
ವರದಿ ;ಶಬ್ಬೀರ್ ಅಹಮ್ಮದ್ ಶ್ರೀನಿವಾಸಪು ಶ್ರೀನಿವಾಸಪುರ : ಜನರ ಸಮಸ್ಯೆಗಳನ್ನು ಅವರ ಗ್ರಾಮಗಳಲ್ಲಿಯೇ ಆಲಿಸಿ ಶೀಘ್ರದಲ್ಲಿ ಪರಿಹರಿಸಲು ಹಾಗೂ ಜನರು ಕಛೇರಿಗಳಿಗೆ ಅಲೆದಾಡದಂತೆ ತಪ್ಪಿಸಲು ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ | ಆರ್ . ಸೆಲ್ವಮಣಿ ಅವರು ತಿಳಿಸಿದರು . ಇಂದು ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಹೋಬಳಿಯ ಬೋಡಿರೆಡ್ಡಿಪಲ್ಲಿ ಮತ್ತು ಮೊರಂಕಿಂದಪಲ್ಲಿ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ , ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೃಷಿ,ಪಶುಪಾಲನೆ ಮಾದರಿಯಲ್ಲಿ ಕೋಳಿಸಾಕಾಣಿಕೆ ವಿಷಯದಲ್ಲಿ ಪದವಿ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸುವ ಮೂಲಕ ಉತ್ತೇಜನ ನೀಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಶಾಸಕ ಇಂಚರ ಗೋವಿಂದರಾಜು ಸರ್ಕಾರವನ್ನು ಒತ್ತಾಯಿಸಿದರು.ಗರುವಾರ ವಿಧಾನಪರಿಷತ್ನಲ್ಲಿ ನಡೆದ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.ನೆರೆಯ ಆಂಧ್ರ,ತೆಲಂಗಾಣ ರಾಜ್ಯಗಳಲ್ಲಿ ಕೋಳಿ ಸಾಕಾಣಿಕೆಗೆ ಹೆಚ್ಚಿನ ನೆರವು ಒದಗಿಸಲಾಗುತ್ತಿದೆ, ಇಂದು ಕೃಷಿ ಮಾದರಿಯಲ್ಲೇ ಕೋಳಿ ಉದ್ಯಮ ಬೃಹತ್ ಆಗಿ ಬೆಳೆದಿದ್ದು, ರಾಜ್ಯದಲ್ಲೂ ಸಾಕಾಣಿಕೆದಾರರಿಗೆ ಅಗತ್ಯ ನೆರವು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಮಾ.16: ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಎಲ್.ಐ.ಸಿಯನ್ನು ಷೇರು ಮಾರುಕಟ್ಟೆ ವ್ಯಾಪ್ತಿಗೆ ತರುತ್ತಿರುವುದರ ವಿರುದ್ಧ ಭಾರತೀಯ ಜೀವವಿಮಾ ಶಾಖೆ (ಎ.ಐ.ಐ.ಇ.ಎ) ಕೋಲಾರದ ಪದಾಧಿಕಾರಿಗಳು ಈಗಾಗಲೇ 4-3-2021 ರಂದು ಕೋಲಾರ ಲೋಕಸಭಾ ಸದಸ್ಯರಾದ ಎಸ್.ಮುನಿಸ್ವಾಮಿ ರವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಎ.ಐ.ಐ.ಇ.ಎ ಅಧ್ಯಕ್ಷರಾದ ಕೆ.ಮುರಳಿ, ಕಾರ್ಯದರ್ಶಿ ಗೌರೀಶಂಕರ್, ಸದಸ್ಯರಾದ ರಾಮಕೃಷ್ಣ, ಶ್ರೀಧರ್, ಕೆ.ಎಸ್ ಕುಮಾರ್, ಶ್ರೀಕಾಂತ್ ಉಪಸ್ಥಿತರಿದ್ದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ, ಟಮಕ ಕೋಲಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಚಿಕ್ಕಣ್ಣ ಜಿ.