
ಶ್ರೀನಿವಾಸಪುರ: ಇಲ್ಲಿ ಡಾ. ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಶನಿವಾರ ರಾತ್ರಿ ಏರ್ಪಡಿಸಿದ್ದ ರಸಮಂಜರಿ ಕಾರ್ಯಕ್ರಮವನ್ನು ತಹಶೀಲ್ದಾರ್ ಶಿರಿನ್ ತಾಜ್ ಉದ್ಘಾಟಿಸಿದರು.ತುಮಕೂರು ಕಲಾವಿದರು ಹಾಗೂ ಜಿಜಿ ವೇಣ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ರಸಮಂಜರಿ ಕಾರ್ಯಕ್ರಮ ನಡೆಸಿಕೊಟ್ಟರು. ಚಳಿಯನ್ನು ಲೆಕ್ಕಿಸದೆ ಪ್ರೇಕ್ಷಕರು ಕಿಕ್ಕಿರಿದು ತುಂಬಿದ್ದರು. ಪುನೀತ್ ರಾಜ್ ಕುಮಾರ್ ಚಿತ್ರಗಳ ಹಾಡುಗಳು ಹಾಗೂ ಮಿಮಿಕ್ರಿ ಮೂಲಕ ಕಲಾವಿದರು ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿದರು.ಈ ಸಂದರ್ಭದಲ್ಲಿ ಸಾಹಿತಿ, ಕವಿ, ಕಲಾವಿದರು ಹಾಗೂ ಗಣ್ಯ ವ್ಯಕ್ತಿಳನ್ನು ಸನ್ಮಾನಿಸಿ, ನೆನೆಪಿನ […]

ಶ್ರೀನಿವಾಸಪುರ: ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರು ನ.22 ರಂದು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಏರ್ಪಡಿಸಲಾಗಿರುವ ಪಂಚರತ್ನ ರಥಯಾತ್ರೆ ಯಶಸ್ಸಿಗೆ ಸಹಕರಿಸಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ತಾಲ್ಲೂಕು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಂಚರತ್ನ ಯೋಜನೆ ಜೆಡಿಎಸ್ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರಾಜ್ಯದ ಸರ್ವತೋಮುಖ ಪ್ರಗತಿಗೆ ಪೂರಕವಾಗಿದೆ. ಆ ಕುರಿತು ಜನರ ಗಮನ ಸೆಳೆಯುವ ಉದ್ದೇಶದಿಂದ ಪಂಚರತ್ನ ರಥಯಾತ್ರೆ ಕೈಗೊಳ್ಳಲಾಗಿದೆ ಎಂದು ಹೇಳಿದರು.ಶ್ರೀನಿವಾಸಪುರ ವಿಧಾನ […]

ಕೋಲಾರ:- ಸಹಕಾರ ರಂಗದಲ್ಲಿ ಟೀಕೆಗಳು ಸಹಜ ಆದರೆ ನಾವು ಜನರ ಹಣಕ್ಕೆ ಕಾವಲುಗಾರರಂತೆ ಕೆಲಸ ಮಾಡುತ್ತಿದ್ದೇವೆಯೇ ಎಂಬುದರ ಕುರಿತು ಆತ್ಮವಿಮರ್ಶೆ ಮಾಡಿಕೊಳ್ಳುವ ಮೂಲಕ ಸಂಸ್ಥೆ ಕಟ್ಟುವ ಕೆಲಸ ಮಾಡಬೇಕು ಎಂದು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅಭಿಪ್ರಾಯಪಟ್ಟರು.ನಗರದ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಒಕ್ಕೂಟ, ಡಿಸಿಸಿ ಬ್ಯಾಂಕ್,ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ, ಕಾರಂಜಿಕಟ್ಟೆಯ ನರ್ಮದಾ ಮಹಿಳಾ ಪತ್ತಿನ ಸಹಕಾರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ […]

ಶ್ರೀನಿವಾಸಪುರ: ಪ್ರತಿಯೊಬ್ಬರೂ ಡಾ. ಪುನೀತ್ ರಾಜ್ಕುಮಾರ್ ಅವರ ಆದರ್ಶ ಪಾಲಿಸಬೇಕು ಎಂದು ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಜೆ.ಸಿ.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಮೀಪ ಡಾ. ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಶನಿವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಪುನೀತ್ ರಾಜ್ಕುಮಾರ್ ನೆನಪಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವುದು ಸ್ತುತ್ಯಾರ್ಹ ಸಂಗತಿಯಾಗಿದೆ ಎಂದು ಹೇಳಿದರು.ಪುನೀತ್ ರಾಜ್ಕುಮಾರ್ ಅವರ ಸ್ಮರಣಾರ್ಥ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಅನ್ನ ಸಂತರ್ಪಣೆ ಮುಂತಾದ ಸಮಾಜ ಮುಖಿ ಚಟುವಟಿಕೆ ಕೈಗೊಳ್ಳಲಾಗಿದೆ. ಇಂಥ ಸೇವಾ […]

ಶ್ರೀನಿವಾಸಪುರ: ಜನರು ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸದುಪಯೋಗ ಪಡಿಸಿಕೊಳ್ಳಬೇಕುಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ತಾಲ್ಲೂಕಿನ ಪಾತನೆಲವಂಕಿ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಸಾಧ್ಯವಾಗುತ್ತದೆ. ಇನ್ನು ಕೆಲವು ಸಮಸ್ಯೆಗಳನ್ನು ಕಾಲ ಮಿತಿಯಲ್ಲಿ ಪರಿಹರಿಸಲಾಗುವುದು. ಗ್ರಾಮದ ಸ್ಮಶಾನ ಒತ್ತುವರಿ ತೆರವುಗೊಳಿಸಿ, ಶಾಂತಿ ಧಾಮ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವುದು. ಕೆರೆಯಲ್ಲಿ ನೀರು ಮುಗಿದ ಬಳಿಕ ಕೆರೆ ಒತ್ತುವರಿ ತೆರವುಗೊಳಿಸಿ ಕೆರೆ ಅಭಿವೃದ್ಧಿ ಕೈಗೊಳ್ಳಲಾಗುವುದು. ಪಹಣಿ ಜೋಡಣೆಗೆ […]

ಶ್ರೀನಿವಾಸಪುರ: ಶಾಲೆಗೆ ಹೋಗಲು ತೊಂದರೆ ಅನುಭವಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಸಿಂಗನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಹಾಗೂ ದಾನಿ ಎಸ್.ಆರ್.ಧರ್ಮೇಶ್ ಸೈಕಲ್ ಕೊಡಿಸುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ.ಕೊತ್ತನೂರು ಗ್ರಾಮದ ವಿದ್ಯಾರ್ಥಿನಿ ಅನುಶ್ರೀ ದೂರದ ಪ್ರೌಢ ಶಾಲೆಗೆ ಕಾಲ್ನಡಿಗೆಯಲ್ಲೇ ಹೋಗುತ್ತಿದ್ದರು. ಅದನ್ನು ಕಂಡ ದಾನಿ ಧರ್ಮೇಶ್ ತಮ್ಮ ಸಂಬಳದಲ್ಲಿ ಉಳಿಸಿಟ್ಟ ಹಣದಿಂದ ಹೊಸ ಸೈಕಲ್ ಖರೀದಿಸಿ ನೀಡಿದ್ದಾರೆ.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ಎನ್.ಮುನಿಯಪ್ಪ, ಶಿಕ್ಷಕರ ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿನಿ […]

