ಶ್ರೀನಿವಾಸಪುರ : ತಾಲೂಕಿನ ಬೈರಗಾನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೬ ಸದಸ್ಯರಿದ್ದು ಅದರಲ್ಲಿ ೯ ಸದಸ್ಯರು ಹಾಜರಿದ್ದರು ಇನ್ನುಳಿದ ೭ ಸದಸ್ಯರು ಗೈರುಹಾಜರಾಗಿದ್ದರು.ಈ ಹಿಂದೆ ಅಧ್ಯಕ್ಷರಾಗಿದ್ದ ನೇತ್ರಾವತಿ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗೆ ಸಂಬಂದಿಸಿದ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಬೈಕೊತ್ತೂರು ಚಿನ್ನ ವೆಂಕಟರವಣ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವರನ್ನು ಚುನಾವಣಾ ಅಧಿಕಾರಿ ಕಲ್ಯಾಣ ಸ್ವಾಮಿ ಘೋಷಿಸಿದರು.ಮುಖಂಡ ರಘುನಾಥ ರೆಡ್ಡಿ ಮಾತನಾಡಿ ಸರ್ಕಾರದ ಯೋಜನೆಗಳ […]

Read More

ಕೋಲಾರ:- ಸಂಸ್ಕಾರ ಕಲಿಸುವುದು ಶಿಕ್ಷರಷ್ಟೇ ಪೋಷಕರದ್ದು ಜವಾಬ್ದಾರಿಯಾಗಿದೆ, ಗುಣಾತ್ಮಕ ಶಿಕ್ಷಣ ಸಿಗುವ ಸರ್ಕಾರಿ ಶಾಲೆಗಳ ಬಗ್ಗೆ ಕೀಳಿರಿಮೆ ತೊರೆದು ಮಕ್ಕಳನ್ನು ದಾಖಲಿಸಿ ನಮ್ಮೂರ ಶಾಲೆ ಅಭಿವೃದ್ದಿಗೆ ಗ್ರಾಮದ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ಶಾಸಕ ಸಮೃದ್ದಿ ಮಂಜುನಾಥ್ ಕರೆ ನೀಡಿದರು.ಜಿಲ್ಲೆಯ ಮಲ್ಲನಾಯಕನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಮಹಿಳಾ ದಿನಾಚರಣೆಗೆ ಚಾಲನೆ ನೀಡಿದ ಅವರು, ಸಾಧಕ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು.ಸರ್ಕಾರಿ ಶಾಲೆಗಳೆಂಬ ಕೀಳಿರಿಮೆ ತೋರದಿರಿ, ಗುಣಾತ್ಮಕ ಶಿಕ್ಷಣ ಹಾಗೂ ಸಂಸ್ಕಾರ ಕಲಿಸುವ ಸಾಧಕ ಶಿಕ್ಷಕರು ಇಲ್ಲಿ […]

Read More

ಶ್ರೀನಿವಾಸಪುರ ತಾಲ್ಲೂಕಿನ ಪನಸಮಾಕನಹಳ್ಳಿ ಗ್ರಾಮದಲ್ಲಿ ಶನಿವಾರ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದಿಂದ ಸಾಹಿತಿ ಆರ್.ಚೌಡರೆಡ್ಡಿ, ಪತ್ನಿ ಬಿ.ವಿ.ಸುಗುಣ ಅವರನ್ನು ಸನ್ಮಾನಿಸಲಾಯಿತು.ಸಾಹಿತ್ಯ ಸಮಾಜ ಕಟ್ಟುವ ಸಾಧನವಾಗಬೇಕು – ಆರ್.ಚೌಡರೆಡ್ಡಿಶ್ರೀನಿವಾಸಪುರ: ತಾಲ್ಲೂಕಿನ ಪನಸಮಾಕನಹಳ್ಳಿ ಗ್ರಾಮದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ವತಿಯಿಂದ ಶನಿವಾರ, ಸಾಹಿತಿಗಳ ಸಂಪರ್ಕ ಅಭಿಯಾನ ಕಾರ್ಯಕ್ರಮದಡಿ ಜಿಲ್ಲೆಯ ಹಿರಿಯ ಸಾಹಿತಿ ಆರ್.ಚೌಡರೆಡ್ಡಿ ಅವರನ್ನು ಸನ್ಮಾನಿಸಿ ಸಂವಾದ ನಡೆಸಲಾಯಿತು.ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ಸಾಹಿತಿ ಎನ್.ಶಂಕರೇಗೌಡ, ಸಾಹಿತಿ […]

