ಕೋಲಾರ:- ರಾಜ್ಯದಲ್ಲಿನ ಅನುದಾನಿತ ಶಾಲೆಗಳಲ್ಲಿನ ಶಿಕ್ಷಕರ ಹುದ್ದೆ ಭರ್ತಿಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಹಾಲಿ ಖಾಲಿ ಇರುವ 5120 ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮವಹಿಸುವುದಾಗಿ ಸದನದಲ್ಲಿ ಭರವಸೆ ನೀಡಿದರು.ಖಾಲಿ ಇರುವ 5120 ಹುದ್ದೆಗಳಲ್ಲಿ 3794 ಹುದ್ದೆಗಳಿಗೆ ಆರ್ಥಿಕ ಇಲಾಖೆ ಅನುಮತಿ ಬೇಕಾಗಿದ್ದು, ಶೀಘ್ರ ಅನುಮೋದನೆ ಪಡೆದು ಪ್ರಕ್ರಿಯೆ ಪ್ರಾರಂಭಿಸುವುದಾಗಿ ಭರವಸೆ ನೀಡಿದರು.ಸದನದಲ್ಲಿ ಡಾ.ವೈ.ಎ.ನಾರಾಯಣಸ್ವಾಮಿ ವಿಷಯ ಪ್ರಸ್ತಾಪಿಸಿ, ಅನುದಾನಿತ ಶಾಲೆಗಳಲಿಗೆ 1326 ಬೋಧಕ ಹುದ್ದೆಗಳ ಭರ್ತಿಗೆ ಕಳೆದ […]
ಕೋಲಾರ:- ಕೋಲಾರ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಪದ್ಮ ಬಸವಂತಪ್ಪ ಅವರನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಸಿಇಒ ಅವರು, ಜಿಲ್ಲೆಯ ಗ್ರಾಮೀಣಾಭಿವೃದ್ದಿಗೆ ಸರ್ಕಾರಿ ನೌಕರರು ಸ್ಪಂದನೆ ನೀಡಿ, ಜಿಲ್ಲೆಯನ್ನು ಮಾದರಿಯಾಗಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋನ ಎಂದರು.ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ನೌಕರರ ಪಾತ್ರ ಅತಿ ಮುಖ್ಯವಾಗಿದ್ದು, ಜಿಲ್ಲೆಯ ಸರ್ಕಾರಿ ನೌಕರರು ಈ ನಿಟ್ಟಿನಲ್ಲಿ ಅಭಿವೃದ್ದಿ ಕಾರ್ಯಗಳ ಪ್ರಗತಿಗೆ ಕೈಜೋಡಿಸಬೇಕು ಎಂದರು.ಜಿಲ್ಲಾ ನೌಕರರ ಸಂಘದ […]
ಶ್ರೀನಿವಾಸಪುರ: ಕ್ಷಯ ರೋಗದ ಲಕ್ಷಣ ಕಂಡುಬಂದಲ್ಲಿ ತಕ್ಷಣ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಕಿತ್ಸೆ ಪಡೆಯಬೇಕು ಎಂದು ಹೋಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ, ಜಿ.ಎಸ್.ವಂದನಾ ಹೇಳಿದರು.ಹೋಳೂರು ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ಏರ್ಪಡಿಸಿದ್ದ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರ ಸಾಂಕ್ರಾಮಿಕ ರೋಗ ತಡೆಯಲು ವಿಶೇಷ ಕಾರ್ಯಕ್ರಮ […]
