ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ದೇಶದ ಸ್ತ್ರೀಯರು ಸ್ವಾವಲಂಬಿ ಜೀವನ ನಡೆಸಲು ಸ್ತ್ರೀ ಶಕ್ತಿಗಳು ಅತ್ಯಗತ್ಯವಾಗಿದ್ದು , ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಕಾರ್ಯಕ್ರಮಗಳ ಮೂಲಕ ಸಹಾಯಧನವನ್ನು ಹಾಗೂ ಸಾಲ ಸೌಲಭ್ಯವನ್ನು ನೀಡುತ್ತಿವೆ ಎಂದು ತೋಟಗಾರಿಕೆ ಮತ್ತು ಯೋಜನೆ , ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ತಿಳಿಸಿದರು . ಇಂದು ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಇವರ ಸಂಯುಕ್ತಾಶ್ರಯದಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ಏಕೀಕರಣಗೊಳಿಸಿ, ಹೊಸದಾಗಿ ಉದಯವಾದ ಕರ್ನಾಟಕವನ್ನು ಕೆಟ್ಟ ರಾಜಕಾರಣಿಗಳು ಸೇರಿಕೊಂಡು ಜಾತಿವಾದಿ ಕರ್ನಾಟಕವಾಗಿ ಪರಿವರ್ತಿಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆಯೆಂದು ಹಿರಿಯ ಕನ್ನಡ ಹೋರಾಟಗಾರ ಹಾಗೂ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಗುಡುಗಿದರು.ಸ್ಥಳೀಯ ನಗರಸಭೆ ಆವರಣದಲ್ಲಿರುವ ಸ್ಕೌಟ್ಸ್ ಭವನದಲ್ಲಿ ಕನ್ನಡಸೇನೆ ಜಿಲ್ಲಾ ಘಟಕ, ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ, ರಾಜ್ಯ ಅಂಗನವಾಡಿ ಶಿಕ್ಷಕಿಯರ ಮತ್ತು ಸಹಾಯಕಿಯರ ಮಹಾ ಮಂಡಳಿ ಆಶ್ರಯದಲ್ಲಿ ಶನಿವಾರ ಮಧ್ಯಾಹ್ನ ಏರ್ಪಡಿಸಿದ್ದ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಪಟ್ಟಣದ ನಾಗರಿಕರ ಆರೋಗ್ಯ ರಕ್ಷಣೆಯಲ್ಲಿ ಪೌರ ಕಾರ್ಮಿಕರ ಪಾತ್ರ ಹಿರಿದು.ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹೇಳಿದರು . ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು , ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆ ಅಗತ್ಯ ಗಮನ ನೀಡಬೇಕು . ಕಾರ್ಯನಿರ್ವಹಣೆ ಸಮಯದಲ್ಲಿ ಸುರಕ್ಷತಾ ಪರಿಕರ ಧರಿಸಬೇಕು . ಪೌರ ಕಾರ್ಮಿಕರು ಆರೋಗ್ಯದಿಂದ ಇದ್ದಾಗ ಮಾತ್ರ ಜನರ ಆರೋಗ್ಯ ಕಾಪಾಡಲು ಸಾಧ್ಯವಾಗುತ್ತದೆ ಎಂದು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಸೆಪ್ಟೆಂಬರ್ 24 : ಕೋಲಾರ ನಗರಸಭೆಯ ‘ಸಿ’ ಗ್ರೂಪ್ ಪೌರಕಾರ್ಮಿಕ ಸಿಬ್ಬಂದಿಗೆ ಮೂಲಭೂತ ಸವಲತ್ತುಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರನ್ನು ಸಾಮಾಜಿಕ ಕಾರ್ಯಕರ್ತ ಗೌರಿಪೇಟೆಯ ಕೆ.