
ಶ್ರೀನಿವಾಸಪುರ: ರಾಮಾಯಣ ಜಗತ್ತಿಗೆ ದಾರಿದೀಪವಾಗಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷೆ ಮಾಯಾ ಬಾಲಚಂದ್ರ ಹೇಳಿದರು.ಪಟ್ಟಣದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ವಾಲ್ಮೀಕಿ ಕಾವ್ಯ ಒಂದು ಚಿಂತನೆ ಎಂಬ ಸಾಹಿತ್ಯ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ರಾಮಾಯಣ ಹಲವು ಆಯಾಮ ಒಳಗೊಂಡ ಕಾವ್ಯ. ಅಲ್ಲಿ ಬರುವ ಮಹಾ ಪಾತ್ರಗಳು ಹಾಗೂ ಕತೆ, ಉಪ ಕತೆಗಳು ಎಲ್ಲ ವಯೋಮಾನದ ಜನರನ್ನೂ ಸೂಜಿಗಲ್ಲಿನಂತೆ ಆಕರ್ಷಿಸುತ್ತವೆ ಎಂದು ಹೇಳಿದರು.ಉಪನ್ಯಾಸಕಿ […]

ಶ್ರೀನಿವಾಸಪುರ: ಪಿಯುಸಿ ತರಗತಿಯಲ್ಲಿ ಇಬ್ಬರು ಜೊತೆಯಲ್ಲೇ ವಿದ್ಯಾಬ್ಯಾಸ ಪೂರ್ಣ ಗೊಳಿಸಿ ನಂತರ ಉನ್ನತ ವಿದ್ಯಾಬ್ಯಾಸ ಮುಗಿಸಿ ಇಂಗ್ಲೇಂಡ್ ನಲ್ಲಿ ಗ್ಯಾಸ್ಟೋ ಸರ್ಜನ್ ಆಗಿ ಸೇವೆ ಸಲ್ಲಿಸಿ ಸ್ವಂತ ಮನೆಗೆ ಆಗಮಿಸಿದ್ದ ವೇಳೆಯಲ್ಲಿ ವಿದಾನಪರಿಷತ್ ಸದಸ್ಯ ಹಾಗು ಸರ್ಕಾರದ ಮುಖ್ಯ ಸಚೇತಕ ಡಾ|| ವೈ.ಎ ನಾರಾಯಣಸ್ವಾಮಿ ತನ್ನ ಸ್ನೇಹಿತ ಡಾ|| ವೈ.ಕೆ ವಿಶ್ವನಾಥ್ ನಿವಾಸಕ್ಕೆ ಬೇಟಿನೀಡಿ ಅಭಿನಂದಿಸಿ ಶುಭ ಕೋರಿದ್ದಾರೆ.ಪಟ್ಟಣದ ಎಂ.ಜಿ ರಸ್ತೆಯ ವೈ.ಎಸ್ ಕೃಷ್ಣಯ್ಯ ಶಟ್ಟಿ ಅವರ ನಿವಾಸಕ್ಕೆ ಡಾ|| ವೈ.ಎ ನಾರಾಯಣಸ್ವಾಮಿ ಬೇಟಿನೀಡಿ ಕೃಷ್ಣಯ್ಯ ಶಟ್ಟಿರವರ […]

ಶ್ರೀನಿವಾಸಪುರ: ಗ್ರಾಮಸ್ಥರು ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ತಾಲ್ಲೂಕಿನ ಬೀರಗಾನಹಳ್ಳಿ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೀರಗಾನಹಳ್ಳಿ ಗ್ರಾಮದ ಹೊರವಲಯದಲ್ಲಿ ಸ್ಮಶಾನ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಚರಂಡಿ ಹಾಗೂ ಶಾಲಾ ಕೊಠಡಿ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಗ್ರಾಮದ ಇಬ್ಬರಿಗೆ ಪಡಿತರ ಚೀಟಿ ಸಮಸ್ಯೆ ಹಾಗೂ ಒಬ್ಬರಿಗೆ ಅಂಗವಿಕ ವೇತನದ ಸಮಸ್ಯೆ ಇರುವುದಾಗಿ ತಿಳಿಸಲಾಗಿದೆ. ಸಮಸ್ಯೆ ಪರಿಹರಿಸಲಾಗುವುದು. […]

