ಕೋಲಾರ, ಜೂ.24: ರೈತ ಸಂಘದ ರಾಜ್ಯ ಸಂಚಾಲನ ಸಮಿತಿ ಚುಕ್ಕಿ ನಂಜುಂಡಸ್ವಾಮಿ ಮತ್ತು ಕೆ.ಟಿ ಗಂಗಾದರ್ ರವರ ನೇತೃತ್ವದಲ್ಲಿ ಸಹಕಾರಿ ಸಂಘಗಳಲ್ಲಿರುವ ಮಹಿಳೆಯರ ಸ್ತ್ರೀ ಶಕ್ತಿ ಸಾಲ ಮನ್ನಾ ಮಾಡಬೇಕು ಮತ್ತು ಮುಂಬುರುವ ಬಜೆಟ್‍ನಲ್ಲಿ ರೈತ ಪರ ಯೋಜನೆಗಳನ್ನು ಜಾರಿ ಮಾಡಬೇಕೆಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‍ರವರನ್ನು ಬೇಟಿ ಮಾಡಿ ರೈತ ಸಂಘದ ರಾಜ್ಯ ಸಂಚಾಲನಾ ಸಮಿತಿಯಿಂದ ಒತ್ತಾಯಿಸಲಾಯಿತು.ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯದ ರೈತರು ಬೆಳೆಯುವ ಅಕ್ಕಿಯನ್ನು ಅನ್ನಭಾಗ್ಯ ಯೋಜನೆಗೆ ಬಳಸಿಕೊಂಡರೆ ಬಡವರಿಗೆ […]

Read More

ಶ್ರೀನಿವಾಸಪುರ: ಸ್ವಸಹಾಯ ಸಂಘಗಳ ಸದಸ್ಯರು ನಿಯಮಾನುಸಾರ ಸಂಘದ ವ್ಯವಹಾರ ನಿರ್ವಹಿಸಬೇಕು ಎಂದು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆ ಜಿಲ್ಲಾ ಘಟಕದ ಮಿಷನ್ ವ್ಯವಸ್ಥಾಪಕ ಗೋವಿಂದ ಮೂರ್ತಿ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸ್ವಸಹಾಯ ಸಂಘ ಮತ್ತು ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯರಿಗೆ ಏರ್ಪಡಿಸಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಹಕಾರ ಸಂಘ ಸದಸ್ಯರು ಸರ್ಕಾರದ ಸೌಲಭ್ಯ ಪಡೆದು ಜೀವನೋಪಾಯ ಕಂಡುಕೊಳ್ಳುವ ನಿಟ್ಟಿನಲ್ಲಿ ಸಾಂಘಿಕ ಪ್ರಯತ್ನ ನಡೆಸಬೇಕು. ಆ […]

Read More

ಶ್ರೀನಿವಾಸಪುರ: ಮಾನವೀಯ ಮೌಲ್ಯ ಬಿತ್ತುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಶಿಕ್ಷಣ ತಜ್ಞ ಕೋಡಿ ರಂಗಪ್ಪ ಹೇಳಿದರು.ಪಟ್ಟಣದ ಭೈರವೇಶ್ವರ ವಿದ್ಯಾನಿಕೇತನದ ಸಭಾಂಗಣದಲ್ಲಿ ಕೋಲಾರದ ಕೃಷಿ ಸಂಸ್ಕøತಿ ಕೇಂದ್ರದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ‘ಮರೆತ ದಾರಿಗಳ ಹರಿಕಾರ ಶ್ರೀರಾಮರೆಡ್ಡಿ’ ಕೃತಿ ಬಿಡುಗಡೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಣ ತಜ್ಞ ಎಂ.ಶ್ರೀರಾಮರೆಡ್ಡಿ ಮರೆತ ಮಾನವೀಯ ಪರಂಪರೆಗೆ ಜೀವ ಕೊಟ್ಟ ಚೈತನ್ಯ ಶೀಲ ವ್ಯಕ್ತಿ. ಮಕ್ಕಳಿಗೆ ಅಕ್ಷರದ ಜತೆಗೆ ಆಲೋಚನೆ ಕಲಿಸಿದ […]

