ಶ್ರೀನಿವಾಸಪುರ : ಭಾರತ ವಿದ್ಯಾರ್ಥಿ ಪಡರೇಷನ್ ಎಸ್ ಎಫ್ ಐ ಶ್ರೀನಿವಾಸಪುರ ತಾಲ್ಲೂಕು ಸಮಿತಿ ವತಿಯಿಂದ 2020 ಎನ್ಇಪಿ ಜಾರಿಯಾದ ನಂತರ ಇಲ್ಲಿಯವರೆಗೂ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಅಂಕ ಪಟ್ಟಿಗಳನ್ನು ವಿತರಿಸುವಂತೆ ಒತ್ತಾಯಿಸಿ. ಗುರುವಾರ ತಾಲೂಕು ದಂಡಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮತ್ತು ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಕಾರ್ಯದರ್ಶಿಯಾದ ಸುರೇಶ್ ಬಾಬು ಮಾತನಾಡಿ. ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್.ಎಫ್.ಐ) ಜಿಲ್ಲಾ ಸಮಿತಿ ಈ ಮೂಲಕ ತಮ್ಮಲ್ಲಿ ಒತ್ತಾಯಿಸುವುದೇದರೆ , ರಾಜ್ಯದಲ್ಲಿ […]
ಶ್ರೀನಿವಾಸಪುರ : ಕನ್ನಡಬಾಷೆಯ ಬಗ್ಗೆ ಬಾಷಾಭಿಮಾನವಿರಲಿ ಆದರೆ ದುರಾಭಿಮಾನಬೇಡ ದೀಪದಿಂದ ದೀಪ ಬೆಳಗುವಂತೆ ಕನ್ನಡ ಭಾಷೆ ಪ್ರಪಂಚದಾದ್ಯಂತ ಪಸರಿಸಲಿ ಕನ್ನಡ ಭಾಷೆ ಶ್ರೀಮಂತವಾಗಿದ್ದು ಇದನ್ನು ಉಳಿಸಿ ಬೆಳಸುವ ಹೊಣಗಾರಿಕೆ ನಮ್ಮಲ್ಲೆರ ಮೇಲಿದೆ ಎಂದು ಸಿಪಿಐ ಮಹಮದ್ಗೊರವನಕೊಳ್ಳ ತಿಳಿಸಿದರು. ಪಟ್ಟಣದ ಜೈ ಕರ್ನಾಟಕ ಆಟೋ ನಿಲ್ದಾಣದಲ್ಲಿ ಆಟೋ ಚಾಲಕರ ಸಂಘದವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು ನಮ್ಮ ನಾಡಿನಲ್ಲಿ ಗಂಗರು, ಕದಂಬರು, ಚೋಳರು ಅನೇಕ ರಾಜಮನತನರು ಆಳ್ವಿಕೆ ಮಾಡಿ ಕರ್ನಾಟಕದ ಏಕೀಕರಣಕ್ಕೆ ಅನೇಕ ಮಹನೀಯರು ಶ್ರಮಿಸಿದ್ದಾರೆ […]
ಕೋಲಾರ:- ಮಕ್ಕಳಿಗೆ ಪ್ರಯೋಗಗಳ ಮೂಲಕ ವಿಜ್ಞಾನ ಕಲಿಕೆ ಅತಿ ಪರಿಣಾಮಕಾರಿಯಾಗಿದೆ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕಿ ತಾಹೇರಾ ನುಸ್ರತ್ ಅಭಿಪ್ರಾಯಪಟ್ಟರು.ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮತ್ತು ಕುಪ್ಪಂ ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಪ್ರಯೋಗಗಳ ಪ್ರದರ್ಶನವನ್ನು ಉದ್ಘಾಟಿಸಿ ವರು ಮಾತನಾಡಿದರು.ಒಬ್ಬ ಮನುಷ್ಯ ಹುಟ್ಟಿದಾಗಿನಿಂದ ಸಾಯುವರೆಗೂ ವಿಜ್ಞಾನವನ್ನು ಅವಲಂಬಿಸಿರುತ್ತಾನೆ. ಈಗಿನ ಪೀಳಿಗೆಯ ಮಕ್ಕಳಿಗೆ ಸುಲಭ ಕಲಿಕೆಗೆ ವೈಜ್ಞಾನಿಕ ಅಂಶಗಳ ಬೆಳವಣಿಗೆಗೆ ವಿಜ್ಞಾನ ವಸ್ತು ಪ್ರದರ್ಶನ ಮತ್ತು […]