ಶ್ರೀನಿವಾಸಪುರ: ಗೌಡತಾತನಗಡ್ಡ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವೆಂಕಟಕೃಷ್ಣಪ್ಪ, ಉಪಾಧ್ಯಕ್ಷರಾಗಿ ಅಂಗಡಿ ಶ್ರೀನಿವಾಸ್ ಅವಿರೋಧ ಆಯ್ಕೆಯಾಗಿದ್ದಾರೆ.ಸಂಘದಲ್ಲಿ ಒಟ್ಟು 12 ಸ್ಥಾನಗಳಿದ್ದು, ಆ ಪೈಕಿ ಜೆಡಿಎಸ್ ಬೆಂಬಲಿತ 11 ಹಾಗೂ ಕಾಂಗ್ರೆಸ್ ಬೆಂಬಲಿತ 1 ಸ್ಥಾನವಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕ್ರಮವಾಗಿ ಜೆಡಿಎಸ್ ಬೆಂಬಲಿತ ವೆಂಕಟಕೃಷ್ಣಪ್ಪ ಹಾಗೂ ಅಂಗಡಿ ಶ್ರೀನಿವಾಸ್ ಮಾತ್ರ ನಾಮಪತ್ರ ಸಲ್ಲಿಸಿದರು. ಆದ್ದರಿಂದ ಚುನಾವಣಾಧಿಕಾರಿ ಶಿವಲಿಂಗಪ್ಪ, ಅವರನ್ನು ಅವಿರೋಧ ಆಯ್ಕೆಯಾಗಿರುವುದಾಗಿ ಪ್ರಕಟಿಸಿದರು.ಉಳಿದಂತೆ ಸಂಘದ ನಿರ್ದೇಶಕರಾಗಿ ಶ್ರೀರಾಮರೆಡ್ಡಿ, ಚಲಪತಿ, […]

ಶ್ರೀನಿವಾಸಪುರ: ವಾಹನ ಚಾಲಕರು ಸುಗಮ ಸಂಚಾರಕ್ಕೆ ಸಹಕರಿಸಬೇಕು, ನಿಗದಿಪಡಿಸಲಾದ ಸ್ಥಳದಲ್ಲಿ ಮಾತ್ರ ವಾನಹ ನಿಲುಗಡೆ ಮಾಡಬೇಕು ಎಂದು ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಜೆ.ಸಿ.ನಾರಾಯಣಸ್ವಾಮಿ ಮನವಿ ಮಾಡಿದರು.ಕಾನೂನು ಬಾಹಿರವಾಗಿ ವಾಹನ ಚಾಲನೆ ಮಾಡುವುದರಿಂದ ಹಾಗೂ ಸಂಚಾರ ನಿಯಮ ಪಾಲನೆ ಮಾಡದಿರುವುದರಿಂದ ಸುಗಮ ಸಂಚಾರ ಸಾಧ್ಯವಾಗುತ್ತಿಲ್ಲ. ಎಚ್ಚರ ತಪ್ಪಿದರೆ ವಾಹನ ಅಪಘಾತದ ಸಾಧ್ಯತೆ ಇರುವುದರಿಂದ ಅಗತ್ಯ ಇರುವ ಸ್ಥಳಗಳಲ್ಲಿ ಪೊಲೀಸ್ ಇಲಾಖೆ ವತಿಯಿಂದ ಬ್ಯಾರಾಕೇಡ್ ಅಳವಡಿಸಲಾಗುತ್ತಿದೆ ಎಂದು ಹೇಳಿದರು.ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಪಕ್ಕದಲ್ಲಿನ ರಸ್ತೆಯಲ್ಲಿ ಅಡ್ಡದಿಡ್ಡಿ […]

