ಕೋಲಾರ,ಜೂ,6: ಡಾ.ಶ್ರೀಹರಿ ಅವರು ಡಾ.ಕೌಶಿಕ್ ಸುಬ್ರಮಣಿಯನ್ ಎಂಬಿಬಿಎಸ್, ಎಂ.ಎಸ್, ಎಮ್.ಸಿ.ಎಚ್, ಎಫ್.ಎಮ್.ಎಸ್. ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ ಮತ್ತು ಜಿಐ ಆಂಕೊಸರ್ಜರಿ ವಿಭಾಗದ ಮುಖ್ಯಸ್ಥ ಅವರನ್ನು ಭೇಟಿ ಮಾಡಿ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ ಮತ್ತು ಜಿಐ ಆಂಕೊಸರ್ಜರಿ ವಿಭಾಗದ ಮುಖ್ಯಸ್ಥ ಅಸಿಡಿಟಿ, ಎದೆಯುರಿ, ಮತ್ತು ಬಪಿರ್ಂಗ್ನಿಂದ ಪರಿಹಾರ: ಎಂಡೋಸ್ಕೋಪಿಯೊಂದಿಗೆ ಕೋರ್ಸ್ಅನ್ನು ಅನ್ವೇಷಿಸಿದ್ದಾರೆ.ನೀವು ಆಗಾಗ್ಗೆ ಅಸಿಡಿಟಿ, ಎದೆಯುರಿ, ಅಜೀರ್ಣ ಮತ್ತು ಅತಿಯಾದ ಉಬ್ಬುವಿಕೆಯಂತಹ ರೋಗಲಕ್ಷಣಗಳಿಂದ ಅಸ್ವಸ್ಥತೆಯನ್ನು ಅನುಭವಿಸುತ್ತಿದ್ದೀರಾ? ಈ ಸಮಸ್ಯೆಯು ನಿಮ್ಮ ಜೀವನದ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು, ಸರಳವಾದ ಕೆಲಸವನ್ನು ಸಹ […]
ಶ್ರೀನಿವಾಸಪುರ: ಸಾರ್ವಜನಿಕರು ಪರಿಸರಕ್ಕೆ ಹಾನಿ ಉಂಟುಮಾಡುವ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ಪುರಸಭೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಜನ, ಜಾನುವಾರು ಆರೋಗ್ಯ ಹಾಗೂ ಸ್ವಚ್ಛತೆಗೆ ಸವಾಲಾಗಿರುವ ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು. ವೈಜ್ಞಾನಿಕ ವಿಧಾನದಲ್ಲಿ ಕಸದ ನಿರ್ವಹಣೆ ಮಾಡಬೇಕು ಎಂದು ಹೇಳಿದರು.ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ನಾಗರಿಕರಿಗೆ 2000 ಸಸಿ ವಿತರಣೆ ಮಾಡಲಾಗಿದೆ. ಸಾಧ್ಯವಿರು ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಡಲಾಗಿದೆ. ಸಾರ್ವಜನಿಕರ ಕಾಳಜಿ […]
ಕೋಲಾರ,ಜೂ,5: ಕೋಲಾರ ಜಿಲ್ಲೆಯ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ವತಿಯಿಂದ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಕೆ.ವೆಂಕಟಶಿವಾರಡ್ಡಿ ರವನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಸಮುದಾಯದ ಮುಖಂಡರುಗಳು ತಮ್ಮ ಜನಾಂಗವನ್ನು ರಾಜಕೀಯವಾಗಿ ಗುರ್ತಿಸುವುದರ ಜೊತೆಗೆ ಸೂಕ್ತ ಸ್ಥಾನಮಾನಗಳನ್ನು ಒದಗಿಸಿಕೊಡಬೇಕು. ಸಮುದಾಯಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಟ್ಟು, ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮನವಿ ಮಾಡಿದರು.ಶಾಸಕರಾದ ಜಿ.ಕೆ.ವೆಂಕಟಶಿವಾರಡ್ಡಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಮೊದಲಿಗೆ ಸಮುದಾಯ ತಮ್ಮನ್ನು ಬೆಂಬಲಿಸಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿ, ಸಮುದಾಯಕ್ಕೆ ತನ್ನ ಕೈಲಾದ ಸಹಾಯ ಮತ್ತು […]