ಕೋಲಾರ; ನ.28: ತಾಲೂಕು ಕಚೇರಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿ, ಪಿ ನಂಬರ್ ದುರಸ್ಥಿ ಹಾಗೂ ಸರ್ಕಾರಿ ಆಸ್ತಿಗಳ ಒತ್ತುವರಿ ತೆರವುಗೊಳಿಸಲು ವಿಶೇಷ ತಂಡ ರಚನೆ ಮಾಡಬೇಕೆಂದು ರೈತಸಂಘದಿಂದ ತಾಲೂಕು ಕಚೇರಿಯೆದುರು ಖಾಲಿ ಚಂಬುಗಳೂಂದಿಗೆ. ಹೋರಾಟ ಮಾಡಿ ತಹಸೀಲ್ದಾರ್ಗೆ ಮನವಿ ನೀಡಿ ಒತ್ತಾಯಿಸಲಾಯಿತು.ಹಿರಿಯ ಅಧಿಕಾರಿಗಳ ವಾಸಸ್ಥಾನಕ್ಕೆ ಕೂಗಳತೆ ದೂರದಲ್ಲಿರುವ ತಾಲೂಕು ಕಚೇರಿಯಲ್ಲಿ ಹೆಜ್ಜೆಹೆಜ್ಜೆಗೂ ರೈತರನ್ನು ಶೋಷಣೆ ಮಾಡುವ ದಲ್ಲಾಳಿಗಳ ಹಾವಳಿಗೆ ಕಡಿವಾಣವಿಲ್ಲದಂತಾಗಿದೆ. ಭೂಪರಿವರ್ತನೆಗೆ 3 ಲಕ್ಷ, ಪಿ ನಂಬರ್ ದುರಸ್ಥಿ ಮಾಡಲು 4 […]
ಕೋಲಾರ/ 26 ನವೆಂಬರ್ (ಹಿ.ಸ) : ನಮ್ಮ ದೇಶ ಭಾರತದ ಸಂವಿಧಾನವನ್ನು 1949ರ ನವೆಂಬರ್ 26ರಂದು ಅಂಗೀಕರಿಸಲಾಗಿದ್ದು, ಆ ದಿನವನ್ನು ಸಂವಿಧಾನ ದಿನ ಎಂದು ಆಚರಿಸಲಾಗುತ್ತಿದೆ. ಇದು ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಒತ್ತಿಹೇಳುತ್ತದೆ. ಡಾ. ಬಿ. ಆರ್. ಅಂಬೇಡ್ಕರ್ ಅವರ ಕೊಡುಗೆಗಳನ್ನು ಗುರುತಿಸುವುದಲ್ಲದೆ, ಪ್ರಜಾಸತ್ತಾತ್ಮಕ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸುವಲ್ಲಿ ನಾಗರಿಕರ ತೊಡಗಿಸಿಕೊಳ್ಳುವಿಕೆಯನ್ನು ಪ್ರತಿಪಾದಿಸುವ ಆಚರಣೆಯಾಗಿದೆ. ಆದ್ದರಿಂದ ಸಂವಿಧಾನ ದಿನವನ್ನು ನಮ್ಮ ದೇಶದ ಉದ್ದಗಲಕ್ಕೂ ಆಚರಿಸಲಾಗುತ್ತದೆ. ವಿಶೇಷವಾಗಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ […]
ಶ್ರೀನಿವಾಸಪುರ : ತಾಲ್ಲೂಕಿನ ಗೌನಿಪಲ್ಲಿ ಗ್ರಾಮ ಪಂಚಾಯತಿಯಿಂದ ಪುರಸಭೆ ಮಾಡಬೇಕೆಂದು ಒತ್ತಾಯಿಸಿ ಸೋಮವಾರ ಗೌನಿಪಲ್ಲಿ ಗ್ರಾಮದ ಅಮ್ಜದ್ ಖಾನ್ ರವರು ಗೌನಿಪಲ್ಲಿ ಯಿಂದ ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನ ವೇಳೆ ಸರ್ಕಾರಕ್ಕೆ ಹಾಗೂ ಸಂಬಂಧ ಪಟ್ಟ ಸಚಿವರಿಗೆ ಮನವಿ ಪತ್ರವನ್ನು ನೀಡಲು ಸತತ ಎರಡನೇ ಬಾರಿ ಪಾದಯಾತ್ರೆ ಮೂಲಕ ಹೊರಟಿದ್ದಾರೆ.ಇದೇ ಸಂದರ್ಭದಲ್ಲಿ ಮಾತನಾಡಿದ ಅಮ್ಜದ್ ಖಾನ್ ಗೌನಿಪಲ್ಲಿ ಗ್ರಾಮ ಪಂಚಾಯತಿ ಪುರಸಭೆಗೆ ಎಲ್ಲಾ ರೀತಿಯಲ್ಲಿಯೂ ಅರ್ಹತೆ ಹೊಂದಿದ್ದು ಕಳೆದ 2023 ರ ಅಧಿವೇಶನ ವೇಳೆಯೂ ಸಹಾ ಪಾದಯಾತ್ರೆ […]
