ಶ್ರೀನಿವಾಸಪುರ : ಪ್ರಕೃತಿಯು ಭಗವಂತನ ಮಹಿಮೆ , ಸೌಂದರ್ಯಗಳ ಪ್ರತೀಕವಾಗಿದೆ . ಪರಮಾತ್ಮನ ಶಕ್ತಿಯೇ ಪ್ರಕೃತಿಯ ಮೂಲಕ ಅಭಿವ್ಯಕ್ತವಾಗಿದೆ . ಇಂಥ ಪರಿಸರವನ್ನು ಆರಾಧಿಸುವುದು ಭಾರತೀಯ ಸಂಸ್ಕøತಿಯಾಗಿದ್ದು ನಾವೆಲ್ಲರೂ ಸೇರಿ ಪರಿಸರವನ್ನು ಆರಾಧಿಸಿ , ಉಳಿಸಿಬೆಳಸೊಣವೆಂದು ಎಂದು ಪರಿಸರ ಪ್ರೇಮಿ ಬೀಮಗುಂಟಪಲ್ಲಿ ಬಿ.ವಿ.ಶಿವಾರೆಡ್ಡಿ ತಿಳಿಸಿದರು.ತಾಲೂಕಿನ ರಾಯಲ್ಪಾಡು ಸರ್ಕಾರಿ ಪ್ರೌಡಶಾಲಾವರಣದಲ್ಲಿ ಮಂಗಳವಾರ ವಿದ್ಯಾರ್ಥಿಗಳಿಗೆ ಉಚಿತವಾಗಿ ತಿಂಗನ ಗಿಡಗಳನ್ನು ವಿತರಿಸಿ ಮಾತನಾಡಿದರು.ನಮಗಿರುವುದು ಒಂದೇ ಭೂಮಿ. ನಾವು ಪ್ರತಿನಿತ್ಯ ಬಳಸುವ ಸಮಸ್ತ ವಸ್ತುಗಳೂ ಈ ಭೂಮಿಯಿಂದಲೇ ಒದಗಿ ಬರಬೇಕು . ಶುದ್ದವಾದ […]
ಕೋಲಾರ ಆಗಸ್ಟ್ 2. ಭಾರತದಲ್ಲಿರುವ ಪ್ರತಿಯೊಬ್ಬ ಪ್ರಜೆಯೂ ನಮ್ಮ ರಾಷ್ಟ್ರಧ್ವಜವನ್ನು ಗೌರವಿಸಬೇಕು. ಈ ಮೂಲಕ ರಾಷ್ಟ್ರಭಕ್ತಿ ಮೈಗೂಡಿಸಿಕೊಳ್ಳಬೇಕು ಎಂದು ಹರಟಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಿ. ಲಕ್ಷ್ಮಿ ಅಭಿಪ್ರಾಯ ಪಟ್ಟರು.ತಾಲೂಕಿನ ಹರಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ರಾಷ್ಟ್ರಧ್ವಜ ವಿನ್ಯಾಸಕಾರ ತಿಂಗಳಿ ವೆಂಕಟಯ್ಯ ಅವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇಶಭಕ್ತಿ, ದೇಶಪ್ರೇಮ, ಪ್ರಾಥಮಿಕ ಶಾಲೆಯಿಂದಲೇ ವಿದ್ಯಾರ್ಥಿಗಳಲ್ಲಿ ಮೂಡಿಸುವಂತೆ ಆಗಬೇಕು, ವಿದ್ಯಾರ್ಥಿ ದೆಸೆಯಿಂದಲೇ, ರಾಷ್ಟ್ರೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತಾಗಬೇಕು ಎಂದರು.ರಾಷ್ಟ್ರ ಲಾಂಛನ, ರಾಷ್ಟ್ರ ಚಿನ್ಹೆ, ರಾಷ್ಟ್ರ ಪಕ್ಷಿ, ರಾಷ್ಟ್ರ […]
ಮುಳಬಾಗಿಲು; ಆ.2: ರಾಜ್ಯ ಹಾಗೂ ರಾಷ್ಟ್ರದಲ್ಲಿ ದಿನೇದಿನೇ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸರ್ಕಾರಗಳು ಯಾವುದೇ ಕ್ರಮಕೈಗೊಳ್ಳದೇ ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿದ್ದು, ಕೂಡಲೇ ಪ್ರಭಲ ಕಾನೂನು ಜಾರಿಗೆ ತರುವ ಮೂಲಕ ಮಹಿಳೆಯರ ರಕ್ಷಣೆಗೆ ಮುಂದಾಗಬೇಕು ಎಂದು ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಿರುವ ಘಟನೆ, ಸೌಜನ್ಯ ಕೊಲೆ ಪ್ರಕರಣಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದರೂ ರಾಜ್ಯ ಸರ್ಕಾರವುಸರಿಯಾದ ರೀತಿಯಲ್ಲಿ ಕ್ರಮಕ್ಕೆ ಮುಂದಾಗದೆ […]