ಕೋಲಾರ:- ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಸಿದ್ದರಾಮಯ್ಯ ನೀಡಿರುವ ಭರವಸೆಗಳ ಈಡೇರಿಕೆಗೆ ನಿರಂತರವಾಗಿ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಭರವಸೆ ನೀಡಿದರು.ಇಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಆತ್ಮೀಯವಾಗಿ ಸನ್ಮಾನಿಸಿದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.ಕೋಲಾರಕ್ಕೆ ಸಿದ್ದರಾಮಯ್ಯ ಅವರೇ ಅಭ್ಯರ್ಥಿಯಾಗಿ ಶಾಸಕರಾಗಬೇಕಾಗಿತ್ತು ಆದರೆ ಕಾರಣಾಂತರಗಳಿಂದ ಈ ಅವಕಾಶ ಕೊತ್ತೂರು ಮಂಜುನಾಥ್ ಅವರ ಪಾಲಾಗಿದೆ, ಅವರೂ ಸಹಾ ಅಭಿವೃದ್ದಿಯ ಪರವಾಗಿದ್ದು, ಉತ್ತಮ ಕಾರ್ಯ ಮಾಡಲಿದ್ದಾರೆ ಎಂದರು.ಸಿದ್ದರಾಮಯ್ಯ ಅವರು ಕೋಲಾರದಲ್ಲಿ […]
ಕೋಲಾರ,ಜೂ,3: ಥಲಸ್ಸೆಮಿಯಾ ರೋಗದಿಂದ ಬಳಲುತ್ತಿದ್ದ 11 ವರ್ಷದ ಹೆಣ್ಣು ಮಗು ಸಂಪೂರ್ಣ ಗುಣಮುಖವಾದ ಸಾಧನೆಯ ಸುದ್ದಿ ಡಾ. ವೈ ಸಿ ಬೀರೇಗೌಡ ರವರ ಚೌಡೇಶ್ವರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಿಂದ ದೊರಕಿದೆ.ಈ ಹೆಣ್ಣು ಮಗು ಜನನವಾಗಿದ್ದು ಇದೇ ಆಸ್ಪತ್ರೆಯಲ್ಲಿ. ಜನಿಸಿದಾಗಲೇ ಈ ಕಂದನಲ್ಲಿ ಥೆಲಸೆಮಿಯ ಖಾಯಿಲೆಯು ಪತ್ತೆಯಾಗಿತ್ತು. ತದನಂತರ ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತ ಬದಲಾವಣೆ ಕಾರ್ಯ ಸಹ ನಡೆಯುತ್ತಿತ್ತು. ಇದರಿಂದ ಮುಕ್ತಿ ಹೊಂದಲು ಪೋಷಕರು ಪರಿತಪಿಸುತ್ತಿದ್ದರು. ಆಗ ಡಾ.ವೈ.ಸಿ ಬೀರೇಗೌಡರವರ ಸಲಹೆಯಂತೆ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ […]
ಕೋಲಾರ,ಜೂ,3: ಇಂದು ಸ್ವರ್ಣಭೂಮಿ ಫೌಂಡೇಷನ್ ವತಿಯಿಂದ “ಸರ್ಕಾರಿ/ಅನುದಾನಿತ ಶಾಲೆಗಳ ಉಳಿವಿಗಾಗಿ ನಾವು-ನೀವು ” ಅಭಿಯಾನದಡಿ ಪ್ರತಿವರ್ಷದಂತೆ ಈ ಶೈಕ್ಷಣಿಕ ಸಾಲಿಗೂ ಸಹ ಅವಶ್ಯಕತೆ ಇರುವ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳ ವಿತರಣಾ ಕಾರ್ಯಕ್ರಮವನ್ನು ಇಂದು ಸುಗಟೂರು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಮುಖ್ಯವಾಗಿ ಶಿಕ್ಷಣದ ಮೂಲಭೂತ ಸೌಲಭ್ಯಗಳನ್ನು ಪೂರೈಸಿದಾಗ ಉತ್ತಮ ಶಿಕ್ಷಣ ನೀಡಲು ಸಾಧ್ಯ ಎಂದು ಸ್ವರ್ಣಭೂಮಿ ಫೌಂಡೇಷನ್ ಅಧ್ಯಕ್ಷ ಬಿ.ಶಿವಕುಮಾರ್ ತಿಳಿಸಿದರು.ಮುಂದಿನ ದಿನಗಳಲ್ಲಿ ಮತ್ತಷ್ಟು ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು […]
