
ಕೋಲಾರ:- ಕೃಷಿ,ತೋಟಗಾರಿಕೆಗೆ ಸಂಬಂಧಿಸಿದಂತೆ ರೈತರಿಗೆ ಅಗತ್ಯವಾದ ಎಲ್ಲಾ ಸಲಕರಣೆಗಳು ಒಂದೆಡೆ ಸಿಗುವಂತೆ ಬೃಹತ್ ಮಳಿಗೆ ಆರಂಭಿಸಿ, ಖಾಸಗಿಯವರಿಂದ ರೈತರಿಗಾಗುತ್ತಿರುವ ವಂಚನೆ ತಪ್ಪಿಸಿ ಎಂದು ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಶಾಸಕ ಕೆ.ಆರ್.ರಮೇಶ್ಕುಮಾರ್ ಸಲಹೆ ನೀಡಿದರು.ತಾಲ್ಲೂಕಿನ ಅಣ್ಣಿಹಳ್ಳಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಆಶ್ರಯದಲ್ಲಿ ಡಿಸಿಸಿ ಬ್ಯಾಂಕಿನಿಂದ 54 ಮಹಿಳಾ ಸಂಘಗಳಿಗೆ ಸಾಲ ಹಾಗೂ 86 ಮಂದಿ ರೈತರಿಗೆ ಸುಮಾರು 5 ಕೋಟಿ ರೂಗಳ ಸಾಲ ವಿತರಿಸಿ ಅವರು ಮಾತನಾಡುತ್ತಿದ್ದರು.ಬಿತ್ತನೆ ಬೀಜದಿಂದ ಕೀಟನಾಶಕ,ಗೊಬ್ಬರ,ಕೃಷಿಗೆ ಸಂಬಂಧಿಸಿದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ತಾಲ್ಲೂಕಿನ ಅಣ್ಣಿಹಳ್ಳಿಯಲ್ಲಿ ಡಿಸಿಸಿ ಬ್ಯಾಂಕಿನಿಂದ ನಡೆದ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಸಾಲ ಪಡೆಯಲು ಹಾಜರಿದ್ದ ಎಲ್ಲಾ ಮಹಿಳೆಯರ ಮುಡಿಯಲ್ಲಿ ಒಂದೇ ಮಾದರಿಯಲ್ಲಿ ಕನಕಾಂಬರ ರಾರಾಜಿಸುತ್ತಿದ್ದುದು ಕಂಡು ಬಂತು.ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡರು ಸಾಲ ವಿತರಿಸುವಾಗ ಪಾಲಿಸುವ ತಾಯಂದಿರಿಗೆ ಹರಿಸಿನ,ಕುಂಕುಮ,ಹೂ ನೀಡಿ ಮಡಿಲು ತುಂಬುವ ವಿಶಿಷ್ಟ ಸಂಪ್ರದಾಯದಿಂದಾಗಿ ಸಾಲ ಪಡೆಯಲು ಪಾಲ್ಗೊಂಡಿದ್ದ 600ಕ್ಕೂ ಹೆಚ್ಚು ಮಹಿಳೆಯರಲ್ಲಿ ಕನಕಾಂಬರ ಹೂ ರಾರಾಜಿಸಲು ಕಾರಣವಾಗಿತ್ತು.ಮಹಿಳಾ ಸಂಘಗಳಿಗೆ ಇಡೀ ದೇಶದಲ್ಲೇ ಅತಿ ಹೆಚ್ಚು ಭದ್ರತೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಪರಸ್ಪರ ಹೊಗಳಿಕೆ, ಮಾರ್ಗದರ್ಶನದ ಮಾತುಗಳು ಶಾಸಕದ್ವಯರಾದ ರಮೇಶ್ಕುಮಾರ್ ಮತ್ತು ಕೆ.ಶ್ರೀನಿವಾಸಗೌಡರ ಮೂಲಕ ಮುಂದಿನ ದಿನಗಳಲ್ಲಿ ರಾಜಕೀಯ ಧ್ರುವೀಕರಣಕ್ಕೆ ಮುನ್ನುಡಿಯಾಗುವ ಲಕ್ಷಣಗಳು ಗೋಚರಿಸಿದವು.ತಾಲ್ಲೂಕಿನ ಅಣ್ಣಿಹಳ್ಳಿ ಗ್ರಾಮದಲ್ಲಿ ಡಿಸಿಸಿ ಬ್ಯಾಂಕಿನಿಂದ ನಡೆದ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಕೆ.ಶ್ರೀನಿವಾಸಗೌಡರು, ರಮೇಶ್ಕುಮಾರ್ ಅವರ ಕುರಿತು ಮಾತನಾಡಿ, ಯಾವುದೇ ಕೆಲಸ ಆಗಬೇಕಾದರೆ ಪಟ್ಟು ಬಿಡದೇ ಹಿಂದೆ ಬೀಳುವ ಜಾಯಮಾನ ಅವರದ್ದು, ಅವರ ಜತೆ ಸದಾ ನಾನಿರುವೆ ಎಂದು ತಿಳಿಸಿದರು.ಜತೆಗೆ ಶ್ರೀನಿವಾಸಗೌಡರ ಕುಡುವನಹಳ್ಳಿ ಮನೆಯಲ್ಲೇ ರಮೇಶ್ಕುಮಾರ್ ಅವರಿಗೆ […]

