ಉಡುಪಿ : ಮಣಿಪುರದಲ್ಲಿ ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಾನ ಮನಸ್ಕ ವೇದಿಕೆಯ ನೇತೃತ್ವದಲ್ಲಿ ಅಗಸ್ಟ್ 2ರಂದು ಉಡುಪಿಯಲ್ಲಿ ನಡೆಯುವ ಕಾಲ್ನಾಡಿಗೆ ಜಾತ ಹಾಗೂ ಪ್ರತಿಭಟನಾ ಸಭೆಯನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ಕ್ರೈಸ್ತ ಸಂಘಗಳ ಅಂತರಾಷ್ಟ್ರೀಯ ಒಕ್ಕೂಟ (ಇಫ್ಕಾ) ಇದರ ಉಡುಪಿ ಜಿಲ್ಲಾ ಗೌರವಾಧ್ಯಕ್ಷ ಲೂವೀಸ್ ಲೋಬೊ ಕಲ್ಮಾಡಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಜಿಲ್ಲೆಯ ಪ್ರಮುಖ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ನಡೆಯುವ ಪ್ರತಿಭಟನಾ ಸಭೆ ಹಾಗೂ ಪ್ರತಿಭಟನಾ ಜಾತವು ಶೋಕಮಾತ ದೇವಾಲಯ ಉಡುಪಿ […]
ಶ್ರೀನಿವಾಸಪುರ: ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ವಿದ್ಯಾರ್ಥಿ ಕೆ.ರಾಕೇಶ್ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಚಲ್ದಿಗಾನಹಳ್ಳಿಯಿಂದ ಶ್ರೀನಿವಾಸಪುರದ ತಾಲ್ಲೂಕು ಕಚೇರಿಗೆ ಕಾಲ್ನಡಿಗೆ ಜಾಥಾ ಏರ್ಪಡಿಸಲಾಗಿತ್ತು.ನಾಟಕಕಾರ ಕೋಟಿಗಾನಹಳ್ಳಿ ರಾಮಯ್ಯ ಮಾತನಾಡಿ, ಸರ್ಕಾರ ಮತ್ತು ಸಮಾಜ ದಲಿತರ ಭಾವನೆಗಳಿಗೆ ಸ್ಪಂದಿಸುತ್ತಿಲ್ಲ. ಪ್ರತಿಭಾವಂತ ವಿದ್ಯಾರ್ಥಿ ರಾಕೇಶ್ ಕ್ಷುಲ್ಲಕ ಕಾರಣಕ್ಕೆ ಕೊಲೆಯಾಗಿದ್ದರೂ ಗಂಭೀರವಾಗಿ ಪರಿಗಣಿಸಿಲ್ಲ. ಇಂಥ ಪರಿಸ್ಥಿತಿಯಲ್ಲಿ ದಲಿತ ಸಮುದಾಯ ಪ್ರತಿಭಟನೆ ಹಾದಿ ಹಿಡಿಯದೆ ವಿಧಿಯಿಲ್ಲ ಎಂದು ಹೇಳಿದರು.ಯಾವುದೇ ಚಳವಳಿಯಲ್ಲಿ ಬರಹಗಾರರು ಹಾಗೂ ಕಲಾವಿದರು ಮುಂಚೂಣಿಯಲ್ಲಿರಬೇಕು. ಆದರೆ ಈಗ […]
ಬೆಂಗಳೂರು : ನ್ಯಾಯಾಲಯಗಳಲ್ಲಿ ವಿಕಲಚೇತನರಿಗೆ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ನ್ಯಾಯದ ಸುಲಭಲಭ್ಯತೆಯನ್ನು ಖಾತರಿ ಪಡಿಸಬೇಕಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಎ. ಬೋಪಣ್ಣ ಕರೆ ನೀಡಿದರು. ಅವರು ಬೆಂಗಳೂರಿನ ರಾಮಯ್ಯ ಕಾನೂನು ಕಾಲೇಜಿನಲ್ಲಿ ಶನಿವಾರ ನಡೆದ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ‘ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ(ಎಪಿಡಿ)’ ಸಂಸ್ಥೆ ರಾಮಯ್ಯ ಕಾನೂನು ಕಾಲೇಜಿನ ಸಹಕಾರದೊಂದಿಗೆ ಸ್ಥಾಪಿಸಿದ ‘ನೂತನ ಡಿಸೆಬಿಲಿಟಿ ಲಾ ಸೆಂಟರ್’ ಅನ್ನು ಉದ್ಘಾಟಿಸಿ ಮಾತನಾಡಿದರು. ತಮ್ಮ ವಿಕಲಚೇತನ ಸ್ಥಿತಿಯಿಂದಾಗಿ ಅವಕಾಶ ವಂಚಿತರು ಮತ್ತು […]