Read More

ಶ್ರೀನಿವಾಸಪುರ: ಫೆಬ್ರವರಿ ಮಾಹೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಕಂಪ್ಯೂಟರ್ ಆಫೀಸ್ ಆಟೋಮೇಶನ್ ಪರೀಕ್ಷೆಗಳಲ್ಲಿ ಪಟ್ಟಣದ ಕರ್ನಾಟಕ ವಾಣಿಜ್ಯ ಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ(ಕಿಟ್) 06 ಡಿಸ್ಟಿಂಗ್‍ಷನ್ಸ್ ನೊಂದಿಗೆ (ಡಿಸ್ಟಿಂಗ್‍ಷನ್ಸ್) ಶೇಕಡ 100ರಷ್ಟು ಫಲಿತಾಂಶ ದೊರೆತಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ.ಪಟ್ಟಣದ ಎಂ.ಜಿ.ರಸ್ತೆಯಲ್ಲಿರುವ ಕರ್ನಾಟಕ ವಾಣಿಜ್ಯ ಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ (ಕಿಟ್) ಕಳೆದ ಫೆಬ್ರವರಿ ಮಾಹೆಯಲ್ಲಿ ರಾಜ್ಯಮಟ್ಟದಲ್ಲಿ ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷ ಮಂಡಳಿಯು ನಡೆಸಿದ ಕಂಪ್ಯೂಟರ್ ಆಫೀಸ್ ಆಟೋಮೇಶನ್ […]

Read More

ಶ್ರೀನಿವಾಸಪುರ : ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ತಮ್ಮ ವೃತ್ತಿ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನಕ್ಕೇರಿದರು ಜನ್ಮ ಕೊಟ್ಟ ತಂದೆ ತಾಯಿ ವಿದ್ಯೆ ನೀಡಿದ ಗುರು ಶಾಲೆ ಹಾಗೂ ತಮ್ಮ ಊರನ್ನು  ಎಂದಿಗೂ ಮರೆಯಬಾರದು ಎಂದು ಜ್ಙಾನಾದ್ರಿ ಪದವಿ ಕಾಲೇಜಿನ ಪ್ರಾಂಶುಪಾಲ ಮಲ್ಲಿಕಾರ್ಜುನ ರೆಡ್ಡಿ ಕರೆ. ನೀಡಿದರು. ಶ್ರೀನಿವಾಸಪುರ ತಾಲೂಕಿನ ಯಲ್ದೂರು ಗ್ರಾಮದ ನ್ಯಾಷನಲ್ ಹೈಸ್ಕೂಲಿನಲ್ಲಿ ಹಮ್ಮಿಕೊಂಡಿದ್ದ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ತಂದೆ-ತಾಯಿಗಳು ಹಾಗೂ ಗುರುಗಳ ಸಹಕಾರದೊಂದಿಗೆ ಹೆಚ್ಚು ಶ್ರಮವಹಿಸಿ […]

Read More

ಶ್ರೀನಿವಾಸಪುರ: ಇಷ್ಟು ದಿನ ನೋಡಿದ್ದು ನ್ಯೂಸ್ ರೀಲ್ ಮಾತ್ರ. ಸೋಮವಾರದಿಂದ ಆಚೆ ಸಿನಿಮಾ ಶುರುವಾಗುತ್ತೆ ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಮಾರ್ಮಿಕವಾಗಿ ಹೇಳಿದರು. ಶ್ರೀನಿವಾಸಪುರದ ಪಟ್ಟಣದ ಚೌಡೇಶ್ವರಿ ದೇವಿ ದೇವಾಲಯದಲ್ಲಿ ಬುಧವಾರ ಮಾಜಿ ಸ್ಪೀಕರ್ ಕೆ.ಅರ್.ರಮೇಶ್ ಕುಮಾರ್ ಪೂಜೆ ಸಲ್ಲಿಸಿ‌ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಈ ರೀತಿ ತಿಳಿಸಿದರು ಅವರು ಪಟ್ಟಣದ ಅಮಾನಿಕೆರೆ ಚೌಡೇಶ್ವರಿ ದೇವಾಲಯದಲ್ಲಿ ಬುಧವಾರ ಪೂಜೆ ಸಲ್ಲಿಸಿದ ಬಳಿಕ, ಕಳೆದ ವಿಧಾನಸಭಾ ಚುನಾವಣೆ ಮುಗಿದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ […]

