
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನಗರದ ಪಿಸಿ ಬಡಾವಣೆ ಆಟೋ ನಿಲ್ದಾಣದಲ್ಲಿ 65 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಿ, ಆಟೋ ಚಾಲಕರು ತಮ್ಮ ವೈಯಕ್ತಿಕ ಹಾಗೂ ಪ್ರಯಾಣಿಕರ ಸುರಕ್ಷೆ ಕುರಿತಂತೆ ಜಾಗೃತಿವಹಿಸಬೇಕೆಂದು ಕಿವಿ ಮಾತು ಹೇಳಿದರು.ಸ್ಥಳೀಯ ಮುಖಂಡ ಕೋಲಾರ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ಮಾತನಾಡಿ, ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು ಎಂದರು.ಆಟೋ ಚಾಲಕರ ಸಂಘದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ತಿಂಗಳಿಗೊಂದು ಕನ್ನಡ ಪುಸ್ತಕ ಖರೀದಿಸಿ, ಕನ್ನಡ ಪುಸ್ತಕ, ಪತ್ರಿಕೆಗಳನ್ನು ನಿಯಮಿತವಾಗಿ ಓದುವ ಮೂಲಕ ಕನ್ನಡದ ಆಸ್ಮಿತೆಯನ್ನು ಕಾಪಾಡಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಹೇಳಿದರು.ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಭಾರತ ಸೇವಾದಳ ಜಿಲ್ಲಾ ಘಟಕವತಿಯಿಂದ ಆಯೋಜಿಸಲಾಗಿದ್ದ 65 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಕನ್ನಡ ಭಾಷೆ ಮತ್ತು ಸಂಸ್ಕøತಿ, ನೆಲ ಜಲದೊಂದಿಗೆ ಪ್ರತಿಯೊಬ್ಬರೂ ಭಾವನಾತ್ಮಕ ಸಂಬಂಧವನ್ನು ಬೆಳೆಸಿಕೊಂಡಾಗ ಮಾತ್ರವೇ ಕನ್ನಡ ಸಂಸ್ಕøತಿ, ಅಸ್ಮಿತೆಯನ್ನು […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ನಾಗರಿಕರು ತಮ್ಮ ದಿನ ನಿತ್ಯದ ವ್ಯವಹಾರದಲ್ಲಿ ಕನ್ನಡ ಭಾಷೆ ಬಳಸುವುದರ ಮೂಲಕ, ಬಾಷಾ ಬೆಳವಣಿಗೆಗೆ ಸಹಕರಿಸಬೇಕು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು. ಪಟ್ಟಣದ ರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದಲ್ಲಿ ಕನ್ನಡ ಭಾಷೆಗೆ ತನ್ನದೇ ಅಧ ಹಿರಿಮೆ ಇದೆ. ಹೆಚ್ಚಿನ ಸಂಖ್ಯೆಯ ಜ್ಞಾನಪೀಠ ಪ್ರಶಸ್ತಿಗಳು ಕನ್ನಡ ಸಾಹಿತ್ಯಕ್ಕೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ವೆಂಕಟೇಶ್ವರ ಪ್ಯಾರಾ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ರಾಜ್ಯೋತ್ಸವದ ಪ್ರಯುಕ್ತ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ‘ನಮ್ಮವ್ವ ಕನ್ನಡತಿ’ ಎಂಬ ಕನ್ನಡ ಗೀತೆಯನ್ನು ಡಾ ವೈ.ಎ.ವೆಂಕಟಾಚಲ ಬಿಡುಗಡೆ ಮಾಡಿದರು. ಉತ್ತಮ ಸಾಹಿತ್ಯದ ಸಾಂಗತ್ಯ ಅಗತ್ಯ ಶ್ರೀನಿವಾಸಪುರ: ಮನುಷ್ಯ ನೈತಿಕವಾಗಿ ಬೆಳೆಯಬೇಕಾದರೆ, ಉತ್ತಮ ಸಾಹಿತ್ಯದ ಸಾಂಗತ್ಯ ಅಗತ್ಯ. ಸುಶ್ರ್ಯಾವ್ಯವಾದ ಕನ್ನಡ ಗೀತೆಗಳು ನಾಡು ನುಡಿಯ ಹಿರಿಮೆಯನ್ನು ಮೆರೆಯುತ್ತವೆ. ಅಂಥ ಗೀತಕಾರರನ್ನು ಗೌರವಿಸುವುದು ಕನ್ನಡಿಗರಾದ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಕನ್ನಡ ಪರಿಚಾರಕ ಡಾ. ವೈ.ಎ.ವೆಂಕಟಾಚಲ ಹೇಳಿದರು. ಪಟ್ಟಣದ ವೆಂಕಟೇಶ್ವರ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಕಸಬಾ ಹೋಬಳಿಯ ಗುಮ್ಮರೆಡ್ಡಿಪುರ ಗ್ರಾಮದಲ್ಲಿ ಜಿಲ್ಲಾ ವಾಲ್ಮೀಕಿ ನಾಯಕ ಸ್ವಾಭಿಮಾನಿ ಜಿಲ್ಲಾ ಅಧ್ಯಕ್ಷ ಹರೀಶ್ ನಾಯ್ಕ್ ನೇತೃತ್ವದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಸಹ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಾಲ್ಮೀಕಿ ಮಹರ್ಷಿ ಭಾವ ಚಿತ್ರವಿರುವ ಪಲ್ಲಕ್ಕಿಯೊಂದಿಗೆ ಮೆರವಣಿಗೆ ಮಾಡಿ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಿಎಸ್.