
ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ಎಲ್ಲಾ ಸೌಲಭ್ಯಗಳನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಡಾ || ಬಿ.ಆರ್ . ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಮುಳಬಾಗಿಲು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹೆಚ್.ನಾಗೇಶ್ ಅವರು ತಿಳಿಸಿದರು .ಇಂದು ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ನಾಗೇನಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ” – ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ […]

ವರದಿ: ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಜನರು ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು . ಸಮಸ್ಯೆಗಳನ್ನು ಹೊತ್ತುಕೊಂಡು ತಾಲ್ಲೂಕು ಕೇಂದ್ರದ ಕಚೇರಿಗಳಿಗೆ ಅಲೆಯುವುದನ್ನು ಬಿಡಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು . ತಾಲ್ಲೂಕಿನ ಚೌಡದೇನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಶನಿವಾರ ಏರ್ಪಡಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ , ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು . ಆಯಾ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಭವಿಷ್ಯಕ್ಕೆ ಬೇಕಾಗಿರುವ ಸರ್ವರೂ ಆತ್ಮವಂಚನೆ ಇಲ್ಲದೆ ಅನುಸರಿಸಬಹುದಾದ ಬೌದ್ಧ ನವಯಾನವನ್ನು ನಮಗೆ ನಾವೇ ರೂಪಿಸಿಕೊಳ್ಳಬೇಕಿದೆ ಎಂದು ಸಾಹಿತಿ ಚಿಂತಕ ಕೋಟಿಗಾನಹಳ್ಳಿ ರಾಮಯ್ಯ ಹೇಳಿದರು.ಕೋಲಾರದ ತಥಾಗತ ಬುದ್ಧ ಧರ್ಮ ಪ್ರಚಾರ ಸಮಿತಿ, ಸಾಮಾಜಿಕ ಸಂಘರ್ಷಸಮಿತಿ ಚಿತ್ರದುರ್ಗ, ಮಂಡ್ಯ ಬೆಳಕುಸಮಾಜವತಿಯಿಂದ ನಗರದ ನಚಿಕೇತ ನಿಲಯದ ಬುದ್ಧ ವಿಹಾರದಲ್ಲಿ ಶನಿವಾರ ಆಯೋಜಿಸಲಾಗಿದ್ದ ಬೌದ್ಧ ಧಮ್ಮದ ಪುನಶ್ಚೇತನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಅಂಬೇಡ್ಕರ್ ಅವರು ಬೌದ್ಧ ಧರ್ಮವನ್ನು ಒಪ್ಪಲು ಬಹುದೊಡ್ಡ ರಾಜಕೀಯ ಚಿಂತನೆಗಳಿದ್ದವು, ನವಬೌದ್ಧರಾಗಬೇಕಾದವರು ಅಂಬೇಡ್ಕರ್ ಹೇಳಿದ 22 […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಏ.16 : ಕೋಲಾರ ತಾಲ್ಲೂಕು, ವೇಮಗಲ್ ಹೋಬಳಿ, ಬೆಳಮಾರನಹಳ್ಳಿ ಗ್ರಾಮದ ಪರಿಶಿಷ್ಟ ಜಾತಿಯ ಜಮೀನುಗಳಿಗೆ ಹೋಗುವ ಕಾಲುದಾರಿಯನ್ನು ಸವರ್ಣೀಯರು ಒತ್ತುವರಿ ಮಾಡಿಕೊಂಡು ಮುಚ್ಚಿಹಾಕಿದ್ದು, ಇದನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಾಮಾಜಿಕ ಕಾರ್ಯಕರ್ತ ರಂಜಿತ್ ಬಿ.ಎಂ ಒತ್ತಾಯಿಸಿದ್ದಾರೆ.ಪರಿಶಿಷ್ಟ ಜಾತಿಯ ಜಮೀನುಗಳಿಗೆ ಹೋಗುವ ರಸ್ತೆ ಹಾಗೂ ಈ ಜಮೀನುಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದು, ಈ ಮನೆಗಲ್ಲಿ ತುಂಬುಗರ್ಭಿಣಿಯರು ಹಾಗೂ ಹಿರಿಯ ನಾಗರೀಕರು ಇದ್ದು, ಇವರಿಗೆ ಏನಾದರೂ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ದಾರಿಯಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕಾರ್ಯಕರ್ತರು ಪಕ್ಷದ ಸಂಘಟನೆಯನ್ನು ಬಲಪಡಿಸಬೇಕು. ಯಾವುದೇ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯ ಗೆಲುವಿಗೆ ಸಾಂಘಿಕ ಪ್ರಯತ್ನ ಮಾಡಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ಯರ್ರಂವಾರಿಪಲ್ಲಿ ಗ್ರಾಮದಲ್ಲಿ ಏರ್ಪಡಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ರಾಜ್ಯದ ನದಿಗಳ ನೀರನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಉದದೇಶದಿಂದ ಜೆಡಿಎಸ್ ಜನತಾ ಜಲಧಾರೆ ಯಾತ್ರೆ ಕೈಗೊಂಡಿದೆ ಎಂದು ಹೇಳಿದರು.