ವರದಿ ;ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಪಟ್ಟಣದ ಹೊರ ವಲಯದ ಪುಂಗನೂರು ಕ್ರಾಸ್ ಸಮೀಪ ಕೆಲವರು ರಸ್ತೆ ಬದಿಯಲ್ಲಿ ನಿರ್ಮಿಸಿಕೊಂಡಿದ್ದ ಅಂಗಡಿಗಳನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತೆರವುಗೊಳಿರುವುದನ್ನು ಶುಕ್ರವಾರ ನೋಡಿದ ಬಳಿಕ ಮಾತನಾಡಿದ ಅವರು , ಐದು ಮಂದಿ ಬಡವರ ರಸ್ತೆ ಅಂಚನ್ನು ಬಿಟ್ಟು ಅಂಗಡಿ ಮಳಿಗೆ ನಿರ್ಮಿಸಿಕೊಂಡು , ಕೆಲವು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದರು . ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕೈಗೊಂಡಿರುವ ವಿವೇಚನಾರಹಿತ ಕ್ರಮದಿಂದಾಗಿ ಅವರ ತುತ್ತಿಗೆ ಕಲ್ಲುಬಿದ್ದಂತಾಗಿದೆ ಎಂದು ಹೇಳಿದರು . ಲೋಕೋಪಯೋಗಿ ಇಲಾಖೆಯ ಸಹಾಯಕ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ನಾಗರಿಕರು ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರಗಳ ಪ್ರಯೋಜನ ಪಡೆದುಕೊಳ್ಳಬೇಕು. ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಮಾರಂಭಲ್ಲಿ ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಈ ಕೇಂದ್ರಗಳು ಜನರ ಪ್ರಾಥಮಿ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಪೂರಕವಾಗಿವೆ. ಇಲ್ಲಿನ ಆರೋಗ್ಯ ಸಿಬ್ಬಂದಿ ಗ್ರಾಮದ ಆರೋಗ್ಯ ರಕ್ಷಣೆಯ ಹೊಣೆ ಹೊತ್ತಿರುತ್ತದೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕಣ್ಣುಗಳ ಮಹತ್ವ ಅರಿತು ಅವುಗಳ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್ ಹೇಳಿದರು.ನಗರದ ಭಾರತ ಸೇವಾದಳ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ರೋಟರಿ ಸೆಂಟ್ರಲ್, ಬಿಇಒ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ವಾಸನ್ ಐ ಕೇರ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉಚಿತ ಕಣ್ಣಿನತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ವಯೋ ಸಹಜವಾಗಿ ಕಣ್ಣುಗಳ ಸಮಸ್ಯೆ ಉದ್ಭವವಾಗಲಿದ್ದು, ಇವುಗಳನ್ನು ನಿಯಮಿತ ತಪಾಸಣೆ ಚಿಕಿತ್ಸೆ ಮತ್ತು ಆರೈಕೆಯಿಂದ ಬಗೆಹರಿಸಿಕೊಳ್ಳಲು ಸಾಧ್ಯವಿದ್ದು, ನಲವತ್ತು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಗುಮ್ಮರೆಡ್ಡಿಪುರ ಗ್ರಾಮದಲ್ಲಿ ಗುರುವಾರ ಐ ಮಾಸ್ ದೀಪ ಸ್ಥಾಪನೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಬೇಕು. ಸಮಸ್ಯೆ ಇದ್ದಲ್ಲಿ ಮುಂಚಿತವಾಗಿಯೇ ಅಗತ್ಯ ಕ್ರಮ ಕೈಗೊಂಡು ಪರಿಹಾರ .ಗ್ರಾಮದಲ್ಲಿ ಶಾಸಕರ ನಿಧಿಯಿಂದ ರೂ.5 ಲಕ್ಷ ವೆಚ್ಚದಲ್ಲಿ ಐ ಮಾಸ್ ದೀಪ ಸ್ಥಾಪನೆ ಮಾಡಲಾಗುತ್ತಿದೆ. ಗ್ರಾಮಕ್ಕೆ ಅಗತ್ಯವಾದ ಎಲ್ಲ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೊರೋನಾ ಎರಡನೇ ಅಲೆ ಭೀತಿ, ರೂಪಾಂತರಿ ತಳಿಯ ಆತಂಕದ ವಾತಾವರಣದಲ್ಲಿ ಆರೋಗ್ಯ ರಕ್ಷಣೆಗೆ ಕೋವಿಡ್ ಲಸಿಕೆ ಪಡೆಯಲು ಧೈರ್ಯದಿಂದ ಮುಂದೆ ಬನ್ನಿ ಎಂದು ನಾಗರೀಕರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಎಲ್.ರಘುನಾಥ್ ಕರೆ ನೀಡಿದರು.ಇಲ್ಲಿನ ಗಾಂಧಿನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಕೋವಿಡ್ ಲಸಿಕೆ ಪಡೆದ ನಂತರ ಮಾತನಾಡಿದ ಅವರು, ಲಸಿಕೆಯಿಂದ ಅಡ್ಡಪರಿಣಾಮಗಳಿಲ್ಲ, ಈ ಬಗ್ಗೆ ನಾಗರೀಕರಲ್ಲಿ ಆತಂಕ ಅಗತ್ಯವಿಲ್ಲ ಎಂದು ಕಿವಿಮಾತು ಹೇಳಿದರು.ಈಗಾಗಲೇ ಮೊದಲ ಹಂತದಲ್ಲಿ ಕೋವಿಡ್ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಕೊಳತೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತದ 13 ನಿರ್ದೇಶಕರ ಸ್ಥಾನಕ್ಕೆ ನಡೆದಚುನಾವಣೆಯಲ್ಲಿ ಜೆ.ಡಿ.ಎಸ್. ಬೆಂಬಲಿತ 9 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 4 ಮಂದಿ ಜಯಗಳಿಸಿದ್ದಾರೆ. ಜೆ.ಡಿ.ಎಸ್. ಬೆಂಬಲಿತ 9 ಅಭ್ಯರ್ಥಿಗಳು ಅಯ್ಕೆಯಾಗಿ ಬರ್ಜರಿಜಯಬೇರಿ ಬಾರಿಸಿದೆ.ಈ ಚುನಾವಣೆಯಲ್ಲಿಜೆ.ಡಿ.ಎಸ್. ಬೆಂಬಲಿತ ನಿರ್ದೇಶಕರುಗಳಾಗಿ ಜಿ. ನಾಗರಾಜ್, ಅನಂತಪ್ಪ, ಕೆ.ಎಂ. ಕೃಷ್ಣಪ್ಪ, ಕೆ.ಎಸ್. ಲಿಂಗಾರೆಡ್ಡಿ, ಕೆ.ಎಸ್. ವೆಂಕಟಸ್ವಾಮಿ, ಮುನಿರತ್ನಮ್ಮ, ವೆಂಕಟಮ್ಮ, ಕೃಷ್ಣಯ್ಯ ಶೆಟ್ಟಿ, ಪೆದ್ದರೆಡ್ಡಿರವರ ಮಂಜುನಾಥರೆಡ್ಡಿಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿಜೆ.ಡಿ.ಎಸ್. ಜಿಲ್ಲಾಅಧ್ಯಕ್ಷರಾದಜಿ.ಕೆ. ವೆಂಕಟಶಿವಾರೆಡ್ಡಿಯವರು, ಆಯ್ಕೆಯಾದ […]