
ಕೋಲಾರ :ನಮ್ಮ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಿ.ದೇವರಾಜ್ ಅವರು ತಮ್ಮ ಕರ್ತವ್ಯದ ಜೊತೆಗೆ ಸಾಮಾಜಿಕ ಸೇವೆಗಳಲ್ಲದೆ ಜಿಲ್ಲೆಯ ರೈತರಿಗೆ ಪರ್ಯಾಯ ಬೆಳೆಗಳನ್ನು ಬೆಳೆಯುವ ಮೂಲಕ ಮಾರ್ಗದರ್ಶನ ನೀಡುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪ್ರಶಂಸಿದರು . ಇಂದು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಕರ್ನಾಟಕ ಪ್ರಾದೇಶಿಕ ಕೃಷಿಕ ಸಮಾಜ , ಕೃಷಿ , ತೋಟಗಾರಿಕೆ ಮತ್ತು ಪೊಲೀಸ್ ಇಲಾಖೆ , ಜಿಲ್ಲಾ ಕೃಷಿ ಸಮಾಜ ಮತ್ತು ತೋಟಗಾರಿಕೆ ಮಹಾವಿದ್ಯಾಲಯ […]

ಕೋಲಾರ : – ಭಾರತದ ಅಗಾಧ ಸಾಧನೆಗೆ ಅಂಬೇಡ್ಕರ್ ನೀಡಿದ ಸಂವಿಧಾನವೇ ಕಾರಣವಾಗಿದೆಯೆಂದು ಭಾರತ ಸೇವಾದಳ ಜಿಲ್ಲಾ ಗೌರವಾಧ್ಯಕ್ಷ ಸಿ.ಎಂ.ಆರ್ . ಶ್ರೀನಾಥ್ ಅಭಿಪ್ರಾಯಪಟ್ಟರು . ನಗರದ ಭಾರತ ಸೇವಾದಳ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಅಂಬೇಡ್ಕರ್ರ ೬೬ ನೇ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡುತ್ತಿದ್ದರು . ಸಂವಿಧಾನ ಭಾರತಕ್ಕೆ ಸೀಮಿತವಾಗಿದರೂ , ವಿಶ್ವದ ಹತ್ತು ಹಲವು ರಾಷ್ಟ್ರಗಳ ಅನುಸರಣೆ ಮತ್ತು ಅಳವಡಿಕೆಗೆ ಕಾರಣವಾಗಿದೆಯೆಂದು ವಿವರಿಸಿದರು . ಸಂವಿಧಾನದ ಮಹತ್ವ ಪ್ರತಿಯೊಬ್ಬರ […]

ಶ್ರೀನಿವಾಸಪುರ: ಕೋಲಾರ ಜಿಲ್ಲಾ ಹಾಲು ಒಕ್ಕೂಟ, ಶ್ರೀನಿವಾಸಪುರ ಶಿಬಿರ ಕಚೇರಿಯಲ್ಲಿ ರೂ.5,70,000/- ಗಳ ಮೊತ್ತದ ರಾಸುಗಳ ವಿಮಾ ಪರಿಹಾರ ಚೆಕ್ ಗಳನ್ನು ಕೋಮುಲ್ ನಿರ್ದೇಶಕರು ಎನ್. ಹನುಮೇಶ್ ರವರು ಫಲಾನುಭವಿಗಳಿಗೆ ವಿತರಣೆ ಮಾಡಿದರು, ಕಾರ್ಯಕ್ರಮದಲ್ಲಿ ಮಾತನಾಡಿ ದಿನಾಂಕ.16.11.2022 ರಿಂದ ಹಾಲು ಉತ್ಪಾದಕರಿಗೆ ಹಾಲಿನ ಖರೀದಿ ಧರ ರೂ.2 ಹೆಚ್ಚಿಸಲಾಗಿದ್ದು, ಪುನಃ ದಿನಾಂಕ.01.12.2022 ರಿಂದ ರೂ.2 ಹೆಚ್ಚಿಸಲಾಗಿದ್ದು ಒಕ್ಕೂಟವು ಒಟ್ಟಾರೆ ರೂ 4/- ಹೆಚ್ಚಿಸಲಾಗಿದ್ದು, ಪ್ರಸ್ತುತ 3.5 FAT, 8.5 SNF ಹಾಲಿನ ಗುಣಮಟ್ಟಕ್ಕೆ 31ರೂ ಒಕ್ಕೂಟ ನೀಡುತ್ತಿದ್ದು, […]

