
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಇವತ್ತು, ಅಂದರೆ ಮೇ 21, 2021 ಸಂಜೆ 6.00 ಗಂಟೆಯಿಂದ ಮೇ 25, 2021 ಬೆಳಿಗ್ಗೆ 6.00 ಗಂಟೆ ವರೆಗೆ ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮಗಳು ಕಠಿಣಗೊಳಿಸಲಾಗಿದ್ದು, ಪೆಟ್ರೋಲ್, ಹಾಲು, ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಎಲ್ಲ ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆರ್ ಸೆಲ್ವಮಣಿ ಅವರು ತಿಳಿಸಿದರು.ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಲಾಕ್ ಡೌನ್ ನಿಯಮಗಳು ಜಾರಿಯಲ್ಲಿದ್ದರೂ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಸಂಕಷ್ಟದಿಂದ ಬಳಲಿರುವ ಜಿಲ್ಲೆಯ ಕೆಜಿಎಫ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಬಿಪಿಎಲ್ ಕುಟುಂಬದ ಮನೆಬಾಗಿಲಿಗೂ ತಲಾ 10 ಕೆಜಿ ಅಕ್ಕಿ ತಲುಪಿಸುವುದಾಗಿ ಶಾಸಕಿ ರೂಪಕಲಾ ಶಶಿಧರ್ ತಿಳಿಸಿದರು.ನಗರದಲ್ಲಿಂದು ಮಾತನಾಡಿದ ಅವರು, 30 ಸಾವಿರ ದಿನಸಿ ಕಿಟ್ ವಿತರಣೆಗೆ ಸಿದ್ದತೆ ನಡೆಸಿದ್ದೆ ಆದರೆ ಕ್ಷೇತ್ರದಲ್ಲಿ 56ಸಾವಿರಕ್ಕೂ ಹೆಚ್ಚು ಬಿಪಿಎಲ್ ಕಾರ್ಡುದಾರರಿದ್ದಾರೆ ಎಂದ ಅವರು, ಈಗ ಆ ಎಲ್ಲಾ ಕುಟುಂಬಗಳಿಗೂ ನೆರವಾಗಲು ನಿರ್ಧರಿಸಿರುವುದಾಗಿ ತಿಳಿಸಿದರು.ನಗರ,ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೂ ತಲಾ 10 […]

ವರದಿ ; ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಬಿ.ಜೆ.ಎಂ.ಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಗೆ ಮುಂದಿನ ದಿನಗಳಲ್ಲಿ ಬೇಕಾಗುವ 1000 ಲೀ . ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ , ಮೆಡಿಸನ್ ಮತ್ತಿತರ ವೈದ್ಯಕೀಯ ಸಲಕರಣೆಗಳನ್ನು ನೀಡುವುದಾಗಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರು ತಿಳಿಸಿದರು . ಇಂದು ಕೆ.ಜಿ.ಎಫ್ ನ ಬಿ.ಜಿ.ಎಂ.ಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಯನ್ನು ವರ್ಚುವಲ್ ಪ್ಲಾಟ್ಫಾರಂ ಮುಖಾಂತರ ಉದ್ಘಾಟಿಸಿದ ಅವರು , […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನಾಗರಿಕರು ಕೊರೊನಾ ತಡೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಮೂಲಕ, ಸೋಂಕು ಹರಡುವುದನ್ನು ತಡೆಯಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿದ್ಯಾರಾಣಿ ಹೇಳಿದರು.ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಸಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲ್ಲೂಕು ಆಡಳಿತ, ಗ್ರಾಮ ಪಂಚಾಯಿತಿ ಹಾಗೂ ಕೊರೊನಾ ಕಾರ್ಯಪಡೆ ವತಿಯಿಂದ ಏರ್ಪಡಿಸಿದ್ದ ಕೊರೊನಾ ಜಾಗೃತಿ ಸಭೆಯಲ್ಲಿ ಮಾತನಾಡಿ, ಕೊರೊನಾಗೆ ಹೆದರಬೇಕಾಗಿಲ್ಲ. ಮುಂಜಾಗ್ರತೆ ವಹಿಸಬೇಕು. ರೋಗ ಹರಡದಂತೆ ತಡೆಯಬೇಕು ಎಂದು ಹೇಳಿದರು.ಕೋವಿಡ್ ಲಕ್ಷಣ ಕಂಡು ಬಂದ ಕೂಡಲೆ […]