ಶ್ರೀನಿವಾಸಪುರ; ಜೂ.: ಎಪಿಎಂಸಿ ಕಾಯಿದೆಯನ್ನು ವಾಪಸ್ ಪಡೆದು ಪಾಳು ಬೀಳುತ್ತಿರುವ ಎಪಿಎಂಸಿಗಳಿಗೆ ಬಲ ತುಂಬಲು ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಮಾಡಬೇಕೆಂದು ರೈತಸಂಘದಿಂದ ತಹಸೀಲ್ದಾರ್ ಹಾಗೂ ಎಪಿಎಂಸಿ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಕೃಷಿ ಕ್ಷೇತ್ರದ ಜೀವನಾಡಿಯಾಗಿರುವ ರೈತರು ಬೆವರು ಸುರಿಸಿ ಬೆಳೆದ ಬೆಳೆಯನ್ನು ನ್ಯಾಯಯುತ ಬೆಲೆಗೆ ಮಾರಾಟ ಮಾಡುವ ಎಪಿಎಂಸಿ ಇಂದು ಮೂಲಭೂತ ಸೌಕರ್ಯಗಳಿಲ್ಲದೆ ಸ್ಮಶಾನಗಳಾಗಿ ಮಾರ್ಪಟ್ಟಿದೆ. ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಶುಲ್ಕ ಪಾವತಿಸಲು ಆದಾಯವಿಲ್ಲದೆ ಅನಾಥವಾಗುತ್ತಿವೆ ಎಂದು ಎಪಿಎಂಸಿ ಅವ್ಯವಸ್ಥೆ […]
ಕೋಲಾರ,ಜೂ,2: ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಹಾಗೂ ಪುನರ್ವಸತಿ 2013ರ ಕಾಯ್ದೆಯ ಅನುಷ್ಟಾನಕ್ಕೆ ಒತ್ತಾಯಿಸಿ ಸಫಾಯಿ ಕರ್ಮಚಾರಿ ಕಾವಲು ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಮಲ ಹೊರುವ ಪದ್ದತಿ ಅಮಾನವೀಯ, ಜಾತೀಯತೆ ಮತ್ತು ಗುಲಾಮಗಿರಿಯ ಸಂಕೇತ, ಮನುಷ್ಯನ ಘನತೆಗೆ ಧಕ್ಕೆ ತರುವ ನಾಗರಿಕ ಸಮಾಜದ ಸಾಕ್ಷಿಪ್ರಜ್ಞೆಗೆ ಸಾವಾಲಾಗಿ ಇಡೀ ಸಮಾಜ ತಲೆ ತಗ್ಗಿಸುವ ಹಾಗು ಘೋರ ಮಾನವ ಹಕ್ಕುಗಳ ಉಲ್ಲಂಘನೆ ಎಂದು ಪರಿಗಣಿಸಿ ಮಲಹೊರುವ ಅನಿಷ್ಟ ಪದ್ದತಿಯನ್ನು […]
ಮುಳಬಾಗಿಲು; ಜೂ.2: ನಕಲಿ ಬೋನಫೈಡ್ ಹಗರಣವನ್ನು ಸಿಬಿಐಗೆ ಒಪ್ಪಿಸಿ ದಂಧೆಯಲ್ಲಿ ಭಾಗಿಯಾಗಿರುವ ಕಂದಾಯ ಹಾಗೂ ಆರ್ಟಿಒ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕೆಂದು ರೈತಸಂಘದಿಂದ ತಹಸೀಲ್ದಾರ್ ಮುಖಾಂತರ ಕಂದಾಯ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಸರ್ಕಾರಿ ಕೆರೆ ಜಮೀನಿಗೆ ಜಿಲ್ಲಾಧಿಕಾರಿಗಳ ಸಹಿಯನ್ನೇ ನಕಲು ಮಾಡಿರುವ ಪ್ರಕರಣ ಇನ್ನೂ ಜೀವಂತವಾಗಿರುವಾಗಲೇ ಯಾರದೋ ಜಮೀನಿಗೆ ಇನ್ಯಾರೋ ಮಾಲೀಕನ ಟ್ರಾಕ್ಟರ್ಗೆ ನಕಲಿ ಬೋನಫೈಡ್ ದಾಖಲೆಗಳನ್ನು ಸೃಷ್ಠಿ ಮಾಡಿ ಕೋಟ್ಯಾಂತರ ರೂಪಾಯಿ ತೆರಿಗೆ ಹಣವನ್ನು ಸರ್ಕಾರಕ್ಕೆ ವಂಚನೆ ಮಾಡಿ ಅಕ್ರಮ ಆರ್ಡಿ ನಂಬರ್ಗಳನ್ನು […]

