
ಕೋಲಾರ:- ಬಯಲುಸೀಮೆಯ ರೈತರ ಜೀವನಾಡಿಯಾಗಿರುವ ರೇಷ್ಮೆಕೃಷಿಯನ್ನು ಇತರೆ ಇಲಾಖೆಗಳೊಂದಿಗೆ ವಿಲೀನ ಮಾಡುವ ಸರ್ಕಾರದ ನಿರ್ಧಾರ ಅವೈಜ್ಞಾನಿಕವಾಗಿದ್ದು, ಅನ್ನದಾತನ ಬದುಕಿನೊಂದಿಗೆ ಚೆಲ್ಲಾಟವಾಡುವ ಪ್ರಯತ್ನ ಕೈಬಿಟ್ಟು ಇಲಾಖೆಯ ಬಲವರ್ಧನೆಗೆ ಕ್ರಮವಹಿಸುವಂತೆ ಸರ್ಕಾರವನ್ನು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಒತ್ತಾಯಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ರೇಷ್ಮೆ ಇಲಾಖೆಯಲ್ಲಿನ 2346 ಹುದ್ದೆಗಳ ರದ್ದತಿ ಜತೆಗೆ ಇಲಾಖೆಯನ್ನು ಮತ್ತೊಂದು ಇಲಾಖೆ ಜತೆ ವಿಲೀನ ಮಾಡುವ ನಿರ್ಧಾರ ಕೈಬಿಡಿ ಎಂದು ಆಗ್ರಹಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತದ ಕರೆಯ […]

ಶ್ರೀನಿವಾಸಪುರ: ರಾಷ್ಟ್ರ ಮಟ್ಟದಲ್ಲಿ ಆರ್ಪಿಐ ಪಕ್ಷವನ್ನು ಸಂಘಟಿಸಲಾಗುವುದು. ರಾಜ್ಯ ಸಮಿತಿ ಪದಾಧಿಕಾರಿಗಳಿಗೆ ಮಾರ್ಗದರ್ಶನ ಮಾಡಲಾಗುವುದು. ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪೂರಕವಾಗಿ ಕಾರ್ಯಕ್ರಮ ರೂಪಸಿ ಜಾರಿಗೊಳಿಸಲಾಗುವುದು ಎಂದು ಆರ್ಪಿಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ. ಎಂ.ವೆಂಕಟಸ್ವಾಮಿ ಹೇಳಿದರು.ಪಟ್ಟಣದಲ್ಲಿ ಡಾ. ಎಂ.ವೆಂಕಟಸ್ವಾಮಿ ಅಭಿಮಾನಿ ಬಳಗ ಹಾಗೂ ಪ್ರಗತಿಪರ ಸಂಘಟನೆಗಳಿಂದ ಶನಿವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಆರ್ಪಿಐ ದೇಶದ 31 ರಾಜ್ಯಗಳಲ್ಲಿ ಅಸ್ತಿತ್ವದಲ್ಲಿದ್ದು, ತುಳಿತಕ್ಕೆ ಒಳಗಾದ ಜನರ ಪರ ಧ್ವನಿಯೆತ್ತಿದೆ ಎಂದು ಹೇಳಿದರು.ನಾನು ನೂತನ ಆರ್ಪಿಐ ರಾಷ್ಟ್ರೀಯ ಕಾರ್ಯಾಧ್ಯಕ್ಷನಾಗಿ […]

