ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಆಗಸ್ಟ್ 2: ಕೆಜಿಎಫ್ ನಗರದ ಬಸ್ ನಿಲ್ದಾಣದ ಸ್ವಾಗತ ಕಮಾನಿನ ಮೇಲೆ ತಮಿಳು ಭಾಷೆಯಲ್ಲಿ ಬರೆದಿದ್ದ ಕುವೆಂಪು ನಾಮಪಲಕಕ್ಕೆ ಮಸಿ ಬಳೆದು ಕನ್ನಡ ಮತ್ತು ತಮಿಳು ಭಾಷಿಕರ ನಡುವೆ ವಿಷ ಬೀಜ ಬಿತ್ತಲು ಯತ್ನಿಸಿ ಘನತೆ ಮತ್ತು ಗೌರವದಿಂದ ಬದುಕುತ್ತಿರುವ ಕೆಜಿಎಫ್ ಜನರ ಮೇಲೆ ಹೋರಾಟದ ಹೆಸರಿನಲ್ಲಿ ದೌರ್ಜನ್ಯ ನಡೆಸಿರುವ ಕನ್ನಡಮಿತ್ರ ವೆಂಕಟಪ್ಪ ವಿರುದ್ಧ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ದೌರ್ಜನ್ಯ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಭಾರತೀಯ ದಲಿತ ಒಕ್ಕೂಟದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಕೆಪಿಟಿಸಿಎಲ್ ಕಚೇರಿ ಎದುರು ಸೋಮವಾರ ಕೆಪಿಟಿಸಿಎಲ್ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ವಾಪಸ್ ಪಡೆಯಬೇಕು. ಯಾವುದೇ ಕಾರಣಕ್ಕೂ ವಿದ್ಯುತ್ ಸರಬರಾಜು ಖಾಸಗೀಕರನ ಮಾಡಬಾರದು ಎಂದು ಪ್ರತಿಭಟನ ನಿರತ ನೌಕರರು ಆಗ್ರಹಪಡಿಸಿದರು, ಕೇಂದ್ರ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಆ 10 ರವರೆಗೆ ಎಲ್ಲ ನೌಕರರೂ ಪ್ರತಿಭಟನೆಯಲ್ಲಿ ಭಾಗವಹಿಸುವರು ಎಂದು ತಿಳಿಸಿದರು.ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ, ಸಹಾಯಕ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ಸರ್ಕಾರದ ಸೌಲಭ್ಯಗಳನ್ನು ಪಕ್ಷಾತೀತವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಅಭಿವೃದ್ಧಿ ಕಾಮಗಾರಿಗಳು ನಿಗದಿತ ಸಮಯದೊಳಗೆ ಮುಗಿಯಬೇಕು. ಕಳಪೆ ಕಾಮಗಾರಿಗೆ ಅವಕಾಶ ನೀಡಬಾರದು ಎಂದು ಹೇಳಿದರು.ಅಂತರ್ಜಲ ವೃದ್ಧಿಸಲು ಚೆಕ್ ಡ್ಯಾಂಗಳು ಸಹಾಯಕವಾಗುತ್ತವೆ. ಈಗಾಗಲೆ ನಿರ್ಮಿಸಲಾಗಿರುವ ಚೆಕ್ ಡ್ಯಾಂಗಳ ಪೈಕಿ ಸುಸ್ಥಿತಿಯಲ್ಲಿರುವ ಹಾಗೂ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸ್ಕೌಟ್ಸ್ ಮತ್ತುಗೈಡ್ಸ್ ಸಂಸ್ಥೆಯ ವಿಶ್ವಕಂಠವಸ್ತ್ರ (ಸ್ಕಾರ್ಫ್ಡೇ) ಅಂಗವಾಗಿ ನಗರದ ಪಾಲಸಂದ್ರ ಬಡಾವಣೆಯಉದ್ಯಾನವನದಲ್ಲಿ ಸ್ವಚ್ಚತೆ ಹಾಗೂ ಗಿಡಗಳನ್ನು ನೆಡಲಾಯಿತು.1907ರಲ್ಲಿ ಲಂಡನ್ನ ಬ್ರೌನ್ಸಿ ದ್ವೀಪದಲ್ಲಿಸ್ಕೌಟ್ಸ್–ಗೈಡ್ಸ್ ನ ಮೊದಲ ಪ್ರಾಯೋಗಿಕ ಶಿಬಿರವು ಯಶಸ್ವಿಯಾದ ಹಿನ್ನಲ್ಲೆಯಲ್ಲಿ ,ಈ ದಿನವನ್ನು ಸ್ಕೌಟಿಂಗ್ ಸನ್ರೈಸ್ಡೇ ಹಾಗೂ ವಿಶ್ವಕಂಠವಸ್ತø(ಸ್ಕಾರ್ಫ್ಡೇ)ಎಂದು ಆಚರಿಸಿಕೊಂಡು ಬರಲಾಗುತ್ತಿದೆ.ಈ ಹಿನ್ನಲೆಯಲ್ಲಿ ನಗರದಲ್ಲಿ ವಿವಿಧರೀತಿಯ ಬಹು ಉಪಯೋಗಿ (ಹಣ್ಣು-ಕಾಯಿ-ಹೂ ಬಿಡುವ ಮತ್ತು ನೆರಳು – ಗಾಳಿ ಕೊಡುವ )30ಕ್ಕೂ ಅಧಿಕ ಗಿಡಗಳನ್ನು ನೆಡಲಾಯಿತ್ತು, ಇದಕ್ಕೂ ಮೊದಲುಅಲ್ಲಿದ್ದ ಮುಳ್ಳು ಗಿಡಗಳು,ಕಸಕಡ್ಡಿ,ಪ್ಲಾಸ್ಟಿಕ್ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಪತ್ರಕರ್ತರಲ್ಲಿ ವೃತ್ತಿ ಮೌಲ್ಯ ಮತ್ತು ಹೋರಾಟಗಾರರಲ್ಲಿ ಪ್ರಾಮಾಣಿಕತೆ, ಬದ್ದರೆ ಇದ್ದರೆ ಸುಂದರ ಹಾಗೂ ಸಂಮೃದ್ದಿಯ ಸಮಾಜ ನಿರ್ಮಾಣ ಸಾಧ್ಯ, ಈ ನಿಟ್ಟಿನಲ್ಲಿ ದಿ.ಕೆ.ಎಂ.ಮುನಿಯಪ್ಪ ಆದರ್ಶವಾಗಿದ್ದಾರೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮನ್ವಂತರ ಜನಸೇವಾ ಟ್ರಸ್ಟ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅಭಿಪ್ರಾಯಪಟ್ಟರು.