
[ಕೆ.ಪಿ.ಸಿ.ಸಿ. ಕಾರ್ಯದರ್ಶಿ ಕಿರಣ್ ಜಿತ್ ರವರು ಬೆಳಗಾವಿಯ ಪ್ರಭಾವಿ ನಾಯಕರಲ್ಲಿ ಒಬ್ಬರಾದ ಸತೀಶ್ ಜಾರಕಿ ಹೋಳಿಯ ಆತ್ಮೀಯ ಮಿತ್ರರು. ಸತೀಶ್ ಜಾರಕಿ ಹೋಳಿಯವರು ಜೀವನದಲ್ಲಿ ತಮ್ಮದೆ ಆದ ಆದರ್ಶ ತತ್ವಗಳನ್ನು ಅಳವಡಿಸಿಕೊಂಡವರು, ಅವರು ಮೌಢ್ಯವನ್ನು ನಂಬುವುದಿಲ್ಲಾ, ಅವರು ಗಳಿಗೆಯನ್ನು ನಂಬುದಿಲ್ಲಾ, ಅವರು ಬೆಳಗಾವಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿ ಪತ್ರವನ್ನು ಸಲ್ಲಿಸುವಾಗ ಬೇಕಂತ್ತಲೇ ಅತ್ಯಂತ ಕೆಟ್ಟ ಗಳಿಗೆಯಲ್ಲಿ ನೀಡಿದ್ದರು, ಕಾರಣ ಇಂತಹ ಮೌಢ್ಯಗಳನ್ನು ಅವರು ನಂಬುದಿಲ್ಲವೆಂದು, ಇದು ಡಾ| ಕಿರಣ್ ಜಿತ್ ತಿಳಿಸಿದ ವಿಷಯವಾಗಿದೆ. ಡಾ|ಕಿರಣ್ ಜಿತ್ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ರಾಯಲ್ಪಾಡು 1 : ಕರೋನಾ ವೈರಸ್ ರೋಗವು ಗ್ರಾಮೀಣ ಪ್ರದೇಶದಲ್ಲಿ ದಿನದಿನಕ್ಕೆ ಹೆಚ್ಚು ಹಬ್ಬುತ್ತಿದ್ದು ನಾಗರೀಕರು ಎಚ್ಚರಿಕೆಯಿಂದ ಇರಬೇಕು ಎಂದು ಪಿಡಿಒ ಚಂದ್ರಶೇಖರ್ ಸಲಹೆ ನೀಡಿದರು.ಬುರಕಾಯಿಲಕೋಟೆ ಗ್ರಾಮವನ್ನು ಶುಕ್ರವಾರ ಸೀಲ್ಡೌನ್ ಮಾಡಿ ಮಾತನಾಡಿದರು.ಗ್ರಾಮದಲ್ಲಿ ಒಟ್ಟು 10 ಜನರಿಗೆ ಕರೋನಾ ಪಾಸಿಟೀವ್ ಬಂದಿರುವುದರಿಂದ ಗ್ರಾ.ಪಂ. ಸದಸ್ಯ ಶಂಕರಪ್ಪ ನೇತೃತ್ವದಲ್ಲಿ ಗ್ರಾಮವನ್ನು ಸೀಲ್ಡೌನ್ ಮಾಡಲಾಗಿದೆ. ಸೋಕಿಂತರನ್ನ ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಕೇಂದ್ರಕ್ಕೆ ಆಂಬುಲೆನ್ಸ್ಗೆ ಕರೆ ಮಾಡಲು ಬೇಗ ಬಾರದೆ ಇರುವುದನ್ನು ಗಮನಿಸಿ , ತಡೆಮಾಡದೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೋವಿಡ್ ನಿಯಂತ್ರಿಸಲು ಹಗಲಿರುಳು ಸಾರ್ವಜನಿಕ ಹಿತದೃಷ್ಟಿಯಿಂದ ಕರೋನ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ರಕ್ಷಣಾ ಇಲಾಖೆಯ ಎಲ್ಲಾ ಸಿಬ್ಬಂದಿಗೆ ಲಾಕ್ಡೌನ್ ಮುಗಿಯುವ ತನಕ ಮಧ್ಯಾಹ್ನದ ಸಮಯದಲ್ಲಿ ಪ್ರತಿದಿನವೂ ರೋಟರಿ ಶ್ರೀನಿವಾಸಪುರದ ಸೆಂಟ್ರಲ್ ವತಿಯಿಂದ ಬೋಜನ ಒದಗಿಸುವ ಸೇವೆಯನ್ನು ಮಾಡಲಾಗುವುದು ಎಂದು ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಅಧ್ಯಕ್ಷರಾದ ಎಸ್. ಶಿವಮೂರ್ತಿ ತಿಳಿಸಿದರು.ಪಟ್ಟಣದ ಪೊಲೀಸ್ ಠಾಣೆಯ ಸಿಬ್ಬಂದಿ ಕರೋನ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಪೆÇಲೀಸ್ ಸಿಬ್ಬಂದಿಗೆ ಮಧ್ಯಾಹ್ನದ ಉಪಹಾರವನ್ನು ಏರ್ಪಡಿಸಿ ಮಾತನಾಡಿ, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಗಡಿ ಗ್ರಾಮ ಹೊಸಹುಡ್ಯದ ಸಮೀಪ ಪೊಲೀಸ್ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೋವಿಡ್ ಹರಡುವಿಕೆ ತಡೆಯುವ ಉದ್ದೇಶದಿಂದ ಶುಕ್ರವಾರ ವಾಹನ ತಪಾಸಣೆ ನಡೆಸಿದರು.ಆಂಧ್ರಪ್ರದೇಶ ಹಾಗೂ ರಾಜ್ಯದ ವಾಹನಗಳನ್ನು ಗಡಿಯಲ್ಲಿ ತಡೆದು ಪರಿಶೀಲನೆ ಬಳಿಕ ಬಿಡಲಾಯಿತು. ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನ ಸವಾರರಿಗೆ ಲಾಠಿ ರುಚಿ ಮುಟ್ಟಿಸಲಾಯಿತು. ಹಾಗೂ ಕೆಲವರಿಗೆ ಮಾಸ್ಕ್ ಧರಿಸುವಂತೆ ಸಲಹೆ ನೀಡಿ ಬಿಟ್ಟುಕೊಡಲಾಯಿತು.ಪಿಡಿಒ ಆರ್.ವಿ.ರವಿಕುಮಾರ್, ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಣಮ್ಮ, ಗ್ರಾಮ ಲೆಕ್ಕಾಧಿಕಾರಿ ಜಯಚಂದ್ರ, ಸಿಬ್ಬಂದಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಚೊಕ್ಕನಹಳ್ಳಿ ಗ್ರಾಮದ ಡಾ. ರಾಮೇಗೌಡ (53) ಗುರುವಾರ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಕೊರೊನಾಗೆ ಬಲಿಯಾಗಿದ್ದಾರೆ.ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.ಅವರು ಎರಡು ದಶಕಗಳಿಂದ ಬೆಂಗಳೂರು ದೊಡ್ಡ ಬಾಣಸವಾಡಿ ಸೇರಿದಂತೆ 5 ಸ್ಥಳಗಳಲ್ಲಿ ರಾಶಿ ಡೈಗ್ನಾಸ್ಟಿಕ್ ಸೆಂಟರ್ಸ್ ಸ್ಥಾಪಿಸಿ 200ಕ್ಕೂ ಹೆಚ್ಚು ಯುವಕರಿಗೆ ಉದ್ಯೋಗ ಕಲ್ಪಿಸಿದ್ದರು. ತಿಂಗಳ ಹಿಂದೆ ತಂದೆಯನ್ನು ಕಳೇದುಕೊಂಡಿದ್ದರು. ಅವರಿಗೆ 8 ದಿನಗಳ ಹಿಂದೆ ಕೊರೊನಾ ಪಾಸಿಟೀವ್ ಕಾಣಿಸಿಕೊಂಡು ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಏ.30: ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ಮತ್ತು ರಾಜ್ಯದ ಯಡಿಯೂರಪ್ಪ ನೇತೃತ್ವದ ಸರ್ಕಾರಗಳ ಕರೋನಾ ಮಹಾಮಾರಿಯ 1ನೇ ಅಲೆಯ ಎಚ್ಚರಿಕೆ ಗಂಟೆಯ ಅನುಭವವಿದ್ದರೂ ಸಹ 2ನೇ ಅಲೆಯ ಭೀಕರತೆಯ ಬಗ್ಗೆ ಅರಿವಿದ್ದರೂ ಸಹ ಚುನಾವಣಾ ಪ್ರಚಾರ ಮತ್ತು ರ್ಯಾಲಿಗಳ ಮೇಲೆ ಕೇಂದ್ರೀಕೃತವಾಗಿ 2ನೇ ಅಲೆಯನ್ನು ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರದ ಮಾಜಿ ಮಂತ್ರಿಗಳು ಹಾಗೂ ಎ.ಐ.ಸಿ.ಸಿ ಕಾರ್ಯಕಾರಿ ಸಮಿತಿ ಸದಸ್ಯರೂ ಆದ ಕೆ.ಹೆಚ್ ಮುನಿಯಪ್ಪ ರವರು ಆರೋಪಿಸಿದ್ದಾರೆ.