸಿ ಕೋಲಾರ ರೈತಸಂಘದ ಮುಖಂಡರು ಹಾಗೂ ಮಹಿಳಾ ಸಂಘಗಳ ಪದಾಧಿಕಾರಿಗಳು ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನೆ ನಡೆಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯರ ಭಾವಚಿತ್ರಕ್ಕೆ ಹಾಲು, ಮೊಸರಿನಿಂದ ಅರ್ಚನೆ ಮಾಡಿದ ಮುಖಂಡರು, ಚುನಾವಣೆಗೆ ಮೊದಲು ಘೋಷಿಸಿರುವಂತೆಯೇ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಬೇಕು. ಈ ಕುರಿತು ಮುಖ್ಯಮಂತ್ರಿಗಳು ಬಂದು ನಮ್ಮ ಮನವಿಯನ್ನು ಸ್ವೀಕರಿಸಿ ಭರವಸೆ ನೀಡುವವರೆಗೂ ಜಾಗ ಬಿಟ್ಟು ಹೋಗುವುದಿಲ್ಲವೆಂದು ಪಟ್ಟುಹಿಡಿದರು. ಈ ವೇಳೆ ಪೊಲೀಸರು ಹಾಗೂ ಸಂಘಟನೆಯ ಮುಖಂಡರೊಂದಿಗೆ ಮಾತಿನ ಚಕಮಕಿಗಳಾದವು.ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರೈತಸಂಘದ ಕೋಲಾರ […]

Read More

ಶ್ರೀನಿವಾಸಪುರ: ಬೆಂಗಳೂರು ನಿರ್ಮಾತೃ ಕೆಂಪೇಗೌಡ ಅವರ ಜನಪರ ಕಾಳಜಿ ಅನುಕರಣೀಯ ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕೆಂಪೇಗೌಡ ಜಯಂತಿ ಸಮಾರಂಭದಲ್ಲಿ, ಕೆಂಪೇಗೌಡರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.ಬೆಂಗಳೂರನ್ನು ಅರ್ಥಪೂರ್ಣವಾಗಿ ಅಭಿವೃದ್ಧಿಪಡಿಸಿದ ಕೀರ್ತಿ ಕೆಂಬಪೇಗೌಡರಿಗೆ ಸಲ್ಲುತ್ತದೆ. ಎಲ್ಲ ವರ್ಗದ ವ್ಯಾಪಾರಿಗಳಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗುವಂತೆ ವಿವಿಧ ಪೇಟೆಗಳನ್ನು ನಿರ್ಮಿಸಿದರು. ಕೃಷಿ ಹಾಗೂ ಕುಡಿಯುವ ನೀರಿಗೆ ಅನುಕೂಲವಾಗುವಂತೆ ಕೆರೆಗಳನ್ನು ನಿರ್ಮಿಸಿದರು. ಎಲ್ಲ […]

Read More

ಶ್ರೀನಿವಾಸಪುರ: ತಾಲ್ಲೂಕಿನ ಯಲ್ದೂರು ಗ್ರಾಮದ ಕೃಷಿಕ ನಾರಾಯಣಸ್ವಾಮಿ ಕುಟುಂಬಕ್ಕೆ ಪೊಲೀಸ್ ರಕ್ಷಣೆ ನೀಡಬೇಕು. ಕುಟುಂಬದ ಸದಸ್ಯರ ಮೇಲೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೌರ್ಜನ್ಯ ನಡೆಸುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡರಾದ ರಾಮಾಂಜಮ್ಮ ಆಗ್ರಹಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಯಲ್ದೂರು ಸರ್ವೆ ನಂಬರ್ 42 ಪೈಕಿ 3 ಎಕರೆ ಜಮೀನು ನಾರಾಯಣಸ್ವಾಮಿ ತಂದೆಗೆ ದರಖಾಸ್ತು ಮೂಲಕ ಮಂಜೂರಾಗಿತ್ತು. ತಂದೆ ಮರಣಾನಂತರ ನಾರಾಯಣಸ್ವಾಮಿ ಹೆಸರಿಗೆ ಪವತಿ ಖಾತೆಯಾಗಿದ್ದು, […]

Read More