ಕೋಲಾರ:- ಜಿಲ್ಲೆಯಲ್ಲಿ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪುತ್ಥಳಿ ರಥಯಾತ್ರೆ ಅ.27 ರಿಂದ ನ.7 ರವರೆಗೂ 12 ದಿನಗಳ ಕಾಲ ಸಾಗಿ ಬರುವ ಹಿನ್ನಲೆಯಲ್ಲಿ ಸಚಿವ ಮುನಿರತ್ನ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಸಚಿವರ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕೋಲಾರ ತಾಲ್ಲೂಕಿನಲ್ಲಿ ರಥಯಾತ್ರೆಯ ಉಸ್ತುವಾರಿಯನ್ನು ಮಾಜಿ ಸಚಿವ ವರ್ತೂರು ಪ್ರಕಾಶ್ ಅವರಿಗೆ ವಹಿಸಿಕೊಳ್ಳುವಂತೆ ಸಚಿವ ಮುನಿರತ್ನ ಸೂಚಿಸಿದರು.ಬೆಂಗಳೂರಿನ ಸಚಿವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ 12 ದಿನಗಳ ಕಾಲ ಸಂಚರಿಸುವ ರಥಯಾತ್ರೆ ದಿನಕ್ಕೆ 15 ಗ್ರಾಮ […]

ಶ್ರೀನಿವಾಸಪುರ: ಅಧಿಕಾರಿಗಳು ರಾಷ್ಟ್ರೀಯ ಹಬ್ಬಗಳು ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸಕಾರಣವಿಲ್ಲದೆ ಗೈರು ಹಾಜರಾಗಬಾರದು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅ.23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಮಾಡಬೇಕು. ನ.1ರಂದು ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲು ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ಪಟ್ಟಣದಲ್ಲಿ […]

ನಂಗಲಿ, ಅ-21,ಮುಳಬಾಗಿಲು ಬೈಪಾಸ್ನಿಂದ ನಂಗಲಿ ಗಡಿಭಾಗದವರೆಗೂ ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿ ಸರಿಪಡಿಸುವವರೆಗೂ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಿ ಜನ ಸಾಮಾನ್ಯರ ಅಮೂಲ್ಯ ಪ್ರಾಣವನ್ನು ರಕ್ಷಣೆ ಮಾಡಬೇಕೆಂದು ರೈತ ಸಂಘದಿಂದ ಟೋಲ್ ಮೇನೇಜರ್ ಅಜಿತ್ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ರಾಷ್ಟ್ರೀಯ ಹೆದ್ದಾರಿ ತಪ್ಪು ಮಾಡದ ಜನ ಸಾಮಾನ್ಯರ ಪ್ರಾಣ ತೆಗೆಯುವ ಯಮದೂತ ರಸ್ತೆಯಾಗಿ ಮಾರ್ಪಟ್ಟಿದೆ. ಸಾವಿರಾರು ಕೋಟಿ ಜನರ ತೆರಿಗೆ ಹಣದಲ್ಲಿ ಅಭಿವೃದ್ದಿ ಪಡಿಸಿದರುವ ರಸ್ತೆಯಲ್ಲಿ ತಾನು ದುಡಿದ ಹಣವನ್ನು ನೀಡಿ ಅಮೂಲ್ಯವಾದ ಪ್ರಾಣವನ್ನು ತನ್ನ ಕೈಯಾರೆ ಕಳೆದುಕೊಳ್ಳುವ ಮಟ್ಟಕ್ಕೆ […]

ಶ್ರೀನಿವಾಸಪುರ: ಸದಸ್ಯರು ಸ್ವಯಂ ಪ್ರೇರಿತರಾಗಿ ಸದಸ್ಯತ್ವ ಪಡೆದುಕೊಂಡು ಯಾವುದೇ ಅಪೇಕ್ಷೆಯಿಲ್ಲದೆ ಸೇವಾ ಮನೋಬಾವದಿಂದ ಎಲ್ಲಾ ಸದಸ್ಯರ ಪರಸ್ಪರ ಸಹಕಾರದಿಂದ ಸಮಾಜದ ಒಳಿತಿಗಾಗಿ ಅನೇಕ ಜನಪರ ಸೇವಾ ಕಾರ್ಯಗಳಾದ ಶಿಕ್ಷಣ, ಆರೋಗ್ಯ, ಬಡ ಜನತೆಗೆ ಉಪಯೋಗವಾಕತಕ್ಕಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು 2022-23ನೇ ಸಾಲಿನ ಅದ್ಯಕ್ಷರಾದ ಸಿ.ಆರ್. ಶಿವರಾಜ್ ತಿಳಿಸಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ನ 2022-23ನೇ ಸಾಲಿನ ಪದಾದಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿ ಮಾತನಾಡಿದ ಶಿವರಾಜ್, ರೋಟರಿ ಸಂಸ್ಥೆಯಲ್ಲಿ ಪ್ರತಿಯೊಬ್ಬರೂ […]