ಶ್ರೀನಿವಾಸಪುರ: ಸಾರ್ವಜನಿಕರು ಯೋಗ ಮತ್ತು ಪ್ರಾಣಾಯಮದ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯ ಪಡೆದುಕೊಳ್ಳಬೇಕು ಎಂದು ಐಸಿರಿ ಹೀಲಿಂಗ್ ಸೆಂಟರ್ನ ಹೀಲರ್ ಹೇಳಿದರು.ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಏರ್ಪಡಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಐಸಿರಿ ಹೀಲಿಂಗ್ ಸೆಂಟರ್ ಸೆಂಟರ್ ವತಿಯಿಂದ ಉಚಿತ ಚಿಕಿತ್ಸಾ ಶಿಬಿರ ಏರ್ಪಡಿಸಲಾಗುವುದು ಎಂದು ಹೇಳಿದರು.ಆ.2 ರಿಂದ ಮೂರು ದಿನಗಳ ಕಾಲ ಬೆಳಿಗ್ಗೆ 11 ರಿಂದ 2 ಗಂಟೆ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆ ವರೆಗೆ ಉಚಿತ […]
ಶ್ರೀನಿವಾಸಪುರ: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸಮಾಜ ಸೇವೆ ಹಾಗೂ ಮಾನವೀಯ ನಡೆಗೆ ಹೆಸರಾಗಿದೆ ಎಂದು ತಾಲ್ಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ವಿಶ್ವ ಸ್ಕಾರ್ಫ್ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಈ ಸಂಸ್ಥೆಗೆ ಸ್ವಯಂ ಪ್ರೇರಣೆಯಿಂದ ಸೇರಬೇಕು. ಶಿಸ್ತು ಹಾಗೂ ಸಂಸ್ಕಾರ ಮೈಗೂಡಿಸಿಕೊಂಡು ಬೆಳೆಯಬೇಕು ಎಂದು ಹೇಳಿದರು.ಸಂಸ್ಥೆಯ ಸ್ಕಾರ್ಫ್ ಧರಿಸುವುದು ಸಮಾಜ ಮುಖಿ ಧೋರಣೆ ಪ್ರತೀಕ. ಶಿಸ್ತಿನ ನಡೆ ಹಾಗೂ ಸಮಾಜ […]
ಶ್ರೀನಿವಾಸಪುರ ಜೆಡಿಎಸ್ನ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷಣಿ ಡಾ|| ಎಂ. ಗಾಯಿತ್ರಿ ಮುತ್ತಪ್ಪ ರವರ ಮುಂದಿನ ರಾಜಕೀಯ ಜೀವನ ಯಶಸ್ವಿಯಾಗಲಿ ಸಾರ್ವಜನಿಕ ಸೇವೆಗಾಗಿ ಭಗವಂತ ಇನ್ನಷ್ಟು ಶಕ್ತಿ ಮತ್ತು ಆರೋಗ್ಯ ನೀಡಲಿ ಎಂದು ಜೆಡಿಎಸ್ನ ಯುವ ಮುಖಂಡ ಅಂಬೇಡ್ಕರ್ ಪಾಳ್ಯ ಸಿ. ರವಿ ತಿಳಿಸಿದರು.ಪಟ್ಟಣದ ಪ್ರವಾಸ ಮಂದಿರದಲ್ಲಿ ಡಾ|| ಎಂ. ಗಾಯಿತ್ರಿ ಮುತ್ತಪ್ಪ ಅಭಿಮಾನ ಬಳಗದಿಂದ ಏರ್ಪಡಿಸಿದ್ದ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಶುಭಾಶಯಗಳನ್ನು ತಿಳಿಸಿ ಮಾತನಾಡಿದ ಸಿ.ರವಿ ಕಳೆದ ನಾಲ್ಕು ವರ್ಷಗಳಿಂದ ಈ ಕ್ಷೇತ್ರದಲ್ಲಿ ಅನೇಕ ಸಾಮಾಜಿಕ […]
