ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಬ್ಯಾಂಕ್ ಉಳಿಸುವ ವಿಚಾರದಲ್ಲಿ ರಾಜೀ ಇಲ್ಲ,ಠೇವಣಿ ಸಂಗ್ರಹ,ಸಾಲ ವಸೂಲಾತಿಯಲ್ಲಿ ನೀಡಿರುವ ಗುರಿ ಸಾಧಿಸಿದರೆ ಮಾತ್ರ ಡಿಎ ಮಂಜೂರು ಮಾಡುವುದಾಗಿ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಸಿಬ್ಬಂದಿಗೆ ತಾಕೀತು ಮಾಡಿದರು.ಸೋಮವಾರ ಬೆಳಗ್ಗೆ 7-30 ಗಂಟೆಗೆ ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಅವಿಭಜಿತ ಜಿಲ್ಲೆಯ ಎಲ್ಲಾ ತಾಲೂಕು ಶಾಖೆಗಳ ವ್ಯವಸ್ಥಾಪಕರು, ಸಿಬ್ಬಂದಿಯೊಂದಿಗಿನ ವಚ್ರ್ಯುವಲ್ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.ಬ್ಯಾಂಕಿನ ಋಣದಲ್ಲಿದ್ದೀರಿ, ಅದನ್ನು ತೀರಿಸಲು ಬದ್ದತೆಯಿಂದ ಕೆಲಸ ಮಾಡಿ, ಎನ್ಪಿಎ ಕಡಿಮೆ ಮಾಡುವಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಎಸ್ಎನ್ಆರ್ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸಿ ಜನರಿಗೆ ಉತ್ತಮ ಸೇವೆ ನೀಡಲು ಅಗತ್ಯ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ನೂತನ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಎನ್.ವಿಜಯ್ಕುಮಾರ್ಗೆ ರೈತಸಂಘದಿಂದ ಮನವಿ ಸಲ್ಲಿಸಲಾಯಿತು.ನೂತನ ಜಿಲ್ಲಾ ಶಸ್ತ್ರಚಿಕಿತ್ಸಕರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಸನ್ಮಾನಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾಸ್ಪತ್ರೆಯಲ್ಲಿ ಎಲ್ಲ ರೀತಿಯ ಸೌಲಭ್ಯಗಳಿಂದಲೂ ಸಿಬ್ಬಂದಿಯ ಬೇಜವಾಬ್ದಾರಿತನದಿಂದಾಗಿ ಜನರಿಗೆ ಸೂಕ್ತ ಸೇವೆ ಸಿಗದೆ ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದರು.ಆಸ್ಪತ್ರೆಯಲ್ಲಿ ದಲ್ಲಾಳಿಗಳ ಹಾವಳಿ ಮಿತಿ ಮೀರಿದ್ದು, ಪ್ರತಿಯೊಂದಕ್ಕೂ ಹೆಚ್ಚಿನ ಹಣ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನರು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಅನುಕೂಲ ಪಡೆದುಕೊಳ್ಳಬೇಕು ಎಂದು ಶಿರಸ್ತೇದಾರ್ ಮನೋಹರ ಮಾನೆ ಹೇಳಿದರು.ತಾಲ್ಲೂಕಿನ ಪಂದಿವಾರಿಪಲ್ಲಿ ಗ್ರಾಮದಲ್ಲಿ ಕಂದಾಯ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆಯಾ ಗ್ರಾಮದ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಸ್ಥಳದಲ್ಲಿಯೇ ವಿತರಿಸಲಾಗುವುದು ಎಂದು ಹೇಳಿದರು.ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೋವಿಂದಸ್ವಾಮಿ ಮಾತನಾಡಿ, ಅಧಿಕಾರಿಗಳು ಸರ್ಕಾರದ ಸೌಲಭ್ಯಗಳನ್ನು ಪಕ್ಷಾತೀತವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಜನರು ಕೆಲಸಗಳಿಗಾಗಿ […]