ಎನ್.ರವೀಂದ್ರನಾಥ್ರವರು ಒತ್ತಾಯಿಸಿದ್ದಾರೆ.ಕೋಲಾರ ನಗರದ ಸ್ವಚ್ಚತೆಯನ್ನು ಕಾಪಾಡುವಲ್ಲಿ ಶ್ರಮಿಸುವ, ಕಸವಿಲೇವಾರಿ ಮಾಡುವ, ಒಳಚರಂಡಿ ಸ್ವಚ್ಚತೆ ಕೆಲಸವನ್ನು ನಿರ್ವಹಿಸುವ, ನೀರು ಸರಬರಾಜು ಮಾಡುವ ಪೌರಕಾರ್ಮಿಕರು ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ ಇವರುಗಳ ಬದುಕು ಒದ್ದೆಬಟ್ಟೆಯಾಗಿದ್ದು, ಅತಂತ್ರ ಬದುಕನ್ನು ನಡೆಸಬೇಕಾಗಿದೆ ಎಂದಿದ್ದಾರೆ.ಪೌರಕಾರ್ಮಿಕರಿಗೆ ಕೆಲಸ ಮಾಡಲು ಸುರಕ್ಷಿತ ಸಲಕರಣೆಗಳಾದ ಬೂಟು, ಹ್ಯಾಂಡ್ ಗ್ಲವ್ಸ್ಗಳು, […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿಶ್ರಾಂತಿ ಪಡೆಯದೆ ಶ್ರಮಿಸುವ ಹೃದಯ ಘಾಸಿಗೊಳ್ಳದಂತೆ ಎಚ್ಚರ ವಹಿಸಬೇಕು ಎಂದು ನಾರಾಯಣ ಹೃದಯಾಲಯದ ಹೃದಯ ತಜ್ಞ ಡಾ. ಯಶ್ವಂತ್ ಲಕ್ಷ್ಮಯ್ಯ ಹೇಳಿದರು.ಪಟ್ಟಣದ ವೆಂಕಟೇಶ್ವರ ಪ್ಯಾರಾ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ರೊಟರಿ ಸೆಂಟ್ರಲ್ ಶ್ರೀನಿವಾಸಪುರ ಸಂಸ್ಥೆಯ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ‘ನಮ್ಮ ಹೃದಯಕ್ಕೆ ನಮ್ಮ ಕೊಡುಗೆ’ ಎಂಬ ವಿಚಾರ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹೃದಯ ನಿರಾತಂಕವಾಗಿ ಕಾರ್ಯನಿರ್ವಹಿಸಬೇಕಾದರೆ, ದೇಹ ಹಾಗೂ ಮನಸ್ಸಿನ ಆರೋಗ್ಯ ಮುಖ್ಯವಾಗುತ್ತದೆ. ಧನಾತ್ಮಕ ಚಿಂತನೆಯೂ ಬೇಕಾಗುತ್ತದೆ ಎಂದು ಹೇಳಿದರು.ರೋಟರಿ ಸೆಂಟ್ರಲ್ […]
ವರದಿ : ಶಬ್ಬೀರ್ ಅಹ್ಮದ್ ,ಶ್ರೀನಿವಾಸಪುರ ಕೋಲಾರ ಸೆಪ್ಟೆಂಬರ್ 21 : ಇಂದು ವಿಶ್ವ ಶಾಂತಿ ದಿನ. ಶಾಂತಿಯಿಂದ ಜಗತ್ತಿನ ಏಳ್ಗೆ ಸಾಧ್ಯ. ವಿಶ್ವವೇ ಶಾಂತಿಯತ್ತ ಸಾಗು ಎನ್ನುವ ಸಂದೇಶವನ್ನು ವಿಶ್ವ ಸಂಸ್ಥೆ ವಿಶ್ವಕ್ಕೆ ಸಾರಿದ ದಿನವೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿಗಳಾದ ಸಿ. ಆರ್ ಅಶೋಕ್ ಅಭಿಪ್ರಾಯ ಪಟ್ಟರು.ನÀಗರದದಲ್ಲಿಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಬಾಲ್ಡ್ವಿನ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಶಾಂತಿ ದಿನಾಚರಣೆಯನ್ನು ಉದ್ಘಾಟಿಸಿ ಮಾತಾನಾಡಿದರು.ಕ್ರೌರ್ಯದಿಂದ ಏನನ್ನೂ ಸಾಧಿಸಲಾರೆವು. ಶಾಂತಿಯೇ ಬದುಕನ್ನು ಹಸನಾಗಿಸುವ ಮೂಲ […]