ಎಸ್, ವಿಜ್ಞಾನಿ (ಗೃಹ ವಿಜ್ಞಾನ) ರವರು ಸಂಶೋಧನೆ ಮಾಡಿರುವ “ಕಬ್ಬಿಣಾಂಶಭರಿತ ಸಿರಿಧಾನ್ಯದ ಆರೋಗ್ಯ ಪೇಯ’ದ ತಾಂತ್ರಿಕತೆಯನ್ನು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಡಾ. ಕೆ.ಎಂ. ಇಂದಿರೇಶ್ ರವರು, ಶ್ರೀಮತಿ ರತ್ನಮ್ಮ, ವ್ಯವಸ್ಥಾಪಕರು, ವೇದಿಕ್ ಎಂಟರ್ಪೈಜಸ್ರವರಿಗೆ ತಾಂತ್ರಿಕತೆಯನ್ನು ಹಸ್ತಾಂತರಿಸಿದರು.ಈ ಆರೋಗ್ಯ ಪೇಯವನ್ನು ಸಿರಿಧಾನ್ಯವಾದ ಸಾಮೆ, ನೆಲ್ಲಿಕಾಯಿ ಪುಡಿ, ದ್ವಿದಳ ಧಾನ್ಯಗಳು ಮತ್ತು ಡ್ರೈಫ್ರೂಟ್ಸ್ಗಳನ್ನು ಬೆರೆಸಿ ತಯಾರಿಸಿದ್ದು, ಇದು ರೋಗನಿರೋಧಕ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಜೀವನ ವಿಧಾನವಾದ ಸಾಂಸ್ಕøತಿಕ ನಾಗರೀಕತೆ ಬೆಳೆದ ಈ ಕಾಲದಲ್ಲಿ ಮಾನಸಿಗೆ ಉಲ್ಲಾಸ ಮುದ ನೀಡುವ ಭಜನೆ ಜಾನಪದ ಸಂಗೀತ ಸಂಸ್ಕøತಿ ಎಲ್ಲರ ಮನಸುಗಳಲ್ಲಿ ಬಿತ್ತರಿಸಿ ಪರಂಪರೆ ಬೆಳೆಸಬೇಕೆಂದು ಶಿಕ್ಷಣ ಸಂಪನ್ಮೂಲ ವ್ಯಕ್ತಿ ನಾಗೇಂಧ್ರ ಪ್ರಕಾಶ್ ಹೇಳಿದರು.ಪಟ್ಟಣದ ಯೋಗಮಂದಿರದಲ್ಲಿ ಮಹಾ ಶೀವರಾತ್ರಿ ಅಂಗವಾಗಿ ಶ್ರೀಪÀತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಏರ್ಪಡಿಸಿದ್ದ ಭಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ನಾಗರೀಕತೆ ಬೆಳೆದಷ್ಟು ಜನಸಾಮಾನ್ಯರಲ್ಲಿ ಸ್ವಾಭಾವಿಕ ಪ್ರಕೃತಿ ಪರಂಪರೆಯ ಮನಸಿಗೆ ಮುದ ನೀಡುವ ಭಜನೆ ನಾಟಕ […]

ಕೋಲಾರ:- ಆರ್ಥಿಕ ವರ್ಷದ ಅಂತ್ಯಕ್ಕೆ ಕೇವಲ 18 ದಿನಗಳಿವೆ, ಕಳೆದ ಬಾರಿ 2.5 ಇದ್ದ ಎನ್ಪಿಎ ಈ ಬಾರಿ ಶೇ.1ಕ್ಕೆ ತರಲು ಬದ್ದತೆಯಿಂದ ಕೆಲಸ ಮಾಡಿ, ಸಾಲ ವಸೂಲಾತಿ,ಠೇವಣಿ ಸಂಗ್ರಹಕ್ಕೆ ನೀಡಿರುವ ಗುರಿ ಸಾಧಿಸಿ, ಅನ್ನನೀಡಿರುವ ಬ್ಯಾಂಕಿನ ಋಣ ತೀರಿಸಿ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಾಕೀತು ಮಾಡಿದರು.ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಶನಿವಾರ ನಡೆದ ಡಿಸಿಸಿ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಡೀ ದೇಶವೇ ಡಿಸಿಸಿ ಬ್ಯಾಂಕ್ ಕಡೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಲಸಿಕೆ ಪಡೆದರೂ ಮಾಸ್ಕ್,ಸಾಮಾಜಿಕ ಅಂತರ ಕಾಪಾಡುವುದು ಅತ್ಯಗತ್ಯವಾಗಿದೆ ಎಂದು ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಕಿವಿಮಾತು ಹೇಳಿದರು.