ಶ್ರೀನಿವಾಸಪುರ : ಜು 11 ರಂದು ಮ. 2.30 ಗಂಟೆಗೆ ಪಟ್ಟಣಕ್ಕೆ ಆಗಮಿಸಲಿದ್ದು, ಉಳಿದಂತೆ ಅವರ ಸ್ವಾಗತಕ್ಕೆ ಎಲ್ಲಾ ಸಿದ್ದತೆಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಂತೆ ಚಿಂತಾಮಣಿ ವೃತ್ತ ಬಳಿ ಭವ್ಯವಾಗಿ ಸ್ವಾಗತಿಸಲಿದ್ದು, ಅಲ್ಲಿಂದ ಬ್ಯಕ್ ರ್ಯಾಲಿ ಮೂಲಕ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮೂಲಕ ಪುಂಗನೂರು ಕ್ರಾಸ್ ನಲ್ಲಿ ನಡೆಯುವ ಕಾರ್ಯಕರ್ತರ ಸಭೆಗೆ ಹಾಜರಾಗಲಿದ್ದಾರೆ. ಈ ಸಭೆಯಲ್ಲಿ ನಮ್ಮ ಪಕ್ಷದ ಮುಂದಿನ ಚುಟುವಟಿಕೆಗಳ ಬಗ್ಗೆ ಹಾಗು ಪಕ್ಷದ ಸಂಘಟನೆಯ ಬಗ್ಗೆ ಮಾತನಾಡಲಿದ್ದಾರೆ […]
ಶ್ರೀನಿವಾಸಪುರ : ಸಂಕಷ್ಟದಲ್ಲಿದ್ದ ಮಾವು ಬೆಳೆಗಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾವು ಖರೀದಿ ಬೆಲೆ ವ್ಯತ್ಯಾಸ ಪಾವತಿಗೆ ರಾಜ್ಯದಿಂದ ರೂ 101 ಕೋಟಿ ಬಿಡುಗಡೆ ಮಾಡಿದೆ. ಕೃಷಿ ಸಚಿವ ಎನ್ ಚಲುವರಾಯ ಸ್ವಾಮಿ ಅವರ ಪ್ರಯತ್ನದಿಂದಾಗಿ ತಕ್ಷಣವೇ ಹಣ ಬಿಡುಗಡೆಗೆ ಸರ್ಕಾರಿ ಅದೇಶ ಹೊರ ಬಿದ್ದಿದೆ. ಮಾವು ಬೆಳೆಗಾರರ ಸಂಕಷ್ಟಕ್ಕೆ ತಕ್ಷ ಸ್ಪಂದಿಸಿದ್ದ ರಾಜ್ಯ ಸರ್ಕಾರ ಈ ಮೊದಲು ತಿಳಿಸಿದಂತೆ ಮಾರು ಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ […]
Aಕೋಲಾರ, 30 ಜೂನ್ 2025: ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಅವರು ಮೊದಲು ತಮ್ಮ ಪಕ್ಷದ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಹೊರ ಹಾಕಲಿ. ನಂತರ ಬೇರೆಯವರ ತಟ್ಟೆಯಲ್ಲಿ ನೊಣದ ಬಗ್ಗೆ ಯೋಚನೆ ಮಾಡಲಿ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು ತಿರುಗೇಟು ನೀಡಿದ್ದಾರೆ.ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಮೈಸೂರು ದಸರಾವನ್ನು ಹೊಸ ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ ಎಂಬ ಅಶೋಕ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಅಶೋಕ ಅವರು ಯಾವಾಗ ಕಾಂಗ್ರೆಸ್ ಪಕ್ಷದ […]
ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.1ರಂದು ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಆ ಮೂಲಕ ಮೂರು ದಶಕಗಳ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಕನಸು ನನಸಾಗಲಿದೆ. ಗ್ರಾಮೀಣ ಪತ್ರಕರ್ತರಿಗೂ ಉಚಿತವಾಗಿ ಬಸ್ ಪಾಸ್ ನೀಡಬೇಕು ಎನ್ನುವ ನಿಟ್ಟಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಸತತ ನಡೆಸಿದ ಹೋರಾಟದ […]
ಶ್ರೀನಿವಾಸಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮದ ಮಸೀದಿಯ ಎದುರು ಸಾರ್ವಜನಿಕರು ಶುಕ್ರವಾರದಂದು ಪ್ಲೇಕಾರ್ಡ್ ಹಿಡಿದು ಮಾನವ ಸರಪಳಿ ನಿರ್ಮಿಸಿ ಶಾಂತಿಯುತವಾಗಿ ಮೌನ ಪ್ರತಿಭಟನೆ ನಡೆಸಿದರು. ಕರ್ನಾಟಕದ ವಿವಿಧ ಭಾಗಗಳಲ್ಲಿನ ಮಸೀದಿಗಳ ಮುಂಭಾಗದಲ್ಲಿ ನಡೆಯುತ್ತಿರುವ ಈ ರಾಜ್ಯವ್ಯಾಪಿ ಶಾಂತಿಯುತ ಪ್ರತಿಭಟನೆಯಂತೆ, ಅಡ್ಡಗಲ್ನಲ್ಲಿಯೂ ಸಾಮೂಹಿಕ ಜುಮಾ ನಮಾಜಿನ ನಂತರ ಕಪ್ಪು ಬಟ್ಟೆ ಧರಿಸಿ, ಹಸ್ತಲಾಘವದ ಮೂಲಕ ಮಾನವ ಸರಪಳಿ ನಿರ್ಮಿಸಲಾಯಿತು. ಪ್ರತಿಭಟನಾಕಾರರು ವಕ್ಫ್ ತಿದ್ದುಪಡಿ […]