ಕೋಲಾರ : ಜಿಲ್ಲೆಯಲ್ಲಿ ಅನಧಿಕೃತವಾಗಿ ಸ್ಥಾಪಿಸಲಾಗಿರುವ ವೈದ್ಯಕೀಯ ಕ್ಲಿನಿಕ್ಗಳನ್ನು ಹಾಗೂ ಅನಧಿಕೃತ ಸ್ಕ್ಯಾನಿಂಗ್ ಕೇಂದ್ರಗಳನ್ನು ತಕ್ಷಣ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದರು . ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕೆ.ಪಿ.ಎಂ.ಇ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 106 ಅಕ್ರಮ ವೈದ್ಯಕೀಯ ಕ್ಲಿನಿಕ್ಗಳನ್ನು ಗುರುತಿಸಲಾಗಿದ್ದು , ಮುಂದಿನ 15 ದಿನಗಳೊಳಗೆ ಅನಧಿಕೃತ ಕ್ಲಿನಿಕ್ಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ […]
ಬಂಗಾರಪೇಟೆ: ಸನ್ಮಾನ್ಯ ರಾಹುಲ್ ಗಾಂಧಿಯವರು ಭಾರತ್ ಜೋಡೊ ಯಾತ್ರೆಯ ಮೂಲಕ ದೇಶದಾದ್ಯಂತ ಜಾತಿ, ಮತ, ಧರ್ಮ, ಪಂಥದ ಎಲ್ಲೆಯನ್ನು ಮೀರಿ ಜನರ ಭಾವನೆಗಳಿಗೆ ಸ್ಪಂದಿಸಿದ್ದಾರೆ, ಇವರ ವರ್ಚಸ್ಸನ್ನು ಕಂಡ ಬಿಜೆಪಿ “ಮೋದಿಯವರ ವಿರುದ್ಧ ಪ್ರಚೋದನಕಾರಿ ಭಾಷಣ” ಎಂಬ ದೂರನ್ನು ದಾಖಲಿಸಿ ದ್ವೇಷ ರಾಜಕಾರಣಕ್ಕೆ ಮುನ್ನುಡಿ ಬರೆದಿದ್ದಾರೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ಕುವೆಂಪು ವೃತ್ತದಲ್ಲಿ ತಾಲೂಕು ಕಾಂಗ್ರೆಸ್ ಘಟಕದ ವತಿಯಿಂದ ಮೌನ ಪ್ರತಿಭಟನೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೋಲಾರದಲ್ಲಿ ನಡೆದ ಬೃಹತ್ ಚುನಾವಣಾ ಸಮಾವೇಶದಲ್ಲಿ […]
ಕೋಲಾರ:- ಸರ್ಕಾರಿ ಕಚೇರಿಗಳಿಗೆ ರೈತರು ಅಲೆಯುವುದನ್ನು ತಪ್ಪಿಸಲು ಸಂಕಲ್ಪ ತೊಟ್ಟಿರುವ ಜಿಲ್ಲಾಧಿಕಾರಿ ಅಕ್ರಂ ಪಾಷಾ ಇದೀಗ ಪಹಣಿ ತಿದ್ದುಪಡಿ ಸೇರಿದಂತೆ ಕಂದಾಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಕೆಲಸಗಳ ಶೀಘ್ರ ವಿಲೇವಾರಿಗೆ ಅಪರ ಡಿಸಿ,ಸರ್ವೇ ಇಲಾಖೆ ಉಪನಿರ್ದೇಶಕರು, ವಿಭಾಗಾಧಿಕಾರಿಗಳಿಗೆ ಉಸ್ತುವಾರಿ ವಹಿಸಿ ಕಡತ ವಿಲೇವಾರಿಯನ್ನು ಅಭಿಯಾನದ ರೀತಿ ನಡೆಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.ಕಂದಾಯ, ಸರ್ವೇ ಇಲಾಖೆಯಲ್ಲಿ ಪಹಣಿ ತಿದ್ದುಪಡಿ, ಪೈಕಿ ಆರ್ಟಿಸಿ ತಿದ್ದುಪಡಿಗಳಿಗಾಗಿ ರೈತರು ಅಲೆಯುವಂತಾಗಿದ್ದು, ಇದನ್ನು ಮನಗಂಡಿರುವ ಜಿಲ್ಲಾಧಿಕಾರಿಗಳು ಪ್ರಗತಿ ಪರಿಶೀಲನೆ ನಡೆಸಿ, ಬಾಕಿ ಕಡತಗಳ […]
