ಶ್ರೀನಿವಾಸಪುರ: ಪ್ರತಿಯೊಬರೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೌರವಿಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಮಾರಂಭದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.ಪ್ರಪಂಚದಲ್ಲಿ ಪ್ರಜಾಪ್ರಭುತ್ವ ಮಾದರಿ ಸರ್ಕಾರ ಜನಪ್ರಿಯವಾಗಿದೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ ಹಾಗೂ ಪ್ರಜೆಗಳಿಗೋಸ್ಕರ ನಡೆಸುವ ಸರ್ಕಾರವನ್ನು ಪ್ರಜಾಪ್ರಭುತ್ವ ಸರ್ಕಾರ ಎಂದು ಕರೆಯುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಇಲ್ಲಿ ತಮ್ಮ ಪ್ರತಿನಿಧಿಗಳನ್ನು ಚುನಾವಣೆ ಮೂಲಕ […]
ಶ್ರೀನಿವಾಸಪುರ : ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಟ್ಟದ ಕ್ರೀಡಾಕೂಟಗಳಲ್ಲಿ ಹೋಬಳಿ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಯೋಗ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಯಗಳಿಸಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಗ್ರಾಮದ ಜೆ ತಿರುಮಲಪ್ಪ ಎಜುಕೇಶನಲ್ ಟ್ರಸ್ಟ್ ನ ಶ್ರೀ ಸಪ್ತಗಿರಿ ವಿದ್ಯಾಲಯದ ಆಕಾಶ್ ಆರ್ ಎಂಬ ವಿದ್ಯಾರ್ಥಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ಬಚ್ಚಿರೆಡ್ಡಿಗಾರಪಲ್ಲಿ ಗ್ರಾಮದ ಆಕಾಶ್ ಆರ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿ […]
ಶ್ರೀನಿವಾಸಪುರ : ಪುರಸಭಾ ಕಚೇರಿಯ ಸಭಾಂಗಣದಲ್ಲಿಂದು ಪರಿಸರಸ್ನೇಹಿ ಗಣೇಶ ಮೂರ್ತಿ ತಯಾರಿಕೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ,ಚಾಲನೆ ನೀಡಿದರು ಕಚೇರಿ ವ್ಯವಸ್ಥಾಪಕರಾದ ಶ್ರೀ ನವೀನ್ ಚಂದ್ರ,ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀ ಕೆ ಜಿ. ರಮೇಶ್,ಕಂದಾಯ ನಿರೀಕ್ಷಕ ಎನ್.ಶಂಕರ್ ಸರ್ಕಾರಿ ಬಾಲಕಿಯರ ಕಾಲೇಜಿನ ಶಿಕ್ಷಕಿ ಶ್ರೀಮತಿ ಮಂಜುಳಾ,ಸ್ವಚ್ಛ ಭಾರತ್ ರಾಯಬಾರಿ ಶ್ರೀಮತಿ ಮಾಯಾ ಬಾಲಚಂದ್ರ,,ನಂದಿನಿ ಅರ್ಜುನ್ ಸೇರಿದಂತೆ ಸರ್ಕಾರಿ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬರಹ : ಶಬೀನಾ. ವೈ.ಕೆ “ಈ ಮಗುವನ್ನು ದೊಂಬರಾಟ ಆಡುವವರಿಗೆ ಕೊಟ್ಟು ಬಿಡಿ” ಎಂದು ಒಬ್ಬ ಮಹಿಳೆ ಹೇಳಿ ಬಿಟ್ಟರು. ಇದರಿಂದ ಕುಪಿತರಾದ ವಿಠ್ಠಪ್ಪ “ಅವಳು ನನ್ನ ಮಗಳು. ಬದುಕಿರುವ ತನಕ ನಾನೇ ಸಾಕುತ್ತೇನೆ” ಎಂದು ಬಂದವರ ಬಾಯಿ ಮುಚ್ಚಿಸಿ ಬಿಟ್ಟರು. ಯಶೋದ ಕುಮಾರಿ ಹುಟ್ಟಿನಿಂದಲೇ ವಿಶೇಷಚೇತನರು. ಅವರ ಎಡಗಾಲು ಸಂಪೂರ್ಣ ರೂಪು ಪಡೆದಿರಲಿಲ್ಲ; ಇದ್ದ ಬಲಗಾಲಿಗೂ ಪೋಲಿಯೋ ಘಾಸಿ ನೀಡಿತ್ತು. ಹುಟ್ಟಿದ ಮಗುವನ್ನು ಜನರು ವೀಕ್ಷಿಸಲೆಂದೇ ಮೂರು ದಿನಗಳ ಕಾಲ ಹೊರಗಡೆ ತೊಟ್ಟಿಲಲ್ಲಿ ಇಟ್ಟಿದ್ದರು. ಆಗ […]
