
ಕೋಲಾರ,ಅ.07: ಅಸಂಘಟಿತ ಕಾರ್ಮಿಕರ ಹಾಗೂ ಕಲಾವಿದರ ಅಭಿವೃದ್ಧಿ ಸಂಸ್ಥೆ ಬೆಂಗಳೂರು, ಕರ್ನಾಟಕ ಕಲಾ ಸಂಘ, ತಿರುಮಲ ಟ್ರಸ್ಟ್ ಕೋಲಾರ, ಸಂಜೀವಿನಿ ಜಾನಪದ ಕಲಾ ಸಂಸ್ಥೆ ಐತರಾಸನಹಳ್ಳಿ ಜ್ಞಾನ ಪ್ರಚಾರ ಶೈಕ್ಷಣಿಕ ಹಾಗೂ ಕ್ರೀಡಾ ಸಂಸ್ಥೆ ವೇಮಗಲ್ ಇವರ ಸಂಯುಕ್ತಾಶ್ರಯದಲ್ಲಿ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಿವೃತ್ತ ಶಿಕ್ಷಕ ಹಾಗೂ ಕಲಾವಿದ ಬೀರಮಾನಹಳ್ಳಿ ಡಾ.ಬಿ.ವಿ.ವೆಂಕಟಗಿರಿಯಪ್ಪರಿಗೆ ಅಭಿನಂದನೆ ಹಾಗೂ ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿತ್ತು.ಜಿಲ್ಲಾಧಿಕಾರಿ ಅಕ್ರಂಪಾಷ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗಡಿನಾಡು ಕೊಲಾರ ಜಿಲ್ಲೆ ಸಂಸ್ಕøತಿ […]

ಕೋಲಾರ; ಅ.7: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ವಿಶೇಷತಂಡ ರಚನೆ ಮಾಡಿ ಬಡ ರೈತ ಕೂಲಿಕಾರ್ಮಿಕರ ಮಾಂಗಲ್ಯ ರಕ್ಷಣೆ ಮಾಡಬೇಕೆಂದು ಆಗ್ರಹಿಸಿರೈತಸಂಘದಿಂದ ಅಬಕಾರಿ ಆಯುಕ್ತರಿಗೆ ಗಿಡ ನೀಡಿ ಸ್ವಾಗತಿಸಿ, ಮನವಿ ಸಲ್ಲಿಸಲಾಯಿತು.ಜಿಲ್ಲೆಯಲ್ಲಿ ಕಿಲೋಮೀಟರ್ಗಟ್ಟಲೆ ಅಲೆದಾಡಿದರೂ ಕುಡಿಯಲು ಹನಿ ನೀರಿಗೆ ಆಹಾಕಾರಇದೆಯೇ ಹೊರತು ಜಿಲ್ಲಾದ್ಯಂತ ಯಾವುದೇ ಗ್ರಾಮೀಣ ಪ್ರದೇಶಗಳ ದಿನಸಿ ಅಂಗಡಿಗಳಲ್ಲಿರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಡಾಬಾಗಳಲ್ಲಿ ದಿನದ 24 ಗಂಟೆ ಮದ್ಯ ಮಾರಾಟನಿರಂತರವಾಗಿ ನಡೆಯುತ್ತಿದ್ದರೂ ಕ್ರಮಕೈಗೊಳ್ಳಬೇಕಾದ ಅಬಕಾರಿ ಇಲಾಖೆ ಅಧಿಕಾರಿಗಳು ನೆಪಮಾತ್ರಕ್ಕೆ ದಾಳಿ ಮಾಡಿ […]

ಶ್ರೀನಿವಾಸಪುರ : ಪಟ್ಟಣದ ನೌಕರರ ಭವನದಲ್ಲಿ ಶುಕ್ರವಾರ ನೌಕರರ ಚುನಾವಣೆಯ ಬಗ್ಗೆ ಪತ್ರಿಕಾ ಗೋಷ್ಟಿ ನಡೆಸಿ ಮಾತನಾಡಿದರು.ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವಿ.ಜನಾರ್ಧನ್ ಮಾತನಾಡಿ 2024-29 ರ ಸಾಲಿನ ಚುನಾವಣೆಯ ರಾಜ್ಯ ನೌಕರರ ಚುನಾವಣಾ ಅಧಿಕಾರಿ ಎಸ್.ಹನುಮನರಸಯ್ಯ ರವರು ಅದಿಸೂಚನೆಯನ್ನು ಹೊರಡಿಸಿದ್ದು, ತಾಲೂಕು ಶಾಖೆಯಿಂದ 9-10-24 ರಂದು ನಾಮಪತ್ರ ಸಲ್ಲಿಕೆ, 21-10-24 ಉಮೇದುವಾರಿಕೆಯನ್ನು ವಾಪಸ್ಸು ಪಡೆಯುವುದು 28-10 -24 ನಿರ್ದೇಶಕರ ಚುನಾವಣೆ ನಡೆಯಲಿದೆ. ಚುನುವಾಣಾಧಿಕಾರಿಯಾಗಿ ನಿವೃತ್ತ ಮುಖ್ಯ ಶಿಕ್ಷಕ ಐಮಾರೆಡ್ಡಿ ನೇಮಕಮಾಡಲಾಗಿದೆ ಚುನಾವಣೆಯ ಪಕ್ರಿಯೆಯನ್ನು ಕಾರ್ಯನಿರ್ವಹಿಸಲಿದ್ದಾರೆ ಎಂದು […]

