ಶ್ರೀನಿವಾಸಪುರ : ರಾಜ್ಯ ಸರ್ಕಾರ ರೈತ ವಿರೋಧಿ ಕ್ರಮಗಳನ್ನು ಅನುಸರಿಸುತ್ತಿದ್ದು, ಅರಣ್ಯ ಇಲಾಖೆ ದೋರಣೆಯನ್ನು ಖಂಡಿಸಿ ರೈತರ ಪರ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಅಖಿಲ ಭಾರತ ಕಿಸಾನ್ ಸಂಘದ ಕಾರ್ಯದರ್ಶಿ ವಿಜುಕೃಷ್ಣ ಎಚ್ಚರಿಕೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕೆಪಿಆರ್ಎಸ್ ಹಾಗೂ ಅಖಿಲ ಭಾರತ ಕಿಸಾನ್ ಸಂಘದ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆದ ವಿಧಾನಸಭೆ ಚರ್ಚೆಯಲ್ಲಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಕೇಳಿದ ಪ್ರಶ್ನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ನೀಡಿದ ಉತ್ತರ […]
ಕೋಲಾರ : ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನವು ನಮ್ಮನ್ನು ಆವರಿಸಿಕೊಂಡಿದೆ. ಆದರೆ ನಾವು ತಂತ್ರಜ್ಞಾನಕ್ಕೆ ಗುಲಾಮರಾಗದೆ, ಅದನ್ನು ನಮ್ಮ ಹತೋಟಿಯಲ್ಲಿಟ್ಟುಕೊಂಡು ಜಾಗೃತ ಗ್ರಾಹಕರಾಗಿ ವ್ಯವಹರಿಸಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ, ‘ರಾಷ್ಟ್ರೀಯ ಗ್ರಾಹಕರ ದಿನಾಚರಣೆ 2025-26 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಈ ವರ್ಷದ ಘೋಷವಾಕ್ಯವಾದ ಡಿಜಿಟಲ್ ನ್ಯಾಯದ ಮೂಲಕ ಸಮರ್ಥ ಮತ್ತು […]
ಶ್ರೀನಿವಾಸಪುರ : ಠಾಣೆಗೆ ಯಾರೇ ಬಂದರೂ ಸೌಜನ್ಯದಿಂದ ಮಾತನಾಡಿ ಅವರ ಸಮಸ್ಯೆಗಳನ್ನ ಆಲಿಸಿ ನೊಂದು ಬಂದತವರಿಗೆ ಅಧಿಕಾರಿಗಳು ನ್ಯಾಯವನ್ನು ಒದಗಿಸಿ ನಮ್ಮ ಇಲಾಖೆಯ ಬಗ್ಗೆ ಅವರಿಗೆ ನಂಬಿಕೆ ಬರುತ್ತದೆ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನಿಕಾ ಸಕ್ರಿವಾಲಾ ಹೇಳಿದರು.ಪಟ್ಟಣದ ಪೊಲೀಸ್ ಠಾಣೆಗೆ ಶನಿವಾರ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿಡೀರ್ ಬೇಟಿ ನೀಡಿ ಕಾನೂನು ವ್ಯವಸ್ಥೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಬ್ಬಂದಿ ಕಡಿಮೆ ಇದೆ ಸುಗಮ ಸಂಚಾರಕ್ಕೆ ಹೆಚ್ಚು ಆದ್ಯತೆ ನೀಡಬೇಕು […]
ಶ್ರೀನಿವಾಸಪುರ : ಜೀವನವೆಂಬ ನದಿಯು ಹರಿ ಹರಿಯುತ್ತ ತನ್ನಲ್ಲಿನ ಕಲ್ಮಶವನ್ನು ತೊಳೆದು, ನಿಕಲ್ಮಶವಾದ ನೀರಾದಾಗ ಅದು ನಮ್ಮನ್ನು ಕಾಪಾಡುತ್ತದೆ ಜೀವನವೆಂಬ ಸಾಗರವನ್ನು ಸಾಗಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಹೇಳಿದರು.ತಾಲೂಕಿನ ರಾಯಲ್ಪಾಡು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗು ಪ್ರೌಡಶಾಲಾವರಣದಲ್ಲಿ ಶನಿವಾರ ಅರಿವು ಕೇಂದ್ರ ವತಿಯಿಂದ ಅರಿವು ಭಾರತ ಅಡಿಯಲ್ಲಿ ನಮ್ಮ ನಡೆ ಅಸ್ಪೃಶ್ಯತೆ ಮುಕ್ತ ಭಾರತದೆಡೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇಂದು ಅರಿವು ಕೇಂದ್ರವು ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವ ಮತ್ತು ಸಾಮಾಜಿಕ ಸಮಾನತೆಯನ್ನು […]