ಕೋಲಾರ:- ನಗರದ ಹೊರವಲಯದ ಶ್ರೀ ದೇವರಾಜ್ ಅರಸು ಕಾಲೇಜ್ ಆಫ್ ನರ್ಸಿಂಗ್ ನೈತಿಕ ಸಮಿತಿ ಸಭೆಯು ಶುಕ್ರವಾರ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ನರ್ಸಿಂಗ್ ಕಾಲೇಜಿನ ಬೋಧಕ ಸಿಬ್ಬಂದಿ, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ನರ್ಸಿಂಗ್ ಪದವಿ ವಿದ್ಯಾರ್ಥಿಗಳು ವಿವಿಧ ವಿಚಾರಗಳಲ್ಲಿ ಸಂಶೋಧನೆ ನಡೆಸಿದ್ದ 18 ಸಂಶೋಧನಾ ವರದಿಗಳನ್ನು ಪರಿಶೀಲಿಸಿ ಅನುಮೋದಿಸಲಾಯಿತು.ಎಲ್ಲಾ ಸಂಶೋಧನಾ ವರದಿಗಳು ನೈತಿಕ ಮೌಲ್ಯಗಳನ್ನು ಒಳಗೊಂಡಂತೆ, ಉತ್ತಮ ಗುಣಮಟ್ಟ ಹಾಗೂ ಸಾರ್ವಜನಿಕರಿಗೆ ಉಪಯೋಗಕಾರಿಯಾಗುವಂತದ್ದೆಂದು ಸಮಿತಿಯ ಸದಸ್ಯರುಗಳು ಅಭಿಪ್ರಾಯಪಟ್ಟರು.ಸಂಶೋಧನಾ ವರದಿಗಳನ್ನು ಮತ್ತಷ್ಟು ಉತ್ತಮಗೊಳಿಸುವ ವಿಚಾರದಲ್ಲಿ ಸಮಿತಿಯ ಸದಸ್ಯರು […]
ಶ್ರೀನಿವಾಸಪುರ : ಇತ್ತೀಚಿನ ದಿನಗಳಲ್ಲಿ ಪುರಷ ಕ್ರೀಡಾಪಟುಗಳಿಗಿಂತ, ಮಹಿಳಾ ಕ್ರೀಡಾಪಟುಗಳು ಕ್ರೀಡೆಗಳಲ್ಲಿ ಹೆಚ್ಚು ಆಸಕ್ತಿ ಇದ್ದು, ಅದರಂತೆ ವಿಶ್ವ ಕ್ರೀಡೆಗಳಲ್ಲಿ ದೇಶದ ಹೆಗ್ಗಲಿಕೆ ಕಾರಣರಾಗುತ್ತಿದ್ದಾರೆ ಎಂದು ದಾನಿ ಯಡಗಾನಪಲ್ಲಿ ವೈ.ಬಿ.ರವಿ ಹೇಳಿದರು.ತಾಲೂಕಿನ ರಾಯಲ್ಪಾಡು ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ಹಮ್ಮಿಕೊಳ್ಳಲಾದ ಹೋಬಳಿ ಮಟ್ಟದ ಕ್ರೀಡಾಕೂಟಗಳಲ್ಲಿನ ಮಹಿಳಾ ವಿಭಾಗದ ಕ್ರೀಡಾಕೂಟಗಳಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.ಗ್ರಾಮೀಣ ಭಾಗದಲ್ಲಿನ ವಿದ್ಯಾರ್ಥಿನೀಯರು ಒಳ್ಳೇಯ ಚಾಕುಚಕೈತೆ ಇರುವಂತಹ ಪ್ರತಿಭೆ ಇರುವಂತಹ ವಿದ್ಯಾರ್ಥಿನೀಯರಿದ್ದು, ಅಂತಹ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ , ಮಾರ್ಗದರ್ಶನವನ್ನು ನೀಡಿದಾಗ ತಾಲೂಕು, ಜಿಲ್ಲಾ, ರಾಜ್ಯ, […]
ಶ್ರೀನಿವಾಸಪುರ 2 : ಆಟ-ಪಾಠಗಳು ಒಂದೇ ನಾಣ್ಯದ ಎರಡು ಮುಖಗಳಂತೆ . ಕ್ರೀಡೆಗಳಿಂದ ಸದೃಡವಾದ ಮನಸ್ಸುನೊಂದಿಗೆ ಸದೃಡವಾದ ದೇಹವಾಗಲು ಸಾಧ್ಯ ಎಂದು ಗ್ರಾ.ಪಂ. ಅಧ್ಯಕ್ಷೆ ಅರುಣವೆಂಕಟ್ ಹೇಳಿದರು.ಗ್ರಾಮದ ಸರ್ಕಾರಿ ಪ್ರೌಡಶಾಲೆಯ ಆವರಣದಲ್ಲಿ ಶುಕ್ರವಾರ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿನ ದೇಶೀಯ ಆಟಗಳಿಗೆ ಚಾಲನೆ ನೀಡಿ ಮಾತನಾಡಿದರು.