ನಗರದ ಪತ್ರಕರ್ತರ ಭವನದಲ್ಲಿ ಮನ್ವಂತರ ಜನಸೇವಾ ಟ್ರಸ್ಟ್ ಹಾಗೂ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಾಜಿ ಸಚಿವ,ಪತ್ರಕರ್ತರ ಸಂಘದ ಅಧ್ಯಕ್ಷರೂ ಆಗಿದ್ದ ಕೆ.ಎಂ.ಮುನಿಯಪ್ಪ ಅವರ ಭಾವಚಿತ್ರ ಅನಾವರಣಗೊಳಿಸಿ ಅವರು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ-ಜು-31, ಕೋಲಾರ ಜಿಲ್ಲೆಯ ನೂತನ ಉಪ ವಿಭಾಗಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಆನಂದ ಪ್ರಕಾಶ್ ಮೀನಾ ರವರಿಗೆ ರೈತ ಸಂಘದಿಂದ ಗಿಡ ನಡುವ ಮೂಲಕ ಸ್ವಾಗತಿಸಿ ಕೆರೆಗಳ ಒತ್ತುವರಿ ತೆರವುಗೊಳಿಸುವಂತೆ ಮನವಿ ನೀಡಿ ಒತ್ತಾಯಿಸಲಾಯಿತು.ಮನವಿ ನೀಡಿ ಮಾತನಾಡಿದ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ ಬಯಲು ಸೀಮೆಯ ಕೋಲಾರ ಜಿಲ್ಲೆಯಲ್ಲಿ 2300 ಕೆರೆಗಳಿದ್ದು, ಕೆರೆಗಳ ತವರು ಎಂದು ಪ್ರಸಿದ್ದಿ ಪಡೆದಿರುವ ಜಿಲ್ಲೆಯ ಜಲ ಮೂಲಗಳು ದಿನೇ ದಿನೇ ಒತ್ತುವರಿದಾರರ ದುರಾಸೆಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜು.30: ಮುಂಬರುವ 2023 ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯಾಗಿ ಮಾಡುವುದೇ ಜೆಡಿಎಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಗುರಿಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜ ಹೇಳಿದರು.ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ರವರನ್ನು ಮುಖ್ಯಮಂತ್ರಿಯಾಗಿ ಮಾಡಲು ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರನ್ನು ಗೆಲ್ಲಿಸಿಕೊಳ್ಳಬೇಕು ಅದಕ್ಕಾಗಿ ಪಕ್ಷದ ಬೂತ್ ಮಟ್ಟದಿಂದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೌಶಲ್ಯಯುತ ಸಮಾಜ ನಿರ್ಮಿಸುವ ಸಲುವಾಗಿ ಆರ್ಸೆಟಿ ತರಬೇತಿ ಸಂಸ್ಥೆಯು ಮತ್ತಷ್ಟು ನೂತನ ಕೌಶಲ್ಯಾಧಾರಿತಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಎನ್.ಎಂ.ನಾಗರಾಜ್ ಹೇಳಿದರು.ನಗರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆದ ಜಿಲ್ಲಾ ಆರ್ಸೆಟಿ ಸಲಹಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಇಂದು ಸ್ವ ಉದ್ಯೋಗ ಕೈಗೊಳ್ಳುತ್ತಿರುವ ಹಲವರಲ್ಲಿ ಕೌಶಲ್ಯದ ಕೊರತೆಯಿಂದ ಉದ್ದಿಮೆ ಸ್ಥಾಪಿಸಿದ ಕೆಲವೇ ದಿನಗಳಲ್ಲಿ ನಷ್ಟ ಹೊಂದಿ, ಉದ್ಯಮವನ್ನು ಮುಚ್ಚುವ ಹಂತಕ್ಕೆತಲುಪುತ್ತಿದ್ದಾರೆ. ಆದ್ದರಿಂದ ಅಂತವರಿಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜು.30: ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ(ಕ್ಯಾಮ್ಸ್)ನ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದು, ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳುವಂತೆ ಕೋಲಾರ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್ಸ್ ಆಫ್ ಸ್ಕೂಲ್ಸ್(ಕ್ಯಾಮ್ಸ್) ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ(ಕ್ಯಾಮ್ಸ್)ನ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ರವರು ದಿನಾಂಕ 29-07-2021 ರಂದು ರಾತ್ರಿ ಸುಮಾರು 9-00 ಗಂಟೆ ಸಮಯದಲ್ಲಿ ಮನೆಯ ಬಳಿ […]