ಶ್ರೀನಿವಾಸಪುರ: ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ವಿಚ್ಛೇದಿತ ಪತ್ನಿ ಹಾಗೂ ಮಾವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ.ರಾಧಾ ಹಾಗೂ ಅವರ ತಂದೆ ಮುನಿಯಪ್ಪ ಕೊಲೆಯಾದವರು. ಶ್ರೀನಿವಾಸಪುರದ ಮಾಂಸದ ವ್ಯಾಪಾರಿ ನಾಗೇಶ್ ಕೊಲೆ ಆರೋಪಿ.ನಾಗೇಶ ತನ್ನ ಮೊದಲ ಪತ್ನಿ ರಾಧಾಗೆ ವಿಚ್ಛೇದನ ನೀಡಿದ್ದ, ನ್ಯಾಯಾಲಯದ ಆದೇಶದಂತೆ ಜೀವನಾಂಶ ನೀಡುತ್ತಿದ್ದ. ಎರಡನೇ ಪತ್ನಿಯೊಂದಿಗೆ ಶ್ರೀನಿವಾಸಪುರದಲ್ಲಿ ವಾಸವಾಗಿದ್ದ. ಮಂಗಳವಾರ ನಂಬಿಹಳ್ಳಿಗೆ ಬಂದ ನಾಗೇಶ, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವಿಚ್ಛೇದಿತ ಪತ್ನಿ ರಾಧಾ ಮತ್ತು ಮಾವನ […]
ಶ್ರೀನಿವಾಸಪುರ: ಮಕ್ಕಳು ಪುಟ್ಟ ಕೃಷ್ಣನನ್ನು ತಮ್ಮ ಗೆಳೆಯನೆಂದು ಬಗೆದು ಖುಷಿ ಪಡುತ್ತಾರೆ ಎಂದು ತಾಲ್ಲೂಕು ಸನ್ಮಾರ್ಗ ಬಳಗದ ಅಧ್ಯಕ್ಷ ಡಿ.ಸತ್ಯಮೂರ್ತಿ ಹೇಳಿದರು.ಪಟ್ಟಣದ ಭಾರತಿ ತೀರ್ಥರ ಸಭಾ ಭವನದಲ್ಲಿ ಶಂಕರ ಸೇವಾ ಸಮಿತಿ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೋಮವಾರ ಏರ್ಪಡಿಸಿದ್ದ ಮಕ್ಕಳ ಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೃಷ್ಣನದು ಮಹಾ ಭಾರತದ ಮಹಾಪಾತ್ರಗಳಲ್ಲಿ ಅತ್ಯಂತ ಮಹತ್ವದ ಪಾತ್ರ ಎಂದು ಹೇಳಿದರು.ಮಹಾ ಕಾವ್ಯಗಳು ಭಾರತೀಯ ಸಂಸ್ಕೃತಿಯ ಪ್ರತೀಕ. ಸನ್ಮಾರ್ಗ ತೋರಿಸುವ ಸಾಧನ. ಆದ್ದರಿಂದ ಪ್ರತಿಯೊಬ್ಬರೂ […]
ಎಲ್ಐಸಿ ಪಾಲಿಸಿ ಮಾಡಿಸುವಲ್ಲಿ ಉತ್ತಮ ಸಾಧನೆ ಮಾಡಿರುವ ಶ್ರೀನಿವಾಸಪುರದ ಪ್ರತಿನಿಧಿ ಎಸ್.ಲಕ್ಷಮಣ ಅವರಿಗೆ ಸೋಮವಾರ, ಜಿಲ್ಲಾ ಎಲ್ಐಸಿ ಶಾಖಾ ವ್ಯವಸ್ಥಾಪಕ ಎನ್.ಆರ್.ಸಿದ್ದೇಶ್ ಪಾರಿತೋಷಕ ನೀಡಿ ಗೌರವಿಸಿದರು. ಶ್ರೀಕಾಂತ್ ಇದ್ದರು.
ಶ್ರೀನಿವಾಸಪುರ ; ಶ್ರೀನಿವಾಸಪುರದ ಪೊಲೀಸ್ ಠಾಣೆಯಲ್ಲಿ ಭಾನುವಾರ ಕರ್ನಾಟಕ ಪ್ರಾಂತ್ಯ ರೈತ ಸಂಘದ ಪದಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಅವರನ್ನು ಭೇಟಿಯಾಗಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲಿಸುವಂತೆ ಮನವಿ ಮಾಡಿದರು.
ಶ್ರೀನಿವಾಸಪುರ: ಸಾಮಾಜಿಕ ನ್ಯಾಯ ಪಡೆಯಲು ಅಕ್ಷರ ಜ್ಞಾನ ಅಗತ್ಯ ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ಬಿಆರ್ಸಿ ಕೇಂದ್ರದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸಾಕ್ಷರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯವಾಗಿ ಹೆಣ್ಣು ಮಕ್ಕಳು ಅಕ್ಷರ ಕಲಿಯಲೇ ಬೇಕು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತು ಅರ್ಥಪೂರ್ಣವಾದುದು ಎಂದು ಹೇಳಿದರು.ಅನಕ್ಷರತೆ ನಿವಾರಣೆಯಲ್ಲಿ ಶಾಲಾ ಶಿಕ್ಷಣ ಪ್ರಮುಖ ಪಾತ್ರ ವಹಿಸಿದೆ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು […]