ಶ್ರೀನಿವಾಸಪುರ 1 : ನಮ್ಮ ರಾಷ್ಟ್ರದ ಪ್ರಜಾಸತ್ತೆಗೆ ಮೂಲಭೂತ ಅಡಿಪಾಯವಾಗಿರುವ ಭಾರತದ ಸೊಗಸಾದ ಸಂವಿಧಾನವನ್ನು ರಚಿಸಿರುವ ಮಾಹಾ ಪುರಷ ಎಂದು ತಹಶೀಲ್ದಾರ್ ಶರೀನ್ತಾಜ್ ಬಣ್ಣಿಸಿದರು.ತಾಲೂಕು ಆಡಳಿತವತಿಯಿಂದ ಮಂಗಳವಾರ ನಡೆದ ಮಹಾಪರಿನಿರ್ವಾಣ ದಿನಾಚರಣೆಯ ಅಂಗವಾಗಿ ಪಟ್ಟಣದ ತಾಲೂಕು ಕಚೇರಿಯ ಮುಂಭಾಗದ ಆಂಬೇಡ್ಕರ್ರವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.ನಮಗೆ ಸ್ವಾಭಿಮಾನದ ಸ್ವತಂತ್ರ ತಂದು ಕೊಟ್ಟಿರುವ ಡಾ. ಅಂಬೇಡ್ಕರ್ ಅವರಿಗೆ ಕೇವಲ ಪೂಜೆ ಸಲ್ಲಿಸಿದರೆ ಸಾಲದು. ನಾವು ಅವರ ತತ್ವಾದರ್ಶಗಳನ್ನು , ಸಿದ್ಧಾಂತಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಅಂದಾಗ ಮಾತ್ರ […]

ಶ್ರೀನಿವಾಸಪುರ: ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಲೋಕಾಯುಕ್ತ ಎಸ್ಸಿ ಬಿ.ಕೆ.ಉಮೇಶ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗದಲ್ಲಿ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳಿಂದ ಮಂಗಳವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಸಾರ್ವಜನಿಕ ಕುಂದು ಕೊರತೆ ವಿಚಾರಣಾ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಸರ್ಕಾರದ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು. ಸೌಲಭ್ಯ ವಿತರಣೆಯಲ್ಲಿ ತಾರತಮ್ಯ ಮಾಡಬಾರದು ಎಂದು ಹೇಳಿದರು.ಸಾರ್ವಜನಿಕರು ಭ್ರಷ್ಟ ಅಧಿಕಾರಿಗಳ ಭ್ರಷ್ಟಾಚಾರ ಬಯಲು ಮಾಡಬೇಕು. ಯಾವುದೇ ಆಧಿಕಾರಿ ಅಥವಾ ಸರ್ಕಾರಿ ಕಚೇರಿ ಸಿಬ್ಬಂದಿ […]

ಕೋಲಾರ:- ಹನುಮನ ದೇವಾಲಯಗಳ ತವರೂರು ಎಂದೇ ಖ್ಯಾತವಾಗಿರುವ ಕೋಲಾರ ಜಿಲ್ಲೆಯಲ್ಲಿ ಹನುಮದ್ವ್ರತವನ್ನು ಹನುಮಜಯಂತಿಯಾಗಿ ವಿಶಿಷ್ಟ ರೀತಿಯಲ್ಲಿ ಆಚರಿಸುತ್ತಿದ್ದು, ಆಂಜನೇಯನ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ,ಭಜನೆ, ಅನ್ನದಾಸೋಹ ನಡೆದಿದ್ದು, ಭಕ್ತರ ಸಮೂಹವೇ ಹರಿದು ಬಂತು.ಹನುಮಂತನಿಗೂ ಕೋಲಾರಕ್ಕೂ ಇರುವ ಸಂಬಂಧ ಆಶ್ಚರ್ಯ ತರಿಸುವಂತದ್ದು, ಏಕೆಂದರೆ ಜಿಲ್ಲೆಯಲ್ಲಿರುವ ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಹನುಮಂತ ದೇವಾಲಯಗಳನ್ನು ಗಮನಿಸಿದರೆ ಇಂತದ್ದೊಂದು ಅನುಮಾನ ಕಾಡದಿರದು, ಹನುಮದ್ವ್ರತವಾದ ಇಂದು ಜಿಲ್ಲೆಯಲ್ಲಿ ಹನುಮ ಜಯಂತಿಯಾಗಿ ಆಚರಿಸುವುದು ವಾಡಿಕೆಯಾಗಿದೆ.ಹನುಮಜಯಂತಿ ಅಂಗವಾಗಿ ಇಂದು ಎಲ್ಲಾ ಹನುಮ ದೇಗುಲಗಳಲ್ಲೂ ವಿಶೇಷ ಪೂಜೆ, ಹೂವಿನ […]