ನಿವಾಸಪುರ ಹೊರವಲಯದಲ್ಲಿನ ಭೈರವೇಶ್ವರ ವಿದ್ಯಾನಿಕೇತನದಲ್ಲಿ ಶನಿವಾರ ಏರ್ಪಡಿಸಿದ್ದ ಕಲೋತ್ಸವ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳ ಪ್ರದರ್ಶನವನ್ನು ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಉದ್ಘಾಟಿಸಿದರು. ವಿದ್ಯಾರ್ಥಿಗಳು ಸಂಸ್ಕಾರ ಮೈಗೂಡಿಸಿಕೊಂಡು ಬೆಳೆಯಬೇಕು ಶ್ರೀನಿವಾಸಪುರ: ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಮೈಗೂಡಿಸಿಕೊಂಡು ಬೆಳೆಯಬೇಕು. ಕಲೆ, ಸಾಹಿತ್ಯ ಹಾಗೂ ಸಂಸ್ಕøತಿಯನ್ನು ಗೌರವಿಸಬೇಕು ಎಂದು ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಹೇಳಿದರು.ಪಟ್ಟಣದ ಹೊರವಲಯದಲ್ಲಿನ ಭೈರವೇಶ್ವರ ವಿದ್ಯಾನಿಕೇತನದಲ್ಲಿ ಶನಿವಾರ ಏರ್ಪಡಿಸಿದ್ದ ಕಲೋತ್ಸವ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ […]

ಶ್ರೀನಿವಾಸಪುರ : ಪಾದಚಾರಿಗಳಿಗೆ ಪಾದವಿಡುವ ಬಾಗ್ಯವನ್ನು ರಸ್ತೆ ಬದಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವ ಮೂಲಕ ಅಧಿಕಾರಿಗಳು ಅನುವುಮಾಡಿಕೊಟ್ಟಿದ್ದಾರೆ. ಶ್ರೀನಿವಾಸಪುರ ಪಟ್ಟಣದ ಮುಖ್ಯ ರಸ್ತೆಯಾದ ಎಂ ಜಿ ರಸ್ತೆಯಲ್ಲಿ ಸುಮಾರು ವರ್ಷಗಳಿಂದ ಅಕ್ರಮವಾಗಿ ಯಾವುದೇ ಪರವಾನಗೆ ಪಡೆಯದೇ ನಿರ್ಮಿಸಿಕೊಂಡಿದ್ದ ಪೆಟ್ಟಿಗೆ ಅಂಗಡಿಗಳನ್ನು ತಾಲ್ಲೂಕು ದಂಡಾಧಿಕಾರಿ ಹಾಗೂ ಪುರಸಭೆ ಮುಖ್ಯಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ತೆರವುಗೊಳಿಸಿದ್ದಾರೆ. ಸರ್ಕಾರ ರಸ್ತೆ ಬದಿಯಲ್ಲಿ ಚರಂಡಿ ವ್ಯವಸ್ಥೆ ಹಾಗೂ ಪಾದಚಾರಿಗಳಿಗೆ ಸಂಚರಿಸಲು ಒಂದಿಷ್ಟು ಸ್ಥಳ ಮೀಸಲಿಟ್ಟಿದ್ದು ತಾಲ್ಲೂಕು ಆಡಳಿತ ಮತ್ತು ಪುರಸಭೆ ಅಧಿಕಾರಿಗಳಿಂದ […]

ಕೋಲಾರ,ಅ.03: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯದರೂರು ಗ್ರಾಮದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕೈಗಾರಿಕಾ ವಲಯವನ್ನು ಬೇರೆ ಕಡೆಗೆ ವರ್ಗಾಯಿಸುವಂತೆ ಒತ್ತಾಯಿಸಿ, ಯದರೂರು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಆಕ್ರಂಪಾಷರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಎನ್.ಜಿ ಬ್ಯಾಟಪ್ಪ ಮಾತನಾಡಿ, ಶ್ರೀನಿವಾಸಪುರ ತಾಲೂಕಿನ ಎದರೂರು ಗ್ರಾಮಗಳ ಸರ್ವೆ ನಂಬರ್ ಸುಮಾರು ಒಂದು ಸಾವಿರದ 273 ಎಕರೆ 24ವರೆ ಗುಂಟೆಯ ಜಮೀನಿನ ಮಾಲೀಕರು ಕುಟುಂಬದವರ ಹಲವಾರು ದಶಕಗಳಿಂದ ಕೃಷಿ ವಲಯವನ್ನು ನಂಬಿಕೊಂಡು, […]