ಸ್ನೇಹ, ಸೌಹಾರ್ದವನ್ನು ಬೆಸೆಯುವ ಸೇತುವೆ ಕ್ರೀಡೆ ಇದನ್ನು ಅರಿತು ಎಲ್ಲರೂ ಸಂಘಟಿತರಾಗಿ ಕ್ರೀಡೆಯಲ್ಲಿ ಪಾಲ್ಗುಂಡು , ಸೋಲು-ಗೆಲವನ್ನು ಸಮವಾಗಿ ಸ್ವೀಕರಿಸಿ ಎಲ್ಲರು ಒಗ್ಗಟಿನಿಂದ ಆಟವಾಡಬೇಕೆಂದರು.ಮುಖಂಡರಾದ ಸಿ.ಎಸ್.ವೆಂಕಟರಮಣಪ್ಪ ಮಾತನಾಡಿ ಯಾಂತ್ರೀಕೃತ ಜೀವನದಿಂದ ಪ್ರಸ್ತುತದ ದಿನಗಳಲ್ಲಿ […]
ಶೀನಿವಾಸಪುರ: ದಲಿತ ಸಂಘಟನೆಗಳು ಪ್ರತಿರೋಧ ಶಕ್ತಿಯನ್ನು ಗಟ್ಟಿಗೊಳಿಸಬೇಕು ನಾಟಕಕಾರ ಕೋಟಿಗಾನಹಳ್ಳಿ ರಾಮಯ್ಯ ಹೇಳಿದರು.ಈಚೆಗೆ ಕೊಲೆಯಾದ ಚಲ್ದಿಗಾನಹಳ್ಳಿ ಗ್ರಾಮದ ವಿದ್ಯಾರ್ಥಿ ಕೆ.ರಾಕೇಶ್ ಕೊಲೆ ಪ್ರಕರಣದ ಬಗ್ಗೆ ಚರ್ಚಿಸಲು, ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಪ್ರಗತಿಪರ ಸಂಘಟನೆಗಳ ಸಮನ್ವಯ ಒಕ್ಕೂಟದ ಮುಖಂಡರ ಸಭೆಯಲ್ಲಿ ಮಾತನಾಡಿದರು.ಮುಖಂಡರಲ್ಲಿ ನಾಯಕತ್ವದ ಪ್ರಜ್ಞೆ ಸಾಯುತ್ತಿದೆ. ಆದ್ದರಿಂದಲೇ ಸಂಘಟನೆಯಲ್ಲಿ ಬಿರುಕು ಕಾಣಿಸಿಕೊಳ್ಳುತ್ತಿದೆ. ಚೆಲ್ಲಿದ ರಕ್ತಕ್ಕೆ ನ್ಯಾಯ ಸಿಗುತ್ತಿಲ್ಲ. ನ್ಯಾಯ ಸಿಗದಿದ್ದಾಗ ಪಡೆದುಕೊಳ್ಳಬೇಕು. ಅದಕ್ಕೆ ಸಾಂಘಿಕ ಪ್ರಯತ್ನದ ಅಗತ್ಯವಿದೆ. ಪಾರಂಪರಿಕ ಹಗೆತನ ಹೆಚ್ಚು ಅಪಾಯಕಾರಿ. ಯಾವುದೇ […]
ಶ್ರೀನಿವಾಸಪುರ: ತಾಲ್ಲೂಕಿನ ಮಾಸ್ತೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆರ್ನಹಳ್ಳಿ ಕ್ಷೇತ್ರದಿಂದ ಒಂದು ಸದಸ್ಯ ಸ್ಥಾನಕ್ಕೆ ಈಚೆಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಟಿ.ವಿ.ಮಂಜುನಾಥ್ ಆಯ್ಕೆಯಾಗಿದ್ದಾರೆ.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಮತ ಎಣಿಕೆ ನಡೆಯಿತು. ಟಿ.ವಿ.ಮಂಜುನಾಥ್ 562 ಮತ ಪಡೆದು ವಿಜೇತರಾಗಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಾಧಾಕೃಷ್ಣ 319 ಮತ ಪಡೆದುಕೊಂಡಿದ್ದಾರೆ.ಮತ ಎಣಿಕೆ ಮುಗಿದ ಮೇಲೆ ತಹಶೀಲ್ದಾರ್ ಶಿರಿನ್ ತಾಜ್ ವಿಜೇತ ಅಭ್ಯರ್ಥಿ ಟಿ.ವಿ.ಮಂಜುನಾಥ್ ಅವರಿಗೆ ಪ್ರಮಾಣ ಪತ್ರ ನೀಡಿದರು. ನಾರಾಯಣಸ್ವಾಮಿ […]
ಶ್ರೀನಿವಾಸಪುರ ತಾಲ್ಲೂಕಿನ ಚೊಕ್ಕನಹಳ್ಳಿ ಗೇಟ್ನಲ್ಲಿ, ರಾಜಗುಂಡ್ಲಹಳ್ಳಿ ಮಾರ್ಗವಾಗಿ ಹೋಗುವ ಕೆಎಸ್ಆರ್ಟಿಸಿ ಬಸ್ ನಿಲ್ಲಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬುಧವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.

