ಶ್ರೀನಿವಾಸಪುರ: ಜೀವನದಲ್ಲಿ ಬರುವ ನೋವು–ನಲಿವುಗಳಿಗೆ ತಾಳ್ಮೆ ಮತ್ತು ಸಂಯಮವೇ ಆಧಾರ. ಹರುಷಕ್ಕೆ ಹಿಗ್ಗದೆ, ಸಂಕಷ್ಟಕ್ಕೆ ಕುಗ್ಗದೆ ಬದುಕಿದರೆ ಜೀವನದ ಮೌಲ್ಯತೆ ಹೆಚ್ಚುತ್ತದೆ. ಇಂತಹ ಮೌಲ್ಯಗಳನ್ನು ಅಳವಡಿಸಿಕೊಂಡಿರುವ ವಿರೇಂದ್ರ ಹೆಗ್ಗಡೆರವರ ಜೀವನ ನಿಜಕ್ಕೂ ಸಾರ್ಥಕ ಎಂದು ಜಿಲ್ಲಾ ಜನಜಾಗೃತಿ ಸಮಿತಿಯ ಸದಸ್ಯೆ ಮಾಯಾ ಬಾಲಚಂದ್ರ ಹೊಗಳಿದರು. ತಾಲೂಕಿನ ಎನಮೇರಿಪಳ್ಳಿ ಗ್ರಾಮದ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಮಂಗಳವಾರ ವಿರೇಂದ್ರ ಹೆಗ್ಗಡೆರವರ ಜನ್ಮದಿನದ ಅಂಗವಾಗಿ ತಾಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ವಿಶೇಷ ಪೂಜಾಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಳಿಕ ನಡೆದ ಸಭೆಯಲ್ಲಿ ಅವರು […]
ಶ್ರೀನಿವಾಸಪುರ: ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ₹5 ಲಕ್ಷ ಬಿಡುಗಡೆ ಮಾಡುವುದಾಗಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಘೋಷಿಸಿದರು. ಅವರು ಶುಕ್ರವಾರ ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಯಲ್ದೂರು ಹೋಬಳಿ ಘಟಕಗಳ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಕನ್ನಡ ವ್ಯವಹಾರಿಕ ಭಾಷೆಯಾಗಬೇಕುಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ವೆಂಕಟಶಿವಾರೆಡ್ಡಿ, ತಾಲ್ಲೂಕಿನಲ್ಲಿ ಭಾಷಾ ಬಾಂಧವ್ಯ ಮಾದರಿಯಾಗಿದೆ. ಕನ್ನಡ ಮನದ ಮಾತಾಗುವುದಷ್ಟೇ […]
ಶ್ರೀನಿವಾಸಪುರ : ಗ್ಯಾರಂಟಿ ಯೋಜನೆಗಳು ತಾಲ್ಲೂಕಿನ ನಾಗರಿಕರಿಗೆ ಯಾವ ಮಟ್ಟಿನಲ್ಲಿ ತಲುಪುತ್ತಿವೆ ಹಾಗೂ ಜಾರಿಯ ಸ್ಥಿತಿ ಹೇಗಿದೆ ಎಂಬುದನ್ನು ಪರಿಶೀಲಿಸಲು ಈ ಸಭೆಯನ್ನು ಕರೆಯಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎ.ವಿ. ಮನೋರ್ ಹೇಳಿದರು. ಬುಧವಾರ ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದಿಂದ ಬಿಡುಗಡೆಗೊಳ್ಳುವ ಅನುದಾನ ಯಾವುದೇ ಕಾರಣಕ್ಕೂ ದುರಪಯೋಗವಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಸಭೆಯಲ್ಲಿ ಮಾತನಾಡಿದ ಮನೋರ್, ನ್ಯಾಯಬೆಲೆ ಅಂಗಡಿಗಳಲ್ಲಿ […]
ಶ್ರೀನಿವಾಸಪುರ: ಗ್ರಾಮಸ್ಥರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಹಾಗೂ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಗ್ರಾಮ ಪಂಚಾಯಿತಿಯ ಮೂಲ ಕರ್ತವ್ಯವಾಗಿದೆ ಎಂದು ಯಲ್ಡೂರು ಗ್ರಾಮ ಪಂಚಾಯಿತಿ ಪಿಡಿಒ ಶಂಕರ್ ಹೇಳಿದ್ದಾರೆ. ಯಲ್ಡೂರು ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಪಂಚಾಯಿತಿ ಸದಸ್ಯರ ಸಹಕಾರದೊಂದಿಗೆ ಗ್ರಾಮಗಳಲ್ಲಿನ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ಸಮಗ್ರ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಚರಂಡಿ ಮತ್ತು ಕುಡಿಯುವ ನೀರು–ಮೂಲಭೂತ ಸೌಕರ್ಯಗಳಿಗೆ ಆದ್ಯತೆ ಗ್ರಾಮದ […]