ವರದಿ : ಶಬ್ಬೀರ್ ಅಹ್ಮದ್ ,ಶ್ರೀನಿವಾಸಪುರ ಕೋಲಾರ ; ಬೆಳೆಗಳನ್ನು ಸಂರಕ್ಷಿಸಲು ಪೀಡೆನಾಶಕಗಳನ್ನು, ಕಳೆನಾಶಕಗಳನ್ನು ಮತ್ತು ದ್ರವ ರೂಪದ ಗೊಬ್ಬರಗಳನ್ನು ಸಿಂಪರಣೆ ಮಾಡುವುದು ಎಷ್ಟು ಮುಖ್ಯವೋ ಸಿಂಪರಕಗಳ ಆಯ್ಕೆ ಮತ್ತು ಅವುಗಳನ್ನು ಬಳಸುವ ವಿಧಾನ ಅಷ್ಟೇ ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ, ಕೋಲಾರವು ಆಜಾದಿಕಾ ಅಮೃತ ಮಹೊತ್ಸವದ ಅಂಗವಾಗಿ ರೈತಭಾಂದವರಿಗೆ “ಕೃಷಿಯಲ್ಲಿ ಬಳಸುವ ವಿವಿಧ ಸಿಂಪರಕಗಳು ಮತ್ತು ಅವುಗಳ ಕಾರ್ಯವಿಧಾನ”ದ ಬಗ್ಗೆ ಸಾಮಥ್ರ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ದಿನಾಂಕ: 20.09.2021, ಹಮ್ಮಿಕೊಂಡಿತ್ತು ಎಂದು ಕಾರ್ಯಕ್ರಮದ ಸಂಯೋಜಕಿ […]
ವರದಿ : ಶಬ್ಬೀರ್ ಅಹ್ಮದ್ ,ಶ್ರೀನಿವಾಸಪುರ ಶ್ರೀನಿವಾಸಪುರ:ತಾಡಿಗೋಳ್ ಬಳಿ ವಿದ್ಯಾರ್ಥಿನೀಯರ ಮೇಲೆ ನಡೆದ ಘಟನೆಯನ್ನು ಖಂಡಿಸಿ ಸೋಮವಾರ 11 ದಲಿತ ಸಂಘಟನೆಗಳ ಕಾರ್ಯಕರ್ತರು 11 ಕಿ.ಮೀಟರ್ ಕಾಲ್ನಡಿಗೆ ಜಾಥ ಮೂಲಕ ಘಟನೆಯನ್ನು ಖಂಡಿಸಿ ಮತ್ತೊಂದು ಬಾರಿ ಯಾವ ಹೆಣ್ಣು ಮಗುವಿನ ಮೇಲೆ ಈ ರೀತಿಯ ದಬ್ಬಾಳಿಕೆ, ದೌರ್ಜನ್ಯ ನಡೆಯಬಾರದು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು.ಬೆಳಿಗ್ಗೆ 10 ಗಂಟೆಗೆ ತಾಡಿಗೋಳ್ ಗ್ರಾಮದಿಂದ ಹೊರಟ ದಲಿತ ಸಂಘಟನೆಗಳ ನೂರಾರು ಕಾರ್ಯಕತರು ಜಾಥ ಹಮ್ಮಿಕೊಂಡರು. […]
ವರದಿ : ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ-ಸೆ-20, ನರೇಗಾ ಕಾಮಗಾರಿಯನ್ನು ದುಡಿಯುವ ಕೈಗೆ ಕೆಲಸ ಕೊಡದೆ ಜೆಸಿಬಿ ಮೂಲಕ ವಿವಿಧ ಕಾಮಗಾರಿಗಳನ್ನು ಮಾಡುತ್ತಿರುವವರ ವಿರುದ್ಧ ಗೂಂಡಾ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿ ಪಂಚಾಯಿತಿಗಳಲ್ಲಿನ ಭ್ರಷ್ಟಾಚಾರತೆ ತನಿಖೆ ಮಾಡಲು ಸೂಕ್ತ ಅಧಿಕಾರಿಗಳಿಂದ ತನಿಖೆ ಮಾಡಬೇಕೆಂದು ರೈತ ಸಂಘದಿಂದ ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ಮುಂದೆ ಜೆ.ಸಿ.ಬಿ ಸಮೇತ ಹೋರಾಟ ಮಾಡಿ, ಉಪ ಕಾರ್ಯದರ್ಶಿಗಳಾದ ಸಂಜೀವಪ್ಪರವರಿಗೆ ಮನವಿ ನೀಡಿ, ಆಗ್ರಹಿಸಲಾಯಿತು.ದೇಶಕ್ಕೆ ಸ್ವಾತಂತ್ರ ಬಂದು 75 ವರ್ಷಗಳು ಕಳೆದರೂ ಹಳ್ಳಿಗಳ ಅಭಿವೃದ್ಧಿ ಮರುಚಿಕೆಯಾಗಿದೆ. ಕೇಂದ್ರ […]