ಐ. ನಾರಾಯಣಪ್ಪ, ವಾಲ್ಮೀಕಿ ಸಮಾಜದ ಮುಖಂಡರಾದ ರಮೇಶ್ ನಾಯ್ಕ್, ಆಂಜನೇಯಪ್ಪ, ಶ್ರೀನಿವಾಸ್, ರಾಧಾ ಕೃಷ್ಣ, ಗೋಪಾಲ್, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶ್ರೀ ಮಹರ್ಶಿ ವಾಲ್ಮೀಕಿ ರವರು ಒಂದು ಸಮಾಜಕ್ಕೆ ಸೀಮಿತವಾಗಿಲ್ಲ, ಇವರು ರಚಿಸಿದ ಮಹಾಕಾವ್ಯ ಶ್ರೀ ರಾಮಾಯಣ ಗ್ರಂಥದ ಮಹತ್ವದ ಸಾರಾಂಶ ಕಲಿಯುಗದ ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾಗಿದೆ ಎಂದು ತಹಸೀಲ್ದಾರ್ ಶ್ರೀನಿವಾಸ್ ತಿಳಿಸಿದರು.ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕೋವಿಡ್ 19 ರ ಪ್ರಯುಕ್ತ ಸರಳವಾಗಿ ವಾಲ್ಮೀಕಿ ಜಯಂತಿಯನ್ನು ನೆರವೇರಿಸಲಾಗಿತ್ತು. ಕಾರ್ಯಕ್ರಮವನ್ನು ಕುರಿತು ಮಾತನಾಡಿದ ಶ್ರೀನಿವಾಸ್, ವಾಲ್ಮೀಕಿ ಮಹರ್ಶಿಗಳು ತ್ರೇತಾಯುಗಲದಲ್ಲಿ ಶ್ರೀ ರಾಮಾಯಣ ಎಂಬ ಕಾವ್ಯವನ್ನು ರಚನೆ ಮಾಡಿ ಸೀತಾ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಜಿಲ್ಲೆಯಲ್ಲಿನ ಅವೈಜ್ಞಾನಿಕ ರೈಲ್ವೇ ಅಂಡರ್ಪಾಸ್ಗಳಿಂದಾಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ, ಕೇರಳ ಮಾದರಿಯಲ್ಲಿ ರೈತರ ತರಕಾರಿಗಳಿಗೆ ಬೆಲೆ ನಿಗಧಿಪಡಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿ ನ.5ರ ಗುರುವಾರದಂದು ನಗರದ ರೈಲ್ವೇ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ನಗರದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲೆಯ ಬಂಗಾರಪೇಟೆ, ಕೋಲಾರ, ಶ್ರೀನಿವಾಸಪುರ ತಾಲೂಕುಗಳಲ್ಲಿ ಸಾಕಷ್ಟು ಕಡೆ ನಿರ್ಮಿಸಲಾಗಿರುವ ರೈಲ್ವೇ ಅಂಡರ್ ಪಾಸ್ಗಳು ಸಂಪೂರ್ಣ ಅವೈಜ್ಞಾನಿಕವಾಗಿದ್ದು, […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಕಟ್ಟಡ ಕಾರ್ಮಿಕರ ಸರ್ಕಾರದ ಸೌಲಭ್ಯ ಪಡೆಯಲು ಸಾಂಘಿಕ ಪ್ರಯತ್ನ ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಿಸಿ ಮಾತನಾಡಿ, ಕಟ್ಟಡ ಕಾರ್ಮಿಕರು ಸರ್ಕಾರದ ಸೌಲಭ್ಯ ಪಡೆಯಲು ಕಾರ್ಮಿಕ ಇಲಾಖೆಯಲ್ಲಿ ತಪ್ಪದೆ ನೋಂದಣಿ ಮಾಡಿಸಬೇಕು. ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಮೊಟ್ಟಮೊದಲ ಬಾರಿಗೆ ಹೆಲಿಕಾಪ್ಟರ್ ಜಾಲಿರೈಡ್ ಈಡಿಎಸ್ ಅವಿಯೇಶನ್ ವತಿಯಿಂದ ಆಯೋಜಿಸಲಾಗಿದೆ ಗ್ರಾಮೀಣ ಪ್ರದೇಶ ದಲ್ಲಿ ಬಹಳಷ್ಟು ಜನರಿಗೆ ನಾವು ಆಕಾಶದಲ್ಲಿ ಸುತ್ತಾಡಬೇಕು ಅನ್ನೋ ಆಸೆ ಇರುತ್ತದೆ ಆದರೆ ಅವರ ಅನುಕೂಲಗಳಿಗೆ ತಕ್ಕಂತೆ ಅವರು ವಿಮಾನಯಾನವನ್ನು ಪ್ರಯಾಣಿಸುವದಾಗಲಿ ಹೆಲಿಕ್ಯಾಪ್ಟರ್ ಪ್ರಯಾಣ ಮಾಡಲು ಆಗಿರುವುದಿಲ್ಲ ಹಳ್ಳಿಗಾಡಿನ ಪ್ರದೇಶಗಳಲ್ಲಿನ ಆಕಾಶದಲ್ಲಿ ಹಾರಾಡುವ ಆಸೆಯನ್ನು ನೆರವೇರಿಸಲು ಸಂಕೀರ್ತ್ ರವರು ಮೂಲತಹ ಶ್ರೀನಿವಾಸಪುರ ತಾಲ್ಲೂಕಿನವರಾಗಿದ್ದು ಈಡಿಎಸ್ ಆವಿಯೇಶನ್ ಸಮಸ್ಯೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ ನಮ್ಮ […]