ಕೋಲಾರ: ಜಿಲ್ಲೆಯ ಕ್ರಿಶ್ಚಿಯನ್ ಸಮುದಾಯದ ಸಾಮಾಜಿಕ ಆರ್ಥಿಕ ಸಬಲೀಕರಣದ ನಿಟ್ಟಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೋಲಾರ ಘಟಕ ಭಾನುವಾರ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು. ಜಿಲ್ಲಾ ವ್ಯವಸ್ಥಾಪಕಿ ಶಿರೀನ್ ತಾಜ್ ಅವರ ನೇತೃತ್ವದಲ್ಲಿ ಕೋಲಾರ ನಗರದ ಇಮ್ಮಾಕ್ಯುಲೇಟ್ ಹಾರ್ಟ್ ಆಫ್ ಮೇರಿ ಚರ್ಚ್ ಆವರಣದಲ್ಲಿ ಬೆಳಿಗ್ಗೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ನಿಗಮದ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ಘಟಕದಡಿ ಲಭ್ಯವಿರುವ ವಿವಿಧ ಯೋಜನೆಗಳಾದಂತಹ ಅರಿವು ಶೈಕ್ಷಣಿಕ ಸಾಲ, ಶ್ರಮಶಕ್ತಿ, ಶ್ರಮಶಕ್ತಿ ವಿಶೇಷ ಮಹಿಳಾ, ವೃತ್ತಿಪೋತ್ಸಹ, ಸ್ವಾವಲಂಬಿ ಸಾರಥಿ, […]
ಬೆಂಗಳೂರು : ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಪರ ಮುಖ್ಯ ಕಾರ್ಯನಿರ್ವಹಣಾಧಿಕಾರಿ (Additional CEO) ಹುದ್ದೆಗೆ ಹೊಸ ಹೆಚ್ಚುವರಿ ಪ್ರಭಾರ ನೀಡಿದೆ. ಈ ಕುರಿತ ಅಧಿಸೂಚನೆಯನ್ನು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಇಲಾಖೆ ಪ್ರಕಟಿಸಿದೆ. ಸರ್ಕಾರದ ಅಧಿಸೂಚನೆ ಸಂಖ್ಯೆ MWD-WES/20/2025, ದಿನಾಂಕ 16.08.2025ರ ಮೂಲಕ ವಕ್ಫ್ ಮಂಡಳಿಯ ಅಪರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೆಚ್ಚುವರಿ ಪ್ರಭಾರದಲ್ಲಿದ್ದ ಮನ್ಸೂರ್ ಬಾಷ, ಉಪ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಇವರ ಬದಲಿಗೆ ಇದೀಗ ಹೊಸ ಬದಲಾವಣೆ […]
ಶ್ರೀನಿವಾಸಪುರ: ಭಾರತದ ಪ್ರಥಮ ಶಿಕ್ಷಣ ಸಚಿವ ಹಾಗೂ ಪ್ರಜ್ಞಾವಂತ ಚಿಂತಕರಾದ ಮೌಲಾನಾ ಅಬುಲ್ ಕಲಾಂ ಅಜಾದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರದಾದ್ಯಂತ ಆಚರಿಸಲ್ಪಡುವ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ಶ್ರೀನಿವಾಸಪುರದಲ್ಲಿಯೂ ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಕಾರ್ಯಕ್ರಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಶ್ರೀನಿವಾಸಪುರ ಪಟ್ಟಣದ ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆ ಶಾಲೆಯಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.ಕಾರ್ಯಕ್ರಮದ ಆರಂಭದಲ್ಲಿ ಅಜಾದ್ ಅವರ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಶಿಕ್ಷಣ ತತ್ತ್ವಗಳನ್ನು ಸ್ಮರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಕೈಯಲ್ಲಿ ಹಿಡಿದ ಪುಸ್ತಕಗಳು ಬೆಳಕಿನ ದೀಪಗಳಂತೆ […]
ಶ್ರೀನಿವಾಸಪುರ : ತಾಲೂಕಿನ ಮುತ್ತಕಪಲ್ಲಿ ಗ್ರಾಮದಲ್ಲಿನ ಗ್ರಾಮಪಂಚಾಯಿತಿ ಅಧ್ಯಕ್ಷರ ಚುನಾವಣೆ ಗುರುವಾರ ನಡೆದಿದ್ದು, ಅದರಲ್ಲಿ ಗ್ರಾಮ ಗ್ರಾಮಪಂಚಾಯಿತಿ ಕೃಷ್ಣಮ್ಮ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎನ್.ರಾಜೇಶ್ ಮಾಹಿತಿ ನೀಡಿದರು.ಗ್ರಾಮಪಂಚಾಯತಿಗೆ ಸಂಬಂದಿಸಿದಂತೆ 21 ಸದಸ್ಯರ ಪೈಕಿ 14 ಸದಸ್ಯರು ಹಾಜರಾಗಿ ಉಳಿದವರು ಗೈರುಹಾಜರಾಗಿದ್ದರು. ಈ ಹಿಂದೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅಶ್ವಿನಿ.ಡಿ ರವರು ರಾಜಿನಾಮೆಯಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ರಾಜಗುಂಡ್ಲಹಳ್ಳಿ ಕೃಷ್ಣಮ್ಮ ರವರು ಅಧ್ಯಕ್ಷಗಾದೆಯು ತೆರೆವಗೊಂಡ ಸ್ಥಾನಕ್ಕೆ ಏಕನಾಮಪತ್ರ ಸಲ್ಲಿಸಿದ್ದು, ನಿಗದಿತ ಸಮಯಕ್ಕೆ ನಾಮಪತ್ರ ಸಲ್ಲಿಸಿ , […]

