
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷಗಿರಿಗೆ ಸಂಬಂಧಿಸಿದಂತೆ ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆದಿರುವ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು, ಅನಗತ್ಯ ಹೇಳಿಕೆಗಳನ್ನು ನೀಡುವ ಮೂಲಕ ಸಂಘಟನೆಗೆ ಹಿನ್ನಡೆಯುಂಟು ಮಾಡಿದ್ದ ಕೆಲವರಿಗೆ ಶಿಸ್ತುಕ್ರಮದ ಎಚ್ಚರಿಕೆಯ ಸಂದೇಶವನ್ನೂ ರವಾನಿಸಿದ್ದಾರೆ.ರಾಜ್ಯಾಧ್ಯಕ್ಷರು,ಪ್ರಧಾನಕಾರ್ಯದರ್ಶಿ,ಖಜಾಂಚಿಯವರ ಸಮಕ್ಷಮದಲ್ಲಿ ಕಳೆದ ಜ.12 ರಂದು ನಡೆದ ಜಿಲ್ಲಾ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಂಘದ ಬೈಲಾ ನಿಯಮಗಳನ್ವಯ ಹಾಜರಿದ್ದ ಎಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ಜಿ.ಸುರೇಶ್ಬಾಬು ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಪ್ರತ್ಯೇಕ ತಾಲ್ಲೂಕು ಆಗಿರುವ ಕೆಜಿಎಫ್ಗೆ ಕೂಡಲೇ ಎಪಿಎಂಸಿ, ಟಿಎಪಿಸಿಎಂಎಸ್ ಹಾಗೂ ಪಿಸಿಆರ್ಡಿ ಬ್ಯಾಂಕ್ಅನ್ನು ಪ್ರತ್ಯೇಕಗೊಳಿಸಿ ಮಂಜೂರು ಮಾಡುವಂತೆ ಶಾಸಕಿ ರೂಪಕಲಾ ಶಶಿಧರ್ ಮಾಡಿದ ಮನವಿಗೆ ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಸ್ವಷ್ಟ ಭರವಸೆ ಸಿಕ್ಕಿದೆ.ಮಂಗಳವಾರ ಸಚಿವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿರುವ ಅವರು, ಕೆಜಿಎಫ್ಅನ್ನು ಹೊಸ ತಾಲ್ಲೂಕಾಗಿ ಘೋಷಿಸಿ 4 ವರ್ಷ ಉರುಳಿದೆ, ಇನ್ನೂ ತಾಲ್ಲೂಕಿನಲ್ಲಿ ಇರಬೇಕಾದ ಕೃಷಿ ಉತ್ಪನ್ನ ಮಾರುಕಟ್ಟೆ,ತಾಲ್ಲೂಕು ಸೊಸೈಟಿ, ಪಿಸಿಆರ್ಡಿ ಬ್ಯಾಂಕ್ ಪ್ರತ್ಯೇಕಗೊಳಿಸಿಲ್ಲ […]

JANANUDI.COM NETWORK ಉಡುಪಿ : ಕೋವಿಡ್ ವೈರಸ್ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ 50ಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳಿರುವ ಗ್ರಾಮ ಪಂಚಾಯ್ ಗಳ ಗಡಿಗಳನ್ನು ಸೀಲ್ ಡೌನ್ ಜಾರಿ ಮಾಡಲಾಗಿದ್ದು, ಇದೀಗ ಸೀಲ್ ಡೌನ್ ಗ್ರಾಮಗಳಲ್ಲಿ ಜನರಿಗೆ ಅಗತ್ಯ ಸಾಮಾನುಗಳನ್ನು ಖರೀದಿಸಲಿಕ್ಕಾಗಿ ಜೂನ್ 7 ಮತ್ತು 8 ರಂದು ಅವಕಾಶ ಕಲ್ಪಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ 50ಕ್ಕೂ ಅಧಿಕ ಸೋಂಕಿತರಿರುವ ಸುಮಾರು 40ಕ್ಕೂ ಅಧಿಕ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಕೋವಿಡ್ ಸಂಕಷ್ಟದ ಜತ ತಾನು ಬೆಳೆದ ಬೆಳೆಗೆ ಬೆಲೆ ಸಿಗದೇ ರೈತ ಕಣ್ಣೀರಿಡುತ್ತಿದ್ದಾನೆ , ನಿಮ್ಮ ಭರವಸೆಗಳು ಬೇಕಾಗಿಲ್ಲ , ಮಾರುಕಟ್ಟೆ ಸೌಲಭ್ಯ ವಿಸ್ತರಣೆ ಹಾಗೂ ರಫಿನ ಉಸ್ತುವಾರಿಗೆ ಓರ್ವ ದಕ್ಷ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಿ ಅನ್ನದಾತನ ನೆರವಿಗೆ ಧಾವಿಸಿ ಎಂದು ಸರ್ಕಾರವನ್ನು ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಆಗ್ರಹಿಸಿದರು. ಮನ್ವಂತರ ಜನಸೇವಾ ಟ್ರಸ್ಟ್ ಆಶ್ರಯದಲ್ಲಿ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಕೋಲಾರ , ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜೂ.4: ಕೊರೋನ ಸೋಂಕಿತರಿಗೆ ರೋಟರಿ ಸೆಂಟ್ರಲ್ ಮೂಲಕ ಕೇವಲ 2 ಗಂಟೆಗಳಲ್ಲಿ ಪಾಸಿಟಿವ್ ಹಾಗೂ ನೆಗೆಟಿವ್ ವರದಿಯನ್ನು ಪಡೆಯುವ ಅತ್ಯಾಧುನಿಕ ತಂತ್ರಜ್ಞಾನದ ಮೊಬೈಲ್ ವಾಹನವನ್ನು ಜಿಲ್ಲೆಗೆ ತರಲು ರೋಟರಿ ಕೋಲಾರ ಸಂಟ್ರಲ್ ಸದ್ಯಸರ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ರೋಟರಿ ಕೋಲಾರ ಸಂಟ್ರಲ್ನ ನಿಯೋಜಿತ ಅಧ್ಯಕ್ಷ ಸಿಎಂಆರ್ ಶ್ರೀನಾಥ್ ಹೇಳಿದರು.ನಗರದ ರೋಟರಿ ಕೋಲಾರ ಸಂಟ್ರಲ್ ಭವನದಲ್ಲಿ ಭಾರತ್ ಸೇವಾದಳ ಹಾಗೂ ರೋಟರಿ ಕೋಲಾರ ಸಂಟ್ರಲ್ ಆಶ್ರಯದಲ್ಲಿ ಪತ್ರಿಕಾ ವಿತರಕರಿಗೆ ದಿನಸಿ ಕಿಟ್ ವಿತರಿಸಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶ್ರೀನಿವಾಸಪುರದಲ್ಲಿ ದಾನಿಗಳ ನೆರವಿನಿಂದ ರೂ.1 ಕೋಟಿ ವೆಚ್ಚದಲ್ಲಿ ಕೋವಿಡ್ ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸಲಾಗುವುದು. ಇದರಿಂದ 24 ಗಂಟೆಯೊಳಗೆ ಪರೀಕ್ಷಾ ವರದಿ ನೀಡಲು ಸಾಧ್ಯವಾಗುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಗುರುವಾರ ಕೋವಿಡ್ ನಿಯಂತ್ರಣ ಕುರಿತು ಚರ್ಚಿಸಲು ಏರ್ಪಡಿಸಿದ್ದ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದ ಕಂದಾಯ, ಆರೋಗ್ಯ, ಗ್ರಾಮ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕ್ಷೇತ್ರದ ಎಲ್ಲ ನಾಗರಿಕರಿಕರಿಗೂ ಉಚಿತವಾಗಿ ಮಾಸ್ಕ್ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಪತ್ರಕರ್ತರ ಜೀವ ರಕ್ಷಣೆ ದೃಷ್ಟಿಯಿಂದ ಯುವ ಕಾಂಗ್ರೆಸ್ ಕೊಡುಗೆಯಾಗಿ ನೀಡಿರವ 2 ಆಮ್ಲಜನಕ ಸಾಂದ್ರಕಗಳನ್ನು ಪತ್ರಕರ್ತರು ಮತ್ತು ಅವರ ಕುಟುಂಬದವರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು ಕರೆ ನೀಡಿದರು.