
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಡಿಸಿಸಿ ಬ್ಯಾಂಕ್ ಶಾಖೆಯಿಂದ ಸಾಲ ಪಡೆಯಲು ಕೆಲವು ರೈತರು ನಕಲಿ ದಾಖಲೆಗಳನ್ನು ನೀಡಿ ಸಿಕ್ಕಿಬಿದ್ದಿದ್ದಾರೆ. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಂಗಣದಲಿ ಕೆಲವರು ಬ್ಯಾಂಕ್ ಸಾಲ ಪಡೆಯಲು ನೀಡಲಾಗಿದ್ದ ನಕಲಿ ದಾಖಲೆ ಪತ್ರಗಳನ್ನು ಪ್ರದರ್ಶಿಸಿ ಮಾತನಾಡಿದ ಅವರು, ಬಂಗವಾದಿ ಗ್ರಾಮದ ಬಿ.ಎಂ.ಶಂಕರೇಗೌಡ, ಬಿ.ಎಂ.ಶಿವರಾಮೇಗೌಡ ಎಂಬುವವರು ಕುರಿ ಸಾಕಾಣಿಕೆಗೆ ರೂ.6 ಲಕ್ಷ ಸಾಲ ಪಡೆಯಲು ಹಾಗೂ ಶೇಷಾಪುರ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸೊಸೈಟಿಗಳು ಪಡಿತರ ವಿತರಣೆಗೆ ಸೀಮಿತವಾಗದೇ ತನ್ನ ವ್ಯಾಪ್ತಿಗೆ ಒಳಪಡುವ ಎಲ್ಲಾ ಹಳ್ಳಿಗಳ ರೈತರು, ಬಡವರು,ಮಹಿಳೆಯರಿಗೆ ಸಾಲ ನೀಡುವ ಮೂಲಕ ಆರ್ಥಿಕ ಶಕ್ತಿಯಾಗಿ ಬೆಳೆಯಬೇಕು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕಿವಿಮಾತು ಹೇಳಿದರು.ತಾಲ್ಲೂಕಿನ ವಕ್ಕಲೇರಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷ, ಉಪಾಧ್ಯಕ್ಷರನ್ನು ಮಂಗಳವಾರ ಅಭಿನಂದಿಸಿ ಮಾತನಾಡಿದರು.ರೈತರು,ಮಹಿಳೆಯರ ಪರ ಕಾಳಜಿ, ಮನೆಬಾಗಿಲಿಗೆ ಸಾಲ ತಲುಪಿಸುವ ಡಿಸಿಸಿ ಬ್ಯಾಂಕಿನ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಕಲ್ಲೂರು ಗ್ರಾಮದ ಕೆರೆ ಅಂಗಳದಲ್ಲಿ ನಡೆಯುತ್ತಿದ್ದ ಕೋಳಿ ಜೂಜು ಕೇಂದ್ರದ ಮೇಲೆ ಸೋಮವಾರ ದಾಳಿ ನಡೆಸಿದ ಪೊಲೀಸರು ಜೂಜಾಡುತ್ತಿದ್ದ 5 ಮಂದಿಯನ್ನು ಬಂಧಿಸಿ, ಬಂಧಿತರಿಂದ ಪಣಕ್ಕೆ ಇಟ್ಟಿದ್ದ ರೂ.6750 ನಗದು ಹಾಗೂ 3 ಹುಂeಗಳನ್ನು ವಶಪಡಿಸಿಕೊಂಡಿದ್ದಾರೆ.ಪೊಲೀಸ್ ಇನ್ಸ್ಪೆಕ್ಟರ್ ಸಿ.ರವಿಕುಮಾರ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿಠ್ಠಲ್ ತಳವಾರ್, ಸಿಬ್ಬಂದಿ ವೇಣುಗೋಪಾಲ್ ದಾಳಿಯಲ್ಲಿ ಭಾಗವಹಿಸಿದ್ದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬೀದಿ ಬದಿ ವ್ಯಾಪಾರಿಗಳಿಗೆ ಡಿಸಿಸಿ ಬ್ಯಾಂಕ್ ವತಿಯಿಂದ ಬಡ್ಡಿ ರಹಿತ ಸಾಲ ಸೌಲಭ್ಯ ಕಲ್ಪಿಸಲಾಗುವುದು. ಸಾಲದ ಹಣವನ್ನು ರೂ.50 ಸಾವಿರದಿಂದ 1 ಲಕ್ಷಕ್ಕೆ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ 226 ರೈತ ಫಲಾನುಭವಿಗಳಿಗೆ ರೂ. 2.4 ಕೋಟಿ ಸಾಲದ ಹಣದ ಚೆಕ್ ವಿತರಿಸಿ ಮಾತನಾಡಿದರು.ಲಕ್ಷ್ಮೀಪುರ ವ್ಯವಸಾಯ ಸೇವಾ ಸಹಕಾರ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ; ಈ ಭಾಗದ ರೈತರು ಮಾವಿನ ಜೊತೆಗೆ ಗೋಡಂಬಿ ಬೆಳೆಸಿದರೆ ಅಧಿಕ ಇಳುವರಿ ಬರುವುದರ ಜೊತೆಗೆ ಹೆಚ್ಚಿನ ಲಾಭಾಂಶವು ಸಹ ಪಡೆಯಬಹುದು ಆಗಾಗಿ ಗೋಡಂಬಿ ಬೆಳೆಸಲು ರೈತರು ಮುಂದಾಗಿ ಎಂದು ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಆರ್. ಶಂಕರ್ ತಿಳಿಸಿದರು.ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ ತೋಟಗಾರಿಕಾ ಸಂಶೋದನಾ ಮತ್ತು ವಿಸ್ತರಣಾ ಕೇಂದ್ರ ಹೊಗಳಗೆರೆ ಅಖಿಲ ಭಾರತ ಸಮನ್ವಯ ಗೋಡಂಬಿ ಸಂಶೋಧನಾ ಯೋಜನೆ ಪುತ್ತೂರು ಇವರ ಸಂಯುಕಾಶ್ರಯದಲ್ಲಿ ರೈತರಿಗಾಗಿ ಒಂದು ದಿನದ ತರಬೇತಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಜನರ ಸಮಸ್ಯೆಗಳನ್ನು ಅವರ ಗ್ರಾಮಗಳಲ್ಲಿಯೇ ಆಲಿಸಿ ಶೀಘ್ರದಲ್ಲಿ ಪರಿಹರಿಸಲು ಹಾಗೂ ಜನರು ಕಛೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ | ಆರ್ . ಸೈಲಮಣಿ ಅವರು ತಿಳಿಸಿದರು . ಇಂದು ಕೋಲಾರ ತಾಲ್ಲೂಕಿನ ಕೆಂಬೋಡಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ , ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಕುರಿತು ಅವರು ಮಾತನಾಡಿದರು . ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 254 […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಐಎನ್ಎ ರಾಮರಾವ್ ಸುಭಾಷ್ ಚಂದ್ರಬೋಸ್ರ ಶಿಷ್ಯರಾಗಿ ಅಪ್ರತಿಮ ದೇಶಪ್ರೇಮಿ ಹಾಗೂ ಸೇವಾದಳದ ನಿಷ್ಠಾವಂತ ಕಾರ್ಯಕರ್ತರಾಗಿದ್ದರೆಂದು ಭಾರತ ರೆಡ್ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಹಾಗೂ ಭಾರತ ಸೇವಾದಳ ಜಿಲ್ಲಾ ಸಮಿತಿ ಸದಸ್ಯ ವಿ.ಪಿ.ಸೋಮಶೇಖರ್ ಹೇಳಿದರು.ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿರುವ ಭಾರತ ಸೇವಾದಳ ಜಿಲ್ಲಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಐಎನ್ಎ ರಾಮರಾವ್ರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಶಿಸ್ತಿಮ ಪ್ರತಿರೂಪವಾಗಿದ್ದ ರಾಮರಾವ್ ಹದಿನೇಳು ವರ್ಷಗಳ ಹಿಂದೆ ಕೋಲಾರ ನಗರಕ್ಕೆ ಆಗಮಿಸಿ ಸೇವಾದಳ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು, ಚೆನ್ನೈನಲ್ಲಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ:. ಆತ್ಮ ವಿಶ್ವಾಸ ಗೆಲುವಿನ ಸಂಕೇತ ಎಂದು ರಾಮಕೃಷ್ಣ ಮಿಷನ್ ಜೋನಲ್ ಅಧಿಕಾರಿ ಕಿರಣ್ ಕುಮಾರ್ ಹೇಳಿದರು.ಪಟ್ಟಣ ಗಂಗೋತ್ರಿ ಕಾಲೇಜಿನ ಸಭಾಂಗಣದಲ್ಲಿ ರಾಮಕೃಷ್ಣ ಮಿಷನ್ ಹಾಗೂ ಸ್ಥಳೀಯ ಕಾಲೇಜಿನ ವತಿಯಿಂದ ಧಾನ್ಯದ ಮಹತ್ವ ಕುರಿತು ಏರ್ಪಡಿಸಿದ್ದವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ದವಸ ಧಾನ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ಜೀವ ರಕ್ಷಕ ಧಾನ್ಯಗಳ ಬಗ್ಗೆ ಹಗುರವಾಗಿ ಮಾತನಾಡಬಾರದು ಎಂದು ಹೇಳಿದರು.ಕೃಷಿ ಉಳಿದರೆ ಮಾತ್ರ ಜನರಿಗೆ ಆಹಾರ ದೊರೆಯುತ್ತದೆ. ಅದರಲ್ಲೂ ಜೀವನಕ್ಕೆ ಅಗತ್ಯವಾದ ಆಹಾರ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶಾಲಾಭಿವೃದ್ಧಿ ಸಮಿತಿ ಸದಸ್ಯರು. ಸಮುದಾಯದ ಸಹಾಯ ಪಡೆದು ಶಾಲಾಭಿವೃದ್ಧಿ ಮಾಡಬೇಕು ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಎ.ಜಯರಾಮರೆಡ್ಡಿ ಹೇಳಿದರು.ತಾಲ್ಲೂಕಿನ ಯರ್ರಂವಾರಿಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್ಡಿಎಂಸಿ ಸದಸ್ಯರಿಗೆ ಬುಧವಾರ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸದಸ್ಯರು ಸಾಂಘಿಕ ಪ್ರಯತ್ನ ನಡೆಸಬೇಕು. ಮುಖ್ಯವಾಗಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.ಸರ್ಕಾರಿ ಶಾಲೆಗಳಲ್ಲಿ ಉತ್ತಮ ಬೋಧನೆ ನಡೆಯುತ್ತಿದೆ. ಪ್ರಾಥಮಿಕ […]