Read More

ಶ್ರೀನಿವಾಸಪುರ, ಜೂ.22ಸರ್ಕಾರಿ ಆಸ್ಪತ್ರೆ ಮತ್ತು ಸರ್ಕಾರಿ ವೈದ್ಯರ ಬಗ್ಗೆ ಸಾರ್ವಜನಿಕರಲ್ಲಿರುವ ಅಸಡ್ಡೆ ಮನೋಭಾವ ದೂರವಾಗಬೇಕು, ವೈದ್ಯಕೀಯ ವೆಚ್ಚ ದುಬಾರಿಯಾಗಿರುವುದರಿಂದ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾವೆ ಆದ್ದರಿಂದ ಯಾವುದೇ ರೀತಿಯ ಖಾಯಿಲೆಗಳಿದ್ದರೂ ಸರ್ಕಾರಿ ಆಸ್ಪತ್ರೆಗಳಲ್ಲಿ ನುರಿತ ವೈದ್ಯರು ಇದ್ದಾರೆ. ಅಂತಹ ಕಡೆ ವೈದ್ಯಕೀಯ ಸೇವೆ ಪಡೆದರೆ ಉತ್ತಮ ಎಂದು ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಸೋಮಯಾಜಲಹಳ್ಳಿ ರಮೇಶ್‍ಬಾಬು ಅಭಿಪ್ರಾಯಪಟ್ಟರು.ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಾದ ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯ ನಿರ್ದೇಶಕರಾದ ನಿರಂಜನಗೌಡ ಮತ್ತು ಸಂಸ್ಥೆಯ ಪ್ರಾದ್ಯಾಪಕ ಹಾಗೂ […]

Read More

ಕೋಲಾರ:- ಮಾನಸಿಕ, ದೈಹಿಕ ಆರೋಗ್ಯ ಉತ್ತಮಗೊಳ್ಳುವ ಮೂಲಕ ಸದಾ ಕಲಿಕೆಯಲ್ಲಿ ಕ್ರಿಯಾಶೀಲತೆಗೆ ಯೋಗ ಸಹಕಾರಿ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್ ಕುಮಾರ್ ತಿಳಿಸಿದರು.ಶಾಲೆಯ ಆವರಣದಲ್ಲಿ ವಿಶ್ವಯೋಗದಿನದ ಅಂಗವಾಗಿ ಮಕ್ಕಳಿಂದ ನಡೆದ ಯೋಗ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿಗಳು ನಿರಂತರವಾಗಿ ಯೋಗಾಭ್ಯಾಸ ಮಾಡಿ, ಇತರರಿಗೂ ತಿಳಿಸಿಕೊಡಿ, ನಿಮ್ಮ ಕಲಿಕೆಯಲ್ಲಿ ಸದಾ ಕ್ರಿಯಾಶೀಲತೆ ತುಂಬಲು ಯೋಗ ಸಹಕಾರಿ ಎಂಬುದನ್ನು ಮರೆಯದಿರಿ ಎಂದು ಕಿವಿಮಾತು ಹೇಳಿದರು.ಯೋಗ ಜಾತ್ಯಾತೀತವಾದುದು, ಇದಕ್ಕೆ ಪಕ್ಷ,ಜಾತಿ,ವಯಸ್ಸು, ಲಿಂಗ […]

Read More

ಕೋಲಾರ:- ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಜಿಲ್ಲಾಡಳಿತಕ್ಕೆ ನೌಕರರು ಸಹಕಾರ ನೀಡುವ ಮೂಲಕ ಸರ್ಕಾರದ ಯೋಜನೆಗಳನ್ನು ಜನತೆಗೆ ತಲುಪಿಸುವ ಕೆಲಸವನ್ನು ಜತೆಯಾಗಿ ನಿರ್ವಹಿಸೋಣ, ಜನತೆಗೆ ನ್ಯಾಯ ಒದಗಿಸೋಣ ಎಂದು ನೂತನ ಜಿಲ್ಲಾಧಿಕಾರಿ ಅಕ್ರಂ ಪಾಷಾ ಕರೆ ನೀಡಿದರು.ನಗರದ ಜಿಲ್ಲಾಡಳಿತದ ಭವನದಲ್ಲಿ ಕೋಲಾರದ ನೂತನ ಜಿಲ್ಲಾಧಿಕಾರಿಯಾಗಿ ಇಂದು ಅಧಿಕಾರ ವಹಿಸಿಕೊಂಡ ಅಕ್ರಂ ಪಾಷಾ ಅವರನ್ನು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‍ಬಾಬು ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಸನ್ಮಾನಿಸಿದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.ಸರ್ಕಾರ ಹಾಗೂ ಜನತೆಯ ನಡುವೆ ಸೇತುವೆಯಾಗಿ ಸರ್ಕಾರಿ ನೌಕರರು […]

Read More

ಕೋಲಾರ,ಜೂ.21: ಇಂಡಿಯನ್ ಯೂನಿಯನ್ ಮುಸ್ಲೀಮ್ ಲೀಗ್ ವತಿಯಿಂದ ಕೋಲಾರದ ನೂತನ ಜಿಲ್ಲಾಧಿಕಾರಿಗಳಾದ ಅಕ್ರಂಪಾಶ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.ಇದೇ ಸಂದರ್ಭದಲ್ಲಿ ನಗರದಲ್ಲಿರುವ ರಸ್ತೆಗಳ ಸಮಸ್ಯೆ, ಯು.ಜಿ.ಡಿ, ಕಸ ವಿಲೇವಾರಿ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ವಹಿಸಿ ಸಾರ್ವಜನಿಕರಿಗೆ ಅನಕೂಲ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದರು.ನಿಯೋಗದಲ್ಲಿ ಇಂಡಿಯನ್ ಯೂನಿಯನ್ ಮುಸ್ಲೀಮ್ ಲೀಗ್ ಜಿಲ್ಲಾಧ್ಯಕ್ಷ ಶೇಖ್ ಆಶ್ರಫ್‍ಆಲಿ, ಜಿಲ್ಲಾ ಕಾರ್ಯದರ್ಶಿ ಸೈಯದ್ ಸಿಬ್ಗತ್‍ವುಲ್ಲಾ, ವಜೀರ್‍ಪಾಷ, ಇಮ್ರಾನ್‍ಪಾಷ, ಸೈಯದ್ ನೂರ್ ಇನ್ನಿತರರು ಉಪಸ್ಥಿತರಿದ್ದರು.

Read More

ಶ್ರೀನಿವಾಸಪುರ: ನಗರ ಪ್ರದೇಶದಲ್ಲಿ ಯೋಗ ಶಿಕ್ಷಣ ಆದ್ಯತೆ ವಿಷಯವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಯೋಗಾಭ್ಯಾಸದಿಂದ ದೊರೆಯುವ ಪ್ರಯೋಜನ ಕುರಿತು ಪ್ರಚಾರ ಮಾಡಬೇಕಾದ ಅಗತ್ಯವಿದೆ ಎಂದು ತಾಲ್ಲೂಕು ಎಲ್‍ಐಸಿ ವ್ಯವಸ್ಥಾಪಕ ಎಸ್.ವಿ.ಪ್ರಸಾದ್ ಹೇಳಿದರು.ಪಟ್ಟಣದಲ್ಲಿ ಎಲ್‍ಐಸಿ ಸಿಬ್ಬಂದಿ ವತಿಯಿಂದ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಯೋಗ ಪ್ರಚಾರ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.ಇಂದು ವಿಶ್ವ ಅಡ್ಡ ಪರಿಣಾಮ ಇಲ್ಲದ ಆರೋಗ್ಯ ರಕ್ಷಣೆಗಾಗಿ ಭಾರತದ ಕಡೆ ನೋಡುತ್ತಿದೆ. ಯೋಗ […]

Read More

ಶ್ರೀನಿವಾಸಪುರ: ಪಟ್ಟಣದ ಭೈರವೇಶ್ವರ ವಿದ್ಯಾನಿಕೇತನದ ಸಭಾಂಗಣದಲ್ಲಿ ಜೂ.23 ರಂದು ಬೆಳಿಗ್ಗೆ 11 ಗಂಟೆಗೆ ಮರೆತ ದಾರಿಗಳ ಹರಿಕಾರ ಶ್ರೀರಾಮರೆಡ್ಡಿ ಕೃತಿ ಬಿಡುಗಡೆ ಹಾಗೂ ಭವಿಷ್ಯದ ಮಕ್ಕಳ ರಂಗಭೂಮಿ, ಸವಾಲುಗಳು, ಸಾಧ್ಯತೆಗಳು ಎಂಬ ವಿಷಯ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ನಾಟಕಕಾರ ಕೋಟಿಗಾನಹಳ್ಳಿ ರಾಮಯ್ಯ ಹೇಳಿದರು.ಪಟ್ಟಣದ ಭೈರವೇಶ್ವರ ವಿದ್ಯಾನಿಕೇತನದಲ್ಲಿ ಕೋಲಾರದ ಕೃಷಿ ಸಂಸ್ಕøತಿ ಕೇಂದ್ರದ ವತಿಯಿಂದ ಬುಧವಾರ ಏರ್ಪಡಿಸಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಸಕ […]

Read More