ಕೋಲಾರ:- ಹಣಕ್ಕಾಗಿ ಮತ ಮಾರಾಟ ಬೇಡ, ಸ್ವಾಭಿಮಾನದಿಂದ ನಿಮ್ಮ ಹಕ್ಕು ಚಲಾಯಿಸಿ ಜನಪ್ರತಿನಿಧಿಗಳನ್ನು ಪ್ರಶ್ನಿಸುವ ನೈತಿಕತೆ ಉಳಿಸಿಕೊಳ್ಳುವ ಮೂಲಕ ಸಮಾಜದ ಪರಿವರ್ತನೆಗೆ ಹೆಣ್ಣು ಮಕ್ಕಳು ಸಂಕಲ್ಪ ಮಾಡಬೇಕು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕರೆ ನೀಡಿದರು.ತಾಲ್ಲೂಕಿನ 27 ಮಹಿಳಾ ಸ್ವಸಹಾಯ ಸಂಘಗಳಿಗೆ 1.90 ಕೋಟಿ ರೂ ಶೂನ್ಯಬಡ್ಡಿ ಸಾಲ ವಿತರಿಸಿ ಅವರು ಮಾತನಾಡುತ್ತಿದ್ದರು.ಮತ ಮಾರಿಕೊಂಡರೆ ಅಭಿವೃದ್ದಿ ಶೂನ್ಯವಾಗುತ್ತದೆ, ಹಣಕ್ಕಾಗಿ ಕೈಚಾಚುವ ಮೂಲಕ ನಮ್ಮ ಸ್ವಾಭಿಮಾನವನ್ನೇ ಬಲಿಕೊಡುವುದು ಬೇಡ, ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳು […]

ಶ್ರೀನಿವಾಸಪುರ: ಡಾ. ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ಅ.22 ರಂದು ಬೆಳಿಗ್ಗೆ 11.30ಕ್ಕೆ ಆರ್ಪಿಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ. ಎಂ.ವೆಂಕಟಸ್ವಾಮಿ ಅವರನ್ನು, ಅವರ ಅಭಿಮಾನಿ ಬಳಗ ಹಾಗೂ ಪ್ರಗತಿಪರ ಸಂಘಟನೆಗಳಿಂದ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಮಂಡಲಿ ಸದಸ್ಯ ಡಿ.ಎಂ.ಅಂಬರೀಶ ಹೇಳಿದರು.ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ. ಎಂ.ವೆಂಕಟಸ್ವಾಮಿ, ತಾಲ್ಲೂಕಿನ ಮಲ್ಲಗಾನಹಳ್ಳಿ ಗ್ರಾಮದವರು. ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈಚೆಗೆ ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಮಂಡಳಿಗೆ ನಡೆದ ಚುನಾವಣೆಯಲ್ಲಿ ಪಕ್ಷದ ರಾಷ್ಟ್ರೀಯ […]

ಶ್ರೀನಿವಾಸಪುರ: ತಾಲ್ಲೂಕು ಕಚೇರಿ ಮುಂದೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಕಾರ್ಯಕರ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಬುಧವಾರ ಪ್ರತಿಭಟನೆ ನಡೆಸಿದರು.ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀರಾಮರೆಡ್ಡಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರ ಯಾವುದೇ ಕಾರಣಕ್ಕೂ ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಂದಿಗೆ ವಿಲೀನಗೊಳಿಸಬಾರದು. ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಕೂಡಲೆ ಬೆಳೆ ವಿಮೆ ಕೊಡಿಸಬೇಕು. ಹಾಲಿಗೆ ಕನಿಷ್ಟ ರೂ.50 ಬೆಲೆ […]