ಜನತಾ ಜಲಧಾರೆ ಯಾತ್ರೆ ಏ.25 ರಂದು ತಾಲ್ಲೂಕಿನಲ್ಲಿ ನಡೆಯಲಿದೆ. ಅಂದು ಆಗಮಿಸಲಿರುವ ಜಲ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಮುದಿಮಡಗು ವ್ಯವಸಾಯ ಸೇವಾ ಸಹಕಾರ ಸಂಘದ ಪದಾಧಿಕಾರಿಗಳಾಗಿ ಬಿ.ವಿ.ಶ್ರೀನಿವಾಸರೆಡ್ಡಿ (ಅಧ್ಯಕ್ಷ), ಕೆ.ಜಿ.ಭೂಚಕ್ರರೆಡ್ಡಿ (ಉಪಾಧ್ಯಕ್ಷ), ದಸ್ತಗಿರಿ ಸಾಬ್, ಯರ್ರಪ್ಪ, ಸಿ.ವಿ.ವೆಂಕಟರವಣ, ಎಂ.ಎಸ್.ರೆಡ್ಡಿ, ಚಾನ್ ಪಾಷ, ಆರ್,ನಾರಾಯಣರೆಡ್ಡಿ, ವಿ.ಎಸ್.ಗಂಗುಲಪ್ಪ, ಲಕ್ಷ್ಮಣ್ಣ, ರವಣಮ್ಮ, ಶಾಂತಮ್ಮ (ನಿರ್ದೇಶಕರು) ಅವಿರೋದ ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿ ಎಂ.ಶಂಕರ್, ಡಿಸಿಸಿ ಬ್ಯಾಂಕ್ ನಿದೇಶಕ ವೆಂಕಟರೆಡ್ಡಿ, ಸಂಘದ ಕಾರ್ಯದರ್ಶಿ ಕೆ.ವೇಣುಗೋಪಾಲ್, ಮುಖಂಡ ಅಶ್ವತ್ಥರೆಡ್ಡಿ ಇದ್ದರು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ದೇಶದಲ್ಲಿನ ಅಸಮಾನತೆ,ಶೋಷಣೆ ತೊಡೆದು ಹಾಕುವಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಪ್ರಮುಖ ಅಸ್ತ್ರವಾಗಿದೆ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್ ಕುಮಾರ್ ಅಭಿಪ್ರಾಯಪಟ್ಟರು.ಗುರುವಾರ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು.ಬಡತನದಲ್ಲಿ ಬಂದರೂ ಸಾಧನೆಯ ಶಿಖರವೇರಿದ ಅವರ ಆದರ್ಶವನ್ನು ಪಾಲಿಸುವಂತೆ ಮಕ್ಕಳಿಗೆ ಕರೆ ನೀಡಿದರು.ಅಂಬೇಡ್ಕರ್ ಓರ್ವ ವ್ಯಕ್ತಿಯಾಗಿರಲಿಲ್ಲ, ಈ ಸಮಾಜದಲ್ಲಿ ಬದಲಾವಣೆ ಬಯಸಿದ್ದ ಮಹಾನ್ ಶಕ್ತಿಯಾಗಿದ್ದರು […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಅಂಬೇಡ್ಕರ್ ವಿಶ್ವದ ಎಲ್ಲಾ ಧರ್ಮಗ್ರಂಥಗಳು ಹಾಗೂ ಸಂವಿಧಾನಗಳನ್ನು ಅಧ್ಯಯನ ಮಾಡಿ ಸರ್ವರಿಗೂ ಸಮಾನ ಅವಕಾಶಗಳುಳ್ಳ ಸಂವಿಧಾನವನ್ನು ನೀಡಿದ್ದಾರೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಮಘದ ಅಧ್ಯಕ್ಷ ಜಿ.ಸುರೇಶ್ಬಾಬು ತಿಳಿಸಿದರು.ನಗರದ ಜಿಲ್ಲಾ ನೌಕರರ ಭವನದಲ್ಲಿ ಗುರುವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ 131 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು.ಮಾನವೀಯತೆ ಸೌಹಾರ್ದತೆ ಮತ್ತು ಭ್ರಾತೃತ್ವ, ಜಾತ್ಯತೀತ ಮನೋಧರ್ಮದ ತಳಹದಿಯಲ್ಲಿ ಭಾರತದ ಸಂವಿಧಾನ ರಚನೆಯಾಗಿದೆ, ಶೋಷಣೆ, ಅಸಮಾನತೆ ತೊಡೆದು ಹಾಕಲು […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಸರ್ವರಿಗೂ ಸಮಾನ ಹಕ್ಕುಗಳನ್ನು ನೀಡಿದ ಅಂಬೇಡ್ಕರ್ ಆದರ್ಶವನ್ನು ಪ್ರತಿಯೊಬ್ಬರೂ ಪಾಲಿಸಬೇಕೆಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಹೇಳಿದರು.ನಗರದ ಭಾರತ ಸೇವಾದಳ ಕಚೇರಿಯಲ್ಲಿ ಅಂಬೇಡ್ಕರ್ 131 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಶ್ವಜ್ಞಾನಿ ಅಂಬೇಡ್ಕರ್ ಜಯಂತಿಯನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ, ಇಂತಹ ಮಹಾಪುರುಷ ಭಾರತದಲ್ಲಿ ಜನಿಸಿದವರು ಎಂದು ಹೇಳಿಕೊಳ್ಳುವುದು ನಮ್ಮೆಲ್ಲರ ಹೆಮ್ಮೆ ಎಂದರು.ಅಧ್ಯಕ್ಷತೆವಹಿಸಿದ್ದ ಭಾರತ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಮಾತನಾಡಿ, ಯಾವ ದೇಶದಲ್ಲಿ ಗುಡಿ, ಮಸೀ„ ಚರ್ಚುಗಳಿಗಿಂತಲೂ ಶಾಲಾ ಕಾಲೇಜು, ಗ್ರಂಥಾಲಯಗಳು […]