ನಗರದ ಪತ್ರಕರ್ತರ ಭವನದಲ್ಲಿ ಯುವ ಕಾಂಗ್ರೆಸ್ನಿಂದ ಪತ್ರಕರ್ತರ ಸಂಘಕ್ಕೆ ಕೊಡುಗೆಯಾಗಿ ನೀಡಲಾದ 2 ಆಮ್ಲಜನಕ ಸಾಂದ್ರಕಗಳನ್ನು ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.ಕೋವಿಡ್ ಮಾರಿಯಿಂದಾಗಿ ಉಸಿರಾಟದ ತೊಂದರೆ, ಆಮ್ಲಜನಕ ಕೊರತೆಯಿಂದ ಅನೇಕ ರೋಗಿಗಳು ಜೀವ ಕಳೆದುಕೊಂಡಿದ್ದನ್ನು ಕಂಡಿದ್ದೇವೆ, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ :- ತಾಲೂಕಿನ ಯಲ್ದೂರು ಗ್ರಾಮ ಪಂಚಾಯತಿ ಮಟ್ಟದಲ್ಲಿ ರಚಿಸಿರುವ ಕೊರೋನ ಕಾರ್ಯಪಡೆಯನ್ನು ಬಳಸಿಕೊಂಡು ಪ್ರತಿಯೊಂದು ಗ್ರಾಮದಲ್ಲಿ ಕೋವಿಡ್ ಲಸಿಕಾಕರಣ ಮಾಡಲಾಗುವುದು ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಆನಂದ್ ತಿಳಿಸಿದರು. ಅವರು ಇಂದು ಯಲ್ದೂರು ಗ್ರಾಮ ಪಂಚಾಯ್ತಿಯಲ್ಲಿ ಹಮ್ಮಿಕೊಂಡಿದ್ದ ಕೊರೋನ ಟಾಸ್ಕ್ ಪೋರ್ಸ್ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಾ ತಾಲ್ಲೂಕು ಆಡಳಿತದ ವತಿಯಿಂದ ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬ ವ್ಯಕ್ತಿಗೂ ಕೋವಿಡ್ ಲಸಿಕೆಯನ್ನು ಹಾಕಿಸಲು ಕ್ರಿಯಾ ಯೋಜನೆಯನ್ನು ತಯಾರಿಸಿ ತಾಲ್ಲೂಕನ್ನು ಕೋವಿಡ್ ನಿಂದ ರಕ್ಷಿಸುತ್ತೇವೆ. […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಲಸಿಕೆ ನೀಡಿಕೆಯಲ್ಲಿ ಜಿಲ್ಲೆ ರಾಜ್ಯಕ್ಕೆ ಮೊದಲಾಗಲು ಶಿಕ್ಷಕರ ಸಹಕಾರ ಅಗತ್ಯ, ಗ್ರಾಮಗಳಲ್ಲಿ ಅಭಿಯಾನ ನಡೆಸಿ,ಜನತೆಯಲ್ಲಿ ಜಾಗೃತಿ ಮೂಡಿಸಲು ಸಹಕರಿಸಿ ಎಂದು ವಿವಿಧ ಶಿಕ್ಷಕ,ನೌಕರರ ಸಂಘಟನೆಗಳ ಮುಖಂಡರಿಗೆ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಹಾಗೂ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಕರೆ ನಿಡಿದರು.ಜಿಲ್ಲಾಡಳಿತ ಭವನದಲ್ಲಿ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ನೇತೃತ್ವದಲ್ಲಿ ಆಯೋಜಿಸಿದ್ದ ವಿವಿಧ ಶಿಕ್ಷಕ,ನೌಕರರ ಸಂಘಟನೆಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.ಡಿಸಿ ಡಾ.ಸೆಲ್ವಮಣಿ ಮಾತನಾಡಿ, ಕೋವಿಡ್ ತಡೆಗೆ ಲಸಿಕೆಯೊಂದೇ ಅಸ್ತ್ರವಾಗಿದೆ, ಜಿಲ್ಲೆಯಲ್ಲಿ ಸುಮಾರು 17 ಲಕ್ಷ ಜನಸಂಖ್ಯೆ […]