ಕೇಂದ್ರ ಮತ್ತು ರಾಜ್ಯ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರ ಬಡವರನ್ನು ಕೋವಿಡ್ ಸಂಕಷ್ಟದಿಂದ ಪಾರುಮಾಡಲು ಪೂರಕವಾಗಿ ಪಡಿತರ ಪ್ರಮಾಣ ಹೆಚ್ಚಿಸಬೇಕು ಎಂದು ಕಸಬಾ ರೇಷ್ಮೆ ಬೆಳೆಗಾರರು ಹಾಗೂ ರೈತರ ಸೇವಾ ಸಹಕಾರ ಸಂಘದ ನಿರ್ದೇಶಕ ಶಬ್ಬೀರ್ ಅಹ್ಮದ್ ಮನವಿ ಮಾಡಿದ್ದಾರೆ.ಕೊರೊನಾ ಎರಡನೇ ಅಲೆ ಜನರನ್ನು ತೀವ್ರವಾಗಿ ಕಾಡುತ್ತಿದ್ದು, ಸೋಂಕು ಹರಡುವಿಕೆ ತಡೆಯಲು ಸರ್ಕಾರ ಜನತಾ ಕಫ್ಯೂ ಜಾರಿಗೆ ತಂದಿದೆ. ಇದರಿಂದ ಕೂಲಿ ಕಾರ್ಮಿಕರ ಜೀವನ ನಿರ್ವಹಣೆ ಕಷ್ಟವಾಗಿದೆ. ಬಹಳಷ್ಟು ಮಂದಿ ಇದ್ದ ಕೆಲಸ ಬಿಟ್ಟು ಮನೆ ಸೇರಿದ್ದಾರೆ. ಅದರಿಂದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣ ಲಾಕ್ ಡೌನ್ ಪ್ರಯುಕ್ತ ಬುಧವಾರ ಬೆಳಿಗ್ಗೆ 10 ಗಂಟೆ ಬಳಿಕ ಸ್ತಬ್ಛವಾಗಿತ್ತು. ಪಟ್ಟಣದಲ್ಲಿ ಔಷಧಿ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಅಂಗಡಿ ಮುಂಗಟ್ಟು ಮುಚ್ಚಲಾಗಿತ್ತು.ಪ್ರಾರಂಭದಲ್ಲಿ ವಿನಾ ಕಾರಣ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಚಾಕರಿಗೆ ಪುರಸಭೆ ಸಿಬ್ಬಂದಿ ಹಾಗೂ ಪೊಲೀಸರು ಬಿಸಿ ಮುಟ್ಟಿಸಿದರು. ನಂತರ ರಸ್ತೆಗಳು ನಿರ್ಜನವಾದವು ಹಾಗೂ ಯಾವುದೇ ವಾಹನ ಸಂಚಾರ ಇರಲಿಲ್ಲ. ಕೆಲವರು ಪಟ್ಟಣದಿಂದ ಗ್ರಾಮಗಳಿಗೆ ಕಾಲ್ನಡಿಗೆಯಲ್ಲಿ ಹೋಗುತ್ತಿದುದು ಕಂಡುಬಂತು.ಬ್ಯಾಂಕ್ ಹಾಗೂ ಕಚೇರಿಗಳು ತೆರೆದಿದ್ದವಾದರೂ, ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರ ಪಟ್ಟಣದ ಅಭಿವೃದ್ಧಿಗೆ ರೂ.15 ಕೋಟಿ ಮಂಜೂರು ಮಾಡಿ ನಂತರ ವಾಪಸ್ ಪಡೆದಿರುವ ಹಣವನ್ನು ಮತ್ತೆ ಮಂಜೂರೂ ಮಾಡಿಸಬೇಕು ಎಂದು ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಉಪ ಮುಖ್ಯ ಮಂತ್ರಿ ಡಾ. ಅಶ್ವತ್ಥನಾರಾಯಣ್ ಅವರನ್ನು ಆಗ್ರಹಿಸಿದರು.ಮಂಗಳವಾರ ಪಟ್ಟಣಕ್ಕೆ ಭೇಟಿ ನೀಡಿದ್ದ ಉಪ ಮುಖ್ಯ ಮಂತ್ರಿ ಡಾ.ಅಶ್ವತ್ಥನಾರಾಯಣ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ನೀಡಿದ ಬಳಿಕ ಮಾತನಾಡಿ, ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಹೊಸ ಬಡಾವಣೆಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ. ಆದರೆ ಆರ್ಥಿಕ […]