ಶ್ರೀನಿವಾಸಪುರ: ರೋಟರಿ ಸಂಸ್ಥೆಯು ಅನೇಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಪುರಸಭೆಯ ಸಿಬ್ಬಂದಿಗೆ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದೆ ಎಂದು ಪುರಸಭಾ ಅಧ್ಯಕ್ಷ ಭಾಸ್ಕರ್ ತಿಳಿಸಿದರು.ಪಟ್ಟಣದ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಹಾಗೂ ವಾಸನ್ ಐ ಕೇರ್ ವತಿಯಿಂದ ಪುರಸಭಾ ಸಿಬ್ಬಂಧಿಗೆ ಉಚಿತ ನೇತ್ರ ತಪಾಸಣಾ ಶಿಭಿರಕ್ಕೆ ಚಾಲನೆ ನೀಡಿ ಮಾತನಾಡಿದ ಭಾಸ್ಕರ್, ರೋಟರಿ ಸಂಸ್ಥೆಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅನೇಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ, ಶ್ರೀನಿವಾಸಪುರ ತಾಲ್ಲೂಕಿನಲ್ಲಿಯೂ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಇನ್ನೂ ಇಂತಹ […]

ಶ್ರೀನಿವಾಸಪುರ : ಸಚಿವ ಕೆ.ಎಚ್. ಮುನಿಯಪ್ಪ ರವರನ್ನು ಅಸಭ್ಯ ವರ್ತನೆಯಿಂದ ಅವಾಚ್ಯ ಶಬ್ದಗಳನ್ನು ಮಾತನಾಡಿ ನಮ್ಮ ಸಮುದಾಯವನ್ನು ನಮ್ಮನ್ನು ಕೀಳಮಟ್ಟದಿಂದ ಬೈಯ್ದಿರುವ ಆರೋಪಿಗಳ ಬಗ್ಗೆ ದೂರು ಸಲ್ಲಿಸಿ ಮೂರು ದಿನಗಳು ಆದರೂ ಸಹ ಇದುವರೆಗೂ ಬಂದಿಸಿಲ್ಲ . ಆರೋಪಿಗಳನ್ನು ಅತಿ ಶೀಘ್ರವಾಗಿ ಬಂದಿಸುವಂತೆ ಆದಿಜಾಂಭವ ಸೇವಾ ಸಮಿತಿಯ ಅಧ್ಯಕ್ಷ ಸಿ.ಮುನಿಯಪ್ಪ ಒತ್ತಾಯಿಸಿದರು.ಪಟ್ಟಣದ ಪೊಲೀಸ್ ಠಾಣೆಗೆ ಗುರುವಾರ ಆದಿಜಾಂಭವ ಸೇವಾ ಸಮಿತಿಯಿಂದ ಮುತ್ತಿಗೆ ಹಾಕಿ ಮಾತನಾಡಿದರು.ನಾವು ಆರೋಪಿಗಳ ವಿರುದ್ದ ದೂರು ಸಲ್ಲಿಸಿ ಮೂರು ದಿನಗಳು ಕಳೆದರೂ ಸಹ ಇದುವರೆಗೂ […]

ಶ್ರೀನಿವಾಸಪುರ : ಸಚಿವ ಕೆ.ಎಚ್. ಮುನಿಯಪ್ಪ ರವರನ್ನು ಅಸಭ್ಯ ವರ್ತನೆಯಿಂದ ಅವಾಚ್ಯ ಶಬ್ದಗಳನ್ನು ಮಾತನಾಡಿ ಹಾಡಿ ನಮ್ಮ ಸಮುದಾಯವನ್ನು ನಮ್ಮನ್ನು ಕೀಳಮಟ್ಟದಿಂದ ಬೈಯ್ದಿರುವ ಅಡವಿಚಂಬಕೂರು ಗ್ರಾಮದ ಗೋಪಾಲ್ ಊರುಫ್ ಯರ್ರಾಬರ್ರಿ ಗೋಪಾಲ್ ಮತ್ತು ಹರಿನಾಥರೆಡ್ಡಿ ಉರುಫ್ ಹರಿ ಜೆ.ಎಸ್ ರೆಡ್ಡಿ ರವರನ್ನ ಬಂದಿಸುವಂತೆ ಆದಿಜಾಂಭವ ಸೇವಾ ಸಮಿತಿಯ ಅಧ್ಯಕ್ಷ ಸಿ.ಮುನಿಯಪ್ಪ, ಪ್ರದಾನ ಕಾರ್ಯದರ್ಶಿ ಎನ್.ವೆಂಕಟರಮಣಪ್ಪ, ನೇತೃತ್ವದಲ್ಲಿ ಹಾಗು ಆಧಿಜಾಂಭವ ಚಾರಿಟೆಬಲ್ ಟ್ರಸ್ಟ್ನ ಸದಸ್ಯರು ಆಗ್ರಹಿಸಿದರು.ಪಟ್ಟಣದ ಪೊಲೀಸ್ ಠಾಣೆಗೆ ಮಂಗಳವಾರ ಗೋಪಾಲ್ ಊರುಫ್ ಯರ್ರಾಬರ್ರಿ ಗೋಪಾಲ್ ಮತ್ತು ಹರಿನಾಥರೆಡ್ಡಿ […]