
ಶ್ರೀನಿವಾಸಪುರ-ಏ-12, ಪ್ರಭಾವಿ ಮುಖಂಡರಿಂದ ಒತ್ತುವರಿಯಾಗಿರುವ ಪಣಸಮಾಕನಹಳ್ಳಿ ಕೆರೆಯನ್ನು ಸರ್ವೆ ಮಾಡಿಸಿ ಒತ್ತುವರಿ ತೆರವುಗೊಳಿಸಿ ಅಭಿವೃದ್ದಿಗೊಳಿಸಬೇಕೆಂದು ರೈತ ಸಂಘದಿಂದ ಉಪ ತಹಸೀಲ್ದಾರ್ ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ರಾಯಲ್ಪಾಡು 1 : ಸಮೀಪದ ಕೆ.ಗೊಲ್ಲಪಲ್ಲಿ ಬೆಟ್ಟಗುಡ್ಡಗಳಲ್ಲಿ ಭಾನುವಾರ ಚಿರತೆ ಮತ್ತು ಚಿರತೆ ಮರಿಯು ಕಾಣಿಸಿರುವ ಬಗ್ಗೆ ಸ್ಥಳಿಯ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ . ಸೋಮವಾರ ಅರಣ್ಯ ಇಲಾಖೆಯ ಉಪವಲಯ ಅರಣ್ಯ ಅಧಿಕಾರಿ ಶ್ರೀನಾಥ್ ಪತ್ರಿಕೆಯೊಂದಿಗೆ ಮಾತನಾಡಿ ಭಾನುವಾರ ಗ್ರಾಮಸ್ಥರು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬೇಟಿ ನೀಡಲಾಗಿದ್ದು, ಇದುವೆರಗೂ ನಮಗೆ ಅದರ ಚಲವಲನಗಳ ಬಗ್ಗೆ ಮಾಹಿತಿ ಲಭ್ಯವಾಗುತಿಲ್ಲ ಎಂದರು.ಕೆ.ಗೊಲ್ಲಪಲ್ಲಿ ಗ್ರಾಮದ ಬೆಟ್ಟಗುಡ್ಡಗಳು ನೆರೆಯ ಆಂದ್ರಕ್ಕೆ ಹೊಂದಿಕೊಂಡಿದ್ದು, ಸ್ಥಳೀಯರ ಮಾತಿನಂತೆ ನಾವು ಇದೇ […]

ಶ್ರೀನಿವಾಸಪುರ 1 : ನಮ್ಮ ಮತವು ನಮ್ಮ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಮತದಾನದ ಬಗ್ಗೆ ನಿರ್ಲಕ್ಷ್ಯತೆ ತೊರದೆ ಎಲ್ಲರೂ ಕಡ್ಡಾಯ ಮತದಾನ ಮಾಡಿ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿ.ಕೃಷ್ಣಪ್ಪ ಹೇಳಿದರು.ತಾಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಮಂಗಳವಾರ ನಡೆದ ವನಿತಾ ವೈಭವ ಕಾರ್ಯಕ್ರಮದ ಅಂಗವಾಗಿ ನಡೆದ ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಕೇಂದ್ರ ಚುನಾವಣಾ ಆಯೋಗವು ಮತದಾನ ಪ್ರಮಾಣ ಹೆಚ್ಚಿಸಲು ಸಾಕಷ್ಟು ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ, ಈ ಬಾರಿ 80 ವರ್ಷಕಿಂತ ಹೆಚ್ಚಿನ ವಯೋವೃದ್ಧರು ಮತಗಟ್ಟೆಗೆ ಬಂದು […]

ಶ್ರೀನಿವಾಸಪುರ: ಫೆಬ್ರವರಿ ಮಾಹೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಕಂಪ್ಯೂಟರ್ OFFICE AUTOMATION ಪರೀಕ್ಷೆಗಳಲ್ಲಿ ಪಟ್ಟಣದ ಕರ್ನಾಟಕ ವಾಣಿಜ್ಯ ಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ (KIIT) 17 ಡಿಸ್ಟಿಂಗ್ಷನ್ಸ್ ನೊಂದಿಗೆ (DISTINCTIONS) ಶೇಕಡ100ರಷ್ಟು ಫಲಿತಾಂಶ ದೊರೆತಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ.ಪಟ್ಟಣದ ಎಂ.ಜಿ.ರಸ್ತೆಯಲ್ಲಿರುವ ಕರ್ನಾಟಕ ವಾಣಿಜ್ಯ ಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ (KIIT) ಕಳೆದ ಆಗಸ್ಟ್ ಮಾಹೆಯಲ್ಲಿರಾಜ್ಯ ಮಟ್ಟದಲ್ಲಿ ಕರ್ನಾಟಕ ಪ್ರೌಡಶಿಕ್ಷಣ ಪರೀಕ್ಷ ಮಂಡಳಿಯು ನಡೆಸಿದ ಕಂಪ್ಯೂಟರ್ OFFICE AUTOMATION ಪರೀಕ್ಷೆಗೆ […]