ತಾಲ್ಲೂಕಿನ ವೇಮಗಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಕೋವಿಡ್ ಲಸಿಕೆ ಪಡೆದ ನಂತರ ಸುದ್ದಿಗಾರರೊಂದಿಗೆಅವರು ಮಾತನಾಡುತ್ತಿದ್ದರು.ಕೋವಿಡ್ ಮಹಾಮಾರಿಯಿಂದ ಇಡೀ ವಿಶ್ವವೇ ತಲ್ಲಣಗೊಂಡಿದೆ, ಈ ನಡುವೆ ಸೋಂಕು ಕಡಿಮೆಯಾಗಿದೆ ಎಂದು ನಿಟ್ಟುಸಿರು ಬಿಡುವ ಸಂದರ್ಭದಲ್ಲೇ ಪಕ್ಕದ ಕೇರಳ,ಮಹಾರಾಷ್ಟ್ರಗಳಲ್ಲಿ ಸೋಂಕು ಉಲ್ಬಣಗೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ ಎಂದರು.ರಾಜ್ಯದಲ್ಲೂ ಸೋಂಕಿನ ಪ್ರಮಾಣ ನಿನ್ನೆಯ ಅಂಕಿ ಅಂಶಗಳ ಪ್ರಕಾರ ಏರಿಕೆಯಾಗಿದೆ, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಕುರಿತು ಭಯ ಪಡುವ ಅಗತ್ಯವಿಲ್ಲ, ಪರೀಕ್ಷೆಗೆ ಇನ್ನೂ 103 ದಿನ ಬಾಕಿ ಇದೆ, ಹೀಗಿನಿಂದಲೇ ಕಷ್ಟಪಟ್ಟು ಓದಿ, ಇಲಾಖೆ ನೀಡಿರುವ ಪ್ರಶ್ನೆಕೋಠಿಗಳನ್ನು ನಿರಂತರವಾಗಿ ಅಭ್ಯಾಸ ಮಾಡಿ ಎಂದು ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಕರೆ ನೀಡಿದರು.ಜಿಲ್ಲೆಯ ಬೂದಿಕೋಟೆ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ಈ ಭಾಗದ 7 ಶಾಲೆಗಳ 400ಕ್ಕೂ ಹೆಚ್ಚು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ, ಮಕ್ಕಳ ಪ್ರಶ್ನೆಗೆ ಉತ್ತರಿಸಿ ಅವರು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೆಜಿಎಫ್; ಕೆಜಿಎಫ್ ಪೊಲೀಸ್ ಜಿಲ್ಲೆಯ ಆಂಡ್ರಸನ್ಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಮಾ.3 ರಂದು ತಡರಾತ್ರಿ ನಡೆದ ಪಿಎಸ್ಐ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಸ್ಥಳೀಯ ವಿಶೇಷ ಅಪರಾಧ ಪತ್ತೆ ದಳದ ಪೊಲೀಸರು ಯಶಸ್ವಿಯಾಗಿದ್ದಾರೆಂದು ಜಿಲ್ಲಾ ರಕ್ಷಣಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು ತಿಳಿಸಿದ್ದಾರೆ.ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಅಪ್ಪೇನ್ನನ್ನು ಬಂಧಿಸಲು ಹೋಗಿದ್ದ ವೇಳೆ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು […]