
ಶ್ರೀನಿವಾಸಪುರ : ಪ್ರಜಾಪ್ರಭುತ್ವದಲ್ಲಿ ಭಾತರದ ಪೌರರಾದ ನಾವು ನಮ್ಮ ದೇಶದ ಪ್ರಜಾತತ್ಮಕ ಸಂದ್ರಾಯಗಳು ಮತ್ತು ಮುಕ್ತ , ನ್ಯಾಯಸಮ್ಮತ, ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು , ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿಭೀತವಾಗಿ ಮತ್ತು ಧರ್ಮ , ಜನಾಂಗ , ಜಾತಿ, ಮತ, ಬಾಷೆ ಅಥವಾ ಯಾವುದೇ ಪ್ರೇರೆಪಣಿಗೆ , ದಾಕ್ಷಣ್ಯಗಳಿಂದ ಪ್ರಭಾವಿತರಾಗದೆ, ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆಯನ್ನು ಸ್ವೀಕರಿಸುತ್ತೇವೆ ಪ್ರತಿಜ್ಞೆಯನ್ನು ಎಆರ್ಒ ಎಂ.ಆರ್.ಸುಮ ಬೋಧಿಸಿದರು.ಪಟ್ಟಣದ ತಹಶೀಲ್ದಾರ್ ಕಛೇರಿ ಆವರಣದಲ್ಲಿ ಶುಕ್ರವಾರ ಮತದಾನ ಜಾಗೃತಿ […]

ಕೋಲಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಸ್ವೀಪ್ ಹಾಗೂ ಕೋಲಾರ ತಾಲೂಕು ಸ್ವೀಪ್ ಸಮಿತಿಯ ವತಿಯಿಂದ ನಗರದ ಮಹಾತ್ಮ ಗಾಂಧಿ ರಸ್ತೆಯಲ್ಲಿ “ಚುನಾವಣಾ ಪರ್ವ ಮೂಲಕ – ದೇಶದ ಗರ್ವ” ಅಭಿಯಾನ ಹಮ್ಮಿಕೊಳ್ಳಲಾಗಿತ್ತು.ನಗರದ ಗಾಂಧಿ ಚೌಕ್ ಬಳಿ ಪಂಜು ಬೆಳಗಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮೊಂಬತ್ತಿ ಜಾಥಾಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಅಕ್ರಂ ಪಾಷ ಅವರು ಚಾಲನೆ ನೀಡಿದರು. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ […]

ಕೋಲಾರ:- ಪಿಯುಸಿ,ಪದವಿ ಪರಿಕ್ಷೆಗಳಿಗಿಲ್ಲದ ವೆಬ್ಕಾಸ್ಟಿಂಗ್ ಎಸ್ಸೆಸ್ಸೆಲ್ಸಿ ಮಕ್ಕಳಿಗ್ಯಾಕೆ, ಈಗಾಗಲೇ ಮಕ್ಕಳ ಬದುಕಿನೊಂದಿಗೆ ಸಾಕಷ್ಟು ಚೆಲ್ಲಾಟವಾಡಿದ್ದೀರಿ, 5, 8 ಮತ್ತು 9ನೇ ತರಗತಿ ಮಕ್ಕಳಿಗೆ ಪರೀಕ್ಷೆ ನಡೆಸದೇ ಗೊಂದಲ ಸೃಷ್ಟಿಸಿದ್ದೀರಿ, ದಿನಕ್ಕೊಂದು ಆದೇಶ ಮಾಡಿ ತಪ್ಪು ಮಾಡುತ್ತಿದ್ದೀರಿ, ನಿಮ್ಮ ಯಡವಟ್ಟುಗಳಿಗೆ ಕೊನೆಯಾಡಿ ಎಂದು ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಸರ್ಕಾರವನ್ನು ಒತ್ತಾಯಿಸಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಕಳೆದ ಒಂದು ವರ್ಷದಿಂದ ಮಾಡಿರುವ ಯಡವಟ್ಟುಗಳು ಬೇರಾವ ಇಲಾಖೆಯಲ್ಲೂ ನಡೆದಿಲ್ಲ, ಎಸ್ಸೆಸ್ಸೆಲ್ಸಿ, ಪಿಯುಸಿ ಮೂರು ಪರೀಕ್ಷೆ ಅಂತಾರೆ ಇದರ ಸಾಧಕಬಾಧಕಗಳ […]

ಶ್ರೀನಿವಾಸಪುರ : ತಾಲೂಕಿನಲ್ಲಿ ಮುಂಬರುವ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ಸುಸೂತ್ರವಾಗಿ ನಡೆಸಲು ಕೊಠಡಿ ಮೇಲ್ವಿಚಾರಕರು ಜವಾಬ್ದಾರಿ ಯುತವಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳಲ್ಲಿ ಭಯದ ವಾತಾವರಣ ಸೃಷ್ಟಿಸದೇ, ಪರೀಕ್ಷಾ ನಿಯಮಗಳ ಬಗ್ಗೆ ಮಾಹಿತಿ ನೀಡಬೇಕು. ವಸ್ತುನಿಷ್ಟವಾಗಿ ಮಕ್ಕಳು ಪರೀಕ್ಷೆ ಎದುರಿಸಲು ಎಲ್ಲಾ ಪರೀಕ್ಷಾ ಸಿಬ್ಬಂದಿಯೂ ಮುಂದಾಗಬೇಕು ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ ಎಂದು ಸೂಚಿಸಿಲಾಗಿದೆ.ಪಟ್ಟಣದ ಬಿಆರ್ಸಿ ಕಛೇರಿಯಲ್ಲಿ ಗುರುವಾರ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು. […]

ಕೋಲಾರ:- ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ಸುರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಕೆ.ಎಚ್.ಮುನಿಯಪ್ಪ ಅಥವಾ ಅವರ ಅಳಿಯ ಚಿಕ್ಕಪೆದ್ದನ್ನ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದರು.ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಕೆ.ಎಚ್.ಮುನಿಯಪ್ಪ, ಪಕ್ಷ ನಿಷ್ಟರಾಗಿದ್ದು, ಜಿಲ್ಲೆಯಲ್ಲಿ ಅಪಾರ ಸಂಖ್ಯೆಯ ಬೆಂಬಲಿಗರನ್ನು ಹೊಂದಿದ್ದಾರೆ, ಕ್ಷೇತ್ರದ ಸಂಪೂರ್ಣ […]

ಕೋಲಾರ : ಲೋಕಸಭೆಗೆ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ದಿನಾಂಕ : 16/03/2024 ರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚುನಾವಣೆಗಳನ್ನು ನಿರ್ಭೀತವಾಗಿ, ಮುಕ್ತವಾಗಿ, ಶಾಂತಿಯುತವಾಗಿ ನಡೆಸಲು ಮತ್ತು ಈ ಅವಧಿಯಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಭದ್ರತೆಯನ್ನು ಕಾಪಾಡುವ ಸಲುವಾಗಿ, ಜಿಲ್ಲೆಯಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ. 1) ಚುನಾವಣೆಯು ಘೋಷಣೆಯಾದ ದಿನಾಂಕದಿಂದ ಮತಗಳ ಎಣಿಕೆ ದಿನಾಂಕದವರೆಗೆ ಪರವಾನಗಿ ಹೊಂದಿರುವ ಆಯುಧಗಳ ಬಳಕೆಯನ್ನು ನಿಷೇಧಿಸಿ ಸಿಆರ್ಪಿಸಿ 1973 ರ […]

ಶ್ರೀನಿವಾಸಪುರ : ಡಿವಿಜಿ ಬದುಕಿನ ಸರಳ ಹಾಗೂ ಪ್ರಾಮಾಣಿಕತೆಗೆ ಸಾಕ್ಷಿಯಾದ ಕೆಲವು ಘಟನೆಗಳನ್ನು ಉದಾಹರಸಿ, ವಿದ್ಯಾರ್ಥಿಗಳ ಜೀವನಕ್ಕೆ ನೆರವಾಗಿ ಆತ್ಮಸ್ಥೈರ್ಯ ತುಂಬುವ ಕಗ್ಗದ ಕೆಲವು ಪದ್ಯಗಳನ್ನು ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎನ್.ಬಿ. ಗೋಪಾಲಗೌಡರು ಹೇಳಿ ವ್ಯಾಖ್ಯಾನಿಸಿದರು.ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ತು ಶ್ರೀನಿವಾಸಪುರ ಘಟಕದಿಂದ ಡಿವಿಜಿ ಅವರ ಜನ್ಮದಿನೋತ್ಸವದ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದರು.ಲೇಖಕಿ ಹಾಗೂ ಕದಳಿ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಮಾಯಾ ಬಾಲಚಂದ್ರ ಮಾತನಾಡಿ ಕಗ್ಗದ […]