ಕೋಲಾರ:- ಹುಟ್ಟು ಹಬ್ಬದ ನೆಪದಲ್ಲಿ ಮೋಜು ಮಸ್ತಿ ಮಾಡದೆ ಸಮಾಜ ಮುಖಿ ಕೆಲಸಗಳನ್ನು ಮಾಡುವ ಮೂಲಕ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿಕೊಂಡರೆ ಆತ್ಮತೃಪ್ತಿ ದೊರೆಯುತ್ತದೆಯೆಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಕೆ.ಎಸ್.ರಾಜೇಂದ್ರ ಅಭಿಪ್ರಾಯಪಟ್ಟರು.ನಗರ ಹೊರವಲಯದ ಅತಂರಗಂಗಾ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಅವರು ಬುದ್ದಿಮಾಂದ್ಯ ಮಕ್ಕಳಿಗೆ ಸಿಹಿ ಊಟ ನೀಡಿ, ಜತೆಗೆ ಪಿಸಿ ಬಡಾವಣೆಯ ಮುಸ್ಸಂಜೆ ಮನೆಯಲ್ಲಿ ವೃದ್ದರಿಂದ ಆಶೀರ್ವಾದ ಪಡೆದು ಅವರ 42 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.ಈ ಸಂದರ್ಭದಲ್ಲಿ ಮಾತನಾಡಿದ […]
ಉಡುಪಿ : ಮಣಿಪುರದಲ್ಲಿ ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಾನ ಮನಸ್ಕ ವೇದಿಕೆಯ ನೇತೃತ್ವದಲ್ಲಿ ಅಗಸ್ಟ್ 2ರಂದು ಉಡುಪಿಯಲ್ಲಿ ನಡೆಯುವ ಕಾಲ್ನಾಡಿಗೆ ಜಾತ ಹಾಗೂ ಪ್ರತಿಭಟನಾ ಸಭೆಯನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ಕ್ರೈಸ್ತ ಸಂಘಗಳ ಅಂತರಾಷ್ಟ್ರೀಯ ಒಕ್ಕೂಟ (ಇಫ್ಕಾ) ಇದರ ಉಡುಪಿ ಜಿಲ್ಲಾ ಗೌರವಾಧ್ಯಕ್ಷ ಲೂವೀಸ್ ಲೋಬೊ ಕಲ್ಮಾಡಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಜಿಲ್ಲೆಯ ಪ್ರಮುಖ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ನಡೆಯುವ ಪ್ರತಿಭಟನಾ ಸಭೆ ಹಾಗೂ ಪ್ರತಿಭಟನಾ ಜಾತವು ಶೋಕಮಾತ ದೇವಾಲಯ ಉಡುಪಿ […]
ಶ್ರೀನಿವಾಸಪುರ: ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ವಿದ್ಯಾರ್ಥಿ ಕೆ.ರಾಕೇಶ್ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಚಲ್ದಿಗಾನಹಳ್ಳಿಯಿಂದ ಶ್ರೀನಿವಾಸಪುರದ ತಾಲ್ಲೂಕು ಕಚೇರಿಗೆ ಕಾಲ್ನಡಿಗೆ ಜಾಥಾ ಏರ್ಪಡಿಸಲಾಗಿತ್ತು.ನಾಟಕಕಾರ ಕೋಟಿಗಾನಹಳ್ಳಿ ರಾಮಯ್ಯ ಮಾತನಾಡಿ, ಸರ್ಕಾರ ಮತ್ತು ಸಮಾಜ ದಲಿತರ ಭಾವನೆಗಳಿಗೆ ಸ್ಪಂದಿಸುತ್ತಿಲ್ಲ. ಪ್ರತಿಭಾವಂತ ವಿದ್ಯಾರ್ಥಿ ರಾಕೇಶ್ ಕ್ಷುಲ್ಲಕ ಕಾರಣಕ್ಕೆ ಕೊಲೆಯಾಗಿದ್ದರೂ ಗಂಭೀರವಾಗಿ ಪರಿಗಣಿಸಿಲ್ಲ. ಇಂಥ ಪರಿಸ್ಥಿತಿಯಲ್ಲಿ ದಲಿತ ಸಮುದಾಯ ಪ್ರತಿಭಟನೆ ಹಾದಿ ಹಿಡಿಯದೆ ವಿಧಿಯಿಲ್ಲ ಎಂದು ಹೇಳಿದರು.ಯಾವುದೇ ಚಳವಳಿಯಲ್ಲಿ ಬರಹಗಾರರು ಹಾಗೂ ಕಲಾವಿದರು ಮುಂಚೂಣಿಯಲ್ಲಿರಬೇಕು. ಆದರೆ ಈಗ […]