ಶ್ರೀನಿವಾಸಪುರ : ಶುಕ್ರವಾರ ತಮ್ಮ ಮನಗೆ ಬಂದ ಆಂಧ್ರದ ಚೀಕಲಬೈಲು ಗ್ರಾಮದ ನಿವಾಸಿ ಗಂಗುಲಮ್ಮರವರನ್ನ ಪರಿಚಿಯಿಸಿಕೊಂಡು ಗಂಗುಲಮ್ಮ ರವರೊಂದಿಗೆ ಕ್ಷೇಮಸಮಚಾರಗಳನ್ನು ಮಾತನಾಡುತ್ತಾ, ತಮ್ಮ ಹಳೆ ನನೆಪುಗಳನ್ನು ಮಾತನಾಡಿ ಗಂಗಲಮ್ಮ ರವರು ಅಡ್ಡಗಲ್ ಗ್ರಾಮದ ತಲಾರಿ ಗಂಗುಲಪ್ಪ ಮತ್ತು ಕದಿರೆಕ್ಕ ದಂಪತಿಗಳ ಐದನೇ ಮಗಳು ಈ ದಂಪತಿಗಳಿಗೆ ಒಟ್ಟು ಆರು ಜನ ಹೆಣ್ಣು ಮಕ್ಕಳು ಮೊದಲನೇ ಅವರು ಸೀತಕ್ಕ ನಂತರ ರಾಮಕ್ಕ ನಂತರ ಸಾಲಮ್ಮ ನಂತರ ನರಸಮ್ಮ ಐದನೇ ಅವಳು ಗಂಗೂ ಆರನೇವಳು ಸುಬ್ಬಮ್ಮ ಆರು ಹೆಣ್ಣು ಮಕ್ಕಳನ್ನು […]
ಕೋಲಾರ : ಅಲ್ಪಸಂಖ್ಯಾತರ ಸಮುದಾಯಕ್ಕಾಗಿ ಜಾರಿಗೊಳಿಸಲಾಗಿರುವ ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಾದ ಮೂಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ವಿವಿಧ ಇಲಾಖೆಗಳಡಿ ಅಲ್ಪಸಂಖ್ಯಾತರಿಗಾಗಿ ಇರುವ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ನಿರ್ದೇಶನ ನೀಡಿದರು. ಶೈಕ್ಷಣಿಕ ಸೌಲಭ್ಯ ಕಲ್ಪಿಸುವುದು, ತಂತ್ರಜ್ಞಾನ […]
ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರು – ಶಿಕ್ಷಕರ ಸಭೆ ಕಡ್ಡಾಯ : ಶಿಕ್ಷಣ ಇಲಾಖೆ ಕ್ರಮಕ್ಕೆ ಸ್ವಾಗತ – ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರು–ಶಿಕ್ಷಕರ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶವನ್ನು ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮ ಸಮಿತಿಯ ಸದಸ್ಯ ಶಬ್ಬೀರ್ ಅಹ್ಮದ್ ಸ್ವಾಗತಿಸಿದ್ದಾರೆ. ಈ ಕ್ರಮದಿಂದ ಶಾಲೆ, ಶಿಕ್ಷಕರು ಹಾಗೂ ಪೋಷಕರ ನಡುವೆ ಸಮನ್ವಯ ಮತ್ತಷ್ಟು ಬಲಪಡಲಿದ್ದು, ವಿದ್ಯಾರ್ಥಿಗಳ […]
ಶ್ರೀನಿವಾಸಪುರ : ಈಗಾಗಲೇ ಅರಣ್ಯ ಇಲಾಖೆ ಹಾಕಿರುವ ಸಿಮೆಂಟ್ ಪಿಲ್ಲರ್ಗಳನ್ನು ಗುರುವಾರದೊಳಗೆ ತೆರವುಗೊಳಿಸದಿದ್ದರೆ ಸ್ವಇಚ್ಛೆಯಿಂದಲೇ ರೈತರೇ ತೆರವುಗೊಳಿಸುತ್ತಾರೆ ಎಂದು ಕೆಪಿಆರ್ಎಸ್ ರಾಜ್ಯ ಉಪಾಧ್ಯಕ್ಷ ಪಿ.ಆರ್. ಸೂರ್ಯನಾರಾಯಣ ಎಚ್ಚರಿಸಿದರು.ಭೂಸಂತ್ರಸ್ಥ ಹೋರಾಟ ಸಮಿತಿಯ ವತಿಯಿಂದ ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಿಂದ ವಲಯ ಅರಣ್ಯಾಧಿಕಾರಿಗಳ ಕಚೇರಿವರೆಗೆ ರೈತರು ಅರಣ್ಯ ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾವು ಬೆಳಗಾರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ, ರೈತರ ಜಮೀನುಗಳಿಗೆ ಅತಿಕ್ರಮ ಪ್ರವೇಶ ಮಾಡಿ ಉತ್ತರ […]
ಶ್ರೀನಿವಾಸಪುರ: ಯದರೂರು ಲಕ್ಷ್ಮಿಪುರ ಪ್ರದೇಶದಲ್ಲಿ ಕೈಗಾರಿಕಾ ವಲಯವನ್ನು ಸ್ಥಾಪಿಸಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶ ನನ್ನದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ತೊಟ್ಲಿ ಗ್ರಾಮದ ಶ್ರೀ ಸಾಯಿಬಾಬಾ ದೇವಸ್ಥಾನದಲ್ಲಿ ಗುರುವಾರ ಭಕ್ತಾದಿಗಳಿಂದ ಆಯೋಜಿಸಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೈಗಾರಿಕಾ ವಲಯ ಸ್ಥಾಪನೆಗೆ ಕೆಲವರು ಅನಗತ್ಯ ಅಡ್ಡಿಪಡಿಸುತ್ತಿರುವುದು ನೋವುಂಟು ಮಾಡಿದೆ. ಕೈಗಾರಿಕಾ ವಲಯ ಸ್ಥಾಪನೆ ಹಾಗೂ ಕ್ಷೇತ್ರದ ಅಭಿವೃದ್ಧಿಯಿಂದ ನಾನು ಏನಾದರೂ ಸ್ವಾರ್ಥ ಸಾಧಿಸಿಕೊಳ್ಳುತ್ತಿದ್ದೇನೆಯೇ ಎಂದು ಬೇಸರ ವ್ಯಕ್ತಪಡಿಸಿದರು.ಬುಧವಾರ ಶ್ರೀನಿವಾಸಪುರ […]