Read More

ಶ್ರೀನಿವಾಸಪುರ; ಕಟ್ಟೆಕೆಳಗಿನ ಪಾಳ್ಯದಲ್ಲಿ ಬುಧವಾರ ಏರ್ಪಡಿಸಿದ್ದ ಇ ಖಾತಾ ಅಭಿಯಾನ ಕಾರ್ಯಕ್ರಮವನ್ನು ಪುರಸಭಾಧ್ಯಕ್ಷ ಬಿ.ಆರ್.ಭಾಸ್ಕರ್ ಉದ್ಘಾಟಿಸಿ ಇ ಖಾತಾ ಅಭಿಯಾನ ಪ್ರಯೋಜನ ಪಡೆಯಿರಿ ಎಂದು ತಿಳಿಸಿ, ನಾಗರಿಕರು ಪುರಸಭೆ ವತಿಯಿಂದ ನಡೆಸಲಾಗುತ್ತಿರುವ ಇ ಖಾತಾ ಅಭಿಯಾನ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು. ತಮ್ಮ ಮನೆ ಹಾಗೂ ನಿವೇಶನಗಳಿಗೆ ಇ ಖಾತೆ ಪಡೆದುಕೊಳ್ಳಬೇಕು ಎಂದು ಪುರಸಭಾಧ್ಯಕ್ಷ ಬಿ.ಆರ್.ಭಾಸ್ಕರ್ ಹೇಳಿದರು.ಪಟ್ಟಣದ ಕಟ್ಟೆಕೆಳಗಿನ ಪಾಳ್ಯದಲ್ಲಿ ಬುಧವಾರ ಏರ್ಪಡಿಸಿದ್ದ ಇ ಖಾತಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ನಾಗರಿಕರ ಹಿತದೃಷ್ಟಿಯಿಂದ ಈ ವಿಶೇಷ […]

Read More

ಶ್ರೀನಿವಾಸಪುರ : ಶಾಲೆಗೆ ಬರುವ ಆಹಾರ ಪಡಿತರಗಳ ಗುಣಮಟ್ಟ ಪರಿಶೀಲಿಸಿ , ಗುಣಮಟ್ಟ ಖಾತರಿ ಪಡಿಸಕೊಂಡು ಆಹಾರ ಪದಾರ್ಥಗಳು, ತರಕಾರಿಗಳನ್ನು ಬಳಸಿಕೊಳ್ಳುವ ಮುನ್ನ ಅವುಗಳ ಸ್ವಚ್ಚೆತೆಗೆ ಮಹತ್ವ ನೀಡಿ. ನೀರನ್ನು ಬಳಸುವಾಗ ಸ್ವಚ್ಚತೆ ಕಾಪಾಡಬೇಕು.ಗುಣಮಟ್ಟ ಪರಿಶೀಲಿಸಿದ ಬಳಿಕವೇ ಬಳಸಬೇಕು ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಟಿ.ಆರ್.ಸುಲೋಚನ ಸಲಹೆ ನೀಡಿದರು.ತಾಲೂಕಿನ ತಾಡಿಗೋಳ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾವರಣದಲ್ಲಿ ಸೋಮವಾರ ಅಡುಗೆ ಕೋಣೆ ಹಾಗು ಬಾಲಕೀಯರ, ಬಾಲಕರ ಶೌಚಾಲಯಗಳ ಉದ್ಗಾಟಿಸಿ ಮಾತನಾಡಿದರು. ಅಡಿಗೆ ಮಾಡುವ ಸ್ಥಳವು ಸ್ವಚ್ಚವಾಗಿರಬೇಕು . […]

Read More

ಶ್ರೀನಿವಾಸಪುರ : ತಾಲ್ಲೂಕಿನಲ್ಲಿ ಗ್ರಾಮೀಣ ಬಡ ಹಾಗೂ ದುರ್ಬಲ ಮಹಿಳೆಯರ ಸುಂದರ ಬದುಕಿಗೆ ಅಗತ್ಯವಾಗಿರುವ ಅನೇಕ ಯೋಜನೆಗಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖೇನ ಅನುಷ್ಟಾನ ಮಾಡುತ್ತಿದ್ದು, ಈ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಬೆಂಗಳೂರು ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕರಾದ ಸೀನಪ್ಪ ತಿಳಿಸಿದರು.ಪಟ್ಟಣದ ವೇಣು ವಿದ್ಯಾ ಸಂಸ್ಥೆ ಬಳಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದವತಿಯಿಂದ ಭಾನುವಾರ ಶ್ರೀನಿವಾಸಪುರ -2 ನೂತನ ಯೋಜನಾ ಕಚೇರಿಯನ್ನು ಉದ್ಗಾಟಿಸಿ ಮಾತನಾಡಿದರು.ಸದಸ್ಯರ ಸರ್ವತೋಮುಖ ಅಭಿವೃದ್ಧಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ […]

Read More