ಶ್ರೀನಿವಾಸಪುರ : ಪಟ್ಟಣದ ಪ್ರಾಂತ ರೈತ ಸಂಘದ ಕಛೇರಿಯಲ್ಲಿ ಮಂಗಳವಾರ ಪತ್ರಿಕಾ ಗೋಷ್ಟಿ ನಡೆಸಿ ಮಾತನಾಡಿದರು.ಕೆಪಿಆರ್ಎಸ್ ನ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಮಾತನಾಡಿ ತಾಲೂಕಿನ ಕೆಲ ರೈತರು ಅರಣ್ಯ ಅಧಿಕಾರಿಗಳ ವಿರುದ್ಧ ಉಚ್ಚನ್ಯಾಯಾಲಯದಲ್ಲಿ ಕೇಸು ಹಾಕಿ ಕೊಂಡು , ತಡೆಯಾಜ್ಞೆ ತಂದು ತಮ್ಮ ಜಮೀನುಗಳನ್ನು ರಕ್ಷಿಸಿಕೊಂಡು ಬೆಳೆ ಮಾಡುತ್ತಿರುವಾಗ ಅಂತಹ ರೈತರ ಬಳಿ ಹೋಗಿ ಈ ಜಮೀನು ಅರಣ್ಯ ಇಲಾಖೆ ಪರವಾಗಿ ಆಗಿದ್ದು, ನೀವುಗಳು ಈ ಜಮೀನು ಕಡೆ ಬರಬಾರದು ಎಂದು ರೈತರನ್ನು ಬೆದರಿಸುತ್ತಿದ್ದಾರೆ. ಇಂತಹ ತಪ್ಪು […]

ಶ್ರೀನಿವಾಸಪುರ : ಗ್ರಾಮೀಣ ಭಾಗದ ಹಳ್ಳಿಗಳಲ್ಲಿನ ಸಾರ್ವಜನಿಕರು ನಕಲಿ ಕಂಪನಿಗಳಿಂದ ಮೋಸಹೋಗುತ್ತಿದ್ದಾರೆ. ಇದನ್ನ ತಡೆಗಟ್ಟುವ ಉದ್ದೇಶದಿಂದ ನಕಲಿ ಕಂಪನಿಗಳು ಮಾಡುತ್ತಿರುವ ಮೋಸಗಳ ಬಗ್ಗೆ ಅರಿವು ಮೂಡಿಸಿಬೇಕು. ನಂತರ ಎಲ್ಐಸಿಯ ಉದ್ದೇಶದ ಬಗ್ಗೆ ಅರಿವು ಮೂಡಿಸಿ, ಎಲ್ಐಸಿ ಕಂಪನಿಯಿಂದ ಹೊಸ ಪಾಲಿಸಿಗಳ ಬಗ್ಗೆ ಪರಿಚಯ ಮಾಡಿಸಿ, ಅರಿವು ಮೂಡಿಸಿ ಪಾಲಿಸಿದಾರರನ್ನಾಗಿ ಮಾಡಿಸಿಲು ಮುಂದಾಗಬೇಕು ಎಂದು ಜಿಲ್ಲಾ ಎಲ್ಐಸಿ ಶಾಖಾ ವ್ಯವಸ್ಥಾಪಕ ಎನ್.ಆರ್.ಸಿದ್ದೇಶ್ ಸಲಹೆ ನೀಡಿದರು.ಪಟ್ಟಣದ ಎಲ್ಐಸಿ ಉಪಶಾಖೆ ಕಛೇರಿಯಲ್ಲಿ ಮಂಗಳವಾರ ತಾಲೂಕಿನ ಎಲ್ಐಸಿ ಪ್ರತಿನಿದಿಗಳ ಸಭೆಗೆ ಚಾಲನೆ ನೀಡಿ […]