ಕೋಲಾರ:- ತಮಿಳುನಾಡು ರಾಜ್ಯಕ್ಕೆ ಶೈಕ್ಷಣಿಕ ಪ್ರವಾಸ ಹೊರಟ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರು ಹಾಗೂ ಸಮಾಜ ಸೇವಕರಾದ ಧರ್ಮೇಶ್, ಇಸಿಒ ಬೈರೆಡ್ಡಿ ಮತ್ತಿತರರು ಶುಭ ಹಾರೈಸಿ ತಿಂಡಿ,ತಿನಿಸು,ಹಣ್ಣು ಕೊಡುಗೆಯಾಗಿ ನೀಡಿದರು.ಭಾನುವಾರ ಮಧ್ಯರಾತ್ರಿ ಪ್ರವಾಸಕ್ಕೆ ತೆರಳಿದ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಇಸಿಒ ಬೈರೆಡ್ಡಿ, ಪ್ರವಾಸ ಮಕ್ಕಳ ಶೈಕ್ಷಣಿಕ ಕಲಿಕೆಗೆ ಪೂರಕವಾಗಿರಲಿ, ಪ್ರವಾದಲ್ಲಿ ಮಕ್ಕಳು ಎಚ್ಚರಿಕೆಯಿಂದಿರಿ, ಆರೋಗ್ಯ ರಕ್ಷಣೆಗೆ ಒತ್ತು ನೀಡಿ ಎಂದು ಕಿವಿಮಾತು ಹೇಳಿದರು.ಶಿಕ್ಷಕ ಹಾಗೂ ಕೊಡುಗೈ ದಾನಿ ಸುಗಟೂರು ಧರ್ಮೇಶ್, ಸರ್ಕಾರಿ ಶಾಲಾ ಮಕ್ಕಳಿಗೆ […]

ಶ್ರೀನಿವಾಸಪುರ: ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಡಿ.9 ರಂದು ನಡೆಯಲಿರುವ 12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ತಹಶೀಲ್ದಾರ್ ಶಿರಿನ್ ತಾಜ್ ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಅವರು ಮಾತನಾಡಿ, ಗಡಿ ಭಾಗದಲ್ಲಿ ನಡೆಯುವ ಸಾಹಿತ್ಯ ಸಮ್ಮೇಲನಕ್ಕೆ ತನ್ನದೇ ಆದ ಮಹತ್ವ ಇರುತ್ತದೆ. ಸಾಂಘಿಕ ಪ್ರಯತ್ನದ ಮೂಲಕ ಸಮ್ಮೇಳನ ಯಶಸ್ವಿಗೊಳಿಸಬೇಕು. ಯಶಸ್ಸಿನಲ್ಲಿ ಸ್ಥಳೀಯರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರ ಮುಖ್ಯವಾಗುತ್ತದೆ ಎಂದು ಹೇಳಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಬಿ.ಗೋಪಾಲಗೌಡ ಮಾತನಾಡಿ, […]

ಶ್ರೀನಿವಾಸಪುರ: ವಿಶೇಷ ಚೇತನ ಮಕ್ಕಳು ಕೀಳರಿಮೆ ಬಿಟ್ಟು ಸಾಧನೆಯ ಹಾದಿಯಲ್ಲಿ ಸಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆ ಅಂಗವಾಗಿ ಶನಿವಾರ ಏರ್ಪಡಿಸಿದ್ದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಮಾನ್ಯತೆ ಇದೆ. ವಿಶೇಷ ಚೇತನರೂ ಸಹ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.ಈಗ ವಿಶೇಷ ತರಬೇತಿ ಹಾಗೂ ವೈಜ್ಞಾನಿಕ ಉಪಕರಣಗಳ ಮೂಲಕ […]