
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ನಗರದ ಭೋವಿ ಕಾಲೋನಿಯಲ್ಲಿನ ಸರ್ಕಾರಿ ಶಾಲೆಯ ಬಾಡಿಗೆ ಕಟ್ಟಡ ಶಿಥಿಲಗೊಂಡಿದ್ದ ಹಿನ್ನಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಮನವೊಲಿಸಿ ಶಾಲೆಯನ್ನು ಹತ್ತಿರದ ಸಮಾಜ ಕಲ್ಯಾಣ ಇಲಾಖೆ ಬಾಲಕಿಯರ ವಸತಿ ನಿಲಯದ ಎರಡು ಕೊಠಡಿಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಂಡಿರುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ತಿಳಿಸಿದರು.ಶುಕ್ರವಾರ ಶಿಥಿಲ ಕಟ್ಟಡದಿಂದ ಮಕ್ಕಳನ್ನು ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದ ಕಟ್ಟಡಕ್ಕೆ ಸ್ಥಳಾಂತರಿಸಿದ ನಂತರ ಮಾತನಾಡಿದ ಅವರು, ಇಲ್ಲಿ ಒಂದರಿಂದ 5ನೇ ತರಗತಿ ಇದ್ದು, ಕಟ್ಟಡ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಇಲ್ಲಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮೇ.28 ರಂದು ಬೆಳಿಗ್ಗೆ 11 ಗಂಟೆಗೆ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಈ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಸ್ಮರಣೆ ಮಾಡಲಾಗುವುದು ಎಂದು ಹೇಳಿದರು.ಇದು ದೇಶ ಭಕ್ತಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಜನ್ಮಭೂಮಿ ವೇದಿಕೆ ವತಿಯಿಂದ ಜೂ. 5 ರಂದು ಬೆಳಿಗ್ಗೆ 9 ರಿಂದ ಲೋಕ ಕಲ್ಯಾಣಾರ್ಥ ಸಿಂಹಾಚಲ ವರಾಹ ಲಕ್ಷ್ಮೀನರಸಿಂಹಸ್ವಾಮಿ ಕಲ್ಯಾಣೋತ್ಸವ ಏರ್ಪಡಿಸಲಾಗಿದೆ ಎಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಹೇಳಿದರು.ಪಟ್ಟಣದ ಪಿಎಲ್ಡಿ ಬ್ಯಾಂಕ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವರ ಕಲ್ಯಾಣೋತ್ಸವವನ್ನು ಊರ ಹಬ್ಬದಂತೆ ಆಚರಿಸಲಾಗುವುದು. ಜೂ.3 ರಂದು ಸಂಜೆ 7 ಗಂಟೆಗೆ ಜಬರ್ದಸ್ತ್ ಕಲಾವಿದರಿಂದ ಹಾಸ್ಯ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜೂ.4 ರಂದು ಪಟ್ಟಣದ ರಥಬೀದಿಯಲ್ಲಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಕಟ್ಟಡದ ಮೇಲೆ ನೂತನವಾಗಿ ರೈತರ ಮಾಲ್ ನಿರ್ಮಾಣಕ್ಕೆ ಶಾಸಕ ಕೆ.ಆರ್.ರಮೇಶ್ಕುಮಾರ್ರವರು ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.ಸಭೆಯಲ್ಲಿ ಶಾಸಕ ಕೆ.ಆರ್.ರಮೇಶ್ಕುಮಾರ್ ತಾಲೂಕಿನ ಕೃಷಿ ಅಧಿಕಾರಿಗಳನ್ನು ಹಾಗೂ ಕೆಎಸ್ಆರ್ಟಿಸಿ ಅಧಿಕಾರಿಗಳನ್ನು ಒಳಗೊಂಡಂತೆ ಎಲ್ಲರನ್ನೂ ಸೇರಿಸಿ ಸಭೆಯನ್ನು ಮಾಡಿದರು. ಈ ಸಭೆಯಲ್ಲಿ ಶಾಸಕರು ತಾಲೂಕಿನ ಎಲ್ಲ ರೈತರಿಗೂ ಕೃಷಿ ಉಪಕರಣಗಳು ಹಾಗೂ ಸಬ್ಸಿಡಿಯಲ್ಲಿ ಬಿತ್ತನೆ ಬೀಜಗಳು ಯಾಂತ್ರಿಕ ಉಪಕರಣಗಳು ಹಾಗೂ ಎಲ್ಲಾ ರೀತಿಯ ಕೃಷಿ ಆಧಾರಿತ ಉಪಕರಣಗಳನ್ನು ರೈತರು ಪಡೆಯಲು […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 : ಶ್ರೀನಿವಾಸಪುರ ತಾಲೂಕು ಕಚೇರಿಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಪ್ರತಿಭಟನೆಯನ್ನು ಹಮ್ಮಿಕೊಂಡು ಜಿಲ್ಲಾಧಿಕಾರಿಯವರಿಗೆ ಮನವಿ ಪತ್ರ ಸಲ್ಲಿಸಿದರು.ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ವೀರಭದ್ರಸ್ವಾಮಿ ಮಾತನಾಡಿ ತಾಲೂಕಿನ ಕೆರೆಗಳ ಒತ್ತುವರಿ ನಡೆದಿದ್ದು, ಕೂಡಲೇ ಕೆರೆಗಳ ಒತ್ತುವರಿಗಳನ್ನು ತೆರವುಗೊಳಿಸಬೇಕು. ಒಂದು ಕೆರಯ ಒತ್ತುವರಿ ತೆರವು ಗೊಳಿಸಲು ಅಧಿಕಾರಿಗಳಿಂದ ಸಾಧ್ಯವಾಗಲಿಲ್ಲವಂದರೆ ಏನು ಅರ್ಥ ಎಂದು ಪ್ರಶ್ನಿಸಿದರು. ಒತ್ತುವರಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಜಿಲ್ಲಾದ್ಯಂತ ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಸಕಾಲಕ್ಕೆ ಪಠ್ಯ ಪುಸ್ತಕ, ಸಮವಸ್ತ್ರ ಪೂರೈಕೆ ಮಾಡಿ ಖಾಲಿ ಇರುವ ಶಿಕ್ಷಕರ ನೇಮಕ ಮಾಡಿ ಮಕ್ಕಳ ಭವಿಷ್ಯವನ್ನು ರೂಪಿಸಬೇಕೆಂದು ರೈತಸಂಘದಿಂದ ಗುಡಿಸಲು ಸಮೇತ ಡಿಡಿಪಿಐ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಡಿಡಿಪಿಐ ಕೃಷ್ಣಮೂರ್ತಿ ಅವರಿಗೆ ಮನವಿ ಸಲ್ಲಿಸಲಾಯಿತು.ದೇಶದ ಭವಿಷ್ಯ ರೂಪಿಸುವ ಶಿಕ್ಷಣ ವ್ಯವಸ್ಥೆಯನ್ನು ಸರಿಪಡಿಸದೇ ಹೋದರೆ ಮುಂದಿನ ದಿನಗಳಲ್ಲಿ ಶಿಕ್ಷಣಕ್ಕಾಗಿ ಯುವಕರು ರಾಜಕಾರಣಿಗಳ ವಿರುದ್ಧ ಕಂಡಕಂಡಲ್ಲಿ ಕಲ್ಲಿನಿಂದ ಹೊಡೆಯುವ ಕಾಲ ದೂರವಿಲ್ಲ. ಇದನ್ನು ಸರ್ಕಾರ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಭೈರವೇಶ್ವರ ವಿದ್ಯಾನಿಕೇತನದಲ್ಲಿ ಭಾನುವಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಎಂ.ಶ್ರೀರಾಮರೆಡ್ಡಿ, ನಿರ್ದೇಶಕ ಎ.ವೆಂಕಟರೆಡ್ಡಿ ಇದ್ದರು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿಯ ಪಾತ ಮುತ್ತಕಪಲ್ಲಿ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಅಶ್ವಿನಿ ಜಯಗಳಿಸಿದ್ದಾರೆ.ಮೇ.19 ರಂದು ಚುನಾವಣೆ ನಡೆದಿದ್ದು, ಭಾನುವಾರ ನಡೆದ ಮತ ಎಣಿಕೆ ನಡೆಯಿತು. ಒಟ್ಟು ಮತದಾರರ ಸಂಖ್ಯೆ 664. ಡಿ.ಅಶ್ವಿನಿ 367 ಮತ ಪಡೆದು ಗೆಲುವು ಸಾಧಿಸಿದ್ದರೆ, ಅವರ ಪ್ರತಿಸ್ಪರ್ಧಿ ಶಾಮಲಮ್ಮ 291 ಮತ ಪಡೆದಿದ್ದಾರೆ. ಕ್ಷೇತ್ರದ ಸದಸ್ಯೆ ಗುರಮ್ಮ ಅವರ ನಿಧನದಿಂದಾಗಿ ಉಪ ಚುನಾವಣೆ ನಡೆಸಲಾಯಿತು.ಗೆದ್ದ ಅಭ್ಯರ್ಥಿಯ ಬೆಂಬಲಿಗರು ಶ್ರೀನಿವಾಸಪುರದ ತಾಲ್ಲೂಕು […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಾಧನೆ ಮಾತನಾಡಬೇಕೇ ಹೊರತು, ಮಾತನಾಡುವುದೇ ಸಾಧನೆಆಗಬಾರದುಎಂದುಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಸರ್ಕಾರಿ ಶಾಲೆಯಲ್ಲಿದಾಕಲಾತಿಯನ್ನು ಹೆಚ್ಚಿಸಿಕೊಂಡು ಹಗಲಿರುಳೂ ಶ್ರಮಿಸಿ ಪ್ರಮಾಣಿಕತೆಕರ್ತವ್ಯವನ್ನು ಮಾಡುತ್ತಿರುವಶಿಕ್ಷಕರ ಸೇವೆ ಶ್ಲಾಘನೀಯವಾಗಿದೆಎಂದು ಕ.ಸಾ.ಪ. ಜಿಲ್ಲಾಧ್ಯಕ್ಷಎನ್.ಬಿ. ಗೋಪಾಲಗೌಡ ತಿಳಿಸಿದರು. ಪಟ್ಟಣದ ತ್ಯಾಗರಾಜ ಬಡಾವಣೆಯಕರ್ನಾಟಕ ಮಾದರಿ ಹಿರಿಯಪ್ರ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರ ಆದಿಯಾಗಿಈ ಶಾಲೆಯಸಮಸ್ಥ ಶಿಕ್ಷಕರಿಗೆ ತಾಲ್ಲೂಕುಕನ್ನಡ ಸಾಹಿತ್ಯ ಪರಿಷತ್ ಹಾಗೂ ಹಳೆ ವಿದ್ಯಾರ್ಥಿಗಳ ಬಳಗದ ವತಿಯಿಂದಅಭಿನಂದನಾ ಸನ್ಮಾನಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಕ.ಸಾ.ಪ. ಜಿಲ್ಲಾಧ್ಯಕ್ಷಗೋಪಾಲಗೌಡ, ಈ […]