ವರದಿ :ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : 23 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿ.ಜೆ.ಎಂ.ಎಲ್ ಆಸ್ಪತ್ರೆಯನ್ನು ಇಂದು ಕೋವಿಡ್ ಕೇರ್ ಸೆಂಟರ್ ಆಗಿ ಮಾರ್ಪಾಡು ಮಾಡಲಾಗಿದೆ . ಇದರಿಂದ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯಲು ತುಂಬಾ ಅನುಕೂಲವಾಗುತ್ತದೆ . ಡಾಕ್ಟರ್ , ಆರೋಗ್ಯ ಸಿಬ್ಬಂದಿ , ಔಷಧಿ ಯಾವುದೇ ಕೊರತೆಯಾಗದಂತೆ ನಾಳೆಯಿಂದ ಆಸ್ಪತ್ರೆಯು ಕಾರ್ಯ ನಿರ್ವಹಿಸಲಿದೆ ಎಂದು ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಅರವಿಂದ್ ಲಿಂಬಾವಳಿ ಅವರು ತಿಳಿಸಿದರು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಪ್ರತಿಯೊಂದು ಜೀವವನ್ನೂ ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ . ಪ್ರತಿಯೊಂದು ಗ್ರಾಮವೂ ಕೊರೊನಾದಿಂದ ಮುಕ್ತವಾಗುವಂತೆ ಮಾಡಬೇಕು ಎಂಬ ಸಂಕಲ್ಪದಿಂದ ಜಿಲ್ಲೆಯ ಪ್ರತಿ ಗ್ರಾಮದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು . ಇದಕ್ಕಾಗಿ ಪಕ್ಷಭೇದ ಮರೆತು ಎಲ್ಲರೂ ಕೈಜೋಡಿಸಬೇಕು ಎಂದು ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಅರವಿಂದ ಲಿಂಬಾವಳಿ ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾನ್ಯ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ರೆಮಿಡಿಸಿವರ್ ಇಂಜೆಕ್ಷನ್ ಕಾಳ ಸ೦ತೆ೦ರಲ್ಲಿ ಮಾರಾಟ ದಂಧ ನಗರದಲ್ಲಿಯೂ ನಡೆದಿದ್ದು , ಕಳೆದ ರಾತ್ರಿ 6 ಮಂದಿಂರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ . ತಮಗೆ ಬಂದ ಖಚಿತ ಮಾಹಿತಿ ಮೇರೆಗೆ ರೆ ಮಿಸಿವರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಕಾಟ ಮಾಡುತ್ತಿದ್ದ ಜಾಲದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು ಸದ್ಯಕ್ಕೆ ಯಾವುದೇ ಮಾಹಿತಿ ನೀಡುತ್ತಿಲ್ಲ . ಕಳೆದ ಒಂದು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಸೋಂಕಿತರನ್ನು ಅಸ್ಪ್ರಶ್ಯರಂತೆ ಕಾಣದೇ ಸಮುದಾಯವೇ ಅವರ ನೆರವಿಗೆ ನಿಂತು ಆತ್ಮಸ್ಥೈರ್ಯ ತುಂಬುವ ಮೂಲಕ ಈ ಮಹಾಮಾರಿಯಿಂದಾಗುತ್ತಿರುವ ಸಾವಿನ ಪ್ರಮಾಣ ತಗ್ಗಿಸಬಹುದು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಹಾಗೂ ಮನ್ವಂತರ ಜನಸೇವಾ ಟ್ರಸ್ಟ್ ಅಧ್ಯಕ್ಷರೂ ಆದ ಬ್ಯಾಲಹಳ್ಳಿ ಗೋವಿಂದಗೌಡ ಅಭಿಪ್ರಾಯಪಟ್ಟರು.ಮನ್ವಂತರ ಜನಸೇವಾ ಟ್ರಸ್ಟ್ ಹಾಗೂ ಮನ್ವಂತರ ಪ್ರಕಾಶನದ ಆಶ್ರಯದಲ್ಲಿ ನಗರದ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇತ್ತೀಚೆಗೆ ವಿಧಿವಶರಾದ ತಮ್ಮ ಮಾತೃಶ್ರೀ ಅಕ್ಕೆಮ್ಮ ಅವರ ಸ್ಮರಣಾರ್ಥ ಪತ್ರಕರ್ತರು ಮತ್ತು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಿ , ಕೋವಿಡ್ ನಿಯಂತ್ರಣದಲ್ಲಿ ಪತ್ರಕರ್ತರು ಪ್ರಮುಖ ಪತ್ರಕರ್ತರು ಪ್ರಮುಖ ಪಾತ್ರ ವಹಿಸುತ್ತಾರೆ . ಅವರ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು . ಇಂದು ಪತ್ರಕರ್ತರ ಭವನದಲ್ಲಿ ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ , ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ […]