ಶ್ರೀನಿವಾಸಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮದ ಮಸೀದಿಯ ಎದುರು ಸಾರ್ವಜನಿಕರು ಶುಕ್ರವಾರದಂದು ಪ್ಲೇಕಾರ್ಡ್ ಹಿಡಿದು ಮಾನವ ಸರಪಳಿ ನಿರ್ಮಿಸಿ ಶಾಂತಿಯುತವಾಗಿ ಮೌನ ಪ್ರತಿಭಟನೆ ನಡೆಸಿದರು. ಕರ್ನಾಟಕದ ವಿವಿಧ ಭಾಗಗಳಲ್ಲಿನ ಮಸೀದಿಗಳ ಮುಂಭಾಗದಲ್ಲಿ ನಡೆಯುತ್ತಿರುವ ಈ ರಾಜ್ಯವ್ಯಾಪಿ ಶಾಂತಿಯುತ ಪ್ರತಿಭಟನೆಯಂತೆ, ಅಡ್ಡಗಲ್‌ನಲ್ಲಿಯೂ ಸಾಮೂಹಿಕ ಜುಮಾ ನಮಾಜಿನ ನಂತರ ಕಪ್ಪು ಬಟ್ಟೆ ಧರಿಸಿ, ಹಸ್ತಲಾಘವದ ಮೂಲಕ ಮಾನವ ಸರಪಳಿ ನಿರ್ಮಿಸಲಾಯಿತು. ಪ್ರತಿಭಟನಾಕಾರರು ವಕ್ಫ್ ತಿದ್ದುಪಡಿ […]

Read More

ಶ್ರೀನಿವಾಸಪುರ: ಕೊಲಾರ ಜಿಲ್ಲೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಮೈಲರಪ್ಪ ಎಂ. ಅವರು ಶ್ರೀನಿವಾಸಪುರದ ಜಕೀರ್ ಹುಸೇನ್ ಮೊಹಲ್ಲಾದಲ್ಲಿರುವ ಸರ್ಕಾರಿ ಉರ್ದು ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗೆ ಗುರುವಾರದಂದು ಭೇಟಿ ನೀಡಿ, ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ, ಮೂಲಭೂತ ಸೌಕರ್ಯಗಳು, ಮತ್ತು ಶಿಕ್ಷಣ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಶಿಕ್ಷಕರೊಂದಿಗೆ ಸಭೆ ನಡೆಸಿ, ವಿದ್ಯಾರ್ಥಿಗಳ ಪಾಠಾಭ್ಯಾಸ ಹಾಗೂ ಸಾಧನೆಯಲ್ಲಿ ಸುಧಾರಣೆ ತರಬೇಕೆಂಬ ಸೂಚನೆ ನೀಡಿದರು. “ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮ ಕರ್ತವ್ಯವಾಗಿದೆ. […]

Read More

ಶ್ರೀನಿವಾಸಪುರ : ನಾವು ಆರಾಧಿಸುವ ಪೂಜಿಸುವ ಪರಮಾತ್ಮನಿಗೆ ಅರ್ಪಿಸುವ ವಸ್ತುವಿನಲ್ಲಿ ಅಥವಾ ಪದಾರ್ಥಗಳಲ್ಲಿ ಪರಮಾತ್ಮನ ವಿಶೇವ ಶಕ್ತಿ ಇದೆಯೆಂದರಿತು ಅಂತಹ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಗೌರವಭಾವದಿಂದ ಕಾಣಬೇಕು ಎಂದು ಬಿಲಿಜ ಸಮುದಾಯದ ತಾಲೂಕು ಅಧ್ಯಕ್ಷ ಬಿ.ಎಂ.ರಾಮಚಂದ್ರ ಅಭಿಪ್ರಾಯಪಟ್ಟರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಬಲಿಜ ಸಮುದಾಯದವತಿಯಿಂದ ಕೈವಾರದಲ್ಲಿ ನಡೆಯುವ ಗುರು ಪೂರ್ಣಿಮ ಕಾರ್ಯಕ್ರಮಗಳ ಅಂಗವಾಗಿ ನಡೆದ ಪತ್ರಿಕಾ ಗೋಷ್ಟಿ ನಡೆಸಿ ಮಾತನಾಡಿದರು.ಪುರಸಭೆ ಮಾಜಿ ಅಧ್ಯಕ್ಷ ಬಿ.ಎಂ.ಪ್ರಕಾಶ್ ಮಾತನಾಡಿ ಗುರುವಿನ ಸೇವೆಗಾಗಿ ಎಲ್ಲಾ ಸಮುದಾಯದವರು ತನು, ಮನ,ಧನ ನೀಡಬಹುದು. ವಿಶೇಷವಾಗಿ […]

Read More

ಕೋಲಾರ : ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡುವಾಗ ಜನಪ್ರತಿನಿಧಿಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ಅಧಿಕಾರಿಗಳಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಸುರೇಶ್ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ 4ನೇ ತ್ರೈಮಾಸಿಕದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸರ್ಕಾರದ ಸವಲತ್ತುಗಳನ್ನು ಸಾಮಾನ್ಯರಿಗೆ ತಲುಪಿಸಲು ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯೋನ್ಮುಖರಾಗಬೇಕು. ಹೀಗೆ ವಿತರಿಸುವ ಸವಲತ್ತುಗಳ […]

Read More

ಕೆ.ಜಿ.ಎಫ್: ಕೆ.ಜಿ.ಎಫ್‌ನ ಸರ್ಕಾರಿ ಗಣಿ ಶಿಕ್ಷಣ ಶಾಲೆಯಲ್ಲಿ ಇತ್ತೀಚೆಗೆ ನಡೆದ ಯುಜಿಸಿಇಟಿ (UG-CET) ಸೀಟು ಹಂಚಿಕೆ ಮಂಥನ ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿಶೇಷ ಜಾಗೃತಿ ಉಪನ್ಯಾಸ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯವಸ್ಥಾಪಕಿಯಾದ ಶ್ರೀಮತಿ ಶೀರಿನ್ ತಾಜ್ ಅವರು ಉಪಸ್ಥಿತರಿದ್ದು, ನಿಗಮದಿಂದ ವಿದ್ಯಾರ್ಥಿಗಳಿಗೆ ಲಭಿಸಬಹುದಾದ ವಿವಿಧ ಶೈಕ್ಷಣಿಕ ಸೌಲಭ್ಯಗಳ ಕುರಿತು ವಿವರವಾದ ಮಾಹಿತಿ ನೀಡಿದರು. ವಿಶೇಷವಾಗಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ದೊರೆಯುವ ಶೈಕ್ಷಣಿಕ ಸಾಲ ಮತ್ತು […]

Read More

ಬೆಂಗಳೂರು: ಸರ್ಕಾರದ ಪ್ರಧಾನಮಂತ್ರಿ ಹೊಸ 15 ಅಂಶಗಳ ವಿಶೇಷ ಕಾರ್ಯಕ್ರಮದ ಪರಿಣಾಮಕಾರಿಯಾದ ಅನುಷ್ಠಾನಕ್ಕಾಗಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ವತಿಯಿಂದ ಜಿಲ್ಲೆಯ ಮಟ್ಟದ ಅನುಷ್ಠಾನ ಸಮಿತಿಯ ಸದಸ್ಯರಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಬೆಂಗಳೂರಿನ ಬನ್ನೇರುಘಟ್ಟದ ಜಂಗಲ್ ಲಾಡ್ಜ್‌ಗಳ ಪ್ರಕೃತಿ ಶಿಬಿರದಲ್ಲಿ ನಡೆಸಲಾಯಿತು. ಈ ಶಿಬಿರದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸಮಿತಿ ಸದಸ್ಯರು ಭಾಗವಹಿಸಿದ್ದರು. ಯೋಜನೆಯ ಉದ್ದೇಶ, ಅನುದಾನದ ಸರಿಯಾದ ವಿನಿಯೋಗ, ಫಲಾನುಭವಿಗಳ ಆಯ್ಕೆ, ಹಾಗೂ ಯೋಜನೆ ಜಾರಿಗೆ ತಾಂತ್ರಿಕ ಮಾಹಿತಿ ಹಂಚಿಕೊಳ್ಳಲಾಯಿತು. ಈ ಕಾರ್ಯಾಗಾರವು ಸಮಿತಿಗೆ […]

Read More

ಶ್ರೀನಿವಾಸಪುರ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯಿಂದ 4 ಜನ ಶಾಸಕರು ಕಾಂಗ್ರೇಸ್ ಪಕ್ಷದಿಂದ ಚುನಾಯಿತರಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ನಡೆಸುತ್ತಿದೆ. ಜೆ.ಡಿ.ಎಸ್.ನ ಇಬ್ಬರು ಶಾಸಕರು ಗೆದಿದ್ದಾರೆ. ಲೋಕಸಭೆಯಲ್ಲಿ ಜೆ.ಡಿ.ಎಸ್ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮತ್ತು ಜೆ.ಡಿ.ಎಸ್.ನ ವಿಧಾನ ಪರಿಷತ್ ಸದಸ್ಯರು ಇದ್ದಾರೆ ಆದರೂ ಸಹ ಜಿಲ್ಲೆಯು ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದೆ ಎಂದು ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಸೂರ್ಯನಾರಾಯಣ ತಿಳಿಸಿದರು.ಪಟ್ಟಣದ ಶಂಕರ ಮಠದ ಬಳಿ ಸಿಪಿಐ(ಎಂ) ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ […]

Read More

ಶ್ರೀನಿವಾಸಪುರ : ಶ್ರೀನಿವಾಸಪುರ ತಾಲ್ಲೂಕಿನಲ್ಲಿ ವರ್ಷಕ್ಕೊಂದು ಬಾರಿ ಉಲ್ಬಣವಾಗುವ ಮಾವಿನ ವ್ಯವಹಾರ ಕೋಟ್ಯಾಂತರ ರೂಪಾಯಿ ಮೊತ್ತಕ್ಕೆ ತಲುಪುತ್ತಿದೆ. ಇಲ್ಲಿನ ಮಾವು ತೋಟಗಳು ಮತ್ತು ಬಟ್ಟಲಿನಿಂದ ಖರೀದಿಸುವ ಪಸಲು ವ್ಯಾಪಾರಸ್ಥರು ಈ ವ್ಯಾಪಾರಕ್ಕೆ ತಮ್ಮ ಎಲ್ಲಾ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಕೆಲವೊಮ್ಮೆ ಚಿನ್ನವನ್ನು ಅಡಮಾನ ಇಟ್ಟುಕೊಂಡು ಅಥವಾ ಬಡ್ಡಿದರ ಸಾಲ ಪಡೆದು ತಮ್ಮ ವೃತ್ತಿಯನ್ನು ನಿರ್ವಹಿಸುತ್ತಿದ್ದಾರೆ. ಆದರೂ ಈ ವ್ಯಾಪಾರಸ್ಥರು ಇನ್ನೂ ತನ್ಮೂಲಕ ಸಂಘಟಿತ ರೂಪದಲ್ಲಿ ಸರ್ಕಾರದ ಪ್ರೋತ್ಸಾಹದ ಯೋಜನೆಗಳನ್ನು ಪಡೆದಿಲ್ಲ. ಈ ಭಾಗದಲ್ಲಿ ಈಗಾಗಲೇ ಕೃಷಿ ಪೂರಕವಾಗಿ […]

Read More

ಶ್ರೀನಿವಾಸಪುರ : ಮನೆಗೆ ಯಾವಾಗಲೂ ಐಎಸ್‍ಐ ಪ್ರಮಾಣಿತ ಉಪಕರಣಗಳನ್ನೇ ಬಳಸುವಂತೆ, ವೈರಿಂಗ್ ಕೆಲಸವನ್ನು ಸರ್ಕಾರಿ ಲೈಸೆನ್ಸ್ ಹೊಂದಿದ ಗುತ್ತಿಗೆದಾರರಿಂದ ಮಾತ್ರ ಮಾಡಿಸಿಕೊಳ್ಳಿ , ಯಾವುದೇ ಕಾರಣಕ್ಕೂ ಪ್ಲಗ್ ಪಾಯಿಂಟ್‍ಗಳು ಮಕ್ಕಳ ಕೈಗೆ ಎಟುಕದಂತಿರಲಿ ಎಂದು ಎಇಇ ರವೀಂದ್ರಬಾಬು ಮನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿದರುಪಟ್ಟಣದ ಬೆಸ್ಕಾಂ ಉಪವಿಭಾಗದ ವತಿಯಿಂದ ಮಂಗಳವಾರ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ ಜಾಥಗೆ ಚಾಲನೆ ನೀಡಿ ಮಾತನಾಡಿದರು.ಅದೇ ರೀತಿಯಾಗಿ ವಿದ್ಯುತ್ ಕಂಬಗಳಿಗೆ ಬ್ಯಾನರ್ ಅಥವಾ ಜಾಹಿರಾತು ಫಲಕಗಳನ್ನು ಕಟ್ಟುವುದು, ಬಟ್ಟೆಗಳನ್ನು ಒಣಗಿಸುವ ತಂತಿಯನ್ನು ವಿದ್ಯುತ್ ಕಂಬಕ್ಕೆ […]

Read More
1 29 30 31 32 33 381