ಶ್ರೀನಿವಾಸಪುರ: ಕೊಲಾರ ಜಿಲ್ಲೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಮೈಲರಪ್ಪ ಎಂ. ಅವರು ಶ್ರೀನಿವಾಸಪುರದ ಜಕೀರ್ ಹುಸೇನ್ ಮೊಹಲ್ಲಾದಲ್ಲಿರುವ ಸರ್ಕಾರಿ ಉರ್ದು ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗೆ ಗುರುವಾರದಂದು ಭೇಟಿ ನೀಡಿ, ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ, ಮೂಲಭೂತ ಸೌಕರ್ಯಗಳು, ಮತ್ತು ಶಿಕ್ಷಣ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಶಿಕ್ಷಕರೊಂದಿಗೆ ಸಭೆ ನಡೆಸಿ, ವಿದ್ಯಾರ್ಥಿಗಳ ಪಾಠಾಭ್ಯಾಸ ಹಾಗೂ ಸಾಧನೆಯಲ್ಲಿ ಸುಧಾರಣೆ ತರಬೇಕೆಂಬ ಸೂಚನೆ ನೀಡಿದರು. “ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮ ಕರ್ತವ್ಯವಾಗಿದೆ. […]
ಶ್ರೀನಿವಾಸಪುರ : ನಾವು ಆರಾಧಿಸುವ ಪೂಜಿಸುವ ಪರಮಾತ್ಮನಿಗೆ ಅರ್ಪಿಸುವ ವಸ್ತುವಿನಲ್ಲಿ ಅಥವಾ ಪದಾರ್ಥಗಳಲ್ಲಿ ಪರಮಾತ್ಮನ ವಿಶೇವ ಶಕ್ತಿ ಇದೆಯೆಂದರಿತು ಅಂತಹ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಗೌರವಭಾವದಿಂದ ಕಾಣಬೇಕು ಎಂದು ಬಿಲಿಜ ಸಮುದಾಯದ ತಾಲೂಕು ಅಧ್ಯಕ್ಷ ಬಿ.ಎಂ.ರಾಮಚಂದ್ರ ಅಭಿಪ್ರಾಯಪಟ್ಟರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಬಲಿಜ ಸಮುದಾಯದವತಿಯಿಂದ ಕೈವಾರದಲ್ಲಿ ನಡೆಯುವ ಗುರು ಪೂರ್ಣಿಮ ಕಾರ್ಯಕ್ರಮಗಳ ಅಂಗವಾಗಿ ನಡೆದ ಪತ್ರಿಕಾ ಗೋಷ್ಟಿ ನಡೆಸಿ ಮಾತನಾಡಿದರು.ಪುರಸಭೆ ಮಾಜಿ ಅಧ್ಯಕ್ಷ ಬಿ.ಎಂ.ಪ್ರಕಾಶ್ ಮಾತನಾಡಿ ಗುರುವಿನ ಸೇವೆಗಾಗಿ ಎಲ್ಲಾ ಸಮುದಾಯದವರು ತನು, ಮನ,ಧನ ನೀಡಬಹುದು. ವಿಶೇಷವಾಗಿ […]
ಕೋಲಾರ : ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡುವಾಗ ಜನಪ್ರತಿನಿಧಿಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ಅಧಿಕಾರಿಗಳಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಸುರೇಶ್ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ 4ನೇ ತ್ರೈಮಾಸಿಕದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸರ್ಕಾರದ ಸವಲತ್ತುಗಳನ್ನು ಸಾಮಾನ್ಯರಿಗೆ ತಲುಪಿಸಲು ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯೋನ್ಮುಖರಾಗಬೇಕು. ಹೀಗೆ ವಿತರಿಸುವ ಸವಲತ್ತುಗಳ […]
ಕೆ.ಜಿ.ಎಫ್: ಕೆ.ಜಿ.ಎಫ್ನ ಸರ್ಕಾರಿ ಗಣಿ ಶಿಕ್ಷಣ ಶಾಲೆಯಲ್ಲಿ ಇತ್ತೀಚೆಗೆ ನಡೆದ ಯುಜಿಸಿಇಟಿ (UG-CET) ಸೀಟು ಹಂಚಿಕೆ ಮಂಥನ ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿಶೇಷ ಜಾಗೃತಿ ಉಪನ್ಯಾಸ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯವಸ್ಥಾಪಕಿಯಾದ ಶ್ರೀಮತಿ ಶೀರಿನ್ ತಾಜ್ ಅವರು ಉಪಸ್ಥಿತರಿದ್ದು, ನಿಗಮದಿಂದ ವಿದ್ಯಾರ್ಥಿಗಳಿಗೆ ಲಭಿಸಬಹುದಾದ ವಿವಿಧ ಶೈಕ್ಷಣಿಕ ಸೌಲಭ್ಯಗಳ ಕುರಿತು ವಿವರವಾದ ಮಾಹಿತಿ ನೀಡಿದರು. ವಿಶೇಷವಾಗಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ದೊರೆಯುವ ಶೈಕ್ಷಣಿಕ ಸಾಲ ಮತ್ತು […]