ಶ್ರೀನಿವಾಸಪುರ: ಜೀವದ ಹಂಗು ತೊರೆದು ದೇಶಾದ್ಯಂತ ಪಾದಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿ ಅವರ ಜತೆ ಹೆಜ್ಜೆ ಹಾಕಲು ಜನ ಹಾತೊರೆಯುತ್ತಿದ್ದಾರೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಲು ಬಸ್ಸುಗಲ್ಲಿ ಹೊರಡಲು ಬಂದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಮುನ್ನಡೆ ಅಭಿವೃದ್ಧಿಯ ಸಂಕೇತ. ಆದರೆ ಕೆಲವರ ಕೈಯಲ್ಲಿ ದೇಶದ ಅಭಿವೃದ್ಧಿ ಹಿಮ್ಮುಖ ಚಲನೆಯಲ್ಲಿದೆ ಎಂದು ಅಭಿಪ್ರಾಯಪಟ್ಟರು.‘ದೇಶದ ಪ್ರಜೆಗಳಾಗಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರಾಗಿ ಒಂದು ಉನ್ನತ […]

ಕೋಲಾರ ಅಕ್ಟೋಬರ್ 10 : ಅಕ್ಟೋಬರ್ 9ರ ಭಾನುವಾರ ಅಶ್ವೀಜ ಮಾಸ ಪವಿತ್ರ ಶರದ್ ಹುಣ್ಣಿಮೆಯ ದಿನದ ಮಧ್ಯರಾತ್ರಿ ಕಿತ್ತಂಡೂರು ಆನಂದ ಮಾರ್ಗ ಶಾಲೆಯ ಆವಣರದಲ್ಲಿ ಆನಂದ ಮಾರ್ಗ ಪ್ರಚಾರಕ ಸಂಘ ಹಾಗೂ ಆನಂದ ಸುವರ್ಣ ರೂರಲ್ ಡೆವಲಪ್ಮೆಂಟ್ ಟ್ರಸ್ಟ್ ಮತ್ತು ಆನಂದ ಮಾರ್ಗ ಶಾಲೆ, ಕಿತ್ತಂಡೂರು, ತೊಟ್ಲಿ ಅಂಚೆ, ಕೋಲಾರ ತಾಲ್ಲೂಕು ಇವರು ಏರ್ಪಡಿಸಿದ್ದ 21ನೇ ಶಿಬಿರ ಯಶಸ್ವಿಯಾಗ ನಡೆಯಿತು.ಬಾರಿ ಮಳೆಯ ನಡುವೆ ಸಂಜೆಯಿಂದ ರಾತ್ರಿ ಪೂರ್ತಿ ಮಳೆ ಸುರಿದರೂ ಜನರು ಮಳೆಯನ್ನು ಲೆಕ್ಕಿಸದೆ ಸಹಸ್ರಾರು […]

ಕೋಲಾರ:- ಪ್ರಧಾನಿ ನರೇಂದ್ರಮೋದಿಯವರ ಕನಸಿನ ಪೋಷಣ್ ಅಭಿಯಾನ ಯಶಸ್ವಿಗೊಳಿಸುವ ಮೂಲಕ ಅಪೌಷ್ಠಿಕತೆ ಮತ್ತು ರಕ್ತಹೀನತೆ ಮುಕ್ತ ಭಾರತ ನಿರ್ಮಾಣಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಕೈಜೋಡಿಸಬೇಕು ಎಂದು ಸಂಸದ ಎಸ್.ಮುನಿಸ್ವಾಮಿ ಕರೆ ನೀಡಿದರು.ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಪೋಷಣ್ ಮಾಸಾಚರಣೆಯ ಸಮಾರೋಪ ಮತ್ತು ಪ್ರಧಾನ ಮಂತ್ರಿ ಮಾತೃವಂದನಾ ಸಪ್ತಾಹ ಸಮಾರೋಪ ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ ನಡೆಸಿ, ಸ್ವತಃ ತಲಾ 2 […]

ಶ್ರೀನಿವಾಸಪುರ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸುವ ಮೂಲಕ ಸರ್ಕಾರ ಸಾಮಾಜಿಕ ನ್ಯಾಯ ಎತ್ತಿಹಿಡಿದಿದೆ ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು.ಪಟ್ಟಣದ ಬಸ್ ನಿಲ್ದಾಣ ವೃತ್ತದಲ್ಲಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ, ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದಕ್ಕಾಗಿ ಶನಿವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮೀಸಲಾತಿ ಹೆಚ್ಚಳ ಎರಡೂ ಸಮುದಾಯಗಳ ಬಹುದಿನಗಳ ಬೇಡಿಕೆಯಾಗಿತ್ತು. ಅದನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ […]