ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ “ದುಶ್ಚಟಗಳಿಂದ ದೂರವಿದ್ದು, ಕಾಲಕಾಲಕ್ಕೆ ಹೃದಯ ತಪಾಸಣೆ ಮಾಡಿಸಿಕೊಂಡರೆಹೃದಯಾಘಾತದಿಂದಾಗುವ ಜೀವ ಹಾನಿ ತಪ್ಪಿಸಬಹುದು- ಡಿಸಿ ಸಿ.ಸತ್ಯಭಾಮ” ಕೋಲಾರ:- ಆರೋಗ್ಯಕ್ಕೆ ಮಾರಕವಾದ ಮದ್ಯ,ಧೂಮಪಾನದಂತಹ ದುಶ್ಚಟಗಳಿಂದ ದೂರವಿದ್ದು, ಕಾಲಕಾಲಕ್ಕೆ ಆರೋಗ್ಯ ತಪಾಸಣೆ,ಚಿಕಿತ್ಸೆ ಪಡೆಯುವುದರಿಂದ ಹೃದಯಾಘಾತದಿಂದಾಗುವ ಜೀವಹಾನಿ ತಪ್ಪಿಸಬಹುದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅಭಿಪ್ರಾಯಪಟ್ಟರು.ನಗರದ ಪತ್ರಕರ್ತರ ಭವನದಲ್ಲಿ ಮಣಿಪಾಲ್ ಆಸ್ಪತ್ರೆ ಬೆಂಗಳೂರು ಹಾಗೂ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಡೆದ “ಚಳಿಗಾಲದಲ್ಲಿ ಹೃದಯಾಘಾತ ಸಾಮನ್ಯವಾಗಿದೆ” ಈ ಬಗ್ಗೆ ಪತ್ರಕರ್ತರೊಂದಿಗೆ ನೇರ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಡಿ.3: ಜಿಲ್ಲೆಯ ವಿಕಲಚೇತನರು ಸಂಬಂಧಪಟ್ಟ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಬಳಸಿಕೊಳ್ಳವ ಮೂಲಕ ಆರ್ಥಿಕ, ಶೈಕ್ಷಣಿಕವಾಗಿ ಅಭಿವೃದ್ಧಿ ಕಡೆಗೆ ಸಾಗಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಹೆಚ್ ಗಂಗಾಧರ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ವಿಕಲಚೇತನರ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ ಎಂದು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಹೇಳಿದರು.  ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕನಕದಾಸ ಜಯಂತಿ ಸಮಾರಂಭದಲ್ಲಿ ಕನಕ ದಾಸರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದಲು ಪ್ರಯತ್ನಿಸಿದರು. ಅವರು ಯೋಧನಾಗಿ ಪರಾಕ್ರಮಕ್ಕೆ, ಕವಿಯಾಗಿ ಸಮಾಜ ಸುಧಾರಣೆಗೆ ಹೆಸರಾಗಿದ್ದಾರೆ ಎಂದು ಹೇಳಿದರು.  ಅವರ ನೆನೆಪು ಜಯಂತಿಗೆ ಸೀಮಿತವಾಗಬಾರದು. ಅವರನ್ನು ಯಾವುದೇ ಒಂದು ಜಾತಿಗೆ ಸೀಮಿತ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕವಾಗಿದೆ. ಸಮಾಜದ ಎಲ್ಲರನ್ನೂ ಸಮಾನವಾಗಿ ಕಾಣುವ ಮನೋಭಾವ ಬೆಳೆಯಬೇಕು ಎಂದು ತಾಲ್ಲೂಕು ಕುರುಬರ ಅಧ್ಯಕ್ಷ ಎಂ.ವೇಮಣ್ಣ ಹೇಳಿದರು.  ಪಟ್ಟಣದ ಕನಕ ಸಮುದಾಯ ಭವನದಲ್ಲಿ ತಾಲ್ಲೂಕು ಕುರುಬರ ಸಂಘದ ವತಿಯಿಂದ ಗುರುವಾರ ಏರ್ಪಡಿಸಿದ್ದ ಕನಕದಾಸರ ಜಯಂತಿ ಸಂಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ್ದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿ, ಕುರುಬ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿದೆ. ಈ ಸಮುದಾಯದ ಪೋಷಕರು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ ಎಂದು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಹೇಳಿದರು.ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕನಕದಾಸ ಜಯಂತಿ ಸಮಾರಂಭದಲ್ಲಿ ಕನಕ ದಾಸರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದಲು ಪ್ರಯತ್ನಿಸಿದರು. ಅವರು ಯೋಧನಾಗಿ ಪರಾಕ್ರಮಕ್ಕೆ, ಕವಿಯಾಗಿ ಸಮಾಜ ಸುಧಾರಣೆಗೆ ಹೆಸರಾಗಿದ್ದಾರೆ ಎಂದು ಹೇಳಿದರು.ಅವರ ನೆನೆಪು ಜಯಂತಿಗೆ ಸೀಮಿತವಾಗಬಾರದು. ಅವರನ್ನು ಯಾವುದೇ ಒಂದು ಜಾತಿಗೆ ಸೀಮಿತ ಗೊಳಿಸಬಾರದು. ಸಮಾಜದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನಿವೃತ್ತ ಐಎಎಸ್ ಅಧಿಕಾರಿ,ಕಾಂಗ್ರೆಸ್ ಮುಖಂಡ ಸೈಯದ್ ಜಮೀರ್ ಪಾಷ ಅವರ ನಿಧನಕ್ಕೆ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸಂತಾಪ ಸೂಚಿಸಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಈ ಹಿಂದೆ ಕೋಲಾರ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದ ಜಮೀರ್ ಪಾಷ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.ಸ್ನೇಹಜೀವಿಯಾಗಿದ್ದ ಜಮೀರ್ ಪಾಷ ಸೇವೆಯಿಂದ ನಿವೃತ್ತರಾದ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಕಳೆದ 2018 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿಯಾಗಲು ಸಚಿವ ಸಂಪುಟ ಅನುಮೋದಿಸಿ ಕಳುಹಿಸಿದ್ದ ಡ್ರಾಪ್ಟ್ ನೋಟಿಫಿಕೇಷನ್‍ಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ನಗರಾಭಿವೃದ್ದಿ ಇಲಾಖೆ ಬುಧವಾರ ಅಧಿಸೂಚನೆ ಹೊರಡಿಸಿದೆ ಎಂದು ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ತಿಳಿಸಿದ್ದಾರೆ.ಜಿಲ್ಲೆಯ ಏಕೈಕ ಪಟ್ಟಣ ಪಂಚಾಯಿತಿಯಾಗಿ ವೇಮಗಲ್-ಕುರಗಲ್ ಘೋಷಣೆಯಾಗಿದ್ದು, ಈ ಭಾಗದ ಸಮಗ್ರ ಅಭಿವೃದ್ದಿಗೆ ಅವಕಾಶಗಳು ಒದಗಿ ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಪಟ್ಟಣ ಪಂಚಾಯಿತಿಯಾಗಲು ಕಾರಣರಾದ ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಚಿವ ಸಂಪುಟ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ಕೋಲಾರ ಜಿಲ್ಲಾಧಿಕಾರಿಗಳು,ಜಿಪಂ ಸಿಇಒ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ಸಹಕರಿಸಬೇಕು ಎಂದು ಡಾ.ಶಾಂತ ತಿಳಿಸಿದರು.ನಗರದ ಕಾರಂಜಿಕಟ್ಟೆಯಲ್ಲಿರುವ ಶ್ರೀ ನಲ್ಲೂರಮ್ಮ ದೇವಿ ಅನಾಥ ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟಿನಲ್ಲಿ ಹಾಲುಮತ ಮಹಾಸಭಾ ಜಿಲ್ಲಾ ಶಾಖೆ ವತಿಯಿಂದ ನಡೆದ 533ನೇ ಕನಕದಾಸ ಜಯಂತೋತ್ಸವ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ಅನಾಥಾಶ್ರಮ ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವ ಮೂಲಕ ಸ್ವಂತ ಜೀವನ ಕಟ್ಟಿಕೊಳ್ಳುವಾಗೆ ಬೆಂಬಲ ನೀಡಬೇಕು ಎಂದು ನುಡಿದರು. ಕನಕದಾಸರಂತಹ ದಾರ್ಶನಿಕರ ಜೀವನಚರಿತ್ರೆಯ ಜ್ಞಾನವನ್ನು ಮಕ್ಕಳಿಗೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ, ನ-26, ಪ್ರತಿ ಪಂಚಾಯಿತಿಗೊಂದು ರಾಗಿ ಖರೀದಿ ಕೇಂದ್ರ ತೆರೆಯಬೇಕು ಹಾಗೂ ಪ್ರತಿ ಕ್ವಿಂಟಾಲ್ ರಾಗಿಗೆಗೆ 5 ಸಾವಿರ ಬೆಂಬಲ ಬೆಲೆ ಘೋಷಣೆ ಮಾಡಿ ಬೆಳೆ ನಮೂದನೆಯಲ್ಲಾಗಿರುವ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂದು ರೈತ ಸಂಘದಿಂದ ತಾಲ್ಲೂಕು ಕಛೇರಿ ಮುಂದೆ ರಾಗಿ ಸಮೇತ ಹೋರಾಟ ಮಾಡಿ ಶಿರಸ್ತೆದಾರ್‍ರವರ ಮುಖಾಂತರ ಕೃಷಿ ಮಂತ್ರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಹೋರಾಟದ ನೇತೃತ್ವ ವಹಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ರೈತರ ಕಷ್ಟ ದಲ್ಲಾಳರ ಪಾಲೆಂಬಂತೆ ಈ […]

Read More