ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಜಲಜೀವನ್ ಮಿಷನ್ ದೇಶದ್ಯಾಂತ ಜಾರಿಯಾಗಿದ್ದು ಈ ಯೋಜನೆಯು ೨೦೨೪ ಕ್ಕೆ ಪರ್ಣಗೊಳ್ಳಲಿದ್ದು , ೨೦೨೪ ರೊಳಗೆ ಪ್ರತಿ ಮನೆ ಮನೆಗೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ , ಪ್ರಧಾನ ಕರ್ಯರ್ಶಿಗಳಾದ ಎಲ್.ಕೆ. ಅತೀಕ್ ಅವರು ತಿಳಿಸಿದರು . ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಲ ಜೀವನ್ ಮಿಷನ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ , ಜಲಜೀವನ್ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಇದೇ ತಿಂಗಳು ೨೧ ರಂದು ನಡೆಯುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ನಾನು ಸ್ವರ್ದಿಸುತ್ತಿದ್ದೇನೆ. ಕನ್ನಡ ಸೇವೆಯನ್ನು ಮಾಡಲು ನಿಮ್ಮ ಅಮೂಲ್ಯವಾದ ಮತ ವನ್ನು ನೀಡಿ ಜಯಶೀಲರನ್ನಾಗಿ ಮಾಡವುದರ ಮೂಲಕ ಮತ್ತಷ್ಟು ಕನ್ನಡ ಸೇವೆ ಮಾಡಲು ಅನುವು ಮಾಡಿಕೊಡಬೇಕೆಂದು ನಾಗನಂದ ಕೆಂಪರಾಜ್ ಕೋರಿದರು.ಪಟ್ಟಣದಲ್ಲಿ ಮತಯಾಚನೆ ಮಾಡುತ್ತಾ ಸುದ್ದಿಗಾರರೊಂದಿಗೆ ಮಾತನಾಡಿದ ನಾಗಾನಂದ ಕೆಂಪರಾಜ್ ನಮ್ಮ ಐದುವರೆ ವರ್ಷದ ಅವಧಿಯಲ್ಲಿ ಒಂದು ವರ್ಷ ಕೋವಿಡ್ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜೀವನದಲ್ಲಿ ಕೌಶಲ್ಯವಿದ್ದಲ್ಲಿ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಸಂಘಟನಾ ಆಯುಕ್ತ ವಿ.ಬಾಬು ಅವರು ಅಭಿಪ್ರಾಯಿಸಿದರು.ನಗರದ ಅಂತರಗAಗೆ ರಸ್ತೆಯಲ್ಲಿರುವ ವಿವೇಕ್ ಇನ್ಫೋಟೆಕ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿದರು.ಸ್ಪರ್ಧಾ ಅಭ್ಯರ್ಥಿಗಳು ಕೇವಲ ಪುಸ್ತಕದ ಅಧ್ಯಯನಕ್ಕೆ ಮಾತ್ರ ಸೀಮಿತವಾಗದೆ ಜೀವನ ಕೌಶಲ್ಯವನ್ನು ಹೆಚ್ಚಿಸುವ ಚಟುವಟಿಕೆಗಳನ್ನು ಮೈಗೂಡಿಸಿಕೊಂಡಾಗ ಎದುರಾಗುವ ಸಮಸ್ಯೆಗಳು ಹಾಗೂ ಸವಾಲುಗಳನ್ನು ಸುಲಭವಾಗಿ ನಿಗ್ರಹಿಸಬಹುದು ಎಂದು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಮಾರಕ ಕೀಟವಾಗಿರುವ ಸೊಳ್ಳೆಯಿಂದ ಹರಡುವಂತಹ ಡೆಂಗೀ , ಚಿಕುಂಗುನ್ಯಾ , ಮಲೇರಿಯಾ , ಮೆದುಳುಜ್ವರ , ಆನೆಕಾಲುರೋಗ ಮತ್ತು ಇತರೆ ಮಾರಣಾಂತಿಕ ಖಾಯಿಲೆಗಳನ್ನು ನಿಯಂತ್ರಣ ಮಾಡಬೇಕಾದರೆ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಲು ಸಮುದಾಯದ ಸಹಭಾಗಿತ್ವ ಮುಖ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ || ಕಮಲ.ಎಂ ಅವರು ತಿಳಿಸಿದ್ದಾರೆ . ಡೆಂಗ್ಯೂ , ಚಿಕುನ್ ಸಹ ಒಂದು ಸಾಂಕ್ರಮಿಕರೋಗವಾಗಿದ್ದು , ಈಡೀಸ್ ಈಜಿಪ್ಟ್ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ನವೆಂಬರ್ 16 ರಿಂದ ನಾಮಪತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದ್ದು , ಚುನಾವಣೆ ಸುಸಜ್ಜಿತವಾಗಿ ಯಾವುದೇ ತೊಂದರೆಯಾಗದಂತೆ ನಡೆಯಬೇಕು . ಚುನಾವಣೆ ನೀತಿ ಸಂಹಿತೆಯನ್ನು ಯಾರಾದರು ಉಲ್ಲಂಘಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ತಿಳಿಸಿದರು .ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಚುನಾವಣಾ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಸಂಗೀತವನ್ನು ಒಂದರಿಂದ ಹತ್ತನೇ ತರಗತಿಯ ಪಠ್ಯಭಾಗವಾಗಿಸಿ ಕಡ್ಡಾಯವಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕಲಿಯುವಂತೆ ಮಾಡಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಭಾರತ ಸೇವಾದಳ ಜಿಲ್ಲಾಧ್ಯಕ್ಷ ಹಾಗೂ ಕೋಲಾರ ಮತ್ತು ಚಿಕ್ಕಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷಕೆ.ಎಸ್.ಗಣೇಶ್ ಹೇಳಿದರು . ಗಾಯಿತಿ ಸಂಗೀತ ಕಲಾ ನಿಕೇತನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ನಗರದ ಥಿಯೋಸಫಿಕಲ್ ಸೊಸೈಟಿಯಲ್ಲಿ ಭಾನುವಾರ ಮಧ್ಯಾಹ್ನ ಆಯೋಜಿಸಿದ್ದ ಕರ್ನಾಟಕ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ-15, ಕೋಲಾರಮ್ಮನ ಕೆರೆಯಲ್ಲಿನ ನಿರುಪಯುಕ್ತ ಗಿಡಗಳನ್ನು ತೆರವುಗೊಳಿಸಿ ಶಿಥಿಲಗೊಂಡಿರುವ ಕೆರೆ ಕಟ್ಟೆಯನ್ನು ಅಭಿವೃದ್ದಿ ಪಡಿಸಬೇಕೆಂದು ರೈತ ಸಂಘದಿಂದ ಕೆರೆ ಕಟ್ಟೆ ಮುಂಭಾಗ ಹೋರಾಟ ಮಾಡಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಅಂಗೈಯಲ್ಲಿ ಬೆಣ್ಣೆ ಇಟ್ಟುಕೊಂಡು ತುಪಕ್ಕಾಗಿ ಊರೆಲ್ಲ ಸುತ್ತಿದರೆಂಬ ಗಾದೆಯಂತೆ ದೇವರ ಕೃಪೆಯಿಂದ ವರುಣನ ಆರ್ಭಟಕ್ಕೆ ತುಂಬಿ ತುಳುಕುತ್ತಿರುವ ಕೋಲಾರಮ್ಮನ ಕೆರೆಯನ್ನು ನಿರುಪಯುಕ್ತ ಗಿಡಗಳಿಂದ ಮುಕ್ತಿಗೊಳಿಸಲು ಜನ ಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ವಿಫಲವಾಗಿದೆ ಎಂದು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಾಹಿತ್ಯಕ್ಕೆ ಎಲ್ಲೆಗಳ ಹಂಗಿಲ್ಲ. ಸಾಹಿತ್ಯ ಸಾಮಾಜಿಕ ಬದಲಾವಣೆಯ ವಾಹಕ ಎಂದು ಮೈಸೂರಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ, ಭಾರತೀಯ ಭಾಷಾ ಸಂಸ್ಥಾನದ ಸಂಶೋಧಕ ಹಾಗೂ ಸಾಹಿತಿ ಡಾ. ಕುಪ್ಪನಹಳ್ಳಿ ಎಂ.ಬೈರಪ್ಪ ಹೇಳಿದರು.ತಾಲ್ಲೂಕಿನ ನಂಬಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಕವಿ ಬಿ.ವಿ.ವೆಂಕಟೇಶ್ ಅವರ ತಾಯಿಯ ಋಣ ಎಂಬ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶದ ಯುವ ಕವಿಗಳು, ರೈತ ಸಮುದಾಯದ ಬದುಕು, […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಬ್ಯಾಂಕ್ ವಿರುದ್ದ ಕೆಲವರು ನಿರಂತರವಾಗಿ ಷಡ್ಯಂತ್ರ ನಡೆಸುತ್ತಿದ್ದು, ರೈತರು,ಮಹಿಳೆಯರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಪ್ರಾಮಾಣಿಕ ಕೆಲಸದ ಮೂಲಕ ಅದಕ್ಕೆ ತಕ್ಕ ಉತ್ತರ ನೀಡಿ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಸಿಬ್ಬಂದಿಗೆ ತಾಕೀತು ಮಾಡಿದರು.ಬ್ಯಾಂಕಿನ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವರು ಬ್ಯಾಂಕ್ ವಿರುದ್ದ ಷಡ್ಯಂತ್ರ ನಿರಂತರವಾಗಿ ಮುಂದುವರೆಸಿದ್ದಾರೆ, ರಾಜಕೀಯವಾಗಿ ನಡೆಸುತ್ತಿರುವ ಇಂತಹ ಪ್ರಯತ್ನಗಳು ಸಫಲವಾಗದು ಎಂದರು.ಬ್ಯಾಂಕನ್ನು ನಂಬಿರುವ ರೈತರು,ಮಹಿಳೆಯರ […]