ಶ್ರೀನಿವಾಸಪುರ: ತಾಲ್ಲೂಕಿನ ಆವಲಕುಪ್ಪ ಗ್ರಾಮದ ಸಮೀಪ ಭಾನುವಾರ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರೂ.1.70 ಲಕ್ಷ ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡು, ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.ವಲಯ ಅಬಕಾರಿ ಇನ್ಸ್ಪೆಕ್ಟರ್ ಬಿ.ಎಸ್.ರೋಹಿತ್ ಮತ್ತು ಸಿಬ್ಬಂದಿ ಚುನಾವಣೆ ಪ್ರಯುಕ್ತ ಗಸ್ತು ತಿರುಗುತ್ತಿದ್ದಾಗ, ಅವಲುಕುಪ್ಪ ಗ್ರಾಮದ ಸಮೀಪ 46.8 ಲೀಟರ್ ಬಿಯರ್ ಮತ್ತು 17.28 ಲೀಟರ್ ಮದ್ಯವನ್ನು ಕಾರಿನಲ್ಲಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದುದನ್ನು ಪತ್ತೆಹಚ್ಚಲಾಯಿತು. ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ಶ್ರೀನಿವಾಸಪುರ: ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಮತದಾರರು ಜೆಡಿಎಸ್ ಬೆಂಬಲಿಸಬೇಕು ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಏರ್ಪಡಿಸಿದ್ದ ಜೆಡಿಎಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಡಿನ ಅಭಿವೃದ್ಧಿ ಬಗ್ಗೆ ಕೈಗೊಂಡಿರುವ ದೀಕ್ಷೆ ಸಾಕಾರಗೊಳ್ಳಲು, ಮತದಾರರು ಶಕ್ತಿ ತುಂಬಬೇಕು ಎಂದು ಹೇಳಿದರು.ಜೆಡಿಎಸ್ನ ಜಲಧಾರೆ ಯೋಜನೆ ಜಿಲ್ಲೆಗೆ ವರದಾನವಾಗಲಿದೆ. ಈ ಯೋಜನೆಯಡಿ ಜಿಲ್ಲೆಗೆ ಕುಡಿಯಲು ಹಾಗೂ ವ್ಯವಸಾಯಕ್ಕೆ ಯೋಗ್ಯವಾದ ನೀರು ಪೂರೈಸಲಾಗುವುದು. ಪಂಚರತ್ನ ಯೋಜನೆ ಸಮಾಜದ ಎಲ್ಲ […]

ಶ್ರೀನಿವಾಸಪುರ; ಏ.7: ಕಳೆದುಹೋಗಿರುವ ಪಣಸಮಾಕನಹಳ್ಳಿ ಕೆರೆಯನ್ನು ಹುಡುಕಿಕೊಟ್ಟು ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಸರ್ಕಾರಿ ಕೆರೆಯನ್ನು ಉಳಿಸಬೇಕೆಂದು ಏ.12ರ ಬುಧವಾರ ತಾಲೂಕು ಕಚೇರಿ ಮುತ್ತಿಗೆ ಹಾಕಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ಪ್ರವಾಸಿ ಮಂದಿರದಲ್ಲಿ ಕರೆದಿದ್ದ ರೈತಸಂಘದ ಸಭೆಯಲ್ಲಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ನಗರಕ್ಕೆ ಕೂಗಳತೆ ದೂರದಲ್ಲಿರುವ ಮಳೆ ನೀರು ಸಂಗ್ರಹವಾಗುವ ಸರ್ಕಾರಿ ಕೆರೆ ಸರ್ವೇ ನಂ.72ರಲ್ಲಿ 15 ಎಕರೆ 24 ಗುಂಟೆ ಕೆರೆ ಜಮೀನನ್ನು ಕಂದಾಯ ಹಾಗೂ ಸರ್ವೇ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂದು ಕೋಟ್ಯಾಂತರ […]

ಮುಳಬಾಗಿಲು, ಏ.06: ಎಂ.ಎಸ್.ಪಿ.ಸಿ (ಅಂಗನವಾಡಿ ಕೇಂದ್ರಗಳಿಗೆ) ಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪಧಾರ್ಥಗಳನ್ನು ಸರಬರಾಜು ಮಾಡುವ ಕಿಸಾನ್ ಟ್ರೇಡರ್ಸ್ ಟೆಂಡರ್ ಪರವಾನಗಿ ರದ್ದು ಮಾಡಿ ಅಂಗನವಾಡಿ ಹಾಜರಾತಿ ಪರೀಶೀಲನೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ಏ.11 ರಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಕಳಪೆ ಆಹಾರ ಸಮೇತ ಪ್ರತಿಭಟನೆ ಮಾಡಲು ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.ಅಂಗನವಾಡಿ ಮಕ್ಕಳ ಹಾಗೂ ಗರ್ಭಿಣಿ ಸ್ತ್ರೀಯರ ಅಪೌಷ್ಠಿಕತೆ ಸಮಸ್ಯೆ ಹೋಗಲಾಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾg ನಿಡುವ ಅನುದಾನದಲ್ಲಿ ವಿತರಣೆ ಮಾಡುವ […]

ಕೋಲಾರ : ಸಾರ್ವತ್ರಿಕ ಚುನಾವಣೆ -2023 ಸಂಬಂಧವಾಗಿ ನೀತಿ ಸಂಹಿತೆ ಜಾರಿಯಾಗಿದ್ದು , ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ನಗದು ಅಕ್ರಮಗಳು ನಡೆಯದಂತೆ ಕಡಿವಾಣ ಹಾಕಲು ಬ್ಯಾಂಕ್ಗಳವರು ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಮನವಿ ಮಾಡಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಬ್ಯಾಂಕ್ ನೌಕರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ನೀತಿ ಸಂಹಿತೆ ಜಾರಿಯಾಗಿರುವುದರಿಂದ ಎಲ್ಲ ತರಹದ ಖಾತೆಗಳಲ್ಲಿ ನಗದು ವ್ಯವಹಾರದ ಮೇಲೆ ನಿಗಾ ಇಡಬೇಕಾಗುತ್ತದೆ.ಸಾರ್ವಜನಿಕರೂ ಇದಕ್ಕೆ ಸಹಕರಿಸಬೇಕು. […]