ಅಧ್ಯಕ್ಷರಾಗಿ ಗೋಪಿನಾಥ್-ರಾಜ್ಯಕಾರ್ಯಕಾರಿ ಸಮಿತಿಗೆ ಗಣೇಶ್ ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಬಿ.ವಿ.ಗೋಪಿನಾಥ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೆ.ಎಸ್.ಗಣೇಶ್,ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಕೆ.ಚಂದ್ರಶೇಖರ್,ಖಜಾಂಚಿಯಾಗಿ ಎ.ಜಿ.ಸುರೇಶ್ಕುಮಾರ್ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಅವಿರೋಧ ಆಯ್ಕೆಯಾಗುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾಯಿತು.ಪತ್ರಕರ್ತರೂ ಹಾಗೂ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಬ್ಯಾಲಹಳ್ಳಿ ಗೋವಿಂದಗೌಡ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು ಅವರ ನೇತೃತ್ವದಲ್ಲಿ ಅವಿರೋಧ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಯಿತು.ಅಧ್ಯಕ್ಷ ವಿ.ಮುನಿರಾಜು ಚುನಾವಣೆಗೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ:ಲಕ್ಷೀಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆ, ಸದಸ್ಯರ ಗೈರು ಹಾಜರಿ ಪರಿಣಾಮವಾಗಿ ಸ್ಥಗಿತಗೊಳಿಸಲಾಯಿತು.ಈ ಹಿಂದೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿದ್ದ ಗೀತಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ಏರ್ಪಡಿಸಲಾಗಿತ್ತು. ಕಾಂಗ್ರೆಸ್ ಬೆಂಬಲಿತ ಲಕ್ಷ್ಮಿದೇವಮ್ಮ ಅವರು ಮಾತ್ರ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಆದರೆ ಚುನಾವಣೆಯಲ್ಲಿ ಒಟ್ಟು 17 ಸದಸ್ಯರ ಪೈಕಿ ಕಾಂಗ್ರೆಸ್ ಬೆಂಬಲಿತ 8 ಸದಸ್ಯರು ಮಾತ್ರ ಮತದಾನ ಮಾಡಿದರು. ಉಳಿದ 9 ಮಂದಿ ಸದಸ್ಯರು ಮತದಾನದಲ್ಲಿ ಭಾಗವಹಿಸಲಿಲ್ಲ.ಚುನಾವಣಾಧಿಕಾರಿ ಎಂ.ಕೆ.ಹುಸೇನ್ ಸಾಬ್ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ವಕ್ಸ್ ಬೋರ್ಡ್ ನಿಂದ ಬರುವ ಎಲ್ಲಾ ಸೌಲಭ್ಯಗಳನ್ನು ಬಳಕೆ ಮಾಡಿಕೊಳ್ಳುವುದರ ಜೊತೆಗೆ ಮಸೀದಿ , ಈದ್ಯಾ , ಸ್ಮಶಾನಗಳನ್ನು ಅಭಿವೃದ್ಧಿಪಡಿಸಿಕೊಂಡು ಅಲ್ಪ ಸಂಖ್ಯಾತ ಬಂದುಗಳು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಶಾಸಕ ಕೆ.ಆರ್ ರಮೇಶ್ ಕುಮಾರ್ ರವರು ತಿಳಿಸಿದ್ದಾರೆ . ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ಅಲ್ಪ ಸಂಖ್ಯಾತರ ಸಭೆಯಲ್ಲಿ ರಮೇಶ್ ಕುಮಾರ್ ಮಾತನಾಡಿ ಪಟ್ಟಣ ಮತ್ತು ತಾಲ್ಲೂಕಿನ ಬಹುತೇಕ ಮುಸ್ಲಿಂ ಸಮಾಜ ವಿರುವ ಹಳ್ಳಿಗಳಲ್ಲಿ ಮಸೀದಿ , ಸ್ಮಶಾನ , […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಹೋಬಳಿ ಮಟ್ಟದಲ್ಲಿ ನಂದಿನಿ ಹಾಲು ಹಾಗೂ ಹಾಲು ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತಿದೆ. ಇದರಿಂದ ಕೈಗೆ ಎಟುಕುವ ಅಂತರದಲ್ಲಿ ಉತ್ತಮ ಗುಣಮಟ್ಟದ ಉತ್ಪನ್ನಗಳು ಸಿಗುತ್ತವೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಶುಕ್ರವಾರ ನಂದಿನಿ ಹಾಲು ಮತ್ತು ಹಾಲು ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ಹಾಲು ಜಿಲ್ಲೆಯ ರೈತರ ಜೀವನಾಡಿಯಾಗಿದೆ. ಗ್ರಾಮೀಣ ಪ್ರದೇಶದ ಆರ್ಥಿಕಾಭಿವೃದ್ಧಿಗೆ ಹೈನುಕಾರಿಗೆ ದೊಡ್ಡ ಕೊಡುಗೆ ನೀಡಿದೆ ಎಂದು ಹೇಳಿದರು.ನಂದಿನಿ ಹಾಲು ಉತ್ಪನ್ನಗಳು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿಮಾ ಪರಿಹಾರ ಚೆಕ್ ಪಡೆದ ಫಲಾನುಭವಿಗಳು ಕಡ್ಡಾಯವಾಗಿ ರಾಸುಗಳನ್ನು ಖರೀದಿಸಬೇಕು. ಉತ್ತಮ ಗುಣಮಟ್ಟದ ಹಾಲು ಪೂರೈಸಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ಪಟ್ಟಣದ ಕೋಚಿಮುಲ್ ಶಿಬಿರ ಕಚೇರಿ ಸಬಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಹಾಲು ಉತ್ಪಾದಕರಿಗೆ ಮೃತಪಟ್ಟ ರಾಸುಗಳ ವಿಮಾ ಪರಿಹಾರ ಚೆಕ್ ವಿತರಿಸಿ ಮಾತನಾಡಿದ ಅವರು, ಹಸು ಕಳೆದುಕೊಂಡ ಐವರಿಗೆ ರೂ.2.80 ಲಕ್ಷ ವಿಮಾ ಪರಿಹಾರ ನೀಡಲಾಗಿದೆ. ಗೊರವಮಾಕಲಹಳ್ಳಿ ಸಾಮೂಹಿಕ ಹಾಲು ಕರೆಯುವ ಘಟಕಗಳಿಗೆ ರೂ.50 ಸಾವಿರ ಅನುದಾನ ನೀಡಲಾಗಿದೆ. […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಫಲಾನುಭವಿಗಳು ನಿಗದಿತ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಬೇಕು ಎಂದು ಶಾಸಕ ಕೆ.ಅರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಪಿಎಲ್ಡಿ ಬ್ಯಾಂಕ್ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ಸಾಲವಿತರಣಾ ಸಮಾರಂಭದಲ್ಲಿ ರೈತರಿಗೆ ರೂ. 2.86 ಕೋಟಿ ಸಾಲದ ಚೆಕ್ ವಿತರಿಸಿ ಮಾತನಾಡಿದ ಅವರು, ಒಂದು ಸಂಸ್ಥೆಯನ್ನು ಕಟ್ಟುವುದು ಕಷ್ಟ. ಆದರೆ ಕೆಡವುವುದು ಸುಲಭ. ಈ ಬ್ಯಾಂಕ್ ಬಡವರ ಪಾಲಿಗೆ ನೆರಳಾಗಿ ಉಳಿಯಬೇಕು ಎಂದು ಹೇಳಿದರು.ಸಾಲ ನೀಡುವ ನೀತಿ ಬದಲಾಗಬೇಕು. ಸಣ್ಣ ರೈತರು, ದೊಡ್ಡ ರೈತರು, ಭೂಮಿ […]