ಶ್ರೀನಿವಾಸಪುರ 1 : ಮನುಕುಲಕ್ಕೆ ಆರೋಗ್ಯವೇ ಪ್ರಧಾನವಾಗಿದ್ದು, ಪ್ರತಿಯೊಬ್ಬರು ತಮ್ಮ – ತಮ್ಮ ಆರೋಗ್ಯವನ್ನು ಜಾಗೃತವಾಗಿ ಎಚ್ಚರಿಕೆಯಿಂದ ನೋಡಿಕೊಳ್ಳುವಂತೆ ಸಾರ್ವಜನಿಕರಿಗೆ ಇಒ ಕೃಷ್ಣಪ್ಪ ಸಲಹೆ ನೀಡಿದರು.ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋಲಾರ, ಹಾಗೂ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಹಾಗು ಕಾರ್ಯಕ್ರಮ ವಿಶ್ವ ಜನ ಸಂಖ್ಯಾದಿನಾಚರಣೆ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.ಹೆಚ್ಚುತ್ತಿರುವ ಜನಸಂಖ್ಯೆಯಿಂದ ಆಹಾರ, ವಸತಿ, ಉಡುಪು, ಉದ್ಯೋಗ, ಜೀವನ ನಿರ್ವಹಣೆ, ಸೇವೆ, […]
ಶ್ರೀನಿವಾಸಪುರ: ತಾಲ್ಲೂಕಿನ ತಾಡಿಗೋಳ್ ಕ್ರಾಸ್ನಲ್ಲಿ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸೋಮವಾರ ಸಂಭವಿಸಿದೆ.ತಾಡಿಗೋಳ್ ಗ್ರಾಮದ ಶಂಕರಪ್ಪ (40), ಮ್ಯಾಕಲಗಡ್ಡ ಗ್ರಾಮದ ಮುನಿಸ್ವಾಮಿ (45) ಮೃತರು.ಬೆಂಗಳೂರು-ಕಡಪ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಆಂಧ್ರಪ್ರದೇಶಕ್ಕೆ ಸೇರಿದ ಕಾರು, ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರರು ರಸ್ತೆಯಿಂದ ದೂರ ಎಸೆಯಲ್ಪಟ್ಟು ಸಾವನ್ನಪ್ಪಿದ್ದಾರೆ. ಅಪಘಾತಕ್ಕೆ ಕಾರಣವಾದ ಕಾರು, ರಸ್ತೆ ಪಕ್ಕದ ಟೊಮೆಟೊ ತೋಟದಲ್ಲಿ ನಿಂತಿದೆ. ಅಪಘಾತದ ಬಳಿಕ ಕಾರು ಚಾಲಕ ಕಾರನ್ನು ಸ್ಥಳದಲ್ಲಿಯೇ […]
ಶ್ರೀನಿವಾಸಪುರ: ಪಟ್ಟಣದ ಸಿಡಿಪಿಒ ಕಚೇರಿ ಮುಂದೆ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಪ್ರತಿಭಟನ ನಿರತ ಕಾರ್ಯಕರ್ತೆಯರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕನಿಷ್ಟ ವೇತನ ನಿಗದಿಪಡಿಸಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.ಹಗಲಿರಳು ಶ್ರಮಿಸುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಸರ್ಕಾರಿ ನೌಕರರಿಗೆ ಸಿಗುವ ಎಲ್ಲ ಸೌಕರ್ಯ ಕೊಡಬೇಕು. ಗ್ರಾಚ್ಯುಟಿ ನೀಡುವ ಕುರಿತು ಸುಪ್ರೀಂ ಕೋರ್ಟ್ ನೀಡಿರುವ […]