ಶ್ರೀನಿವಾಸಪುರ,ನ.೨೩-ಕೇಂದ್ರ ಮತ್ತು ರಾಜ್ಯ ಸರಕಾರ ಬಡವರ ರೈತ ಕೃಷಿ ಕಾರ್ಮಿಕ ವಿರೋದಿ ಸರಕಾರಗಳಿಂದ ಪ್ರಜಾಪ್ರಭುತ್ವ ಗಂಡಾಂತರಲ್ಲಿದೆ. ಬಹುರಾಷ್ಟ್ರೀಯ ದೇಶಿ ಬಂಡವಾಳ ಶಾಹಿಗಳಿಂದ ಕೃಷಿ ನಾಶವಾಗುತ್ತಿದೆ ಎಂದು ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ.ಬಯ್ಯಾರೆಡ್ಡಿ ಆರೋಪಿಸಿದರು. ಪಟ್ಟಣದ ಪುರಸಭೆ ಮುಂಭಾಗದ ಎಂಜಿ ರಸ್ತೆಯಲ್ಲಿ ಸಿಪಿಐಎಂ ಪಕ್ಷದಿಂದ ಏರ್ಪಡಿಸಿದ್ದ ೧೮ನೇ ಸಮ್ಮೇಳನ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿ ಕೇಂದ್ರ ರಾಜ್ಯ ಸರಕಾರಗಳು ಬಡವರು ರೈತರನ್ನು ಕಡೆಗಣಿಸಿ ಕಾರ್ಪೂರೇಟ್ ಬಂಡವಾಳಗಾರರ ಪರ ನಿಂತಿವೆ ಎಂದು ಹೇಳಿದರು. ಭಾರತ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ […]
ಕೋಲಾರ,ನ.25: ರಾಜ್ಯ ಸರ್ಕಾರದ ಮುಂದಿನ ಬಜೆಟ್ನಲ್ಲಿ ಎಲ್ಲಾ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಸಂಘಗಳ ಕ್ಷೇಮಾಭಿವೃದ್ದಿ ನಿಧಿಗೆ ತಲಾ 10 ಲಕ್ಷರೂ ನೀಡಲು ಕ್ರಮ ವಹಿಸುವುದಾಗಿ ಮುಖ್ಯಮಂತ್ರಿಗಳ ಪತ್ರಿಕಾ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಹೇಳಿದರು.ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ತುಮಕೂರಿನಲ್ಲಿ ನಡೆದ ಪತ್ರಕರ್ತರ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿ ಜಿಲ್ಲೆಯ ಘನತೆ ಹೆಚ್ಚಿಸಿದ ಪತ್ರಕರ್ತರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಬ್ಬಡ್ಡಿಯಲ್ಲಿ ಚಾಂಫಿಯನ್ ಆಗಿ ಹೊರಹೊಮ್ಮಿದ ಜಿಲ್ಲಾ ತಂಡಕ್ಕೆ ವೈಯಕ್ತಿಕವಾಗಿ ಇಪ್ಪತ್ತೈದು ಸಾವಿರ ರೂ ಬಹುಮಾನ ಘೋಷಿಸಿ ಅವರು ಮಾತನಾಡುತ್ತಿದ್ದರು.ರಾಜ್ಯದಲ್ಲೇ ಕೋಲಾರ ಜಿಲ್ಲಾ […]
ಕೋಲಾರ ; ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಸಾರ್ವಜನಿಕರಿಗೆ ಅನುಕೂಲವಾಗುವ ದಿಸೆಯಲ್ಲಿ ಅವಧಿಗಿಂತ ಮುಂಚೆಯೇ ಗುರಿ ತಲುಪಿ ಕೋಲಾರ ಜಿಲ್ಲೆಯನ್ನು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿರುವಂತೆ ಮಾಡಿದ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರಿಗೆ ರಾಜ್ಯ ಸರ್ಕಾರ ಅಭಿನಂದಿಸಿದೆ. ಕಂದಾಯ ಇಲಾಖೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಈ ಕುರಿತು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರಿಗೆ ಅಭಿನಂದನಾ ಪತ್ರ ಬರೆದಿದ್ದು, ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ರಾಜ್ಯದ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ […]