ಶ್ರೀನಿವಾಸಪುರ: ಇಲ್ಲಿ ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಪುರಸಭಾ ಸದಸ್ಯರ ವಿಶೇಷ ಸಭೆ ಏರ್ಪಡಿಸಲಾಗಿತ್ತು.ಸಭೆಯಲ್ಲಿ ಪುರಸಭಾ ಕಚೇರಿ ಸ್ವಚ್ಛತೆ ವಿಭಾಗದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಚಾಲಕರು, ಕಾವರಲುಗಾರರು, ಆಪರೇಟರ್ಗಳು, ಸೂಪರ್ವೈಸರ್ಗಳು, ಜೆಸಿಬಿ, ಸಕ್ಕಿಂಗ್, ಜಟ್ಟಿಂಗ್ ಯಂತ್ರ, ಟ್ರ್ಯಾಕ್ಟರ್, ಆಟೋ ಟಿಪ್ಪರ್ ವಾಹನಗಳ ಕಾರ್ಮಿಕರು ಹಾಗೂ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ನಾಲ್ಕು ಮಂದಿ ಡಾಟಾ ಎಂಟ್ರಿ ಆಪರೇಟರ್ಗಳ ಸೇವೆಯನ್ನು ಡಿ.22 ರಿಂದ ಪೂರ್ವಾನ್ವಯವಾಗುವಂತೆ ಮುಂದುವರಿಸಿ, ಟೆಂಡರ್ ಕರೆಯಲು ಒಪ್ಪಿಗೆ ನೀಡಲಾಯಿತು.ಪಟ್ಟಣದ ಜೆಸಿ ರಸ್ತೆ ವಿಸ್ತರಣೆ ಮಾಡುವ ಸಂದರ್ಭದಲ್ಲಿ ಶಿಥಿಲಗೊಂಡಿರುವ […]

ಶ್ರೀನಿವಾಸಪುರ: ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಕವಿಗಳು, ಕನ್ನಡದ ಕಟ್ಟಾಳು, ಕನ್ನಡ ಭಾಷಾ ಶಿಕ್ಷಕರು, ಸಾಹಿತ್ಯ ಲೋಕದಲ್ಲಿ ಕೃಷಿ ಮಾಡಿದ ಪಾತ ಮುತ್ತಕಪಲ್ಲಿಯ ಎಂ. ಚಲಪತಿಗೌಡರನ್ನು ಸರ್ವಾನುತದಿಂದ ಆಯ್ಕೆಮಾಡಲಾಗಿದೆ ಎಂದು ಕ.ಸ.ಪ. ಜಿಲ್ಲಾಧ್ಯಕ್ಷಗೋಪಾಲ ಗೌಡ ತಿಳಿಸಿದರು.ಪಟ್ಟಣದ ಕರ್ನಾಟಕ ಹಿರಿಯ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಸಮ್ಮೇಳನದ ಪೂರ್ವಬಾವಿ ಸಭೆ ಆಯೋಜಿಸಿ ಸಭೆಯಲ್ಲಿ ಭಾಗವಹಿಸಿದ್ದ ಪರಿಷತ್ತಿನ ಎಲ್ಲ ಪದಾಧಿಕಾರಿಗಳು, ಕರ್ನಾಟಕದ ಅಭಿಮಾನಿಗಳು, ಅಭಿಪ್ರಾಯವನ್ನು ಸಂಗ್ರಹಿಸಿ ಒಮ್ಮತವಾಗಿ ಪಾತ ಮುತ್ತಕಪಲ್ಲಿ ಚಲಪತಿ ಗೌಡರನ್ನು […]

ಬಂಗಾರಪೇಟೆ-ನ-17, ನಕಲಿ ರಸಗೊಬ್ಬರ ಬಿತ್ತನೆ ಬೀಜ ಕೀಟನಾಶಕ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಿ ದಂದೆಕೋರರ ವಿರುದ್ದ ಗೂಂಡಾ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿ ರೋಗ ನಿಯಂತ್ರಣಕ್ಕೆ ಗುಣಮಟ್ಟದ ಔಷಧಿ ನೀಡುವಂತೆ ನ-25 ರಂದು ನಕಲಿ ಔಷಧಿ ಬೆಳೆ ಸಮೇತ ರಾಜ್ಯ ಹೆದ್ದಾರಿ ಹಂಚಾಳ ಗೇಟ್ ಬಂದ್ಮಾಡಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ನಗರದ ರೈಲ್ವೆ ನಿಲ್ದಾಣ ಆವರಣದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ ಭೂಮಿ ತಾಯಿಯ ಮಡಲಿಗೆ ಒಂದು ಬೀಜ ಹಾಕಿದರೆ ಲಕ್ಷಾಂತರ […]